ಶೂ ಒಳಗಡೆ ಮನೆ ಬೀಗ ಇಟ್ಟು ಹೋಗುತ್ತೀರಾ? ಎಚ್ಚರವಿರಲಿ, ಮನೆ ಬಾಡಿಗೆ ಹುಡುಕಿಕೊಂಡು ಬಂದು ಕೀ ನೋಡಿ ಕಳ್ಳನಾದವನ ಕಥೆ!

ಮನೆಯ ಶೂ ರ್ಯಾಕ್‌ಗಳಲ್ಲಿ ಅಥವಾ ಹೂವಿನ ಪಾಟ್‌ಗಳೊಳಗೆ ಮನೆ ಬೀಗದ ಕೀಲಿಯನ್ನು ಇಟ್ಟು ಹೋಗುವ ಮನೆ ಮಾಲೀಕರೇ ಎಚ್ಚರಿಕೆ ವಹಿಸಿ. ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಇಂತಹ ಪ್ರಕರಣ ಬೆಳಕಿಗೆ ಬಂದಿದೆ. ಅಕಸ್ಮಾತ್ತಾಗಿ ಕೀ ಕೈಗೆ ಸಿಕ್ಕರೆ ಮನೆ ಕಳ್ಳತನವಾಗುವುದು ಖಚಿತ ಎನ್ನುವುದನ್ನು ಈ ಪ್ರಕರಣ ಸ್ಪಷ್ಟ ಉದಾಹರಣೆಯಾಗಿದೆ. ಬಾಡಿಗೆ ಮನೆ ಹುಡುಕಲು ಬಂದವನೇ ಕಳ್ಳ! ಬಾಡಿಗೆ ಮನೆ ಹುಡುಕಲು ಬಂದ ಫೋಟೋಗ್ರಾಫರ್‌ ಒಬ್ಬನೇ ಮನೆ ಕಳ್ಳನಾಗಿ ಬದಲಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಘಟನೆ ನಗರದಲ್ಲಿ … Read more

ಶಿವಮೊಗ್ಗ ರೈತನ ಸೇಡು : ಲಂಚಕ್ಕೆ ಕೈಯೊಡ್ಡಿ ಜೈಲು ಸೇರಿದ ಸರ್ಕಾರಿ ಅಧಿಕಾರಿಗೆ ಬಾಳೆಹಣ್ಣು, ಸೊಳ್ಳೆಬತ್ತಿ ಕೊಟ್ಟ ರೈತ!

ಲಂಚ ಪಡೆದು ಜೈಲು ಪಾಲಾದ ಭೂಸ್ವಾಧೀನಾಧಿಕಾರಿ ಸಿದ್ದಲಿಂಗರೆಡ್ಡಿಯನ್ನು ನೋಡಲು ರೈತ ವಿಶುಕುಮಾರ್ ಜೈಲಿಗೆ ಭೇಟಿ ನೀಡಿದ್ದಾರೆ. ತನ್ನ ಶ್ರೀಗಂಧದ ಮರಕ್ಕೆ ಕಡಿಮೆ ಬೆಲೆ ನಿಗದಿಪಡಿಸಿದ್ದ ಅಧಿಕಾರಿಗೆ ಸೊಳ್ಳೆಬತ್ತಿ, ಬ್ರೆಡ್ ನೀಡಿ, ವ್ಯಂಗ್ಯವಾಗಿ ಪ್ರತಿಭಟಿಸಿ, ಸಾರ್ವಜನಿಕವಾಗಿ ಮಾನ ಹರಾಜು ಹಾಕಿದ್ದಾರೆ. ಸಾಮಾನ್ಯವಾಗಿ ಜೈಲಿನಲ್ಲಿರುವ ಬಂಧು-ಮಿತ್ರರನ್ನು ನೋಡಲು ಹೋಗುವವರು ಹಣ್ಣು-ಹಂಪಲು ತೆಗೆದುಕೊಂಡು ಹೋಗುವುದು ಸಹಜ. ಆದರೆ, ಶಿವಮೊಗ್ಗದ ಸೋಗಾನೆ ಕೇಂದ್ರ ಕಾರಾಗೃಹದ ಮುಂದೆ ಮಂಗಳವಾರ ನಡೆದ ದೃಶ್ಯ ಮಾತ್ರ ಎಲ್ಲರ ಹುಬ್ಬೇರಿಸುವಂತಿತ್ತು. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದು ಜೈಲು … Read more

ಬಿಎಂಟಿಸಿ ನಿವೃತ್ತ ಕಂಡಕ್ಟರ್ ಗೆ ಕೋಟಿಗಟ್ಟಲೆ ಆಸ್ತಿ ತಂದ ಕುತ್ತು, ಇಂದಿರಾನಗರದಲ್ಲಿ ಮಕ್ಕಳಿಂದಲೇ ತಂದೆ ಹತ್ಯೆ!

