ಸ್ನಾನಕ್ಕೆ ‘ಗ್ಯಾಸ್ ಗೀಸರ್’ ಬಳಸೋರೇ ಎಚ್ಚರ – ವಿಷಾನಿಲ ಸೋರಿಕೆಯಾಗಿ ಯುವತಿ ಸಾವು

ಜನರೇ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ.. ಎಚ್ಚರ.. ಚಿತ್ರದುರ್ಗದ ವಿನಾಯಕ ಕಲ್ಯಾಣ ಮಂಟಪದ ಬಳಿ ‌ಮನೆಯಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ಯುವತಿ ಮೃತಪಟ್ಟಿದ್ದಾರೆ. 20 ವರ್ಷದ ನೂತನ್‌ ಉಸಿರುಗಟ್ಟಿ ಮೃತಪಟ್ಟ ದುರ್ದೈವಿ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ರು. ಮಗಳ ಸಾವಿನಿಂದ ಕಂಗಾಲಾದ ಪೋಷಕರು ಪೋಸ್ಟ್ ಮಾರ್ಟಮ್ಗೂ ಬಿಡದೇ ಹಠ ಹಿಡಿದಿದ್ದರು.ಮೃತ ಯುವತಿ ಕುಟುಂಬಸ್ಥರ ಆಕ್ರಂದನ ಮುಗಿಲು … Read more

ಸಿದ್ದರಾಮಯ್ಯ ಪುಕ್ಕಲು ಸಿಎಂ ಅಂತಾ ಕೇರಳ ಸರ್ಕಾರಕ್ಕೂ ಗೊತ್ತು : ಪ್ರತಾಪ್‌ ಸಿಂಹ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಪುಕ್ಕಲು ಸಿಎಂ ಎಂಬುದು ಕೇರಳ ಸರ್ಕಾರಕ್ಕೂ ಅರ್ಥವಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ  ಲೇವಡಿ ಮಾಡಿದ್ದಾರೆ. ಬೆಂಗಳೂರಿನ ಕೋಗಿಲೆ ಲೇಔಟ್‌ನಲ್ಲಿ ಅಕ್ರಮ ಮನೆಗಳ ತೆರವು ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, ಕೇರಳದ ವಯನಾಡಿನಲ್ಲಿ ಆನೆಯೊಂದು ಓರ್ವನನ್ನು ತುಳಿದು ಸಾಯಿಸಿದಾಗ, ಕರ್ನಾಟಕ ಸರ್ಕಾರವು ಪ್ರಿಯಾಂಕ್‌ ಖರ್ಗೆ ಮಾತು ಕೇಳಿ ಆ ಕುಟುಂಬಕ್ಕೆ ಪರಿಹಾರ ಕೊಡುತ್ತದೆ. ಹೀಗಾಗಿ ಸಿದ್ದರಾಮಯ್ಯ ನಮ್ಮ ಮಾತು ಕೇಳಿಯೇ ಕೇಳುತ್ತಾರೆ ಎಂದು ಕೇರಳ ಸರ್ಕಾರ ನಮ್ಮ ಮೇಲೆ ಪ್ರೆಶರ್‌ ಹಾಕುತ್ತಿದ್ದಾರೆ … Read more

ಆಟ.. ಪಾಠ ಬಿಟ್ಟಾಕಿ.. ಮೇಷ್ಟ್ರ ಗಾಡಿ ಕ್ಲೀನ್ ಮಾಡಿ! : ಸರ್ಕಾರಿ ಶಾಲೆಯ ಅವಸ್ಥೆ ನೋಡಿ!

