ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ | ಡಿಕೆಶಿಗೆ ಜ್ಞಾನೋದಯವಾಗಿದೆ: ಕೇಂದ್ರ ಸಚಿವ ಎಚ್. ಡಿ ಕುಮಾರಸ್ವಾಮಿ

‘ಗ್ಯಾರಂಟಿಗಳಿಗೆ ಖರ್ಚು ಮಾಡಿದ ಹಣವನ್ನು ರಾಜ್ಯ ಸರ್ಕಾರವು ಶಾಲೆ-ಆಸ್ಪತ್ರೆಗಳಿಗೆ ವಿನಿಯೋಗಿಸಿದ್ದರೆ ಸಮಸ್ಯೆ ಪರಿಹಾರವಾಗುತ್ತಿತ್ತು. ಈಗ ಆಸ್ಪತ್ರೆಗಳಲ್ಲಿ ಔಷಧಿಗಳಿಲ್ಲ. ಅವಧಿ ಮುಗಿದ ಔಷಧಿ ವಿತರಿಸಲಾಗುತ್ತಿದೆ’ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು. ‘ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ’ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ತಾಲ್ಲೂಕಿನ ಕೊಡಕಹಳ್ಳಿಯಲ್ಲಿ ಗುರುವಾರ ಸುದ್ದಿಗಾರರಿಗೆ ‍‍ಪ್ರತಿಕ್ರಿಯಿಸಿ, ‘ಅವರಿಗೆ ತಡವಾಗಿ ಜ್ಞಾನೋದಯವಾಗಿದೆ. ಇದೇ ಮಾತನ್ನು ಆರ್‌.ವಿ. ದೇಶಪಾಂಡೆ ಹಾಗೂ ಬಸವರಾಜ ರಾಯರೆಡ್ಡಿ ಮೊದಲೇ ಹೇಳಿದ್ದರು’ ಎಂದರು. ‘ರಾಜ್ಯದ ಜನರ ಬಗ್ಗೆ ಭಯಭಕ್ತಿ ಇದ್ದರೆ, ದೇವರಾಜ ಅರಸು … Read more

ನನ್ನ ಶ್ರೀಮಠದ ಭಕ್ತಾದಿಗಳೇ ಯಾವುದೇ ಆತಂಕ ಪಡಬೇಡಿ – ಮುತ್ಯಾ ವಿಡಿಯೋ ರಿಲೀಸ್‌

ಯಾದಗಿರಿ: ಪೋಕ್ಸೋ (POCSO) ಕೇಸ್‌ ದಾಖಲಾಗುತ್ತಿದ್ದಂತೆಯೇ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದ್ದ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ (mallikarjuna Mutya) ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಅಜ್ಞಾತ ಸ್ಥಳದಿಂದ ವೀಡಿಯೋ ಮಾಡಿರುವ ಮುತ್ಯಾ, ನನ್ನ ಶ್ರೀಮಠದ ಭಕ್ತಾದಿಗಳೇ ಯಾವುದೇ ಆತಂಕ ಪಡಬೇಡಿ. ನಾನು ಎಲ್ಲೂ ಹೋಗಿಲ್ಲ.. ಲೋಕಲ್‌ನಲ್ಲೇ ಇದ್ದೀನಿ ಎಂದಿದ್ದಾರೆ. ವೀಡಿಯೋದಲ್ಲಿ ಮುತ್ಯಾ ಹೇಳಿದ್ದೇನು..?: ನನ್ನ ಶ್ರೀಮಠದ ಭಕ್ತಾದಿಗಳೇ ಯಾವುದೇ ಆತಂಕ ಪಡಬೇಡಿ, ನಾನು ಇಲ್ಲೇ ಲೋಕಲ್ ಅಲ್ಲೇ ಇದ್ದೀನಿ, ಮಠದಲ್ಲಿ ಸಾಮೂಹಿಕ ಮದುವೆ ಇದ್ದ ಕಾರಣ ಕಾರ್ಡ್ ಕೊಡಲು ಬಂದಿದ್ದೇನೆ … Read more

ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. … Read more

ಆತ LLB, ಆಕೆ ಬಿಕಾಂ… ಉನ್ನತ ಶಿಕ್ಷಣ ಪಡೆದಿದ್ರೂ ದೇವಸ್ಥಾನದ ಮುಂದೆ ಭಿಕ್ಷೆ, ಮನಕಲಕುತ್ತೆ ದಂಪತಿಯ ಕಣ್ಣೀರ ಕತೆ!

