ಸಿಎಂಗೆ ಯಾರೋ ಮಾಟ ಮಾಡವ್ರೆ ಅನಿಸುತ್ತೆ: ಮಾಜಿ ಸಚಿವ ರಾಜಣ್ಣ ಹೇಳಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಷ್ಟೊಂದು ಅಸಹಾಯಕ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದರೆ ಯಾರೋ ಮಾಟ, ಮಂತ್ರ ಮಾಡಿಸಿರಬಹುದು. ಇದರ ಬಗ್ಗೆ ತನಿಖೆ ಮಾಡಿಸುತ್ತಿದ್ದೇನೆ ಎಂದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಹೇಳಿಕೆ ನೀಡಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಗರು. ಟಗರು ಯಾವತ್ತಿದ್ದರೂ ಟಗರೇ ಅವರು ಅಸಹಾಯಕರಾಗಲ್ಲ’ ಎಂಬ ಜಮೀರ್‌ ಅಹ್ಮದ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ‘ನನ್ನ ಅನುಭವದ ಪ್ರಕಾರ ನಾನು ಸಿಎಂ ಸಿದ್ದರಾಮಯ್ಯ ಅವರು ಅಸಹಾಯಕರಾಗಿದ್ದಾರೆ ಎಂದು ಹೇಳಿದ್ದೇನೆ. ಅಗಾಧ ಶಕ್ತಿ ಹೊಂದಿರುವ ಸಿಎಂ ಇಷ್ಟೊಂದು … Read more

ಮನೆ ಕೆಲಸಕ್ಕೆ ಹೋಗಿದ್ದ ತಾಯಿ ವಾಪಸ್ ಬರುವಷ್ಟರಲ್ಲಿ ಘೋರ ದುರಂತ : ಬ್ಲೂ ಡ್ರಮ್‌ನಲ್ಲಿ 11 ವರ್ಷದ ಬಾಲಕನ ಶವ ಪತ್ತೆ

11 ವರ್ಷದ ಬಾಲಕನೋರ್ವ ನಿಗೂಢವಾಗಿ ಹತ್ಯೆಯಾದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಸಾತ್ನಾದಲ್ಲಿ ನಡೆದಿದೆ. ಬಾಲಕನ ಶವ ಆತ ವಾಸವಿದ್ದ ಮನೆಯೊಳಗೆ ನೀಲಿ ಬಣ್ಣದ ಡ್ರಮ್‌ನೊಳಗೆ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಬಾಲಕನನ್ನು ಶಿವರಾಜ್ ಅಲಿಯಾಸ್ ಬಾದಲ್ ಎಂದು ಗುರುತಿಸಲಾಗಿದೆ. ಕೋಲ್ಗಾವನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಸಿದ್ಧಾರ್ಥನಗರದ ಬಾಡಿಗೆ ಮನೆಯೊಂದರಲ್ಲಿ ಕೊಲೆಯಾದ ಬಾಲಕನ ಕುಟುಂಬ ವಾಸವಿತ್ತು. ಅದೇ ಮನೆಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಬಾಲಕನನ್ನು ಕತ್ತು ಸೀಳಿ ಕೊಲೆ ಮಾಡಿ ಶವವನ್ನು ಡ್ರಮ್‌ನಲ್ಲಿ ತುಂಬಿ ಮುಚ್ಚಿಟ್ಟಿರುವ … Read more

ನರೇಂದ್ರ ಮೋದಿ ಟೆರರಿಸ್ಟ್‌; ಚೆನ್ನೈನಲ್ಲಿ AIADMK ಗೆ ಬುದ್ಧಿವಾದ ಹೇಳಲು ಹೋಗಿ ʻಉಗ್ರವಾದʼ ಮಲ್ಲಿಕಾರ್ಜನ ಖರ್ಗೆ!

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಆ ರಾಜ್ಯದ ರಾಜಕಾರಣಿಗಳು ನೀಡುವ ಹೇಖಿಕೆಗಳಿಗಿಂತ, ಕರ್ನಾಟಕದ ರಾಜಕಾರಣಿಗಳು ನೀಡುತ್ತಿರುವ ಹೇಳಿಕೆಗಳೇ ಸದ್ದು ಮಾಡುತ್ತಿವೆ. ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ವಿರುದ್ಧ ಡಿಕೆ ಶಿವಕುಮಾರ್‌ ಗುಡುಗು ಮತ್ತು ಅದಕ್ಕೆ ಕರ್ನಾಟಕ ಬಿಜೆಪಿ ನೀಡಿರುವ ತಿರುಗೇಟಿನ ಮಧ್ಯೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯೊಂದು ಇದೀಗ ವಿವಾದದ ಕಿಡಿ ಹೊತ್ತಿಸಿದೆ. ಹೌದು, ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡುತ್ತಾ, ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಟೆರರಿಸ್ಟ್‌” ಎಂದು ಕರೆದಿದ್ದಾರೆ. … Read more