ಕಾಲ ಬದಲಾಗಿದೆ. ಶಿಕ್ಷಣದ ಮೌಲ್ಯ ಕಡಿಮೆ ಆಗ್ತಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಹೇಳಿ ಶಿಕ್ಷಣದ ತತ್ವಗಳನ್ನು ಹೇಳಿಕೊಡಬೇಕಾಗಿದ್ದ ಶಿಕ್ಷಕರೊಬ್ಬರು ಶಾಲಾ ಅವಧಿಯಲ್ಲೇ ವಿದ್ಯಾರ್ಥಿಗಳಿಂದ ತನ್ನ ಕಾರನ್ನು ತೊಳೆಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿ.ಕೆ.ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಉದಯ್ ಅವರು ಕಾರಿನಲ್ಲಿ ಶಾಲೆಗೆ ಆಗಮಿಸಿದ್ದು, ಈ ವೇಳೆ ಕಾರಿನಲ್ಲಿ ಇದ್ದ ಧೂಳು, ಕೆಸರನ್ನು ತೊಳೆಯಳು ವಿದ್ಯಾರ್ಥಿಗಳ ಬಳಿ ಹೇಳಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರು ತೆರಳಿ ಕಾರು ಸ್ವಚ್ಛಗೊಳಿಸಿದ್ದಾರೆ. ವಿದ್ಯಾರ್ಥಿಗಳಿಂದ ಕಾರು ತೊಳೆಸಿದ … Read more

ಹುಲಿಕಲ್ ಘಾಟ್‌ನಲ್ಲಿ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿ; ಮಗು ಸಾವು, ಹಲವರಿಗೆ ಗಾಯ

ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಪಕ್ಕದ ಗುಡ್ಡಕ್ಕೆ ಖಾಸಗಿ ಬಸ್‌ ಡಿಕ್ಕಿಯಾಗಿ ಮಗು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ನಿದ್ದೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ದುರ್ಘಟನೆ ನಡೆದಿದೆ. ಗಂಭೀರ ಗಾಯಗೊಂಡವರಲ್ಲಿ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಎಂಬುವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ದುರ್ಗಾಂಬ ಬಸ್ ಅಪಘಾತಕ್ಕೀಡಾಗಿದ್ದು, ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆ ನಡೆಯುತ್ತಿದ್ದಂತೆ ನಗರ ಪೊಲೀಸರು ಸ್ಥಳಕ್ಕೆ … Read more

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಉರುಳಿ ಬಿದ್ದ ಲಾರಿ ; ಓರ್ವ ಮೃತ್ಯು, ಇಬ್ಬರು ಗಂಭೀರ

ಕುಡಚಿ-ಜಮಖಂಡಿ ರಸ್ತೆಯ ಮಧ್ಯಭಾಗದಲ್ಲಿ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಅದರಡಿಗೆ ಸಿಲುಕಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾಲಶಿರಗೂರ ಗ್ರಾಮದ ಬಳಿ ನಡೆದಿದೆ. ಕುಡಚಿ ಕಡೆಯಿಂದ ಹಾರೂಗೇರಿ ಕಡೆಗೆ ತೆರಳುತ್ತಿದ್ದ ಸಿಮೆಂಟ್ ತುಂಬಿದ ಲಾರಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಇದೇ ವೇಳೆ ಬಿ.ಬಿ.ಬಾವಿ ಸರಕಾರಿ ಪ್ರೌಢ ಶಾಲೆ ಹಾಲಶಿರಗೂರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾರಿ ಉರುಳಿದೆ … Read more

ಹೆರಿಗೆ ವೇಳೆ ನವಜಾತ ಶಿಶುವಿನ ಕರುಳು ಹೊರ ಬಂದ ಕೇಸ್ : ಜೀರೋ ಟ್ರಾಫಿಕ್ ನಲ್ಲಿ ಕರೆದೋಯ್ದರು ಬದುಕುಳಿಯದ ಕಂದಮ್ಮ!

