‘ಮೀನು’ ಪ್ರಿಯರೇ ಎಚ್ಚರ : ಅಪ್ಪಿ ತಪ್ಪಿಯೂ ಈ ಫಿಶ್ ತಿಂದ್ರೆ ‘ಕ್ಯಾನ್ಸರ್’ ಬರುತ್ತೆ ಹುಷಾರ್.!

ಅನೇಕ ಮಾಂಸಾಹಾರಿಗಳು ಮೀನುಗಳನ್ನ ಇಷ್ಟಪಡುತ್ತಾರೆ. ಅವ್ರು ಪ್ರತಿದಿನ ಅದನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳುತ್ತಾರೆ. ಭಾರತೀಯ ಮಾರುಕಟ್ಟೆಯಲ್ಲಿ ಅನೇಕ ಪೌಷ್ಟಿಕ ಮೀನುಗಳು ಲಭ್ಯವಿದ್ದರೂ, ಕೆಲವು ರೀತಿಯ ಮೀನುಗಳು ತಿನ್ನಲು ಸುರಕ್ಷಿತವಲ್ಲ ಮತ್ತು ಮಾರಕ ಅಪಘಾತಗಳಿಗೆ ಕಾರಣವಾಗಬಹುದು ಎಂದು ಅನೇಕ ಜನರಿಗೆ ತಿಳಿದಿಲ್ಲ. ಕ್ಯಾನ್ಸರ್’ಗೆ ಕಾರಣವಾಗುವ ಥಾಯ್ ಮಾಗುರ್.! ಅಂತಹ ಒಂದು ಮೀನು ಥಾಯ್ ಮಾಗುರ್.. ಈ ಮೀನು ಮಾನವನ ಆರೋಗ್ಯಕ್ಕೆ ಮಾತ್ರವಲ್ಲದೆ ಜಲಚರಗಳಿಗೂ ಅಪಾಯಕಾರಿ. ಕೇಂದ್ರ ಸರ್ಕಾರವು ಇದರ ಸಂತಾನೋತ್ಪತ್ತಿ, ಮಾರಾಟ ಮತ್ತು ಸೇವನೆಯನ್ನ ಸಂಪೂರ್ಣವಾಗಿ ನಿಷೇಧಿಸಿದೆ. ಈ … Read more

ಲೋಕಾಯುಕ್ತ ದಾಳಿ: ಕಾರ್ಯನಿರ್ವಾಹಕ ಎಂಜಿನಿಯರ್ ಖಲೀಲ್‌ ಬಳಿ 7 ಮನೆ, 5 ನಿವೇಶನ

ಮೈಸೂರು: ಇಲ್ಲಿನ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಇಇ ಆಸಿಫ್‌ ಇಕ್ಬಾಲ್‌ ಖಲೀಲ್‌ ಅವರಿಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ₹1.03 ಕೋಟಿ ಮೌಲ್ಯದ 5 ನಿವೇಶನ ಹಾಗೂ ₹4.28 ಕೋಟಿ ಮೌಲ್ಯದ ಏಳು ಮನೆಗಳನ್ನು ಪತ್ತೆ ಹಚ್ಚಿದ್ದಾರೆ. ಲೋಕಾಯುಕ್ತ ಎಸ್‌ಪಿ ಉದೇಶ್‌ ಮಾರ್ಗದರ್ಶನದಲ್ಲಿ ಪೊಲೀಸರ ತಂಡವು ಎನ್‌.ಆರ್‌ ಮೊಹಲ್ಲಾದಲ್ಲಿರುವ ಆಸಿಫ್‌ ಅವರಿಗೆ ಸೇರಿದ 2 ಮನೆ, ಸರಸ್ವತಿಪುರಂನಲ್ಲಿರುವ ಕಚೇರಿಗೆ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ವೇಳೆ ಅವರ ಆಸ್ತಿ … Read more

ನಾಗ್ಪುರದಲ್ಲಿ ಅಮಾನವೀಯ ಕೃತ್ಯ: ಮೈ ಮೇಲೆ ಬಣ್ಣ ಹಾಕಿದ್ದಕ್ಕೆ 4 ವರ್ಷದ ಮೊಮ್ಮಗನ ಮೇಲೆ ಕುದಿಯುವ ನೀರು ಸುರಿದ ಅಜ್ಜಿ