ಮಹಾಮಾರಿ ಕರೊನಾ ಸಾಂಕ್ರಾಮಿಕ ರೋಗವು ಭಾರತದಲ್ಲಿ ಮಾತ್ರವಲ್ಲದೆ ಇಡೀ ಜಗತ್ತಿನಾದ್ಯಂತ ಅನೇಕ ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕೆಲವರು ಆರೋಗ್ಯ ಸಮಸ್ಯೆಗಳಿಂದ ತೀವ್ರವಾಗಿ ಬಳಲಿದರೆ, ಇನ್ನು ಕೆಲವರು ಉದ್ಯೋಗ ಕಳೆದುಕೊಂಡು ಜೀವನೋಪಾಯವಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಈ ರೀತಿ ಅತಂತ್ರ ಸ್ಥಿತಿಗೆ ಸಿಲುಕಿದ ಜನರಲ್ಲಿ ಕೆಲವರು ಉನ್ನತ ಶಿಕ್ಷಣವನ್ನೂ ಪಡೆದಿದ್ದಾರೆ. ಅಂಥವರಲ್ಲಿ ಜಲಂಧರ್ ರೆಡ್ಡಿ ಮತ್ತು ಸಿರಿಷಾ ದಂಪತಿ ಕೂಡ ಒಬ್ಬರು. ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಮಂಥನಿ ಮೂಲದ ಜಲಂಧರ್ ರೆಡ್ಡಿ, ಎಲ್‌ಎಲ್‌ಬಿ ಪದವಿಯನ್ನು ಪೂರ್ಣಗೊಳಿಸಿದ್ದಾರೆ. ಇನ್ನೂ ಅವರ ಪತ್ನಿ … Read more

ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ!

ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಹೊರವಲಯದಲ್ಲಿ ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಅಮಾನುಷವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಇದೀಗ ಸ್ಫೋಟಕ ತಿರುವು ಸಿಕ್ಕಿದೆ. ಕೊಲೆಯಾದ ವ್ಯಕ್ತಿಯ ಪತ್ನಿ ಹಾಗೂ ಮಗನೇ ಕೃತ್ಯಕ್ಕೆ ಸಾಥ್ ನೀಡಿ, ನಂತರ ನಾಟಕವಾಡಿದ್ದರು ಎಂಬ ಆಘಾತಕಾರಿ ವಿಚಾರ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಫೆಬ್ರವರಿ 20ರಂದು ಹಿರೇನಂದಿಹಳ್ಳಿ ಗ್ರಾಮ ಹೊರವಲಯದ ಜಮೀನಿನಲ್ಲಿ ಶವ ಪತ್ತೆಯಾಗಿತ್ತು. ನಂತರ ಮೃತ ವ್ಯಕ್ತಿ ಹಿರೇನಂದಿಹಳ್ಳಿ ಗ್ರಾಮದ ಕಲ್ಮೇಶ್ ಕೋಟಿ ಎಂದು ಗುರುತಿಸಲಾಯಿತು. ತುಮಕೂರಿನಲ್ಲಿ ಹೋಮ್ ಕೇರ್ ಉದ್ಯೋಗದಲ್ಲಿ ತೊಡಗಿದ್ದ ಕಲ್ಮೇಶ್, ಶಿವರಾತ್ರಿ … Read more

ವಿಜಯಪುರ ಮನೆಯಲ್ಲಿ ಕಾಣಿಸಿಕೊಳ್ಳುವ ರಕ್ತದೋಕುಳಿ, ದೇಹದ ಮೇಲೆಲ್ಲಾ ಕಾಣಿಸಿಕೊಳ್ಳುವ ವಿಚಿತ್ರ ಚಿಹ್ನೆ, ಉರ್ದು ಬರಹ!