ಆಸ್ತಿ ವಿವಾದಕ್ಕೆ ತಂದೆಯನ್ನೇ ಮಕ್ಕಳು ಹತ್ಯೆ ಮಾಡಿದ ಭೀಕರ ಘಟನೆ ಸಿಲಿಕಾನ್ ಸಿಟಿಯ ಇಂದಿರಾನಗರದಲ್ಲಿ ನಡೆದಿದೆ. ಇಂದಿರಾನಗರದ ದೂಪನಹಳ್ಳಿ ಪ್ರದೇಶದಲ್ಲಿ ಶನಿವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ತಂದೆ ಮತ್ತು ಮಕ್ಕಳ ನಡುವೆ ಆಸ್ತಿಯ ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ಮೃತರನ್ನು ಮುನಿಕೃಷ್ಣಪ್ಪ (70) ಎಂದು ಗುರುತಿಸಲಾಗಿದ್ದು, ಅವರು ಬಿಎಂಟಿಸಿ ಸಂಸ್ಥೆಯ ನಿವೃತ್ತ ಕಂಡಕ್ಟರ್ ಆಗಿದ್ದರು. ಆಸ್ತಿ ವಿವಾದವೇ ಕೊಲೆಗೆ ಕಾರಣ ಮುನಿಕೃಷ್ಣಪ್ಪ ಅವರು ಕೋಟ್ಯಾಂತರ ಮೌಲ್ಯದ ಆಸ್ತಿ ಹೊಂದಿದ್ದು, ಅದರಲ್ಲಿನ ಕೆಲವು ಆಸ್ತಿಯನ್ನು ಮೊಮ್ಮಕ್ಕಳ … Read more

ಗರ್ಲ್ ಫ್ರೆಂಡ್ ಎದೆಯ ಮೇಲೆ ಹತ್ತಿ ಕುಳಿತು ಚಾಕು ಮುರಿಯುವವರೆಗೂ ಇರಿದು ಕೊಂದು, ಧೂಪ ಬೆಳಗಿ ಆಕೆಯ ಆತ್ಮ ಕರೆದ ವ್ಯಕ್ತಿ

ವ್ಯಕ್ತಿಯೊಬ್ಬ ಪ್ರೇಯಸಿಯ ಎದೆಯ ಮೇಲೆ ಹತ್ತಿ ಕುಳಿತು, ಚಾಕು ಮುರಿಯುವವರೆಗೂ ಇರಿದು, ಕೊಲೆ ಮಾಡಿ ಬಳಿಕ ಧೂಪ ಬೆಳಗಿ ಆಕೆಯ ಆತ್ಮವನ್ನು ಕರೆದಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆಕೆಯನ್ನು ಕೊಲೆ ಮಾಡಿ ಬಳಿಕ ಯೂಟ್ಯೂಬ್ನಲ್ಲಿ ಆತ್ಮವನ್ನು ಕರೆಯುವುದು ಹೇಗೆ ಎಂದು ಸರ್ಚ್ ಮಾಡಿದ್ದಾನೆ. ಕೊಲೆ ಮಾಡಿದ್ದಕ್ಕೆ ಕ್ಷಮೆಯಾಚಿಸಿ ಆಕೆಯ ಆತ್ಮದೊಂದಿಗೆ ಮಾತನಾಡಲು ಬಯಸುವುದಾಗಿ ಕೇಳಿಕೊಂಡಿದ್ದ. ಇದು ಕಾಲ್ಪನಿಕವಲ್ಲ, ಇಂದೋರ್‌ನ ದ್ವಾರಕಾಪುರಿ ಪ್ರದೇಶದಲ್ಲಿ ಎಂಬಿಎ ವಿದ್ಯಾರ್ಥಿಯ ಕ್ರೂರ ಹತ್ಯೆಯ ಆರೋಪಿ ಪಿಯೂಷ್ ಧಮ್ನೋಟಿಯಾ ಅವರ ನಡವಳಿಕೆ ಇದು. ಈಗ … Read more

ಬ್ಯಾಂಕ್‌ ಲಾಕರಲ್ಲಿದ್ದ ಚಿನ್ನ ಎಗರಿಸಿ ಬೆಟ್ಟಿಂಗ್‌ ಆಟ! ₹4 ಕೋಟಿ ಮೌಲ್ಯದ ಆಭರಣ ಕದ್ದ ಮ್ಯಾನೇಜರ್‌!

