ಗೃಹಲಕ್ಷ್ಮಿ ಲೆಕ್ಕದಲ್ಲಿ ಎಡವಿದ ಸಚಿವೆ ರಕ್ಷಣೆಗೆ ನಿಂತ ಡಿಕೆಶಿ : ಸಿಎಂ ಇಲಾಖೆಯನ್ನೇ ಹೊಣೆ ಮಾಡಿದ ಡಿಕೆ ಶಿವಕುಮಾರ್

ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ಅನುದಾನದ ವಿಚಾರವಾಗಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರೀ ಜಟಾಪಟಿ ನಡೆದಿದೆ. ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಕ್ಕಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಷಾದ ವ್ಯಕ್ತಪಡಿಸಿದ ಪ್ರಸಂಗ ನಡೆದರೆ, ಮತ್ತೊಂದೆಡೆ ಸಚಿವೆ ಬೆನ್ನಿಗೆ ನಿಂತ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹಣಕಾಸು ಇಲಾಖೆಯನ್ನೇ ದೂರುವ ಮೂಲಕ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಅವರ ಖಾತೆಯತ್ತ ಬೊಟ್ಟು ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ತಪ್ಪು ಒಪ್ಪಿಕೊಂಡ ಸಚಿವೆ, ಮುಗಿಬಿದ್ದ … Read more

ಹಳೆ ವಾಹನ ಹೊಂದಿರುವವರಿಗೆ ಶಾಕ್ ಕೊಟ್ಟ ಸಾರಿಗೆ ಸಚಿವರು : 15 ವರ್ಷ ಮೀರಿದ ವೆಹಿಕಲ್ಸ್ ಜಪ್ತಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದರೂ, ಹಳೆಯ ವಾಹನಗಳು ಮಾತ್ರ ಇನ್ನೂ ಸಂಚಾರ ನಿಲ್ಲಿಸಿಲ್ಲ. ಇವುಗಳಿಂದಲೇ ವಾಯುಮಾಲಿನ್ಯ ಹೆಚ್ಚಳವಾಗ್ತಿದೆ ಎಂಬ ಆರೋಪದ ನಡುವೆಯೂ ಕೋಟ್ಯಾಂತರ ವಾಹನಗಳು ರಸ್ತೆಯಲ್ಲಿ ಓಡಾಡುತ್ತಲೇ ಇವೆ. ಇಂತಹ ವಾಹನಗಳ ಮಾಲಿಕರಿಗೆ ರಾಜ್ಯ ಸಾರಿಗೆ ಸಚಿವರು ಶಾಕ್ ಕೊಟ್ಟಿದ್ದಾರೆ. 15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್ನಲ್ಲಿ ತಿಳಿಸಿದ್ದಾರೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. ಕೇಂದ್ರ ಸರ್ಕಾರದ ನೀತಿಯ ಪ್ರಕಾರ … Read more

ಯಜಮಾನಿ’ಯರಿಗೆ ಸಿಹಿ ಸುದ್ದಿಕೊಟ್ಟ ರಾಜ್ಯ ಸರ್ಕಾರ : ಶೀಘ್ರದಲ್ಲಿ ಬಾಕಿ ಇರುವ `ಗೃಹಲಕ್ಷ್ಮಿ ಹಣ’ ಬಿಡುಗಡೆ

ರಾಜ್ಯದಲ್ಲಿ ಈವರೆಗೆ ಗೃಹಲಕ್ಷ್ಮೀ ಮಹಿಳೆಯರಿಗೆ 23 ಕಂತಿನ ಹಣ ಬಿಡುಗಡೆ ಮಾಡಿದ್ದೇವೆ, ಶೀಘ್ರವೇ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಗೃಹಲಕ್ಷ್ಮೀ ಮಹಿಳೆಯರಿಗೆ ಈವರೆಗೆ 23 ಕಂತು ನೀಡಿದ್ದೇನೆ. 46 ಸಾವಿರ ಕೋಟಿ ರೂ.ಗಳನ್ನು 1 ಕೋಟಿ 26 ಲಕ್ಷ ಮಹಿಳೆಯರಿಗೆ ಈವರೆಗೆ ನೀಡಿದ್ದೇವೆ, ಆಗಸ್ಟ್ ವರೆಗೆ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡಲಾಗಿದೆ, ಬಾಕಿ ಉಳಿದ ಗೃಹಲಕ್ಷ್ಮೀ ಹಣವನ್ನು ಶೀಘ್ರವೇ … Read more