ಮತ್ತೆ ಜೆಡಿಎಸ್ ಗೂಡು ಸೇರ್ತೀರಂತೆ ನಿಜನಾ.? ಸಚಿವ ಜಮೀರ್ ಅಹ್ಮಮದ್ ಕೊಟ್ರು ಸ್ಪಷ್ಟನೆ

ಸಚಿವ ಜಮೀರ್ ಅಹಮದ್ ಖಾನ್ ಕಾಂಗ್ರೆಸ್ ತೊರೆದು ಮತ್ತೆ ಜೆಡಿಎಸ್ಗೆ ಹೋಗ್ತಿದ್ದಾರೆ. ಕೇಂದ್ರ ಸಚಿವ ಹಾಗೂ JDS ವರಿಷ್ಠ ಹೆಚ್ಡಿ ಕುಮಾರಸ್ವಾಮಿ ಜೊತೆ ಕೂಡ ಈ ಬಗ್ಗೆ ಗೌಪ್ಯ ಮಾತುಕತೆ ನಡೆದಿದೆ ಎನ್ನುವ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡ ಕ್ರಮಕ್ಕೆ ಬೇಸತ್ತು ಜಮೀರ್ ಪಕ್ಷ ತೊರೆಯುವ ಸಾಧ್ಯತೆ ಇದೆ ಎನ್ನಲಾಗ್ತಿತ್ತು. ಆದ್ರೆ ಈ ಎಲ್ಲಾ ಗೊಂದಲಕ್ಕೆ ಇದೀಗ ಜಮೀರ್ ತೆರೆ ಎಳೆದಿದ್ದಾರೆ. ಜೆಡಿಎಸ್ ಸೇರುವ ಬಗ್ಗೆ ಜಮೀರ್ … Read more

‘ಅಡವಿಯಲ್ಲಿ ಕಂಡದ್ದು ಕೇಳದ್ದು ಕುರುಹೀನ ರಟ್ಟು’ : ಕೋಡಿಶ್ರೀಗಳ ಹೊಸ ಭವಿಷ್ಯ – ಏನಿದರ ಅರ್ಥ?

ಎಲ್ಲಡೆ ಅಪಮೃತ್ಯ, ಜಾಗತಿಕವಾಗಿ ಪ್ರಮುಖ ವ್ಯಕ್ತಿಗಳ ತಲೆದಂಡವಾಗಲಿದೆ ಎಂದು ಕೋಡಿಮಠದ ಶ್ರೀಗಳುಹೊಸ ಭವಿಷ್ಯವನ್ನು ನುಡಿದಿದ್ದಾರೆ. ಹೊಯ್ಸಳ ಶೈಲಿಯ ಪ್ರಾಚೀನ ದೇವಾಲಯಗಳಿಗೆ ಹೆಸರಾಗಿರುವ ಜಿಲ್ಲೆಯ, ಕೃಷ್ಣರಾಜಪೇಟೆ ತಾಲೂಕಿನ, ಕಿಕ್ಕೇರಿಯಲ್ಲಿ ಶ್ರೀಗಳು ಈ ಭವಿಷ್ಯವನ್ನು ಹೇಳಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕು, ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು, ಹಾಲು ಕೆಟ್ಟರೂ ಹಾಲುಮತ ಸಮಾಜ ಕೆಡದು, ಅವರಾಗಿಯೇ ಬಿಡಬೇಕೇ ಹೊರತು, ಅವರನ್ನು ಬಲವಂತದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಶ್ರೀಗಳು ನುಡಿದಿದ್ದ ಭವಿಷ್ಯ ವೈರಲ್ … Read more

ನಾವೀಗ ವಿಶ್ವಗುರು ಅಲ್ಲ, ಆ ‍ಪದವನ್ನು ಬಳಸಬಾರದು : BJP ನಾಯಕ ಮುರಳಿ ಮನೋಹರ್ ಜೋಶಿ

ಭಾರತವು ಈಗ ‘ವಿಶ್ವಗುರು’ ಆಗಿ ಉಳಿದಿಲ್ಲ. ಆ ಪದವನ್ನು ಬಳಸಬಾರದು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಸೋಮವಾರ ಹೇಳಿದ್ದಾರೆ. ವಿಶ್ವಗುರು ಬಸವಣ್ಣನವರಿಂದ ಸಮಾಜದ ಬೆಸುಗೆ ಸಾಧ್ಯ.. ಸಂಸ್ಕೃತದ ಹೆಚ್ಚಿನ ಪ್ರಚಾರ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿಯೂ ಸಂಸ್ಕೃತ ಬಳಕೆಯ ಕುರಿತು ಪ್ರತಿಪಾದಿಸಿ ಅವರು ಈ ಮಾತನ್ನು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಕೃತವನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕರು ಈ ಹಿಂದೆ ಇದಕ್ಕಾಗಿ … Read more

