ಬೆಂಗಳೂರಲ್ಲಿ ಸಾಕು ನಾಯಿ ಡೆಡ್ಲಿ ಅಟ್ಯಾಕ್, ಮಹಿಳೆಯ ಮುಖ ವಿರೋಪ, ಕತ್ತು-ತಲೆ ಭಾಗಕ್ಕೆ 50ಕ್ಕೂ ಹೆಚ್ಚು ಹೊಲಿಗೆ!

ಬೆಂಗಳೂರಿನಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಮೇಲೆ ಸಾಕು ನಾಯಿಯೊಂದು ಭೀಕರವಾಗಿ ದಾಳಿ ನಡೆಸಿದೆ. ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ನಾಯಿಯ ಮಾಲೀಕರ ನಿರ್ಲಕ್ಷ್ಯದ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಈ ಘಟನೆಯು ನಗರದಲ್ಲಿ ಸಾಕು ಪ್ರಾಣಿಗಳ ನಿರ್ವಹಣೆ,ಸಾರ್ವಜನಿಕ ಸುರಕ್ಷತೆಯ ಬಗ್ಗೆ ಕಳವಳ ಮೂಡಿಸಿದೆ. ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಇದೀಗ ಬೆಂಗಳೂರಿನಲ್ಲಿ ಆತಂತಕಾರಿಯಾದ ಘಟನೆ ನಡೆದಿದೆ. ನಗರದ ಹೆಚ್‌.ಎಸ್‌.ಆರ್ ಲೇಔಟ್ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ಸಾಕು ನಾಯಿಯೊಂದು ಏಕಾಏಕಿ ಭೀಕರವಾಗಿ ದಾಳಿ ನಡೆಸಿದ ಘಟನೆ ಜನವರಿ … Read more

ತಲೆಗೆ ಗುಂಡಿಕ್ಕಿಕೊಂಡು ಸಾವಿಗೆ ಶರಣಾದ ಕಾನ್ಫಿಡೆಂಟ್ ಗ್ರೂಫ್‌ ಚೇರ್ಮನ್ ಸಿಜೆ ರಾಯ್ ; ಬಿಗ್‌ ಬಾಸ್ ಕನ್ನಡ ಶೋಗೆ ಹಣದ ಹೊಳೆ ಹರಿಸಿದ್ರು!

ಕಾನ್ಫಿಡೆಂಟ್ ಗ್ರೂಫ್ ಸಂಸ್ಥೆಯ ಚೇರ್ಮನ್ ಸಿಜೆ ರಾಯ್ (CJ Roy) ಅವರು ಆತ್ಮ*ಹತ್ಯೆ ಮಾಡಿಕೊಂಡಿರುವ ಸುದ್ದಿ ಇಡೀ ಕರ್ನಾಟಕವನ್ನು ಬೆಚ್ಚಿ ಬೀಳಿಸಿದೆ. ಅವರು ಸಾಕಷ್ಟು ದೊಡ್ಡ ಉದ್ಯಮಿಯಾಗಿದ್ದರು. ಜೊತೆಗೆ, ಕನ್ನಡ ಬಿಗ್ ಬಾಸ್ ಶೋಗೆ ರೂ. 50 ಲಕ್ಷ ಕೊಟ್ಟು ಆಗ ಸಖತ್ ಸುದ್ದಿಯಾಗಿದ್ದರು. ಅವರು ಕಾನ್ಫಿಡೆಂಟ್ ಗ್ರೂಫ್ ಸಂಸ್ಥೆಯನ್ನು ಮುನ್ನಡೆಸುವ ಜೊತೆಗೆ ಬಹಳಷ್ಟು ಸಾಮಾಜಿಕ ಕೆಲಸ ಹಾಗೂ ಸಿನಿಮಾ-ಮನರಂಜನಾ ಕ್ಷೇತ್ರಕ್ಕೆ ಕೊಡುಗೆ ಕೂಡ ನೀಡಿದ್ದಾರೆ. ಕಳೆದ ಸೀಸನ್ ಅಂದರೆ, ಬಿಗ್ ಬಾಸ್ ಕನ್ನಡ 11ಗೆ ರೂ. … Read more

ತೆಂಗಿನ ಕಾಯಿಯಲ್ಲಿ ಸಿಲುಕಿಕೊಂಡ ‘ಖಾಸಗಿ ಅಂಗ’ : ಅವಮಾನದಿಂದ ಯುವಕ ಆತ್ಮಹತ್ಯೆಗೆ ಶರಣು.!