ಬೆಂಗಳೂರಿನಲ್ಲಿ, ಸರ್ಕಾರಿ ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕನೊಬ್ಬ ಗ್ರಾಹಕರ ಲಾಕರ್‌ನಿಂದ ₹4.12 ಕೋಟಿ ಮೌಲ್ಯದ ಚಿನ್ನವನ್ನು ಕದ್ದಿದ್ದಾನೆ. ಈ ಚಿನ್ನವನ್ನು ಅಡವಿಟ್ಟು ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಕಳೆದುಕೊಂಡಿದ್ದು, ಸದ್ಯ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ. ಮಲಯಾಳಂ ನಟ ದುಲ್ಕರ್ ಸಲ್ಮಾನ್ ಅಭಿನಯದ ಲಕ್ಕಿ ಭಾಸ್ಕರ್ ಸಿನಿಮಾದ ಕಥೆಯನ್ನು ನೆನಪಿಸುವಂತಹ ಘಟನೆಯೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಸರ್ಕಾರಿ ಬ್ಯಾಂಕ್ ಒಂದರ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬ, ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿ ಇರಿಸಿದ್ದ ₹4.12 ಕೋಟಿ ಮೌಲ್ಯದ 2.783 ಕೆಜಿ … Read more

ಹಂಪಿಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ; ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಕಳೆದ ವರ್ಷ ನಡೆದ ವಿದೇಶಿ ಮಹಿಳೆ ಹಾಗೂ ಸ್ಥಳೀಯ ಹೋಂ ಸ್ಟೇ ನಿರ್ವಾಹಕಿ ಮೇಲೆ ಸಾಮೂಹಿಕ ಅತ್ಯಾಚಾರ, ಜೊತೆಗೆ ಒಡಿಶಾದ ಪ್ರವಾಸಿಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ. ಈ ಪ್ರಕರಣದಲ್ಲಿ ಗಂಗಾವತಿ ಸಾಯಿನಗರದ ಮಲ್ಲೇಶ್ (ಹಂದಿಮಲ್ಲ), ಸಾಯಿ (ಚೈತನ್ಯಸಾಯಿ) ಮತ್ತು ಶರಣಪ್ಪ (ಶರಣು ಬಸವರಾಜ್) ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದ್ದು, ಇವರಿಗೆ ಮರಣದಂಡನೆ ಶಿಕ್ಷೆ … Read more

ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು

ಮಂಗಳೂರಿನಲ್ಲಿ ಕೋಮುವಾದಿ ಸಂಘಟನೆಗಳಿಂದಾಗಿಯೇ ಐಟಿ-ಬಿಟಿ ಕಂಪನಿಗಳಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿರುವುದು ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೋಮುವಾದಿಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಂತಹ ಕರಾವಳಿ ಜಿಲ್ಲೆಗಳಲ್ಲಿ ಐಟಿ ಬಿಟಿ ಕಂಪನಿಗಳು ಬಂಡವಾಳ ಹೂಡಲು ಹಿಂದೇಟು ಹಾಕುತ್ತಿದ್ದಾರೆ ಎಂದಿದ್ದರು. ಅವರ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಕೆಲವರು ಸಚಿವರನ್ನು ಪ್ರಶ್ನೆ ಮಾಡಿದ್ದು ಹಾಗಿದ್ದರೆ ಕಲ್ಬುರ್ಗಿಯಲ್ಲಿ ಎಷ್ಟು ಐಟಿ ಬಿಟಿ ಕಂಪನಿಗಳಿವೆ ಎಂದಿದ್ದಾರೆ. … Read more

ಕಿಡ್ನಿ, ಹೃದಯ, ಕಣ್ಣು ದಾನ: ಸರ್ಕಾರಿ ಗೌರವದೊಂದಿಗೆ 10 ತಿಂಗಳ ಮಗು ಅಂತ್ಯಸಂಸ್ಕಾರ

ಅದು 10 ತಿಂಗಳ ಹೆಣ್ಣುಮಗು.. ಅಪಘಾತದಲ್ಲಿ ತೀವ್ರ ಗಾಯಗೊಂಡು ಬ್ರೈನ್ ಡೆಡ್ ಆಗಿ ಮೃತಪಟ್ಟಿದೆ.. ಆದರೆ, ತನ್ನ ಸಾವಿನಲ್ಲೂ ಹಲವರಿಗೆ ಜೀವದಾನ ಮಾಡಿದೆ. ಹೌದು ಕೇರಳದಲ್ಲಿ ಬ್ರೈನ್ ಡೆಡ್ ಆಗಿ ಮೃತಪಟ್ಟ ಮಗುವಿನ ಅಂಗಾಂಗ ದಾನ ಮಾಡಲಾಗಿದೆ. ಕಿಡ್ನಿ, ಯಕೃತ್ತು, ಕಣ್ಣು. ಹೃದಯ ಕವಾಟಗಳನ್ನು ದಾನ ಮಾಡಲಾಗಿದೆ. ಇವುಗಳನ್ನು ಅಗತ್ಯವಿರುವ ಐದು ಜನರಿಗೆ ಕಸಿ ಮಾಡಲು ನಿರ್ಧರಿಸಲಾಗಿದೆ. ಇಂದು ಪತ್ತನಂತಿಟ್ಟ ಜಿಲ್ಲೆಯ ಮಲ್ಲಪಳ್ಳಿಯಲ್ಲಿ ಮಗು ಅಲಿನ್ ಶೆರಿನ್ ಅಬ್ರಹಾಂ ಅಂತ್ಯ ಸಂಸ್ಕಾರ ನಡೆದಿದ್ದು, ಮಂತ್ರಿಗಳ ಜೊತೆ ರಾಜ್ಯದ … Read more