ವಿಜಯಪುರ ಜಿಲ್ಲೆಯ ಪಾಟೀಲ ಕುಟುಂಬವೊಂದು ಕಳೆದ 16 ವರ್ಷಗಳಿಂದ ವಿಚಿತ್ರ ಸಮಸ್ಯೆಯನ್ನು ಎದುರಿಸುತ್ತಿದೆ. ಅಣ್ಣ-ತಂಗಿಯ ಮೈಮೇಲೆ ನಿಗೂಢ ಗಾಯಗಳು, ರಕ್ತದಲ್ಲಿ ಚಿಹ್ನೆಗಳು ಕಾಣಿಸಿಕೊಳ್ಳುತ್ತಿದ್ದು, ಬಟ್ಟೆಗಳಿಗೆ ಬೆಂಕಿ ತಗುಲುವಂತಹ ಘಟನೆಗಳಿಂದ ಅವರ ಬದುಕು ನರಕಸದೃಶವಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಒಂದು ಕುಟುಂಬ ಕಳೆದ 16 ವರ್ಷಗಳಿಂದ ಅರ್ಥವಾಗದ, ಆತಂಕಕಾರಿ ಹಾಗೂ ವಿಚಿತ್ರ ಸಮಸ್ಯೆಗೆ ಒಳಗಾಗಿದ್ದು, ಅವರ ಬದುಕು ಸಂಪೂರ್ಣವಾಗಿ ಸಮಸ್ಯೆಯಿಂದ ತುಂಬಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿರುವ ಪಾಟೀಲ ಕುಟುಂಬದ ಇಬ್ಬರು ಸಹೋದರ-ಸಹೋದರಿ ಈ ವಿಚಿತ್ರ ಕಾಟಕ್ಕೆ ಬೇಸತ್ತು ನರಕ … Read more

ನೀನೇ ಖುಷಿಯಾಗಿರು..! – ಮೊಬೈಲ್ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ವಿದ್ಯಾರ್ಥಿ ಆತ್ಮಹತ್ಯೆ

ಮೊಬೈಲ್‌ನಲ್ಲಿ ಭಾವುಕ ವಾಟ್ಸ್ಯಾಪ್ ಸ್ಟೇಟಸ್ ಹಾಕಿ 19 ವರ್ಷದ ವಿದ್ಯಾರ್ಥಿಯೊಬ್ಬನು ನೀರಿನ ಕಟ್ಟೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಧನುಷ್ (19) ಎಂದು ಗುರುತಿಸಲಾಗಿದೆ. ಇವರು ತುರುವೇಕೆರೆ ತಾಲ್ಲೂಕಿನ ಕೊಂಡಜ್ಜಿ ಸಮೀಪದ ಗೋಪ್ಪೆನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ತುರುವೇಕೆರೆ ಪಟ್ಟಣದಲ್ಲಿರುವ ಡಿಪ್ಲೊಮಾ ಕಾಲೇಜಿನಲ್ಲಿ ದ್ವಿತೀಯ ವರ್ಷದ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಬೆಳಗ್ಗೆ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ಹೊರಟಿದ್ದ ಧನುಷ್, ಸಂಜೆ ಆದರೂ ಪೋಷಕರ ಕರೆ ಸ್ವೀಕರಿಸಿರಲಿಲ್ಲ. ಇದರಿಂದ … Read more

18 ವರ್ಷ ಕಿರಿಯ ಮಹಿಳೆಯ ಜೊತೆ ನಿವೃತ್ತ ಹೈಕೋರ್ಟ್‌ ಉದ್ಯೋಗಿಯ ಅಫೇರ್‌, ಕೊಲೆ ಮಾಡಿ ರೈಲ್ವೆ ಟ್ರ್ಯಾಕ್‌ಗೆ ಎಸೆದ!

ಮಂಗಳವಾರ ಬೆಳಗಿನ ಜಾವ ಕೊಟ್ಟಾಯಂನ ಚಿಂಗವನಂನ ಸುಧಾ ಬೇಬಿ (45) ಕೊಲೆಯಾದ ಕೆಲವೇ ಗಂಟೆಗಳ ನಂತರ, ಮರಡು ಪೊಲೀಸರು ನಿವೃತ್ತ ಹೈಕೋರ್ಟ್ ಉದ್ಯೋಗಿ ಮತ್ತು ಪೊನ್ನುರುನ್ನಿ ಮೂಲದ ಶಾಜಿ ಕೆವಿ (63) ಅವರನ್ನು ಕೊಲೆ ಕೇಸ್‌ನಲ್ಲಿ ಬಂಧಿಸಿದ್ದಾರೆ. ಸುಧಾ ಬೇಬಿ ಶವ ರೈಲ್ವೆ ಸಾಮಾನ್ಯವಾಗಿ ಬಳಸದ ಸಹಾಯಕ ರೈಲ್ವೆ ಹಳಿಯಲ್ಲಿ ಬಿದ್ದಿತ್ತು. ಬೇಬಿಯ ಫೋನ್ ಆಕೆಯ ದೇಹದ ಬಳಿ ಇತ್ತು. ಇದು ತ್ವರಿತ ಗುರುತಿಗೆ ಕಾರಣವಾಯಿತು ಮತ್ತು ಶಂಕಿತನನ್ನು ಗುರುತಿಸುವಲ್ಲಿ ನಿರ್ಣಾಯಕವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ವೈಟ್ಟಿಲದಲ್ಲಿ … Read more