ಅವನನ್ನ ಕೊಂದು ಬಿಡು, ಇಬ್ಬರು ಚೆನ್ನಾಗಿರೋಣ; ಗಂಡನ ಉಸಿರು ನಿಲ್ಲಿಸಿ ಜೈಲು ಸೇರಿದ ಪತ್ನಿ

ಮೈಸೂರಿನ ಸರಗೂರು ತಾಲೂಕಿನಲ್ಲಿ ನಡೆದ ಜವರಪ್ಪ ಕೊಲೆ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಭೇದಿಸಿದ್ದಾರೆ. ಪತ್ನಿ ಅಮೃತಾ ತನ್ನ ಪ್ರಿಯಕರ ಸಿದ್ದೇಶ್ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಹತ್ಯೆಗೈದಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಿಯಕರನೊಂದಿಗೆ ಸೇರಿಕೊಂಡು ಗಂಡನನ್ನು ಕೊ*ಲೆಗೈದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಾದ 24 ಗಂಟೆಯೊಳಗೆ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ಈ ಕೊ*ಲೆ ನಡೆದಿತ್ತು. ಕುರ್ಣೇಗಾಲದ ನಿವಾಸಿ ಜವರಪ್ಪ ಕೊಲೆಯಾಗಿದ … Read more

ಶ್ರೀರಾಮನ ಕುರಿತು ವ್ಯಂಗ್ಯ ಆರೋಪ, ಪ್ರತಿಕ್ರಿಯೆ ನೀಡಿದ ನಟ ಪ್ರಕಾಶ್ ರಾಜ್

ಇತ್ತೀಚೆಗಷ್ಟೆ ನಟ ಪ್ರಕಾಶ್ ರಾಜ್ (Prakash Raj) ಅವರು ರಾಮಾಯಣದ ಬಗ್ಗೆ ಮಾತನಾಡಿದ ವಿಡಿಯೋ ಒಂದು ವೈರಲ್ ಆಗಿತ್ತು. ವಿಡಿಯೋನಲ್ಲಿ ನಟ ಪ್ರಕಾಶ್ ರಾಜ್ ಅವರು ರಾಮನಿಗೆ, ರಾಮಾಯಣಕ್ಕೆ ಅವಮಾನ ಆಗುವಂತೆ ವ್ಯಂಗ್ಯದ ಮಾತುಗಳನ್ನಾಡಿದ್ದಾರೆ ಎಂದು ಹಲವರು ಆರೋಪಿಸಿದ್ದರು. ಪ್ರಕಾಶ್ ರಾಜ್ ವಿರುದ್ಧ ಕ್ರಮಕ್ಕೆ ಸಹ ಒತ್ತಾಯಿಸಲಾಗಿತ್ತು. ಇದೀಗ ನಟ ಪ್ರಕಾಶ್ ರಾಜ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟ್ಟರ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ಪ್ರಕಾಶ್ ರಾಜ್ ಉತ್ತರ ನೀಡಿದ್ದಾರೆ. ‘ಒಂದು ಸಾಹಿತ್ಯೋತ್ಸವದಲ್ಲಿ ‘ಕಲೆ ಮತ್ತು … Read more

ಕಾರ್‌, ಸರ್ಕಾರಿ ಬಸ್, ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಲಾರಿ : ರಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ನಿಯಂತ್ರಣ ತಪ್ಪಿದ ಲಾರಿಯೊಂದು ಕಾರ್, ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಲಾರಿಯೊಂದು ಕಾರ್, ಸರ್ಕಾರಿ ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಬೆಳ್ಳುಳ್ಳಿ ತುಂಬಿಕೊಂಡು ಹರಿಯಾಣದಿಂದ … Read more

ಡಾಕ್ಟರ್ ‘ಹೃದಯವಂತ’ ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು : ಸಂಸದ ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ

ಲೋಕಸಭೆಯಲ್ಲಿ ನಿನ್ನೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾಗಿದೆ. ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಇದಾಗಿತ್ತು. ಈ ಮಸೂದೆ ಪಾಸಾಗಲು ಮೂರನೇ ಎರಡರಷ್ಟು ಮತಗಳು ಸಿಗಬೇಕಿತ್ತು. ಆದರೆ ವಿಪಕ್ಷಗಳ ವಿಶ್ವಾಸ ಗಳಿಸುವಲ್ಲಿ ಮೋದಿ ಸರ್ಕಾರ ಎಡವಿತು. ಎನ್ ಡಿಎ ಸರ್ಕಾರದ ಮಹತ್ವಾಕಾಂಕ್ಷಿಯ ಮಸೂದೆಗಳನ್ನು ಇಂಡಿಯಾ ಕೂಟ ಸೋಲಿಸಿದೆ. ಚಲಾವಣೆಯಾದ 489 ಮತಗಳ ಪೈಕಿ ಪರವಾಗಿ 278 ಮತಗಳು, ವಿರುದ್ಧವಾಗಿ 211 ಚಲಾವಣೆಯಾಗಿದ್ದು 71 ಮತಗಳ ಕೊರತೆಯಿಂದ ಮಸೂದೆಗೆ ಸೋಲಾಯಿತು. ಇದನ್ನು ದಕ್ಷಿಣ … Read more