ಚಿತ್ರದುರ್ಗ ಬಸ್ ಅಪಘಾತ ವಿವರಿಸಿದ ಐಜಿಪಿ ಬಿ.ಆರ್.ರವಿಕಾಂತೇಗೌಡ : 42 ಮಕ್ಕಳಿದ್ದ ಬಸ್ ಜಸ್ಟ್ ಮಿಸ್!

ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ 09 ಜನರ ಜೀವ ಬಲಿ ಪಡೆದ ಭೀಕರ ಬಸ್ ಅಪಘಾತ ಸ್ಥಳಕ್ಕೆ ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ.ಬಿ.ಆರ್. ರವಿಕಾಂತೇಗೌಡ ಅವರು ಇಂದು ಬೆಳಗ್ಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಖಾಸಗಿ ಬಸ್‌ ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆ ವೇಳೆ ಲಾರಿಯಿಂದ ಗುದ್ದಿಸಿಕೊಂಡ ಖಾಸಗಿ ಬಸ್ ಹೊತ್ತಿ ಉರಿಯುವ ಮುನ್ನ ಅದೇ ದಾರಿಯಲ್ಲಿ ಪ್ರವಾಸಕ್ಕೆ ಹೊರಟಿದ್ದ ಶಾಲಾ ಮಕ್ಕಳಿದ್ದ … Read more

Adike Bele : ಕ್ವಿಂಟಾಲ್‌ ಅಡಿಕೆ ಧಾರಣೆ ಮತ್ತೆ 60,000 ರೂಪಾಯಿ ಸಮೀಪದತ್ತ : ಇಲ್ಲಿದೆ ಡಿಸೆಂಬರ್ 25ರ ದರಪಟ್ಟಿ

Adike Bele : ಕಳೆದ ಎರಡು ದಿನಗಳಿಂದ ಅಡಿಕೆ ಧಾರಣೆ ಭರ್ಜರಿ ಏರಿಕೆಯತ್ತ ಸಾಗಿದ್ದು, ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 25) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 25) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 57,099 ರೂಪಾಯಿ, ಕನಿಷ್ಠ … Read more

ಪೆನ್ಸಿಲ್ ನಿಂದ ಗಂಟಲು ಚುಚ್ಚಿ ಯುಕೆಜಿ ವಿದ್ಯಾರ್ಥಿ ಸಾವು

ಬರವಣಿಗೆಗಾಗಿ ಶಾಲೆಗೆ ತಂದ ಪೆನ್ಸಿಲ್ ಗಂಟಲನ್ನು ಚುಚ್ಚಿ ಯುಕೆಜಿ ವಿದ್ಯಾರ್ಥಿಯೊಬ್ಬನ ಪ್ರಾಣವನ್ನು ಬಲಿ ತೆಗೆದುಕೊಂಡಿದೆ. ಮೃತ ಆರು ವರ್ಷದ ವಿಹಾರ್ ಕುಸುಮಂಚಿ ಮಂಡಲದ ನಾಯಕಕಂಗುಡೆಂನ ಖಾಸಗಿ ಶಾಲೆಯಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಧ್ಯಾಹ್ನದ ವಿರಾಮದ ಸಮಯದಲ್ಲಿ, ಅವನು ಶೌಚಾಲಯಕ್ಕೆ ಹೋದನು. ತನ್ನ ತರಗತಿಯ ಕಡೆಗೆ ಓಡುತ್ತಿರುವಾಗ ಅವನು ಆಕಸ್ಮಿಕವಾಗಿ ಕೆಳಗೆ ಬಿದ್ದನು. ಅವನು ಕೈಯಲ್ಲಿ ಹಿಡಿದಿದ್ದ ಪೆನ್ಸಿಲ್ ಅವನ ಗಂಟಲನ್ನು ಚುಚ್ಚಿತು, ಇದು ತೀವ್ರ ರಕ್ತಸ್ರಾವಕ್ಕೆ ಕಾರಣವಾಯಿತು. ಶಾಲಾ ಸಿಬ್ಬಂದಿ ತಕ್ಷಣ ಮಗುವನ್ನು 108 ಆಂಬ್ಯುಲೆನ್ಸ್‌ನಲ್ಲಿ ಖಮ್ಮಮ್‌ನ … Read more

ಬಸ್ ಗೆ ಬೆಂಕಿ ತಗುಲಿ 17 ಜನ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ 30 ಕಿ.ಮೀ. ಸಂಪೂರ್ಣ ಟ್ರಾಫಿಕ್ ಜಾಮ್

