ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗ್ತಿದ್ದೀರಾ.? ಶುಗರ್ ಅಲ್ಲ ಈ ಸಮಸ್ಯೆನೂ ಇರಬಹುದು!

ನಮ್ಮಲ್ಲಿರುವ ಅನೇಕ ರೀತಿಯ ಕಾಯಿಲೆಗಳು (Disease) ದೇಹವನ್ನು ಆವರಿಸುವ ಮುಂಚೆ ತನ್ನದೇ ಆದ ರೋಗ ಲಕ್ಷಣಗಳನ್ನು (Symptoms) ತೋರಿಸುತ್ತದೆ ಅನ್ನೋದು ನಮಗೆಲ್ಲಾ ಗೊತ್ತಿರುವಂತಹ ವಿಚಾರವೇ ಆಗಿದೆ. ಆದರೆ ತುಂಬಾನೇ ಮಾರಕ ರೋಗಗಳು ಅಂತಾನೆ ಕರೆಯಲ್ಪಡುವ ಕ್ಯಾನ್ಸರ್ (Cancer) ಮತ್ತು ಏಡ್ಸ್ (AIDS) ರೋಗಗಳು ಬಹುತೇಕವಾಗಿ ದೇಹವನ್ನು ಆವರಿಸಿಕೊಳ್ಳುವ ತನಕ ಯಾವುದೇ ರೋಗ ಲಕ್ಷಣಗಳನ್ನು ತೋರಿಸುವುದಿಲ್ಲ ಅಂತ ಹೇಳಲಾಗುತ್ತದೆ. ಅದರಲ್ಲೂ ಕ್ಯಾನ್ಸರ್ ಎಂಬುದು ಎಷ್ಟೋ ಸಲ ಕೊನೆಯ ಹಂತ ತಲುಪುವವರೆಗೂ ರೋಗಿಗಳಲ್ಲಿ ಯಾವುದೇ ರೀತಿಯ ರೋಗ ಲಕ್ಷಣಗಳು ಗಮನಕ್ಕೆ … Read more

‘ಲವರ್’ ಜೊತೆ ಸೇರಿ ಪತಿಯನ್ನು ಕೊಂದು, ರಾತ್ರಿಯಿಡೀ ‘ಪೋರ್ನ್ ವೀಡಿಯೋ’ ವೀಕ್ಷಿಸಿದ ಪತ್ನಿ.!

ಇತ್ತೀಚೆಗೆ ಕೆಲವು ರಾಜ್ಯಗಳಲ್ಲಿ ಹೆಂಡತಿಯರು ಗಂಡಂದಿರನ್ನು ಕೊಲ್ಲುವ ಮತ್ತು ಹೆಂಡತಿಯರು ಗಂಡಂದಿರನ್ನು ಕೊಲ್ಲುವ ಸರಣಿ ಘಟನೆಗಳು ಸಂಚಲನ ಮೂಡಿಸುತ್ತಿವೆ. ಇತ್ತೀಚೆಗೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಮತ್ತೊಂದು ಕೊಲೆ ಸಂಚಲನ ಮೂಡಿಸಿದೆ. ಹೆಂಡತಿಯೊಬ್ಬಳು ತನ್ನ ಗೆಳೆಯನೊಂದಿಗೆ ಸೇರಿಕೊಂಡು ತನ್ನ ಗಂಡನನ್ನು ಕೊಂದು.. ರಾತ್ರಿಯಿಡೀ ಒಬ್ಬಂಟಿಯಾಗಿ ಕುಳಿತು ಪೋರ್ನ್ ವಿಡಿಯೋಗಳನ್ನು ನೋಡುತ್ತಾ ಸಮಯ ಕಳೆದಿದ್ದಾಳೆ. ಏನಿದು ಘಟನೆ ಕೊಲೆಯಾದವರನ್ನು ಈರುಳ್ಳಿ ವ್ಯಾಪಾರಿ ಲೋಕಂ ಶಿವನಾಗರಾಜು ಎಂದು ಗುರುತಿಸಲಾಗಿದೆ. ಅವರು 2007 ರಲ್ಲಿ ಲಕ್ಷ್ಮಿ ಮಾಧುರಿ ಎಂಬುವವರನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು … Read more

ವಡಗೇರಾ ಸರಕಾರಿ ಶಾಲೆ ಆವರಣದಲ್ಲಿಯೇ ವಿದ್ಯಾರ್ಥಿ ಆತ್ಯಹತ್ಯೆ; ಮುಗಿಲು ಮುಟ್ಟಿದ ಕುಟುಂಸ್ಥರ ಆಕ್ರಂದನ