ಕಚೇರಿಗೆ ಬಾಡಿಗೆ ಬಿಟ್ಟಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚಕ್ಕೆ ಬೇಡಿಕೆ ; ಕೆಎಎಸ್ ಅಧಿಕಾರಿ ಸೇರಿ ಇಬ್ಬರ ಬಂಧನ

ಕಚೇರಿಗೆ ಬಾಡಿಗೆ ಬಿಟ್ಡಿದ್ದ ವಾಹನದ ಬಾಡಿಗೆ ಹಣ ನೀಡಲು ₹40,000 ಲಂಚ ಪಡೆಯುವಾಗ ಇಲ್ಲಿನ ರಾಷ್ಟ್ರೀಯ ಹೆದ್ದಾರಿ -206 ರ ವಿಶೇಷ ಭೂಸ್ವಾಧೀನಾಧಿಕಾರಿಯೂ ಆದ ಹಿರಿಯ ಕೆಎಎಸ್ ಅಧಿಕಾರಿ ಸಿದ್ಧಲಿಂಗ ರೆಡ್ಡಿ ಹಾಗೂ ಮಧ್ಯವರ್ತಿ, ಹೊಳಲೂರು ಗ್ರಾಮ ಪಂಚಾಯ್ತಿ ಗ್ರಾಮ ಸಹಾಯಕ ರಾಜೇಶ್ ಶನಿವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಓತಿಘಟ್ಟ ಗ್ರಾಮದ ಚಾಲಕ ವಿ.ಕೇಶವಮೂರ್ತಿ ತಮ್ಮ ಮಾರುತಿ ಎರ್ಟಿಗಾ ಕಾರನ್ನು ರಾಷ್ಟ್ರೀಯ ಹೆದ್ದಾರಿ ಭೂಸ್ವಾಧೀನಾಧಿಕಾರಿ ಕಚೇರಿಗೆ ಕಳೆದ ಎರಡು ವರ್ಷಗಳಿಂದ ಬಾಡಿಗೆಗೆ ಬಿಟ್ಟಿದ್ದರು. ಪ್ರತೀ … Read more

ಮಾರುಕಟ್ಟೆಗೆ ಲಗ್ಗೆ ಇಟ್ಟ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!

ಇಂದಿನ ದಿನಗಳಲ್ಲಿ ಬಂಗಾರದ ಬೆಲೆ ಗಗನಕ್ಕೇರುತ್ತಿದೆ. ಮದುವೆ ಇರಲಿ, ಹಬ್ಬವಿರಲಿ ಅಥವಾ ಹೂಡಿಕೆ ಇರಲಿ, ಪ್ರತಿಯೊಬ್ಬರಿಗೂ ಚಿನ್ನವೇ ಮೊದಲ ಆಯ್ಕೆ. ಆದರೆ ಅಸಲಿ ಚಿನ್ನದ ಬೆಲೆ ಏರುತ್ತಿದ್ದಂತೆ ಮಾರುಕಟ್ಟೆಯಲ್ಲಿ ನಕಲಿ ಚಿನ್ನದ ದಂಧೆಯೂ ಜೋರಾಗಿದೆ. ಕಡಿಮೆ ಬೆಲೆಗೆ ಚಿನ್ನ ಸಿಗುತ್ತದೆ ಎಂಬ ಆಸೆಗೆ ಬಿದ್ದು ಜನರು ದೊಡ್ಡ ಮಟ್ಟದ ವಂಚನೆಗೆ ಬಲಿಯಾಗುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ‘ಬಾಂಗ್ಲಾದೇಶಿ ರೆಡ್ ಗೋಲ್ಡ್’ ಅಥವಾ ‘ಅಕಾ ಸ್ಟೋನ್’ (Aka Stone) ಎಂಬ ಹೆಸರು ಭಾರಿ ಚರ್ಚೆಯಲ್ಲಿದೆ. ಕವಡೆ ಕಾಸಿನ ಬೆಲೆಗೆ … Read more