ಅಪ್ಪ ಮಗನ ಗಲಾಟೆ ದುರಂತ ಅಂತ್ಯ – ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಮಗನ ಶವ ಪತ್ತೆ

ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾದ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ರಾಮಕುಂಜದ ವಸಂತ್ ಅಮೀನ್ ಪುತ್ರ ಮೋಕ್ಷ (17) ಗುರುತಿಸಲಾಗಿದೆ. ಬಾಲಕನ ತಂದೆಯೂ ಚೂರಿಯಿಂದ ಇರಿದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಯ ಬಗ್ಗೆ ಹಲವು ಅನುಮಾನಗಳು ಮೂಡಿದೆ. ಕೌಟುಂಬಿಕ ಕಲಹದಲ್ಲಿ ಮನೆಯಲ್ಲಿ ಸಂಘರ್ಷ ನಡೆದ ಬಗ್ಗೆ ಅನುಮಾನ ಇದ್ದು, ತಂದೆ ಮತ್ತು ಮಗನ ಮಧ್ಯೆ ಮನೆಯಲ್ಲಿ ಪರಸ್ಪರ ಜಗಳ ನಡೆದಿರುವ ಸಾಧ್ಯತೆ ಇದೆ. ಈ … Read more

ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?

ಮನುಷ್ಯನ ದೇಹದ ಪ್ರತಿಯೊಂದು ಭಾಗಕ್ಕೂ ಬಹಳ ಪ್ರಾಮುಖ್ಯತೆ ಇದೆ. ದೇಹದ ದೊಡ್ಡ ಅಂಗಾಂಗದಿಂದ ಬಹಳ ಚಿಕ್ಕ ಅಂಗಾಂಗದವರೆಗೂ ಪ್ರತಿಯೊಂದು ಅಂಗದ ಕಾರ್ಯವೂ ಮಹತ್ವದ್ದಾಗಿದೆ. ಯಾವುದೇ ಅಂಗಾಂಗವನ್ನು ಕಡೆಗಣಿಸುವಂತಿಲ್ಲ. ನಮ್ಮ ದೇಹದ ಆರೋಗ್ಯಕರ ಕ್ರಿಯೆಯನ್ನು ಕಾಪಾಡುವುದರಲ್ಲಿ ರಕ್ತನಾಳಗಳು ನಮ್ಮ ದೇಹದ ಪ್ರತಿಯೊಂದು ಅಂಗಾಂಗಳಿಗೆ ರಕ್ತ ಸರಬರಾಜಿನ ಕೆಲಸ ಮಾಡುವುದು. ಆದರೆ ಕೆಲವೊಂದು ಸಲ ರಕ್ತನಾಳಗಳು ಉಬ್ಬಿಕೊಂಡು, ಗಂಟು ಕಟ್ಟಿಕೊಂಡಿರುವುದು. ಇಂತಹ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುವುದು ಕಾಲಿನಲ್ಲಿ. ನಿಂತುಕೊಂಡೇ ಕೆಲಸ ಮಾಡುವುದು ಉಬ್ಬಿಕೊಂಡಿರುವ ರಕ್ತನಾಳಗಳ ಮೇಲೆ ಪರಿಣಾಮ ಬೀರುವುದು. ಉಬ್ಬಿರುವ … Read more

ರಾಜ್ಯ ಸರ್ಕಾರದವರು ತಮಗೆ ಬೇಕಾದಂತೆ ಪ್ರಜ್ವಲ್ ರೇವಣ್ಣ ಕೇಸ್ ತನಿಖೆ ಮಾಡಿಸಿದ್ದಾರೆ : ಹೆಚ್ ಡಿ ಕುಮಾರಸ್ವಾಮಿ ಕಿಡಿ

ಜೆಡಿಎಸ್ ಪಕ್ಷದ ಬೆಳ್ಳಿ ಹಬ್ಬದ ಹಿನ್ನಲೆಯಲ್ಲಿ ಇಂದು ಹಾಸನದಲ್ಲಿ ಬೃಹತ್ ಸಮಾವೇಶದ ಮೂಲಕ ಜೆಡಿಎಸ್ ಶಕ್ತಿ ಪ್ರದರ್ಶನ ಮಾಡಿದೆ. ಈ ವೇಳೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು. ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಆರೋಪ ಸಾಬೀತುಪಡಿಸಿದ ಪೊಲೀಸ್ ಅಧಿಕಾರಿಗಳಿಗೆ 30 ಲಕ್ಷ ಹಣವನ್ನು ಸರ್ಕಾರವು ಬಹುಮಾನವಾಗಿ ಘೋಷಣೆ ಮಾಡಿರುವ ವಿಚಾರವನ್ನು ಅವರು ಪ್ರಸ್ತಾಪಿಸಿದರು. ರಾಜ್ಯ ಸರ್ಕಾರದ ಧೋರಣೆಗಳ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ರಾಜ್ಯದಲ್ಲಿ ಈ ಹಿಂದೆ ಕಾಡುಗಳ್ಳ ವೀರಪ್ಪನ್ … Read more