ಬಾಲಕಿಯನ್ನ ಮಡಿಲಲ್ಲಿ ಮಲಗಿಸಿಕೊಂಡು ಹುಚ್ಚಾಟ; ನಡೆದಾಡುವ ದೇವರು ಎನ್ನಿಸಿಕೊಂಡಿದ್ದ ಮಲ್ಲಿಕಾರ್ಜುನ್‌ ಮುತ್ಯಾಗೆ ಕಾನೂನು ಸಂಕಷ್ಟ

ಯಾದಗಿರಿ : ಸೋಷಿಯಲ್‌ ಮೀಡಿಯಾದಲ್ಲಿ ಮಲ್ಲಿಕಾರ್ಜುನ್‌ ಮುತ್ಯಾ ಎಂಬ ಯುವಕನ ವಿಡಿಯೊ ವೈರಲ್‌ ಆಗುವುದನ್ನ ನಿಮ್ಮಲ್ಲಿ ಅನೇಕರು ನೋಡಿರುತ್ತೀರಿ. ಅಲ್ಲಿನ ಜನರಂತೂ ಮಲ್ಲಿಕಾರ್ಜುನ್‌ ಮುತ್ಯಾರನ್ನ ಅಪ್ಪಾಜಿ ಎಂದೇ ಕರೆಯುತ್ತಾರೆ. ಅವರನ್ನ ಜನಸೇವಕ, ದೈವಾಂಶ ಸಂಭೂತ ಎಂದು ಭಾವಿಸುತ್ತಾರೆ. ಭಾರಿ ಜನಪ್ರಿಯತೆಗಳಿಸಿಕೊಂಡಿರುವ ಮಲ್ಲಿಕಾರ್ಜುನ್‌ ಮುತ್ಯಾ ವಿರುದ್ಧ ಇದೀಗ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ತಿರುಗಿಬಿದ್ದಿದೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಷ್ಟೇ ಅಲ್ಲ, ಯಾದಗಿರಿ ಎಸ್‌ಪಿಗೆ ಪತ್ರ ಕೂಡ ಬರೆದಿದೆ. ಮಲ್ಲಿಕಾರ್ಜುನ್‌ ಮುತ್ಯಾ ವಿರುದ್ಧ ತನಿಖೆಗೆ ಆಗ್ರಹಿಸಿದೆ. ಏನಿದು … Read more

ಮಗು ಅಳ್ತಿದೆ ಅಂತಾ ಬಾಯಿಗೆ ಬಟ್ಟೆ ತುರುಕಿ, ಕಾಲುಗಳನ್ನು ಕಟ್ಟಿ ಉರಿವ ಬೆಂಕಿಯಲ್ಲಿ ಜೀವಂತ ಸುಟ್ಟ ತಾಯಿ!

ತೆಲಂಗಾಣದ ಬೌರಂಪೇಟ್‌ನಲ್ಲಿ ಎರಡು ತಿಂಗಳ ಗಂಡು ಮಗುವನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಸಂಬಂಧ ಮಗುವಿನ ವಲಸೆ ಕಾರ್ಮಿಕರಾದ ಪೋಷಕರನ್ನು ಬಂಧಿಸಲಾಗಿದೆ. ಮಗುವಿನ ಬಾಯಿಗೆ ಬಟ್ಟೆ ತುರುಕಿ, ಕಾಲುಗಳನ್ನು ಕಟ್ಟಿ ಬೆಂಕಿಯ ಕುಂಡದಲ್ಲಿ ಶವವನ್ನು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತೆಲಂಗಾಣದ ಕುತ್ಬುಲ್ಲಾಪುರದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಇಲ್ಲಿ ಎರಡು ತಿಂಗಳ ಗಂಡು ಮಗುವನ್ನು ಅದರ ಪೋಷಕರೇ ಕೊಂದಿದ್ದಾರೆ ಎನ್ನಲಾಗಿದೆ. ದುಂಡಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಮಗುವಿನ ತಂದೆ-ತಾಯಿಯನ್ನು ಬಂಧಿಸಿ ತನಿಖೆ … Read more