ಮಹಾರಾಷ್ಟ್ರದ ನಾಗ್ಪುರದಲ್ಲಿ ಹೋಳಿ ಹಬ್ಬದ ಆಚರಣೆಯ ವೇಳೆ ಮನುಷ್ಯ ಕುಲವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದೆ. ಬಣ್ಣದಾಟವಾಡುತ್ತಿದ್ದ ಪುಟ್ಟ ಮೊಮ್ಮಗನ ಮೇಲೆ ಆತನ ಸ್ವಂತ ಅಜ್ಜಿಯೇ ಕುದಿಯುವ ನೀರನ್ನು ಸುರಿದು ಕ್ರೌರ್ಯ ಮೆರೆದಿದ್ದಾಳೆ. ಈ ದಾರುಣ ಘಟನೆಯು ನಾಗ್ಪುರ ಜಿಲ್ಲೆಯ ಕೋರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವರದಿಗಳ ಪ್ರಕಾರ ನಾಲ್ಕು ವರ್ಷದ ಓಂ ಹರೀಶ್ ವಾಂಗೆ ಮನೆಯ ಮುಂದೆ ಬಣ್ಣದ ನೀರು ತುಂಬಿದ್ದ ಸ್ಪ್ರೇ ಬಾಟಲಿಯೊಂದಿಗೆ ಆಟವಾಡುತ್ತಿದ್ದನು. ಈ ಸಂದರ್ಭದಲ್ಲಿ ಹತ್ತಿರದಲ್ಲೇ ಬಿಸಿ … Read more

ಚಟ ಇರೋರು ಆಡ್ತಾರೆ ಬಿಡಿ, ಕುಣಿಗಲ್ ನಲ್ಲಿ ರೇಸ್ ಕೋರ್ಸ್‌ನಿಂದ 2 ಸಾವಿರ ಉದ್ಯೋಗ ಸೃಷ್ಟಿ: ವಿರೋಧಿಗಳಿಗೆ ಡಿಕೆಶಿ ತಿರುಗೇಟು

ರೇಸ್ ಕೋರ್ಸ್ ನ್ನು ಬೆಂಗಳೂರಿನಿಂದ ಕುಣಿಗಲ್ ಗೆ ಸ್ಥಳಾಂತರ ಮಾಡುವುದರಿಂದ 2 ಸಾವಿರ ಉದ್ಯೋಗ ಸೃಷ್ಟಿ ಆಗಲಿದೆ. ಹಾಗಾಗಿ ಇದಕ್ಕೆ ವಿರೋಧ ಏಕೆ? ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ಮಾಗಡಿಯಲ್ಲಿ ಬುಧವಾರ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು. ಮೈಸೂರು ಮಹಾರಾಜರ ಕಾಲದಿಂದಲೂ ಕುಣಿಗಲ್ ನಲ್ಲಿ ಕುದುರೆ ಸಾಕಲಾಗುತ್ತಿದೆ. ಬೆಂಗಳೂರು ರೇಸ್ ಕೋರ್ಸ್ ಅನ್ನು ಇಲ್ಲಿಗೆ ಸ್ಥಳಾಂತರಿಸುತ್ತೇವೆ ಎಂದರೆ ಇದಕ್ಕೆ ವಿರೋಧ ಮಾಡುತ್ತೀರಾ? ಇದರಿಂದ ಸುಮಾರು 2 ಸಾವಿರ ಜನರಿಗೆ ಕೆಲಸ ಸಿಗುತ್ತದೆ. … Read more

ಭಾರತೀಯರ ರಕ್ಷಣೆಗೆ ಕೇಂದ್ರ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ

ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ವೇಗವಾಗಿ ಹೆಚ್ಚುತ್ತಿರುವ ಸಂಘರ್ಷವು ತೀವ್ರ ಕಳವಳಕಾರಿಯಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಶನಿವಾರ ಟ್ವೀಟ್‌ ಮಾಡಿರುವ ಅವರು, ʼಮಧ್ಯಪ್ರಾಚ್ಯದಾದ್ಯಂತ ಪ್ರತಿಯೊಬ್ಬ ಭಾರತೀಯ ನಾಗರಿಕನ ಸುರಕ್ಷತೆ ಮತ್ತು ಭದ್ರತೆ ನಮ್ಮ ಅತ್ಯುನ್ನತ ಆದ್ಯತೆಯಾಗಿರಬೇಕು. ನಮ್ಮ ಜನರನ್ನ ರಕ್ಷಿಸಲು ಭಾರತ ಸರ್ಕಾರವು ತಕ್ಷಣ ಮತ್ತು ಪೂರ್ವಭಾವಿ ಕ್ರಮಗಳನ್ನ ತೆಗೆದುಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆʼ ಎಂದು ತಿಳಿಸಿದ್ದಾರೆ. ತೀವ್ರ ಸ್ವರೂಪ ಪಡೆಯುತ್ತಿರುವ ಸಂಘರ್ಷ! ಪರಮಾಣು ಒಪ್ಪಂದ ಮಾತುಕತೆಗೆ ಸ್ಪಂದಿಸಿದ ಕಾರಣ … Read more