ಕೊಪ್ಪಳದಲ್ಲಿ ಜನಿಸಿದ ನವಜಾತ ಶಿಶುವೊಂದಕ್ಕೆ ಕರುಳುಗಳು ಹೊರಗೆ ಬಂದಿದ್ದು, ತುರ್ತು ಚಿಕಿತ್ಸೆಯ ಅಗತ್ಯವಿದೆ. ಮಗುವಿನ ಜೀವ ಉಳಿಸಲು, ಝೀರೋ ಟ್ರಾಫಿಕ್ ಮೂಲಕ ಕೊಪ್ಪಳದಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪೊಲೀಸ್ ಇಲಾಖೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಯ ಸಹಕಾರದಿಂದ ಮಗುವನ್ನು ಸಕಾಲದಲ್ಲಿ ತಲುಪಿಸುವ ಪ್ರಯತ್ನ ಮಾಡಲಾಗಿದೆ. ಆದ್ರೆ ಇದೀಗ ವೈದ್ಯರು ಸಿಬ್ಬಂದಿಗಳ ಶ್ರಮವೆಲ್ಲ ವ್ಯರ್ಥವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಗಂಡು ಮಗು ಸಾವನ್ನಪ್ಪಿದೆ. ಕೇವಲ 10 ಗಂಟೆ ಹಿಂದೆ ಜನಿಸಿದ ಮಗು ಆ ಮಗುವಿನ ಕರಳುಗಳು … Read more

ಚಳಿಗಾಲದಲ್ಲಿಯೇ ಹಾರ್ಟ್ ಅಟ್ಯಾಕ್ ಆಗೋದು ಯಾಕೆ ಹೆಚ್ಚು? ಮುನ್ನೆಚ್ಚರಿಕೆ ಕ್ರಮ ಏನು?

ಚಳಿಗಾಲ ಬಂತೆಂದರೆ ವಾತಾವರಣದಲ್ಲಿ ಚಳಿ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಶೀತ, ಕೆಮ್ಮಿನಂತಹ ಸಮಸ್ಯೆಗಳ ಜೊತೆಗೆ ಹೃದಯ ಸಂಬಂಧಿ ಸಮಸ್ಯೆಗಳೂ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ ಎಂದು ವೈದ್ಯರು ಹೇಳುತ್ತಾರೆ. ಅದರಲ್ಲೂ ಚಳಿಗಾಲದಲ್ಲಿ ಹೃದಯಾಘಾತದ ಅಪಾಯ ಹೆಚ್ಚು ಎಂದು ಹಲವು ಅಧ್ಯಯನಗಳು ತಿಳಿಸಿವೆ. ಚಳಿಗಾಲದಲ್ಲಿ ಉಷ್ಣಾಂಶ ಕಡಿಮೆಯಾದಾಗ ದೇಹದಲ್ಲಿನ ರಕ್ತನಾಳಗಳು ಸಂಕುಚಿತಗೊಳ್ಳುತ್ತವೆ. ಅಂದರೆ ರಕ್ತನಾಳಗಳು ಕಿರಿದಾಗುತ್ತವೆ. ಇದರಿಂದಾಗಿ ರಕ್ತ ಸರಿಯಾಗಿ ಹರಿಯಲು ಹೃದಯವು ಹೆಚ್ಚು ಶ್ರಮಿಸಬೇಕಾಗುತ್ತದೆ. ಈ ಪರಿಸ್ಥಿತಿಯಲ್ಲಿ ರಕ್ತದೊತ್ತಡ ಹೆಚ್ಚಾಗುತ್ತದೆ. ಅಧಿಕ ರಕ್ತದೊತ್ತಡವು ಹೃದಯಾಘಾತಕ್ಕೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. … Read more

Adike Price : ಕ್ವಿಂಟಾಲ್‌ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಡಿಸೆಂಬರ್ 30ರ ದರಪಟ್ಟಿ

ಇಳಿಮುಖದತ್ತ ಸಾಗಿದ್ದ ಅಡಿಕೆ ಧಾರಣೆ ಕಳೆದ ಕೆಲ ದಿನಗಳಿಂದ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ನಿಧಾನವಾಗಿ ಚಿಗುರೊಡೆಯುತ್ತಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 30) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 30) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,359 … Read more