ಬರ್ತಡೇ ಪಾರ್ಟಿಗೆ ಕರೆದು ಗೆಳೆಯನನ್ನೇ ಕೊಂದರು! ರಾಯಚೂರು ಕೆರೆ ಏರಿ ಮೇಲೆ ಕೊಲೆ

ರಾಯಚೂರಿನ ಮಾವಿನಕೆರೆ ದಂಡೆಯ ಮೇಲೆ ಶುಕ್ರವಾರ ರಾತ್ರಿ ಜನ್ಮದಿನದ ಪಾರ್ಟಿಗೆ ಕರೆಸಿ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಯುವಕನ ಕೊಲೆ ಮಾಡಲಾಗಿದೆ. ಜಹೀರಾಬಾದ್ ಬಡಾವಣೆ ನಿವಾಸಿ ವಿಶಾಲ (22) ಕೊಲೆಯಾಗಿದ್ದಾನೆ. ಬಸವರಾಜ, ಜನ್ಮದಿನದ ಪಾರ್ಟಿ ಕೊಡಿಸುವುದಾಗಿ ನಂಬಿಸಿ ವಿಶಾಲನನ್ನು ಕರೆಸಿಕೊಂಡಿದ್ದ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿಗಳಾದ ಜಹೀರಾಬಾದ್‌ ಬಡಾವಣೆಯ ರಾಜು ಅಲಿಯಾಸ್ ಯೇಸು (19) ಹಾಗೂ ಬಸವರಾಜ (19) ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಓಡಿ ಹೋಗುತ್ತಿದ್ದಾಗ ಡಿವೈಎಸ್‌ಪಿ ಶಾಂತವೀರ ಕೈಗೆ ಸಿಕ್ಕಿ … Read more

ಗಣಿತ ಹೋಮ್‌ವರ್ಕ್‌ ಮಾಡದ 4 ವರ್ಷದ ಮಗಳು ವಂಶಿಕಾಳನ್ನು ಲಟ್ಟಣಿಗೆಯಲ್ಲಿ ಹೊಡೆದು ಸಾಯಿಸಿದ ಪಾಪಿ ಅಪ್ಪ.!

ಗಣಿತದ ಹೋಮ್‌ವರ್ಕ್‌ ಮಾಡುವ ವೇಳೆ 1 ರಿಂದ 50ರವರೆಗಿನ ಸಂಖ್ಯೆಗಳನ್ನು ಬರೆಯಲು ವಿಫಲವಾದ ಕಾರಣಕ್ಕೆ 4 ವರ್ಷದ ಮಗಳನ್ನು ಲಟ್ಟಣಿಗೆಯಲ್ಲಿ ಹೊಡೆದು ಸ್ವಂತ ಅಪ್ಪನೇ ಕೊಂದಿರುವ ಘಟನೆ ನಡೆದಿದೆ. 31 ವರ್ಷದ ವ್ಯಕ್ತಿ ಸಿಟ್ಟಿನ ಭರದಲ್ಲಿ 4 ವರ್ಷದ ಮಗಳಿಗೆ ಲಟ್ಟಣಿಗೆಯಲ್ಲಿ ಹೊಡೆದಿದ್ದು, ಬಳಿಕ ಸಿಟ್ಟಿನಲ್ಲಿ ಆಕೆಯನ್ನು ನೆಲಕ್ಕೆ ಬಡಿದಿದ್ದಾನೆ. ಇದರ ಬೆನ್ನಲ್ಲಿಯೇ ಮಗು ಸಾವು ಕಂಡಿದೆ. ಬಳಿಕ ಹರಿಯಾಣದ ಫರಿದಾಬಾದ್ ನಿವಾಸಿ ಕೃಷ್ಣ ಜೈಸ್ವಾಲ್ ಈ ಕೊಲೆಯನ್ನು ಆಕಸ್ಮಿಕ ಸಾವು ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು … Read more

