ಯಾದಗಿರಿ ಹಾಸ್ಟೆಲ್‌ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್

ಯಾದಗಿರಿ: ಜಿಲ್ಲೆಯ ಶಹಪುರ ಪಟ್ಟಣದ ವಸತಿ ನಿಲಯವೊಂದರ ವಿದ್ಯಾರ್ಥಿನಿಗೆ ಶೌಚಾಲಯದಲ್ಲಿಯೇ ಹೆರಿಗೆಯಾದ ಘಟನೆ ನಡೆದಿದೆ.ಶಹಪುರದಲ್ಲಿರುವ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಬುಧವಾರ ಶೌಚಕ್ಕೆ ಹೋದಾಗ 2:30ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ, ಇದು ಶಿಕ್ಷಣ ಇಲಾಖೆ ಸೇರಿದಂತೆ ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಜೊತಗೆ ವಸತಿ ನಿಲಯದಲ್ಲಿರುವ ಇನ್ನಷ್ಟು ವಿದ್ಯಾರ್ಥಿನಿಯರ ಪಾಲಕರಲ್ಲಿ ಆತಂಕ ಹೆಚ್ಚಿಸಿದೆ. ತಾಯಿ-ಮಗು ಆರೋಗ್ಯವಾಗಿದೆ ವಿದ್ಯಾರ್ಥಿನಿಗೆ ಹೆರಿಗೆಯಾದ ಸುದ್ದಿ ತಿಳಿದು ತಕ್ಷಣವೇ ನಗರದ ಸರಕಾರಿ … Read more

ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳಿಗೆ ಶಾಕ್‌ ಕೊಟ್ಟ ಸುಜಾತ ಭಟ್‌! ಅನನ್ಯಾ ಭಟ್‌ ನಾಪತ್ತೆ ಪ್ರಕರಣ!

ಮಂಗಳೂರು : ಅನನ್ಯಾ ಭಟ್‌ ನಾಪತ್ತೆ ಪ್ರಕರಣದ (Ananya Bhat Missing Case) ಸೃಷ್ಟಿಕರ್ತೆ ಸುಜಾತ ಭಟ್‌ (Sujatha Bhat) ಬೆಳ್ಳಂಬೆಳಗ್ಗೆ ವಿಶೇಷ ತನಿಖಾ ತಂಡದ (SIT) ಕಚೇರಿಗೆ ಆಗಮಿಸಿ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಅನನ್ಯಾ ಭಟ್‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಆ.29 ರಂದು ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ನೋಟಿಸ್‌ ನೀಡಿದ್ದರು. ಶುಕ್ರವಾರ ವಿಚಾರಣೆ ನಿಗದಿಯಾಗಿದ್ದರೂ ಇಂದು ಬೆಳಗ್ಗೆ 5 ಗಂಟೆಗೆ ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ಇಬ್ಬರು ವಕೀಲರ ಜೊತೆ ಆಗಮಿಸಿದ್ದಾರೆ. ಸುಜಾತ … Read more

ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್‌

ಭಾನು ಮುಷ್ತಾಕ್ (Banu Mushtaq) ಅವರು ದಸರಾ ಉತ್ಸವ ಉದ್ಘಾಟಿಸುವ ಮುನ್ನ ತಾಯಿ ಭುವನೇಶ್ವರಿ ಹಾಗೂ ತಾಯಿ ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದು ಸಂಸದ ಹಾಗೂ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Wadiyar) ತಿಳಿಸಿದ್ದಾರೆ. ಇದಕ್ಕೂ ಮುನ್ನ ಕೊಡಗಿನಲ್ಲಿ ಸುದ್ಧಿಗಾರರ ಜೊತೆಗೆ ಮಾತನಾಡಿದ್ದ ಯದುವೀರ್‌, ಭಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡಿದ್ದರು. ಯದುವೀರ್‌ ಎಕ್ಸ್‌ ಪೋಸ್ಟ್‌ನಲ್ಲಿ ಏನಿದೆ?ಭಾನು ಮುಷ್ತಾಕ್ ಅವರು ಕನ್ನಡ ಸಾಹಿತ್ಯ ಲೋಕದ ವಿಶಿಷ್ಟ … Read more

ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್‌ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್‌