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಗೆ ಹಿಗ್ಗಾಮುಗ್ಗಾ ಥಳಿಸಿದ ವಾರ್ಡನ್ : ಆಘಾತಕಾರಿ ವಿಡಿಯೋ ವೈರಲ್

ಹಾಸ್ಟೆಲ್ ವಾರ್ಡನ್ ವಿದ್ಯಾರ್ಥಿನಿಯೊಬ್ಬಳೊಂದಿಗೆ ಕಠೋರವಾಗಿ ವರ್ತಿಸಿದ್ದಾರೆ. ಎಸ್ಸಿ ಬಾಲಕಿಯರ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ವಾರ್ಡನ್ ಭವಾನಿ ಥಳಿಸಿದ ಘಟನೆ ಜಯಶಂಕರ್ ಭೂಪಾಲಪಲ್ಲಿ ಜಿಲ್ಲಾ ಕೇಂದ್ರದಲ್ಲಿ ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ಭವಾನಿ ಮೂರನೇ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳನ್ನು ಕೋಲು ಮತ್ತು ಕೈಗಳಿಂದ ಮನಬಂದಂತೆ ಥಳಿಸಿದ್ದಾರೆ. ಈ ಘಟನೆಯನ್ನು ಅಲ್ಲಿದ್ದ ಸಹ ವಿದ್ಯಾರ್ಥಿಗಳು ವಿಡಿಯೋದಲ್ಲಿ ಸೆರೆಹಿಡಿದಿದ್ದಾರೆ. ಕಳೆದ ತಿಂಗಳು 24 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯನ್ನು ಒಂದು ಕಡೆ ನಿಲ್ಲಿಸಿ ಕೋಲುಗಳಿಂದ ಮತ್ತು ಇನ್ನೊಂದು ಕಡೆ … Read more

ರೈಲ್ವೆಯ ನಿವೃತ್ತ ಉದ್ಯೋಗಿ ಸಾವು, ಮಗಳ ದೇಹದಲ್ಲಿ ಮಾಂಸವೇ ಇಲ್ಲ, ಕೇರ್ ಟೇಕರ್ ಆಗಿ ನೇಮಕಗೊಂಡಿದ್ದವರು ಮಾಡಿದ್ದೇನು?

ಕೆಲವು ವರ್ಷಗಳ ಹಿಂದೆ ಪತ್ನಿ ತೀರಿಕೊಂಡಿದ್ದರು. ಮಗಳು ಮಾನಸಿಕ ಅಸ್ವಸ್ಥೆ, ಏನು ಮಾಡಬೇಕೆಂದು ತೋಚದೆ ರೈಲ್ವೆಯ ನಿವೃತ್ತ ಉದ್ಯೋಗಿ ಕೇರ್ ಟೇಕರ್ ನೇಮಿಸಿಕೊಂಡಿದ್ದರು. ಅವರು ಆರೈಕೆದಾರರಾಗಿರಲಿಲ್ಲ, ಬದಲಾಗಿ ಪ್ರಾಣವನ್ನೇ ತೆಗೆಯುವ ಹಂತಕರಾಗಿದ್ದರು. ಸುಮಾರು ಐದು ವರ್ಷಗಳ ಕಾಲ ಕೇರ್ ಟೇಕರ್ ಅವರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ಹೀಗಾಗಿ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅವರ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಮಗಳ ದೇಹದಲ್ಲಿ ಒಂದಿಷ್ಟು ಮಾಂಸವೂ ಇಲ್ಲದೆ ನಿತ್ರಾಣಳಾಗಿದ್ದಾಳೆ. ಓಂಪ್ರಕಾಶ್ ಸಿಂಗ್ ರಾಥೋಡ್ (70), ಭಾರತೀಯ ರೈಲ್ವೆಯಲ್ಲಿ ಮಾಜಿ ಹಿರಿಯ … Read more