ರಾಜ್ ಕೋಟ್ : ಯುವಕನ ಖಾಸಗಿ ಅಂಗ ತೆಂಗಿನಕಾಯಿಯಲ್ಲಿ ಸಿಲುಕಿಕೊಂಡ ಬಳಿಕ ಆದ ಅವಮಾನದಿಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ರಾಜ್‌ಕೋಟ್‌ನ ಯುವಕನೊಬ್ಬ ತನ್ನ ಜನನಾಂಗ ತೆಂಗಿನಕಾಯಿಯಲ್ಲಿ ಸಿಲುಕಿಕೊಂಡ ನಂತರ ಎದುರಿಸಿದ ಕಳಂಕದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಗೊಂಡಾಲ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಆತ್ಮಹತ್ಯೆಯ ನಂತರ, ಮೃತನ ಸೋದರ ಮಾವ ಅವನ ಶವವನ್ನು ಅವರ ಮನೆಯ ಹಿತ್ತಲಿನಲ್ಲಿ ಹೂತು ಹಾಕಿದ್ದಾನೆ. ತನ್ನ ಅನಾರೋಗ್ಯ ಪೀಡಿತ ಪತ್ನಿ ತನ್ನ ಸಹೋದರನ ಸಾವಿನ ಆಘಾತವನ್ನು … Read more

ಹೋಂವರ್ಕ್ ಮಾಡಿಲ್ಲ ಎಂದು ಬಾಲಕನ ಮೇಲೆ ಹಲ್ಲೆ! ‘ಪೋಷಕರಿಗೆ ಹೇಳಿದ್ರೆ ಕುತ್ತಿಗೆ ಹಿಸುಕುತ್ತೇನೆ’ ಎಂದ ಶಿಕ್ಷಕಿ

ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ 4ನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ಜನವರಿ 10ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಂದಿನಿ ಲೇಔಟ್‌ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿ ಆಂಗ್ಲಿನ್ ಬಾಲಕನಿಗೆ ಬಾಸುಂಡೆ ಬರುವ ಮಟ್ಟಿಗೆ ಥಳಿಸಿದ್ದಾರೆ ಎಂದು ಬಾಲಕನ ತಾಯಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ನಾನು ಶಾಲೆಗೆ ಹೋಗಲ್ಲಮ್ಮ ಎಂದಿದ್ದ ಬಾಲಕ! ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀ ತಮ್ಮ … Read more

Horoscope Today : 30 ಜನವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- ಮೇಷ ರಾಶಿಯವರಿಗೆ ಇಂದು ಹಿತಕರ ದಿನವಾಗಲಿದೆ ಎಂಬುದಾಗಿ ಗಣೇಶ ಶಕುನ ನುಡಿಯುತ್ತಾರೆ. ವೃತ್ತಿ ಅಥವಾ ವಿರಾಮ ಪ್ರವಾಸವನ್ನು ನೀವು ಕೈಗೊಳ್ಳುವ ಸಾಧ್ಯತೆಯಿರುವುದರಿಂದ ಅದಕ್ಕೆ ಸಿದ್ಧರಾಗಿರಿ. ನಿಮಗೆ ಅನಿರೀಕ್ಷಿತ ತಿಳುವಳಿಕೆ ಮತ್ತು ಪರಿಜ್ಞಾನ ಉಂಟಾಗಬಹುದು ಮತ್ತು ಇದು ನಿಮ್ಮ ಫಲಪ್ರದ ಭವಿಷ್ಯವನ್ನು ಸಾಬೀತುಮಾಡುತ್ತದೆ. ನಿಮ್ಮ ಡೈರಿಯಲ್ಲಿ ಏನೋ ಬರೆಯಬೇಕು ಎಂದೆನಿಸಿದಲ್ಲಿ ಅದನ್ನು ಮುಂದುವರಿಸಿ. ಇಂದು ನೀವು ಮುಕ್ತವಾಗಿ ನಿಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಶಕ್ತರಾಗಿರುವುದರಿಂದ ಬರಹದಲ್ಲಿ ತೊಡಗಿಕೊಳ್ಳಲು ಅರ್ಹವಾಗಿದೆ. ಏನೇ ಆದರೂ, ನಿಮ್ಮ ಆಲೋಚನಾ ಪ್ರಕ್ರಿಯೆಯಲ್ಲಿ ಅನಿರೀಕ್ಷಿತ … Read more