ಸಣ್ಣ ಜೆರಾಕ್ಸ್ ಅಂಗಡಿ ಮಾಲೀಕನಿಂದ ₹1.6 ಲಕ್ಷ ವಸೂಲಿ ; ಕಗ್ಗಲೀಪುರ PSI ಹರೀಶ್ ಸಸ್ಪೆಂಡ್

ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪ ಮಾಡಿ ಕನಕಪುರದ ಜೆರಾಕ್ಸ್ ಅಂಗಡಿ ಮಾಲೀಕ ರಾಜೇಶ್ ಅವರಿಂದ ₹1.6 ಲಕ್ಷ ವಸೂಲಿ ಮಾಡಿದ್ದ ಕಗ್ಗಲೀಪುರ ಪಿಎಸ್‌ಐ ಹರೀಶ್ ಅವರನ್ನು ರಾಮನಗರ ಎಸ್.ಪಿ. ಶ್ರೀನಿವಾಸ್ ಗೌಡ ಅಮಾನತುಗೊಳಿಸಿದ್ದಾರೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಕ್ರಮ ಕೈಗೊಳ್ಳಲಾಗಿದೆ. ರಾಮನಗರ (ಡಿ.16): ನಕಲಿ ಆಧಾರ್ ಕಾರ್ಡ್ ತಯಾರಿಕೆಯ ಸುಳ್ಳು ಆರೋಪದ ಬೆದರಿಕೆ ಹಾಕಿ, ಜೆರಾಕ್ಸ್ ಅಂಗಡಿ ಮಾಲೀಕರೊಬ್ಬರಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿದ್ದ ಆರೋಪದ ಮೇಲೆ ಕಗ್ಗಲೀಪುರ ಠಾಣೆಯ … Read more

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!

ಶ್ರೀಮರಳಿ ನಟಿಸಿದ್ದ ಮದಗಜ ಸಿನಿಮಾದಲ್ಲಿ ಸಣ್ಣ ಪಾತ್ರದಲ್ಲಿ ನಟಿಸಿದ್ದ ನಟಿ ಜೋಶಿತಾ ಅವರ ಸಂಸಾರ ಬೀದಿಗೆ ಬಂದಿದೆ. ಜೋಶಿತಾ ಹಾಗೂ ಅವರ ತಂದೆ-ತಾಯಿಯ ಮೇಲೆ ಆಕೆಯ ಗಂಡ ಸುರೇಶ್‌ ನಡು ರಸ್ತೆಯಲ್ಲಿಯೇ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಮದಗಜ ಸಿನಿಮಾ ಅಲ್ಲದೆ, ರೈತ, ಸ್ವಯಂವರ ಎನ್ನುವ ಶಾರ್ಟ್ ಮೂವಿ, ಶ್ರೀದೇವಿ ಮಹಾತ್ಮೆ ಅನ್ನೋ ಸೀರಿಯಲ್‌ನಲ್ಲೂ ಕೂಡ ಜೋಶಿತಾ ನಟಿಸಿದ್ದರು ಹಲ್ಲೆ ಒಳಗಾಗಿರುವ ಜೋಶಿತಾ ಸಿನಿಮಾ ಹಾಗೂ ಸೀರಿಯಲ್‌ ನಟಿ ಮಾತ್ರವಲ್ಲದೆ, ಚೈಲ್ಡ್‌ ಆರ್ಟಿಸ್ಟ್‌ ಹಾಗೂ ಡಬ್ಬಿಂಗ್‌ ಕಲಾವಿದೆ ಕೂಡ … Read more

ಪತ್ನಿ ಜೊತೆ ಸಹೋದರನ ಚಕ್ಕಂದ : ತೋಟಕ್ಕೆ ಕರೆದೊಯ್ದು ತಮ್ಮನನ್ನು ಅಣ್ಣನೇ ಕೊಂದ!

ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವ ಅಣ್ಣನಿಂದಲೇ ಕೊಲೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜೇಡಿಗೆರೆ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರ (28) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಸಹೋದರ ಮಾಲತೇಶನೇ ಆರೋಪಿಯಾಗಿದ್ದಾನೆ. ಮಿಸ್ಸಿಂಗ್ ಕೇಸ್ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ತಮ್ಮನನ್ನು ಕೊಂದು ಅಮಾಯಕನಂತೆ ನಟಿಸುತ್ತಿದ್ದ ಅಣ್ಣನ ಕಳ್ಳಾಟವನ್ನು ಕುಟುಂಬದ ಎದುರು ಬಹಿರಂಗಪಡಿಸಿದ್ದಾರೆ. ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದ ರಾಮಚಂದ್ರ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆಗೆ ಮುಂದಾದಾಗ ಕೇಸ್ಗೆ … Read more

ಹೃದಯಾಘಾತಕ್ಕೂ 1 ತಿಂಗಳ ಮೊದಲು ಈ 5 ಲಕ್ಷಣಗಳು ಕಾಣಿಸಿಕೊಳ್ಳುತ್ತವೆ, ನಿರ್ಲಕ್ಯ ಬೇಡ.!

ಹೃದಯಾಘಾತದ ಹಲವು ಲಕ್ಷಣಗಳು ಬಹಳ ಸಾಮಾನ್ಯ. ಜನರು ಅವುಗಳನ್ನು ಹಗುರವಾಗಿ ಪರಿಗಣಿಸುತ್ತಾರೆ. ಈ ಚಿಹ್ನೆಗಳು ವಾರಗಳು ಅಥವಾ ತಿಂಗಳುಗಳ ಮೊದಲೇ ಕಾಣಿಸಿಕೊಳ್ಳಬಹುದು. ಅಂತಹ ಲಕ್ಷಣಗಳ ಮೇಲೆ ನಿಗಾ ಇರಿಸಿ ಸರಿಯಾದ ಸಮಯದಲ್ಲಿ ವೈದ್ಯರನ್ನು ಸಂಪರ್ಕಿಸಲು ತಜ್ಞರು ಸೂಚಿಸುತ್ತಾರೆ. ಆಯಾಸ, ಅನಿಲ, ಒತ್ತಡ ಅಥವಾ ವೃದ್ಧಾಪ್ಯದ ಕಾರಣದಿಂದಾಗಿ ಹೃದಯಾಘಾತದ ಲಕ್ಷಣಗಳನ್ನು ನಿರ್ಲಕ್ಷಿಸಲಾಗುತ್ತದೆ. ಈ ಅಜಾಗರೂಕತೆಯು ನಂತರ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಹೃದಯ ಸಮಸ್ಯೆಗಳು ಇದ್ದಕ್ಕಿದ್ದಂತೆ ಬೆಳೆಯುವುದಿಲ್ಲ, ಆದರೆ ಕ್ರಮೇಣ ಬೆಳೆಯುತ್ತವೆ ಎಂಬುದನ್ನು ನೆನಪಿಡಿ. ಹೃದಯ ಅಪಧಮನಿಗಳಲ್ಲಿ ಅಡಚಣೆಗಳು ಬೆಳೆಯಲು … Read more

ಮಹಿಳೆ ಜೊತೆಗೆ ಅಸಭ್ಯ ವರ್ತನೆ ಆರೋಪ : ಬೆತ್ತಲೆಯಾಗಿ ಮಸಾಜ್ ಮಾಡಿಸಿಕೊಂಡ ಸ್ವಾಮೀಜಿ.!