ಮೈಸೂರು: ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯ (Lover) ಬಾಯಿಗೆ ಜಿಲೆಟಿನ್ (Gelatin) ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆಗೈದ ಘಟನೆ ಸಾಲಿಗ್ರಾಮ ತಾಲೂಕಿನ ಬೇರ್ಯ ಗ್ರಾಮದಲ್ಲಿ ನಡೆದಿದೆ. ಹುಣಸೂರು (Hunasuru) ತಾಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತ (20) ಮೃತ ಮಹಿಳೆ. ಪಿರಿಯಾಪಟ್ಟಣದ ಬಿಳಿಕೆರೆ ಗ್ರಾಮದ ಸಿದ್ದರಾಜು ಕೊಲೆಗೈದ ಆರೋಪಿಯಾಗಿದ್ದಾನೆ. ರಕ್ಷಿತ ಕೇರಳದ ವ್ಯಕ್ತಿಯನ್ನು ಮದುವೆಯಾಗಿದ್ದಳು. ಅಲ್ಲದೇ ಸಿದ್ದರಾಜು ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು ಎಂದು ತಿಳಿದುಬಂದಿದೆ. ಮಹಿಳೆ ಕಪ್ಪಡಿ ಕ್ಷೇತ್ರಕ್ಕೆ ಹೋಗೋಣ ಎಂದು ಕರೆದಿದ್ದಳು. ಬಳಿಕ ಲಾಡ್ಜ್‍ನಲ್ಲಿ ಇಬ್ಬರು ತಂಗಿದ್ದರು. … Read more

ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್‌ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು

ನಾವು ಮತಾಂತರ ಆಗಿದ್ವಿ, ಆದ್ದರಿಂದ ಫಂಡಿಂಗ್‌ ಬರ್ತಿತ್ತು, ಧರ್ಮಸ್ಥಳದ (Dharmasthala) ವಿರುದ್ಧ ಕಟ್ಟು ಕಥೆ ಸೃಷ್ಟಿಸಿದ್ರು ಅನ್ನೋದೆಲ್ಲ ಸುಳ್ಳು. 11 ವರ್ಷಗಳಿಂದಲೇ ತಮಿಳುನಾಡಿನಲ್ಲೇ ಕೂಲಿ ಕೆಲಸ ಮಾಡಿಕೊಂಡಿದ್ವಿ. ಅವರು ಕೆಲಸಕ್ಕೆ ಹೋದರಷ್ಟೇ ಜೀವನ ನಡೆಯುತ್ತಿತ್ತು. ಈಗ ಅವರಿಲ್ಲದೇ ಜೀವನವೇ ಇಲ್ಲದಂತಾಗಿದೆ. ಎಲ್ಲಿ ಹೋಗ್ಬೇಕು, ಏನ್‌ ಮಾಡ್ಬೇಕು ಒಂದೂ ಗೊತ್ತಾಗ್ತಿಲ್ಲ…. ಬುರುಡೆ ಪ್ರಕರಣದಲ್ಲಿ ಎಸ್‌ಐಟಿ ಕಸ್ಟಡಿಯಲ್ಲಿರುವ ಚಿನ್ನಯ್ಯನ 2ನೇ ಪತ್ನಿ ಮಲ್ಲಿಕಾ ಬಿಕ್ಕಿ ಬಿಕ್ಕಿ ಅಳುತ್ತಾ ತನ್ನ ಅಳಲು ತೋಡಿಕೊಂಡದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿ ಪ್ರಕರಣದ ʻಬುರುಡೆʼ … Read more

ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ

ಧರ್ಮಸ್ಥಳ (Dharmasthala) ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ. ಬೆಳ್ಳಂಬೆಳಗ್ಗೆಯೇ ವಿಜಯೇಂದ್ರ, ಸಿ.ಟಿ ರವಿ, ಎಸ್.ಆರ್ ವಿಶ್ವನಾಥ್, ಛಲವಾದಿ ನಾರಾಯಣಸ್ವಾಮಿ, ಬಿವೈ ವಿಜಯೇಂದ್ರ, ಕ್ಯಾಪ್ಟನ್ ಬೃಜೇಶ್ ಚೌಟ, ವೇದವ್ಯಾಸ ಕಾಮತ್, ಗುರುರಾಜ್ ಗಂಟಹೊಳೆ, ಪ್ರತಾಪ್ ಸಿಂಹ ನಾಯಕ್, ಹರೀಶ್ ಪೂಂಜಾ, ಕಿರಣ್ ಕುಮಾರ್ ಕೊಡ್ಗಿ, ಯಶ್ ಪಾಲ್ ಸುವರ್ಣ, ಧನಂಜಯ ಸರ್ಜಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದಿದ್ದಾರೆ. ಈ ವೇಳೆ … Read more

ನನ್ನನ್ನು ಬೇಕಾದರೆ ಜೈಲಿಗೆ ಹಾಕಿ ಆದರೆ ಧರ್ಮಸ್ಥಳ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಜನಾರ್ಧನ ಪೂಜಾರಿ ಗುಡುಗು

ಧರ್ಮಸ್ಥಳದ ಮೇಲೆ ಆರೋಪದ ವಿರುದ್ದ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಗರಂ ಆಗಿದ್ದು, ಧರ್ಮಸ್ಥಳದ ಜೊತೆ ಇಡೀ ದೇಶವೇ ಇದೆ. ವಿರೇಂದ್ರ ಹೆಗ್ಗಡೆಯವರೇ ನಾನು ನಿಮ್ಮ ಜೊತೆ ಇದ್ದೇನೆ ಎಂದು ಜನಾರ್ಧನ ಪೂಜಾರಿ ಅವರು ಹೇಳಿದ್ದಾರೆ. ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತೊಕ್ಕೊಟ್ಟಿನ ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆದ “ಮುದ್ದು ಕೃಷ್ಣ -2025” ಕೃಷ್ಣ ವೇಷ ಸ್ಪರ್ಧೆಯನ್ನ ಉದ್ಘಾಟಿಸಿ ಅವರು ಮಾತನಾಡಿದರು. ಧರ್ಮಸ್ಥಳದ ವಠಾರವನ್ನು ಎಸ್ ಐಟಿಯವರು ಅಗೆಯುತ್ತಿದ್ದಾರೆ. … Read more

‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!

ಆ ಯುವಕನಿಗೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಆಕೆಯ ಮೇಲೆ ಪ್ರೀತಿ ಬೆಳೆದಿತ್ತು. ಇನ್ಸ್ ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿ, ಪರಿಚಯ ಪ್ರೀತಿಯಾಗಿ ತಿರುಗಿದಂತ ಪ್ರಿಯತಮೆಯನ್ನು ಹುಡುಕಿಕೊಂಡು ಬಂದ ಆ ಹುಡುಗನಿಗೆ ಆಗಿದ್ದು ಮಾತ್ರ ಶಾಕ್. ಹೌದು.. ನವನೀತ್ ಹಾಗೂ ಅಪೂರ್ವ ನಡುವೆ ಇನ್ಸ್ ಸ್ಟಾಗ್ರಾಮ್ ನಲ್ಲಿ ಲವ್ ಆಗಿತ್ತು. ಆಕೆಯನ್ನು ಹುಡುಕಿಕೊಂಡು ಚಿಕ್ಕಮಗಳೂರಿಗೆ ನವನೀತ್ ತೆರಳಿದ್ದನು. ಅಲ್ಲಿ ಹೋಗಿ ನೋಡಿದ್ರೆ ಪ್ರೇಯಸಿ 3 ಮಕ್ಕಳ ತಾಯಿ ಎಂಬುದಾಗಿ ಗೊತ್ತಾಗಿ ದಿಗಿಲು ಬಡಿದಂತೆ ಆಗಿದೆ. ಕೋಲಾರ ಜಿಲ್ಲೆಯ ನವನೀತ್ ಗೆ … Read more

ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!

ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದ ಕೋಡಿಮಠ ಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಇಂದು ಕೂಡ ಮತ್ತೊಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಅರಸನ ಅರಮನೆಗೆ ಕಾರ್ಮೋಡ ಕವಿದೀತು,ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ ಎನ್ನುವ ಮೂಲಕ ದೇಶ ನಾಯಕ ಸ್ಥಾನದಲ್ಲಿರುವವರಿಗೆ ಆಪತ್ತು ಕಾದಿದೆ ಎಂಬರ್ಥದಲ್ಲಿ ಹೇಳಿರುವ ಭವಿಷ್ಯ ಈಗ ಭಾರೀ ಸಂಚಲನ ಮೂಡಿಸಿದೆ. ಆದರೆ ಅದಕ್ಕೆ ಪರಹಾರ ಮಾಡಿಕೊಂಡರೆ ಸರಿಯಾದೀತು ಎಂಬ … Read more

ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ

ಮೂಡುಬಿದಿರೆಯ ಕಾಲೇಜು ವಿದ್ಯಾರ್ಥಿನಿಯ ಮೇಲೆ ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ ಸಂದೀಪ್ ಹಾಗೂ ಅವರಿಗೆ ಬೆಂಗಳೂರಿನಲ್ಲಿ ರೂಮು ಕೊಟ್ಟ ಅನೂಪ್ ಸೇರಿ ಮೂವರೂ ಅತ್ಯಾಚಾರ ಮಾಡಿದ್ದಾರೆ. ಮೊದಲನೆಯದಾಗಿ ವಿದ್ಯಾರ್ಥಿನಿಯ ಸಲುಗೆ ಬೆಳೆಸಿ ನರೇಂದ್ರ ಎಂಬ ಉಪನ್ಯಾಸಕ ಬೆಂಗಳೂರಿಗೆ ಕರೆತಂದು ಅತ್ಯಾಚಾರ ಮಾಡಿದ್ದು, ಈ ವಿಡಿಯೋ ಹಾಗೂ ಫೋಟೋ ಇಟ್ಟುಕೊಂಡು ಆಕೆಯನ್ನು ಬೆದರಿಸಿ ಮತ್ತಿಬ್ಬರು ಸಮಯ ಸಾಧಿಸಿ ಆಕೆಯನ್ನು ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ. ಹೌದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಉತ್ತಮ ಜೀವನ ರೂಪಿಸಬೇಕಾದ ಉಪನ್ಯಾಸಕರೇ ವಿದ್ಯಾರ್ಥಿನಿಯನ್ನು … Read more