ಅಕ್ರಮ ಸಂಬಂಧ – ಪ್ರಿಯಕರನಿಗಾಗಿ ತಮ್ಮನೊಂದಿಗೆ ಸೇರಿ ಗಂಡನನ್ನೇ ಕೊಂದ ಪತ್ನಿ : ಠಾಣೆಗೆ ಬಂದು ಶರಣು

ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಮತ್ತು ತಮ್ಮನ್ನು ಕೊಲ್ಲುತ್ತಾನೆ ಎಂಬ ಭಯದಿಂದ ಪತ್ನಿಯೊಬ್ಬಳು ತನ್ನ ತಮ್ಮನೊಂದಿಗೆ ಸೇರಿ ಪತಿಯ ಕಣ್ಣಿಗೆ ಖಾರದ ಪುಡಿ ಎರಚಿ, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಶನಿವಾರ(ಜ.24) ವರದಿಯಾಗಿದೆ. ಪ್ರಕಾಶಂ ಜಿಲ್ಲೆಯ ಪೆದ್ದರವಿಡು ಮಂಡಲದಲ್ಲಿ ಬುಧವಾರ ಈ ಘಟನೆ ನಡೆದಿದೆ. ಲಾಲು ಶ್ರೀನು (38) ಕೊಲೆಯಾದ ಪತಿ. ಝಾನ್ಸಿ ಗಂಡನ ಕೊಲೆಗೆ ಸುಪಾರಿ ನೀಡಿ, ಜೊತೆಗೆ ತಾನೇ ತಮ್ಮನೊಂದಿಗೆ ಸೇರಿ ಕೊಲೆ ಮಾಡಿದ ಆರೋಪಿ ಪತ್ನಿ. ಕೊಲೆ … Read more

ಮಗನ ಅನೈತಿಕ ಸಂಬಂಧಕ್ಕೆ ತಾಯಿ ಫುಲ್ ಸಪೋರ್ಟ್! ನವವಿವಾಹಿತೆ ಗಂಭೀರ ಆರೋಪ.! ಮದ್ವೆಯಾದ 7 ದಿನಕ್ಕೆ ಮುರಿದು ಬಿತ್ತು ಸಂಸಾರ..!

ನವವಿವಾಹಿತರ ನಡುವಿನ ವೈವಾಹಿಕ ಕಲಹ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪತ್ನಿಯ ಕುಟುಂಬಸ್ಥರಿಂದ ಪತಿ ಹಲ್ಲೆಗೊಳಗಾದ ಘಟನೆ ಆನೇಕಲ್ನ (Anekal)ಅತ್ತಿಬೆಲೆಯಲ್ಲಿ ನಡೆದಿದೆ. ಪತಿ ಆರೋಪಕ್ಕೆ ಪ್ರತ್ಯಾರೋಪ ಮಾಡಿರುವ ಪತ್ನಿ, ಆತನಿಗೆ ಅನೈತಿಕ ಸಂಬಂಧವಿದ್ದು, ಅವನ ತಾಯಿಯೂ ಸಹಕರಿಸಿರುವುದಾಗಿ ಆರೋಪಿಸಿದ್ದಾಳೆ. ಪತಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ ಪತ್ನಿಯ ಕುಟುಂಬಸ್ಥರು ಅಂತರ್ಜಾತಿ ವಿವಾಹವಾಗಿದ್ದ ಅಂಬರೀಶ್ ಮತ್ತು ನಂದಿನಿ ನಡುವೆ ಮದುವೆಯಾಗಿ ವಾರದೊಳಗೆ ವೈಮನಸ್ಸು ಉಂಟಾಗಿತ್ತು. ಈ ಹಿನ್ನೆಲೆ ನವವಿವಾಹಿತೆಯ ಮಾವ ಸಂಪಂಗಿ, ಅಂಬರೀಶ್ ಮೇಲೆ ಹಲ್ಲೆ ನಡೆಸಿದ್ದ. ನಂತರ ನಂದಿನಿ … Read more

ಡಿಕೆಶಿ ಕನಸಿನ ‘ಸಿಎಂ’ ಪಟ್ಟದ ಬಗ್ಗೆ ಕೋಡಿಶ್ರೀ ಭವಿಷ್ಯ: ಅಡ್ಡಗೋಡೆ ಮೇಲಿನ ದೀಪದ ಹಿಂದೆ ಅಡಗಿದೆಯೇ ಗಾದಿ ಸೀಕ್ರೆಟ್.?