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನಿಗೆ ಚೂರಿ ಇರಿತ: ಯುವತಿಯ ಮಾಜಿ ಲವರ್ ಕೃತ್ಯ ಶಂಕೆ

ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಕಾರು ಅಡ್ಡಿಗಟ್ಟಿ ಮನಸ್ಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ ನಡೆದಿದೆ. ಕೊಳ್ಳೇಗಾಲದ ವೆಂಕಟೇಶ್ವರ್ ಮಹಲ್ ನಲ್ಲಿ ಆಯೋಜಿಸಿದ್ದ ಆರತಕ್ಷತೆ  ಕಾರ್ಯಕ್ಕೆ ವರ ರವೀಶ್ ತೆರಳುತ್ತಿದ್ದ ವೇಳೆ ಅಪರಿಚಿತರು ಏಕಾಏಕಿ ದಾಳಿ ಮಾಡಿದ್ದಾರೆ. ಕುಣಗಳ್ಳಿ ಗ್ರಾಮದಿಂದ ಹೋಗುತ್ತಿದ್ದ ವೇಳೆ ವರ ರವೀಶ್ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ನೀನು ಮದ್ವೆ ಮನೆಗಲ್ಲ ಸ್ಮಶಾನಕ್ಕೆ ತೆರಳಬೇಕೆಂದು ಚಾಕು, ಡ್ರ್ಯಾಗರ್ನಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೇ ರವೀಶ್ ಅಟ್ಟಾಡಿಸಿ ಬೆನ್ನಿಗೆ ಚೂರಿಯಿಂದ ಇರಿದು ಎಸ್ಕೇಪ್ … Read more

‘UGC’ ಹೊಸ ನಿಯಮಗಳಿಗೆ ‘ಸುಪ್ರೀಂ ಕೋರ್ಟ್’ ತಡೆ : ಮಾರ್ಚ್ 19ಕ್ಕೆ ಮುಂದಿನ ವಿಚಾರಣೆ | UGC Bill 2026

ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳನ್ನು ಸುಪ್ರೀಂಕೋರ್ಟ್ ತಡೆ ಹಿಡಿದಿದ್ದು, ಮಾರ್ಚ್ 19 ಕ್ಕೆ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಜನವರಿ 23, 2026 ರಂದು ಅಧಿಸೂಚನೆ ಹೊರಡಿಸಲಾದ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ) ನಿಯಮಗಳನ್ನು ವಿವಿಧ ಅರ್ಜಿದಾರರು ಅನಿಯಂತ್ರಿತ, ಹೊರಗಿಡುವ, ತಾರತಮ್ಯಕರ ಮತ್ತು ಸಂವಿಧಾನದ ಉಲ್ಲಂಘನೆ ಹಾಗೂ ವಿಶ್ವವಿದ್ಯಾಲಯ ಅನುದಾನ ಆಯೋಗ ಕಾಯ್ದೆ, 1956 ಎಂದು ಪ್ರಶ್ನಿಸಿ ಸುಪ್ರೀಂ ಕೋರ್ಟ್ ತಡೆಹಿಡಿದಿದೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ಇಕ್ವಿಟಿ … Read more

6ರ ಬಾಲಕಿಯ ಮೇಲೆ ಮೂವರು ಅಪ್ರಾಪ್ತರಿಂದ ಕಾಮುಕ ಕೃತ್ಯ : 10 ವರ್ಷದ ಆರೋಪಿ ಮಗನನ್ನು ಸ್ವತಃ ಠಾಣೆಗೆ ಕರೆತಂದ ತಾಯಿ.!