ಮಹಿಳೆಯೊಬ್ಬರ ಜೊತೆಗೆ ಸ್ವಾಮೀಜಿಯೊಬ್ಬರು ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಧಾರವಾಡ ಜಿಲ್ಲೆಯ ಕವಲಗೇರಿ ಮಠದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿ ಬೆತ್ತಲೆಯಾಗಿ ಮಹಿಳೆಯಿಂದ ಮಸಾಜ್ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಸದ್ಯ ಇದರ ವಿಡಿಯೋ ವೈರಲ್‌ ಆಗಿದೆ. ಘಟನೆ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ಸುಮಾರು 5 ಜನರ ಗುಂಪು ಈ ವಿಡಿಯೋವನ್ನಿಟ್ಟುಕೊಂಡು ಸ್ವಾಮೀಜಿಯನ್ನ ಬ್ಲಾಕ್‌ಮೇಲ್ ಮಾಡಿ 20 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿತ್ತು. ಗ್ರಾಮದ ವ್ಯಕ್ತಿಯೊಬ್ಬರ ಸಮ್ಮುಖದಲ್ಲಿ 10 … Read more

“ಗಾಂಧಿ ವಿಚಾರಗಳನ್ನ ಮೋದಿ ದ್ವೇಷಿಸ್ತಾರೆ” ; MNREGA ಹೆಸರು ಬದಲಾವಣೆಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಾಗ್ದಾಳಿ

MNREGA ಮರುನಾಮಕರಣದ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಮೋದಿ ಸರ್ಕಾರದ ಮೇಲೆ ದಾಳಿ ನಡೆಸುತ್ತಿದೆ. ಅವರು ಇದನ್ನು ಮಹಾತ್ಮ ಗಾಂಧಿಯವರಿಗೆ ಮಾಡಿದ ಅವಮಾನ ಎಂದು ಕರೆಯುತ್ತಾರೆ. ಆದಾಗ್ಯೂ, ಮೂಲಗಳ ಪ್ರಕಾರ, VB-G RAM-G ಮಸೂದೆಯ ಕುರಿತಾದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿ ಹೆಸರಿನ ಬಗ್ಗೆ ಯಾವುದೇ ವಿವಾದವಿಲ್ಲ ಎಂದು ಹೇಳಿದ್ದಾರೆ. ಕಾಲದೊಂದಿಗೆ ಎಲ್ಲವೂ ಬದಲಾಗುತ್ತದೆ. ಮಹಾತ್ಮ ಮತ್ತು ರಾಮ ಇಬ್ಬರ ಆತ್ಮವನ್ನ ಗೌರವಿಸಲಾಗುತ್ತದೆ ಮತ್ತು ಪೂಜಿಸಲಾಗುತ್ತದೆ. ಪ್ರಧಾನಿ ಮೋದಿಗೆ ಗಾಂಧಿಯವರ ವಿಚಾರಗಳು ದ್ವೇಷ : ರಾಹುಲ್ ಗಾಂಧಿ.!ಏತನ್ಮಧ್ಯೆ, ಕಾಂಗ್ರೆಸ್ … Read more

Arecanut Rate : ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? : ಇಲ್ಲಿದೆ ಡಿಸೆಂಬರ್ 17ರ ದರಪಟ್ಟಿ

ಕಳೆದ ಕೆಲ ದಿನಗಳವರೆಗೂ ರಾಜ್ಯದಲ್ಲಿ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಭರ್ಜರಿ ಏರಿಕೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಾಯವಾಗಿದ್ದ ಮಂದಹಾಸ ಮತ್ತೆ ಬಂದಂತಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 17) ದರ ಎಷ್ಟಿದೆ ತಿಳಿಯಿರಿ. ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 17) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 58,289 ರೂಪಾಯಿ, ಕನಿಷ್ಠ ದರ … Read more