ಸಾಮಾನ್ಯವಾಗಿ ಮಕರ ಸಂಕ್ರಾಂತಿಯ ಪರ್ವಕಾಲದಂದು ವರ್ಷದ ಮೊದಲ ಭವಿಷ್ಯ ನುಡಿಯುವ ಕೋಡಿಮಠದ ಶ್ರೀಗಳು ಈ ಬಾರಿ ( 2026 ) ಭವಿಷ್ಯವನ್ನು ನುಡಿಯಲಿಲ್ಲವೇ? ಶ್ರೀಗಳು ಸಂಕ್ರಾಂತಿಯ ಭವಿಷ್ಯ, ಹಬ್ಬ ಮುಗಿದು ಹತ್ತು ದಿನಗಳಾಗುತ್ತಾ ಬಂದರೂ ಇನ್ನೂ ಎಲ್ಲೂ ವರದಿಯಾಗಿಲ್ಲ. ಸಂಕ್ರಾಂತಿಗೆ ಭವಿಷ್ಯ ನುಡಿಯುವುದಾಗಿ ಶ್ರೀಗಳು ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸಂಕ್ರಾಂತಿಗೆ ಭವಿಷ್ಯ ನುಡಿಯುವುದಾಗಿ ದೇವದುರ್ಗ ಕಾಗಿನೆಲೆ ಕನಕಪೀಠದಲ್ಲಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ (ಜನವರಿ 13) ಕೋಡಿಶ್ರೀಗಳು ಹೇಳಿದ್ದರು. ಸೂರ್ಯನನ್ನು ನೋಡಿ ಭವಿಷ್ಯ ಹೇಳುವುದು ಮಕರ ಸಂಕ್ರಾಂತಿಯ ವೇಳೆ, … Read more

ಶಿವಮೊಗ್ಗದಲ್ಲಿ ತೋಟಕ್ಕೆ ಹೋದ ವ್ಯಕ್ತಿ ನಾಪತ್ತೆ; ತುಂಗಾ ನದಿಯಲ್ಲಿ ಶವವಾಗಿ ಪತ್ತೆ!

ಮನೆಯಿಂದ ತೋಟಕ್ಕೆ ಹೋಗುತ್ತೇನೆಂದು ಮನೆಯಿಂದ ಹೊರಗೆ ಹೋದ ವ್ಯಕ್ತಿ ಗುರುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಇಂದು (ಶುಕ್ರವಾರ) ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಮೃತರನ್ನು ಕುರುವಳ್ಳಿಯ ನಿವಾಸಿ ವಸಂತ (31) ಎಂದು ಗುರುತಿಸಲಾಗಿದೆ. ಘಟನೆಯ ವಿವರ ವಸಂತ ಅವರು ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಹೋಗುತ್ತೇನೆ ಎಂದು ಹೇಳಿ ತೆರಳಿದ್ದರು. ಆದರೆ, ರಾತ್ರಿಯಾದರೂ ಮನೆಗೆ ವಾಪಾಸ್ ಬಾರದಿದ್ದಾಗ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದರು. ಇಂದು ಶುಕ್ರವಾರ ಹುಣಸವಳ್ಳಿ ಸಮೀಪದ ಭೂ ವರಹ ದೇವಸ್ಥಾನದ ಹತ್ತಿರ ನದಿ … Read more

ಭೀಕರ ರಸ್ತೆ ಅಪಘಾತ ; ಮೃತರ ಸಂಖ್ಯೆ 4ಕ್ಕೆ ಏರಿಕೆ, 9 ಮಂದಿಗೆ ಗಾಯ

ಖಾಸಗಿ ಬಸ್ ಹಾಗೂ ತೂಫಾನ್ ವಾಹನಗಳ ಮಧ್ಯೆ ಮಿಯಾರು ಗ್ರಾಮದ ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ 2.50ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಮಗು ಸಹಿತ 9 ಮಂದಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ತೂಫನ್ ವಾಹನ ಚಾಲಕ ಮಣ್ಣಪ್ಪ, ಚೇತನ್(27), ರೋಹಿತ್(28) ಹಾಗೂ ಮಲ್ಲಮ್ಮ(50) ಎಂದು ಗುರುತಿಸಲಾಗಿದೆ. ಸಂಗೀತ (40), ಕವಿತಾ(38), ಬಸವರಾಜ್(56), ಕಿಶೋರ್(28), ಲಕ್ಷ್ಮೀ(25), ಜ್ಯೋತಿ(25), ಜಯಲಕ್ಷ್ಮೀ(24), ಎರಡು ವರ್ಷದ ಮಗು ಕುಶಲ್ ಸೇರಿದಂತೆ 9 ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲ … Read more