ಯಾದಗಿರಿ : ಜಿಲ್ಲೆಯ ವಡಗೇರಾ ಪಟ್ಟಣದ ಸರಕಾರಿ ಶಾಲೆಯ ಆವರಣದಲ್ಲಿಯೇ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ವಿದ್ಯಾರ್ಥಿಯೊಬ್ಬನ ಶವ ಬುಧವಾರ ಪತ್ತೆಯಾಗಿದೆ. ವಿದ್ಯಾರ್ಥಿ ಪವನ್ ಪೂಜಾರಿ (15) ಮೃತ ದುರ್ದೈವಿ. ಶಾಲೆಯ ಆವರಣದಲ್ಲಿ ಹಿಂದುಗಡೆಯ ಮರಕ್ಕೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಈತನ ಶವ ಪತ್ತೆಯಾಗಿದೆ. ಘಟನೆ ವಿವರ ಶಾಲೆಯಲ್ಲಿ ಓದುತ್ತಿದ್ದ ಪವನ್, ಬೆಳಗ್ಗೆ ಶಾಲೆಯಲ್ಲಿ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯಲ್ಲಿ ಭಾಗವಹಿಸಿದ್ದ. ಅಲ್ಲದೇ ತರಗತಿಗಳಿಗೂ ಹಾಜರಾಗಿ ಶಾಲೆಯಲ್ಲಿ ಆಯೋಜಿಸಿದ್ದ ಕಿರು ಪರೀಕ್ಷೆಯನ್ನು ಸಹ ಬರೆದಿದ್ದ. ಮಧ್ಯಾಹ್ನ ಸುಮಾರು … Read more

ನನ್ನ ಮಗನಿಗೆ ಹೃದಯಾಘಾತ ಆಗಿಲ್ಲ, ಇದು ಕೊಲೆ? : ಬಾಬಾಜಾನ್ ಸಾವಿಗೆ ಬಿಗ್ ಟ್ವಿಸ್ಟ್, ಹೂತಿದ್ದ ಶವವನ್ನು ಹೊರತೆಗೆದ ಅಧಿಕಾರಿಗಳು

2025 ನವೆಂಬರ್ 11 ರಂದು ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರದಲ್ಲಿ ಬಾಬಾಜಾನ್ ಚಿನ್ನೂರು(51) ಎಂಬ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ಇದು ಹೃದಯಾಘಾತವಲ್ಲ, ಕೊಲೆ ಎಂದು ಹೇಳಿದರು. ಇದೀಗ ಹೂತಿದ್ದ ಬಾಬಾಜಾನ್ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಮುಚ್ಚಿ ಹೋಗಿದ್ದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. NWKSRTC (ವಾಯುವ್ಯ ಕರ್ನಾಟಕ ರಸ್ತೆ … Read more

ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ ಶವವಾಗಿ ಪತ್ತೆ : ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ

ಯುವತಿಯೋರ್ವಳು ಕೆಲಸ ಹುಡುಕಲು ಮನೆಯಿಂದ ಹೋಗಿದ್ದವಳು ಶವವಾಗಿ ಪತ್ತೆಯಾಗಿದ್ದಾಳೆ. ಪ್ಯಾರಾಮೆಡಿಕಲ್ ಪೂರ್ಣಗೊಳಸಿದ್ದ ಧಾರವಾಡದ ಗಾಂಧಿ ಚೌಕ್ನ ನಿವಾಸಿ 21 ವರ್ಷ ಝಕಿಲಾ ಮುಲ್ಲಾ, ಕೆಲಸ ಹುಡುಕಲೆಂದು ನಿನ್ನೆ(ಜನವರಿ 20) ಮನೆಯಿಂದ ಹೋಗಿದ್ದವಳು. ಆದ್ರೆ, ಇಂದು (ಜನವರಿ 21) ಧಾರವಾಡದ ಮನಸೂರು ಗ್ರಾಮದ ರಸ್ತೆ ಪಕ್ಕ ಝಕಿಲಾ ಮುಲ್ಲಾ ಮೃತದೇಹ ಪತ್ತೆಯಾಗಿದೆ. ಯುವತಿ ಬಾಯಲ್ಲಿ ರಕ್ತ ಬಂದಿದ್ದು, ಆಕೆಯ ವೇಲ್ನಿಂದಲೇ ಕುತ್ತಿಗೆ ಬಿಗಿದು ಕೊಂದಿರುವ ಸಂಶಯ ಹುಟ್ಟುಕೊಂಡಿದೆ. ಇನ್ನು ಈ ಘಟನೆಯಿಂದ ಧಾರವಾಡ ಜನರೆಲ್ಲ ಬೆಚ್ಚಿ ಬಿದ್ದಿದ್ದಾರೆ. ಧಾರವಾಡದ … Read more

