ಯಲ್ಲಾಪುರ ರಂಜಿತಾ ಹತ್ಯೆ ಮಾಡಿ ಪರಾರಿಯಾಗಿದ್ದ ರಫಿಕ್ ಮೃತದೇಹ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆ
ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ಹಾಡಹಗಲೇ ರಂಜಿತಾ ಬನ್ಸೊಡೆ (30) ಎಂಬ ಮಹಿಳೆಗೆ ಇರಿದು ಪರಾರಿಯಾಗಿದ್ದ ರಫಿಕ್ ಯಳ್ಳೂರ ಭಾನುವಾರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಾಳಮ್ಮಮಗರದ ರಫಿಕ್, ರಂಜಿತಾ ಬನ್ಸೊಡೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ನರಳುತ್ತಿದ್ದ ರಂಜಿತಾಳನ್ನು ಸ್ಥಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸಾಗಿಸುತ್ತಿರುವ ಸಂದರ್ಭದಲ್ಲಿ ಮಾರ್ಗಮಧ್ಯೆ ಸಾವನ್ನಪ್ಪಿದ್ದಳು. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು, ಪರಾರಿಯಾದ ರಫೀಕ್ ಗಾಗಿ ಶೋಧ ನಡೆಸುತ್ತಿದ್ದರು. ಶೋಧಕ್ಕೆ … Read more