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಲಾರಿ ಡಿಕ್ಕಿಯಾಗಿ ಡೀಸೆಲ್ ಟ್ಯಾಂಕ್ ಸಿಡಿದು ಬಸ್ ಗೆ ಬೆಂಕಿ ತಗುಲಿ 17 ಪ್ರಯಾಣಿಕರು ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. 32 ಆಸನಗಳ ಬಸ್ ನಲ್ಲಿ 29 ಪ್ರಯಾಣಿಕರು ಇದ್ದರು. ಗೋಕರ್ಣದ 25 ಜನ, ಕುಮಟಾದ ಇಬ್ಬರು ಹಾಗೂ ಶಿವಮೊಗ್ಗದ ಇಬ್ಬರು ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಭೇಟಿ ನೀಡಿ … Read more

ಡಿಕೆಶಿ ಮಾಡಿದ ಸಹಾಯ ಮರೆಯೋಕೆ ಹೋಗಲ್ಲ – ಡಿಸಿಎಂ ಮೇಲೆ ರಾಜಣ್ಣ ಸಾಫ್ಟ್‌ ಕಾರ್ನರ್‌!

ರಾಜಣ್ಣ ಮತ್ತು ನಾನು ಹಳೆಯ ಸ್ನೇಹಿತರು. ಅವರನ್ನು ನಾನೇ ಅಪೆಕ್ಸ್‌ ಬ್ಯಾಂಕ್‌ ಅಧ್ಯಕ್ಷರನ್ನಾಗಿ ಮಾಡಿದ್ದೆ ಎಂದು ಡಿ.ಕೆ. ಶಿವಕುಮಾರ್‌ ನೀಡಿದ್ದ ಹೇಳಿಕೆಗೆ ಕೆ.ಎನ್‌ . ರಾಜಣ್ಣ (KN Rajanna )ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಅವರು ಮಂಗಳವಾರ ರಾತ್ರಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಾನು ಅಪೆಕ್ಸ್ ಅಧ್ಯಕ್ಷ ಆಗಿದ್ದು ಗೊತ್ತಿರುವ ವಿಚಾರ. ಡಿಸಿಎಂ ಡಿಕೆಶಿ ಆವತ್ತು ಸಹಕಾರ ಸಚಿವರಾಗಿದ್ದರು . ಸಹಾಯ ಮಾಡಿದ್ದಾರೆ, ಮರೆಯೋಕೆ ಹೋಗಲ್ಲ. ಯಾರದ್ದೇ ಸಹಾಯವಾಗಲಿ ನೆನೆಯುವ ಗುಣ … Read more

ರಾಯಚೂರು ಲೋಕಾ ದಾಳಿ, ಎಇಇ ವಿಜಯಲಕ್ಷ್ಮಿ ಮನೆಯಲ್ಲಿ ಸಿಕ್ತು ಲೆಕ್ಕವಿಲ್ಲದಷ್ಟು ಆಸ್ತಿ, ಚಿನ್ನ! ಬೆಳಗ್ಗಿನಿಂದ ಇನ್ನೂ ಮುಗಿಯದ ಶೋಧ!

ಭಾನುವಾರ ಬೆಳಗ್ಗೆ ಆರಂಭವಾದ ಲೋಕಾಯುಕ್ತ ದಾಳಿ ಪ್ರಕರಣ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಆರ್‌ಡಿಪಿಆರ್)ಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ) ಡಿ. ವಿಜಯಲಕ್ಷ್ಮಿ ಅವರ ಮನೆ, ಕಚೇರಿ ಹಾಗೂ ಸಂಬಂಧಿಕರ ನಿವಾಸಗಳ ಮೇಲೆ ವ್ಯಾಪಕ ಶೋಧ ಕಾರ್ಯ ನಡೆಯುತ್ತಿದೆ. ಹುಡುಕಿದಷ್ಟು ಒಂದೊಂದೇ ವಿಚಾರಗಳು ಬಯಲಾಗುತ್ತಿದೆ. ಗಂಟೆಗಳು ದಿನಗಳು ಉರುಳುತ್ತಿದ್ದರೂ ಶೋಧ ಕಾರ್ಯ ಮಾತ್ರ ಮುಕ್ತಾಯದ ಹಂತ ಕಾಣುತ್ತಿಲ್ಲ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ಲೋಕಾಯುಕ್ತ ಎಸ್‌ಪಿ ಸತೀಶ್ ಚಿಟಗುಪ್ತಿ ಅವರ … Read more