ಮೊಟ್ಟೆ ಸಾಂಬರ್ ಸಂಬಂಧ ಗಲಾಟೆ; ಪತಿಯ ನಾಲಿಗೆಯನ್ನೇ ಕಚ್ಚಿ ಕಟ್ ಮಾಡಿದ ಪತ್ನಿ ; ಘಟನೆ ಕೇಳಿದ್ರೆ ನೀವೇ ದಂಗಾಗ್ತೀರಾ!

ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಮೊಟ್ಟೆ ಸಾಂಬರ್ ವಿಚಾರಕ್ಕೆ ನಡೆದ ಕೌಟುಂಬಿಕ ಜಗಳ ಹಿಂಸಾಚಾರದ ರೂಪ ಪಡೆದಿದ್ದು, ಈ ವೇಳೆ ಪತ್ನಿಯೊಬ್ಬರು ತನ್ನ ಪತಿಯ ಮೇಲೆ ಹಲ್ಲೆ ಮಾಡಿ ಆತನ ನಾಲಿಗೆಯನ್ನು ಕಚ್ಚಿ ಕಟ್ ಮಾಡಿ ಶಾಶ್ವತವಾಗಿ ಮೂಗನಾಗಿರುವಂತೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಬೇಗುಮಾಬಾದ್ ಪ್ರದೇಶದ ಸಂಜಯ್ಪುರಿಯಲ್ಲಿ ಸೋಮವಾರ(ಜ. 19) ರಾತ್ರಿ ಈ ಘಟನೆ ನಡೆದಿದೆ. ಪತಿ ವಿಪಿನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಶ್ವತವಾಗಿ ಮೂಖನಾಗಿದ್ದಾನೆ. ವೈದ್ಯರು ಮತ್ತೆ ಶಸ್ತ್ರ ಚಿಕಿತ್ಸೆ ಬಳಿಕವೂ ನಾಲಿಗೆಯನ್ನು ಮತ್ತೆ ಜೋಡಿಸಲು … Read more

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ್ರು : ಸ್ನೇಹಿತರ ರಾಕ್ಷಸಿ ಕೃತ್ಯಕ್ಕೆ ಬೆಚ್ಚಿ ಬಿದ್ದ ಮಾಗಡಿ.!

ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ಮಾಗಡಿ ತಾಲೂಕಿನ ವಾಜರಹಳ್ಳಿಯಲ್ಲಿ ನಡೆದ ಘಟನೆಯೊಂದು ಎಲ್ಲರನ್ನು ಬೆಚ್ಚಿ ಬೀಳಿಸಿದೆ. ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಇದೀಗ ಬಯಲಿಗೆ ಬಂದಿದೆ. ನ್ಯೂ ಇಯರ್ ಪಾರ್ಟಿ ಮಾಡಲು ತೆರಳಿದ್ದ ಯುವಕರ ಗುಂಪು ಈ ಕೃತ್ಯ ಎಸಗಿದ್ದು, ಯುವಕನ ಸಾವಿನ ರಹಸ್ಯ ತಡವಾಗಿ ಬಯಲಿಗೆ ಬಂದಿದೆ. ಕೊಲೆಯಾದ ಯುವಕನನ್ನು ವಿನೋದ್ ಕುಮಾರ್ (26) ಹಾಗೂ ಬಂಧಿತರನ್ನು ಸುದೀಪ್, ಪ್ರಜ್ವಲ್ ಎಂದು ಗುರುತಿಸಲಾಗಿದೆ. ಮೂವರು ಮಾಗಡಿ … Read more

ಚಿನ್ನದ ಕುರಿತು ‘ಬಾಬಾ ವಂಗಾ’ ಭವಿಷ್ಯವಾಣಿ ವೈರಲ್! ಬಂಗಾರದ ಬೆಲೆ ಎಷ್ಟು ಹೆಚ್ಚಾಗುತ್ತೆ ಗೊತ್ತಾ?

ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿವೆ. ಚಿನ್ನ ಮತ್ತು ಬೆಳ್ಳಿ ದಿನದಿಂದ ದಿನಕ್ಕೆ ದುಬಾರಿಯಾಗುತ್ತಿದೆ. ಈ ಸಂದರ್ಭದಲ್ಲಿ, ಪ್ರಸಿದ್ಧ ಅತೀಂದ್ರಿಯ ಮತ್ತು ಬಲ್ಗೇರಿಯನ್ ಬಾಬಾ ವಂಗಾ ಅವರ ಭವಿಷ್ಯವಾಣಿಗಳು ಮತ್ತೊಮ್ಮೆ ಚರ್ಚೆಯ ವಿಷಯವಾಗಿದೆ. ಬಾಬಾ ವಂಗಾ ಹಿಂದೆ ಚಿನ್ನದ ಬೆಲೆಗಳ ಬಗ್ಗೆ ಭವಿಷ್ಯ ನುಡಿದಿದ್ದರು. ಆ ಭವಿಷ್ಯವಾಣಿಯನ್ನ ತಿಳಿದು ಅನೇಕ ಜನರು ಈಗ ಆಘಾತಕ್ಕೊಳಗಾಗಿದ್ದಾರೆ. ಯಾಕಂದ್ರೆ, ವಂಗಾ ಅವರ ಭವಿಷ್ಯವಾಣಿಗಳು ಅಕ್ಷರಶಃ ನಿಜವಾಗಿವೆ. ಚಿನ್ನದ ಬೆಲೆ ಎಷ್ಟು ಮತ್ತು ಯಾವಾಗ ಹೆಚ್ಚಾಗುತ್ತದೆ ಎಂದು ಬಾಬಾ … Read more

ಚಿನ್ನದ ಆಸೆಗೆ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಂದ ವೈದ್ಯ! ಭದ್ರಾವತಿ ದಂಪತಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್.!

ಉಕ್ಕಿನ ನಗರಿ ಭದ್ರಾವತಿಯನ್ನು ಬೆಚ್ಚಿಬೀಳಿಸಿದ ವೃದ್ಧ ದಂಪತಿಗಳ ನಿಗೂಢ ಸಾವಿನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಭೀಕರ ಸತ್ಯವನ್ನು ಹೊರಗೆಳೆದಿದ್ದಾರೆ. ಹಣ ಹಾಗೂ ಚಿನ್ನದ ಲಾಲಸೆಗೆ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ವೈದ್ಯನೊಬ್ಬ ಕೊಂದಿರುವುದು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ. ಭದ್ರಾವತಿಯ ಭೂತನ್ ಗುಡಿ ಪ್ರದೇಶದಲ್ಲಿ ವಾಸವಾಗಿದ್ದ ಚಂದ್ರಪ್ಪ (68) ಮತ್ತು ಅವರ ಪತ್ನಿ ಜಯಮ್ಮ (65) ಅವರು ಜನವರಿ 20ರ ಬೆಳಗ್ಗೆ ಅನುಮಾನಾಸ್ಪದವಾಗಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮನೆಯೊಳಗೆ ಯಾವುದೇ ಗಲಾಟೆ ಅಥವಾ ಹೋರಾಟದ ಗುರುತುಗಳಿರಲಿಲ್ಲ. … Read more

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ‘ಬಯೋಮೆಟ್ರಿಕ್’ ಬರದಿದ್ದರೆ ಮ್ಯಾನುವಲ್ ಆಗಿ ಬರೆದು ಪಡಿತರ ವಿತರಣೆ.!

ಆಹಾರ ಭದ್ರತಾ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಇದನ್ನು ಖಾತ್ರಿಪಡಿಸುವ ಉದ್ದೇಶದಿಂದ ನಾಲ್ಕು ದಿನಗಳ ಜಿಲ್ಲಾ ಭೇಟಿ ಕೈಗೊಂಡಿದ್ದು ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್ ಕೃಷ್ಣ ತಿಳಿಸಿದರು. ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಆಹಾರ ಆಯೋಗದ ಜಿಲ್ಲೆಯ ಭೇಟಿ ಮತ್ತು ಪರಿಶೀಲನೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಹಿಂದೆ ಆಹಾರದ ಕೊರತೆ ಇತ್ತು. ಇದೀಗ ಕೊರತೆ ಇಲ್ಲ, ಆಹಾರ ನಮ್ಮ ಹಕ್ಕಾಗಿದ್ದು … Read more