ಸೇಮ್‌ ಟು ಸೇಮ್‌ ಚೆಲುವಿನ ಚಿತ್ತಾರ; ಉಲ್ಲಾಸದ ಹೂಮಳೆ ಹಾಡುತ್ತಿದ್ದ ಜೋಡಿಗೆ ಕಟುಕನಾದ ಅಪ್ಪ!

ಕನ್ನಡದ ಸೂಪರ್‌ಹಿಟ್‌ ಸಿನಿಮಾ ಚೆಲುವಿನ ಚಿತ್ತಾರದ ಕಥೆಯನ್ನೇ ನೆನಪಿಸುವಂಥ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.. ಹಾನಗಲ್ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ಸಿನಿಮೀಯ ಶೈಲಿಯ ಲವ್ ಸ್ಟೋರಿಯೊಂದು ನಡೆದಿದ್ದು, ಪ್ರೀತಿಸಿ ಮದುವೆಯಾಗಿದ್ದ ನವಜೋಡಿಯನ್ನು ಪೋಷಕರೇ ಬಲವಂತವಾಗಿ ಬೇರ್ಪಡಿಸಿದ ಘಟನೆ ವರದಿಯಾಗಿದೆ. ತಿಳವಳ್ಳಿ ಗ್ರಾಮದ ಮಣಿಕಂಠ ಮತ್ತು ಸೃಷ್ಟಿ ಕಳೆದ ಕೆಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಮನೆಯವರ ವಿರೋಧವಿದ್ದ ಕಾರಣ, ಈ ಜೋಡಿ ಇತ್ತೀಚೆಗಷ್ಟೇ ಕಾನೂನುಬದ್ಧವಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಮದುವೆಯ ನಂತರ ಸೃಷ್ಟಿ ತನ್ನ ಪತಿ … Read more

ಯುದ್ಧದಿಂದ ಇಂಧನ ಕೊರತೆ, ಬೆಲೆ ಏರಿಕೆ ಆತಂಕ: ಪೆಟ್ರೋಲ್ ಬಂಕ್ ಮುಂದೆ ಸಾಲುಗಟ್ಟಿ ನಿಂತ ಜನ

ಉತ್ತರ ಕನ್ನಡ : ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಯುದ್ಧದ ಕಾರ್ಮೋಡಗಳು ಜಾಗತಿಕ ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಲಿವೆ ಎಂಬ ವದಂತಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ತೀವ್ರ ಸಂಚಲನ ಮೂಡಿಸಿದೆ. ಸುಳ್ಳು ಸುದ್ದಿಯನ್ನು ನಂಬಿದ ಸಾರ್ವಜನಿಕರು ಆತಂಕಕ್ಕೊಳಗಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಂತಿದ್ದು, ಕೃತಕ ಅಭಾವ ಸೃಷ್ಟಿಯಾಗಿದೆ. ಯುದ್ಧದ ಹಿನ್ನೆಲೆಯಲ್ಲಿ ಪೆಟ್ರೋಲ್ ಬೆಲೆ ರಾತ್ರೋರಾತ್ರಿ ಗಗನಕ್ಕೇರಬಹುದು ಅಥವಾ ಪೂರೈಕೆ ಸಂಪೂರ್ಣ ಸ್ಥಗಿತಗೊಳ್ಳಬಹುದು ಎಂಬ ತಪ್ಪು ಗ್ರಹಿಕೆ ಸಾಮಾಜಿಕ ಜಾಲತಾಣಗಳಲ್ಲಿ … Read more

ನನ್ನ ಮನೆ ಹಾಳು ಮಾಡಿದ್ದೀರಿ, ಸಾಲ ಮಾಡಿದ್ದೇನೆ: ವೇದಿಕೆ ಮೇಲೆ ಗಳಗಳನೇ ಅತ್ತ ಕಾಂಗ್ರೆಸ್‌ ಶಾಸಕ