ದೇಶದ ರಾಜಧಾನಿ ದೆಹಲಿಯ ಈಶಾನ್ಯ ಭಾಗದ ಭಜನ್‌ಪುರ ಪ್ರದೇಶದಲ್ಲಿ ಅತ್ಯಂತ ಅಮಾನವೀಯ ಮತ್ತು ಕ್ರೂರ ಘಟನೆಯೊಂದು ನಡೆದಿದೆ. ಕೇವಲ ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಅದೇ ಪ್ರದೇಶದ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಲೈಂಗಿಕ ದೌರ್ಜನ್ಯ ಎಸಗಿದ್ದು, ಇಡೀ ಪ್ರದೇಶದಲ್ಲಿ ಆಕ್ರೋಶ ಭುಗಿಲೆದ್ದಿದೆ. ರಕ್ತಸಿಕ್ತವಾಗಿ ಮನೆಗೆ ಬಂದ ಬಾಲಕಿ ತಾಯಿಯ ಆಕ್ರಂದನ ಜನವರಿ 18 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ತಾಯಿ ಮಾಧ್ಯಮಗಳ ಮುಂದೆ ಅಳಲು ತೋಡಿಕೊಂಡಿದ್ದು, “ನನ್ನ ಮಗಳು … Read more

BMTC ಬಸ್ ಗಳಲ್ಲಿ ಗುಟ್ಕಾ ಜಾಹೀರಾತು : ಆಕ್ರೋಶ, ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?

ಬೆಂಗಳೂರು : ನಗರದ ಬಿಎಂಟಿಸಿ ಬಸ್ ಗಳ ಮೇಲೆ ಗುಟ್ಕಾ ಜಾಹೀರಾತುಗಳು ರಾರಾಜಿಸುತ್ತಿದ್ದು, ಇದರ ವಿರುದ್ಧ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಸಮರ ಸಾರಿದ್ದಾರೆ. ಬಸ್ ಗಳ ಮೇಲೆ ಹಾಕಲಾಗಿರುವ ಜಾಹೀರಾತು ಚಿತ್ರಗಳನ್ನು ಕಿತ್ತೆಸೆಯುತ್ತಿರುವ ಕನ್ನಡಪರ ಹೋರಾಟಗಾರರು, ಇಂತಹ ಅನಾರೋಗ್ಯಕರ ವಸ್ತುಗಳನ್ನು ಪ್ರೋತ್ಸಾಹಿಸುವುದು ಎಷ್ಟು ಸರಿ? ಇವುಗಳನ್ನು ತಿಂದು ಜನರು ಬಸ್ ನಿಲ್ದಾಣಗಳು, ಮೆಟ್ರೋ ಸ್ಟೇಷನ್‌ಗಳು ಮತ್ತು ಪ್ರಮುಖ ವೃತ್ತಗಳಲ್ಲಿ ಉಗಿದು ನಗರದ ಅಂದವನ್ನು ಹಾಳು ಮಾಡುತ್ತಿದ್ದಾರೆಂದು ಕಿಡಿಕಾರಿದ್ದಾರೆ. ಈ ಬೆಳವಣಿಗೆ ಕುರಿತು ಸಚಿವ ರಾಮಲಿಂಗಾ ರೆಡ್ಡಿಯವರು … Read more

ಒಂದೇ ಮಹಿಳೆಯ ಜತೆಗೆ ಇಬ್ಬರ ಅನೈತಿಕ ಸಂಬಂಧ : ಚಾಕುವಿನಿಂದ ಇರಿದು ಕೊಲೆ

ರಾಜ್ಯದಲ್ಲಿ ಅನೈತಿಕ ಸಂಬಂಧಗಳ ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣಕ್ಕೆ ಕೊಲೆಗಳು ಕೂಡ ನಡೆಯುತ್ತಿದೆ. ಇದೀಗ ಹಾಸನದಲ್ಲಿ (Hassan) ಅನೈತಿಕ ಸಂಬಂಧದ ವಿಚಾರವಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯಲ್ಲಿ ನೆನ್ನೆ (ಜ.28) ತಡರಾತ್ರಿ ಅನೈತಿಕ ಸಂಬಂಧದ ವಿಚಾರವಾಗಿ ಅಡುಗೆ ಕಂಟ್ರಾಕ್ಟರ್ನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅಡುಗೆ ಗುತ್ತಿಗೆದಾರ ಆನಂದ್(48) ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಧರ್ಮೇಂದ್ರ ಎಂಬ … Read more