‘ರಾಹುಲ್ ಗಾಂಧಿ ಪ್ರಧಾನಿ ಮಾಡೋದೇ ಪ್ರಿಯಾಂಕಾ ಆಸೆ’ : ‘ಅವ್ರ ಆಸೆಯೇ ನಮ್ ಆಸೆ’ ಎಂದ ಕನಕಪುರ ಬಂಡೆ

ರಾಜ್ಯ ಕಾಂಗ್ರೆಸ್ಸಿನ ಕುರ್ಚಿ ಕದನ ತಾರಕಕ್ಕೇರಿದೆ. ಸಿಎಂ ಪಟ್ಟ ಕೇಳಲು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿದ್ದಾರೆ. ಇದ್ರ ಮಧ್ಯೆ ಹೈಕಮಾಂಡ್ ಬಗ್ಗೆ ಮನಬಿಚ್ಚಿ ಮಾತಾಡಿದ್ದಾರೆ. ‘ರಾಹುಲ್ ಗಾಂಧಿ ಪ್ರಧಾನಿ ಮಾಡೋದೇ ಪ್ರಿಯಾಂಕಾ ಗಾಂಧಿ ಆಸೆ.. ಅವ್ರ ಆಸೆಯೇ ನಮ್ ಆಸೆ. ಪ್ರಿಯಾಂಕಾ ಗಾಂಧಿಯವರ ಏಕೈಕ ಧ್ಯೇಯ ರಾಹುಲ್ ಗಾಂಧಿಯವರನ್ನು ದೇಶದ ಪ್ರಧಾನಿಯಾಗಿ ಮಾಡುವುದು’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ‘ಪ್ರಿಯಾಂಕಾ ಗಾಂಧಿ ಪ್ರಧಾನಿ ಆದರೆ, ಬಾಂಗ್ಲಾದೇಶದ ವಿರುದ್ಧ ಸಮರ … Read more

ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಸಿಮೆಂಟ್ ಲಾರಿ.! ಡಿಕ್ಕಿಯ ರಭಸಕ್ಕೆ ಹಳ್ಳಕ್ಕೆ ಉರುಳಿ ಬಿದ್ದ ಲಾರಿ

ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸಿಮೆಂಟ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಲಾರಿ ಹಳ್ಳಕ್ಕೆ ಉರುಳಿದ್ದು, ಬಸ್‌ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಚಾಲಕನ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಹನುಮಂತನಗರದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸಿಮೆಂಟ್ ಲಾರಿ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಸಿಮೆಂಟ್ ಹೊತ್ತೊಯ್ಯುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ರಸ್ತೆ … Read more

ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್

ಇನ್ಸ್ಟಾಗ್ರಾಮ್ ಸಿಕ್ಕ ಯುವಕನೊಬ್ಬ ಪ್ರೀತಿ ವಿಚಾರವಾಗಿ ನಡು ರಸ್ತೆಯಲ್ಲೇ ಯುವತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru)ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿ.ಜಿ ಬಳಿ ಕಾರಿನಲ್ಲಿ ಬಂದ ಯುವಕ, ಯುವತಿಗೆ ಹಲವು ಬಾರಿ ಥಳಿಸಿದ್ದು, ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ ಯುವಕ ಆರೋಪಿಯನ್ನು ನವೀನ್ ಕುಮಾರ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಯುವತಿಯೊಂದಿಗೆ 2024ರಲ್ಲಿ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿತ್ತು ಎನ್ನಲಾಗಿದೆ. … Read more

ಸುಖಾಂತ್ಯವಾಗಬೇಕಿದ್ದ ಯಾತ್ರೆ ದುರಂತ ಅಂತ್ಯ : ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಮೂವರು ಬಲಿ!

ತಮಿಳುನಾಡಿನ ಪ್ರಸಿದ್ಧ ದೇವಸ್ಥಾನವೊಂದಕ್ಕೆ ತೆರಳಿ ಭಕ್ತಿಯಿಂದ ದರ್ಶನ ಪಡೆದು ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಕುಟುಂಬವೊಂದಕ್ಕೆ ವಿಧಿ ಕ್ರೂರವಾಗಿ ಎರಗಿದೆ. ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ದೇವಿನಗರ ಕ್ಯಾಂಪ್ ಬಳಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿಟ್ಟೂರು ಗ್ರಾಮದ ಪ್ರಸಾದ್ ರಾವ್ ಹಾಗೂ ಇಬ್ಬರು ಮಹಿಳೆಯರು ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಳ್ಳಾರಿ-ಸಿರುಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ … Read more