ನನ್ನ ಕುಟುಂಬ ಬೀದಿಗೆ ತಂದಿದ್ದೀರಿ. ದಿನ ನಿತ್ಯ ನ್ಯಾಯಾಲಯಕ್ಕೆ ಆಲೆಯುವಂತೆ ಮಾಡಿದ್ದೀರಿ. ನನ್ನ ಮನೆ ಹಾಳು ಮಾಡಿದ್ದೀರಿ. ಸಾಲ ಮಾಡಿದ್ದೇನೆ ಎಂದು ಶೃಂಗೇರಿ ಶಾಸಕ ಶಾಸಕ ಟಿಡಿ ರಾಜೇಗೌಡ (sringeri congress mla TD Rajegowda) ಬಹಿರಂಗ ಕಾರ್ಯಕ್ರಮದಲ್ಲೇ ಗಳಗಳನೇ ಅತ್ತಿರುವ ಪ್ರಸಂಗ ನಡೆದಿದೆ. ಬಾಳೆಹೊನ್ನೂರಿನಲ್ಲಿ ಬ್ಲಾಕ್‌ ಕಾಂಗ್ರೆಸ್‌ ವತಿಯಿಂದ ನಿನ್ನೆ (ಮಾರ್ಚ್ 02) ಹಮ್ಮಿಕೊಂಡಿದ್ದ ಶೃಂಗೇರಿ ಕ್ಷೇತ್ರದ ರೈತರ, ಕಾರ್ಮಿಕರ ಮತ್ತು ನೆಲವಾಸಿಗಳ ಸಮಸ್ಯೆ ಕುರಿತು ನಡೆದ ಜನಾಂದೋಲನ ಸಮಾವೇಶದಲ್ಲಿ ಶಾಸಕ ಟಿಡಿ ರಾಜೇಗೌಡ ಅವರು … Read more

ಬಿಎಂಟಿಸಿ ಬಸ್ ಅಡ್ಡಗಟ್ಟಿ ಮಿಡಲ್ ಫಿಂಗರ್ ತೋರಿಸಿದ ಯುವಕ ; ಪೊಲೀಸರು ಕೊಟ್ರು ನೋಡಿ ಟ್ವಿಸ್ಟೆಡ್ ಶಾಕ್.!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಮೇಲಿನ ಆಕ್ರೋಶ ಅಥವಾ ‘ರೋಡ್ ರೇಜ್’ (Road Rage) ಪ್ರಕರಣಗಳು ದಿನೇ ದಿನೇ ಮಿತಿಮೀರುತ್ತಿವೆ. ಇತ್ತೀಚೆಗಷ್ಟೇ ಇಂದಿರಾನಗರದಲ್ಲಿ ಮದ್ಯವ್ಯಸನಿಯೊಬ್ಬ ಬಿಎಂಟಿಸಿ ಬಸ್ ಚಾಲಕನಿಗೆ ಅಡ್ಡಿಪಡಿಸಿ, ಅಸಭ್ಯವಾಗಿ ವರ್ತಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಈ ವಿಡಿಯೋ ಆಧರಿಸಿ ತಕ್ಷಣವೇ ಕಾರ್ಯಪ್ರವೃತ್ತರಾದ ಬೆಂಗಳೂರು ನಗರ ಸಂಚಾರಿ ಪೊಲೀಸರು, ಆರೋಪಿಯನ್ನು ಪತ್ತೆಹಚ್ಚಿ ಬಿಸಿ ಮುಟ್ಟಿಸಿದ್ದಾರೆ. ಘಟನೆಯಲ್ಲಿ ನಡೆದಿದ್ದೇನು? ಬೆಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಇಂದಿರಾನಗರದ ರಸ್ತೆಯಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ … Read more

ಭದ್ರಾವತಿ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ : 4 ಲಕ್ಷ ಕೇಳಿ 1 ಲಕ್ಷ ವಸೂಲಿ ವೇಳೆ ರೆಡ್‌ಹ್ಯಾಂಡಾಗಿ ಸೆರೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಎ.ಕೆ.ನಾಗೇಂದ್ರಪ್ಪ ಹಾಗೂ ಮಧ್ಯವರ್ತಿಯೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 1 ಲಕ್ಷ ರೂ. ಪಡೆಯುವಾಗ ರೆಡ್‌ ಹ್ಯಾಂಡ್ ಆಗಿ ಇಬ್ಬರೂ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಲಂಚ ಪಡೆಯುವ ವೇಳೆ ರೆಡ್‌ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವ ವೇಳೆ ಬಿಇಒ ಹಾಗೂ ಮಧ್ಯವರ್ತಿ ಇಬಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಬರೋಬ್ಬರಿ ಒಂದು … Read more