ಬಾಳನ್ನೇ ಬಲಿ ತೆಗೆದುಕೊಂಡ ಬಾಳೇಹಣ್ಣು – ಗಂಟಲಲ್ಲಿ ಸಿಲುಕಿ ಐದು ವರ್ಷದ ಬಾಲಕ ಸಾವು!

ಮಕ್ಕಳು ಬಾಯಲ್ಲಿ ಏನೇ ಹಾಕಿಕೊಂಡರು ಪೋಷಕರಾದವರು ಮೊದಲು ಆ ಕುರಿತು ಎಚ್ಚರ ವಹಿಸಿವುದು ಸೂಕ್ತ. ಇಲ್ಲವಾದರೆ ಅನಾಹುತ ಆಗುವ ಸಂಭವ ಇರುತ್ತೆ. ಇದೀಗ ಬಾಳೆಹಣ್ಣು ತಿಂದು ಉಸಿರುಗಟ್ಟಿ 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನಾದ್ಯಂತ ತೀವ್ರ ಆಘಾತವನ್ನುಂಟು ಮಾಡಿದೆ. ಈರೋಡ್ನ ಬಾಲಕನ ಶವವನ್ನು ಈರೋಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಪೋಷಕರಿಗೆ ಹಸ್ತಾಂತರಿಸಲಾಯಿತು. ಹೌದು ಈರೋಡ್‌ನ ಅನ್ನೈ ಸತ್ಯ ನಗರದ ಎಂ. ಸಾಯಿಶರಣ್ ಎಂಬ ಬಾಲಕ ಮನೆಯಲ್ಲಿ ಬಾಳೆಹಣ್ಣು ತಿನ್ನುವಾಗ ಅದು ಗಂಟಲಲ್ಲಿ ಸಿಕ್ಕಿಹಾಕಿಕೊಂಡು, … Read more

ರಾಜ್ಯ ಪೊಲೀಸ್ ಇಲಾಖೆ ಮರ್ಯಾದೆ ತೆಗೆದ ಮತ್ತೊಬ್ಬ ಸಿಬ್ಬಂದಿ, ಬರೋಬ್ಬರಿ 11 ಲಕ್ಷ ಕದ್ದು ಹೆಂಡತಿಗೆ ಚಿನ್ನ ಉಡುಗೊರೆ.!

ನಾಗರಿಕರ ಸುರಕ್ಷತೆಗಾಗಿ ಕಾವಲಿನಲ್ಲಿರಬೇಕಾದ ಕೆಲ ಪೊಲೀಸ್ ಸಿಬ್ಬಂದಿಯ ಕಳ್ಳಾಟಗಳು ನಿರಂತರವಾಗಿ ಬಯಲಾಗುತ್ತಿದ್ದು, ಇಲಾಖೆಯ ಗೌರವಕ್ಕೆ ಗಂಭೀರ ಧಕ್ಕೆ ತಂದಿವೆ. ಸಿದ್ದಾಪುರ ದರೋಡೆ ಪ್ರಕರಣದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ ಅಣ್ಣಪ್ಪ ನಾಯಕ್ ಬಂಧನವಾಗಿರುವುದು ಮರೆಸುವ ಮುನ್ನವೇ, ಇದೀಗ ಸೈಬರ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಜೆ.ಬಿ. ಉಲ್ಲಾ ಎಂಬಾತನಿಂದ ಲಕ್ಷಾಂತರ ರೂಪಾಯಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿಯನ್ನು ವಿಚಾರಣೆಗಾಗಿಯೇ ಕರೆದುಕೊಂಡು ಬಂದಿದ್ದಾಗ ಈ ಘಟನೆ ಸಂಭವಿಸಿರುವುದು ಆಶ್ಚರ್ಯಕರ ಸಂಗತಿ. ವಿಚಾರಣೆಗೆ ತಂದ ಆರೋಪಿ ಕಾರಿನಲ್ಲಿದ್ದ 11 ಲಕ್ಷ ರೂಪಾಯಿ … Read more

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಚುಲರ್‌ ಜೊತೆ ರಾತ್ರಿ ತಂಗಿದ್ದ 2 ಹುಡುಗಿಯರು; ನೀಡಿದ ಶಿಕ್ಷೆಗೆ ಆಕ್ರೋಶ

ಕೆಲವೊಮ್ಮೆ ನಾವು ಯಾವುದನ್ನು ಅಪೇಕ್ಷಿಸದೇ ಮಾಡುವ ಸಹಾಯವು ನಮ್ಮನ್ನು ಸಂಕಷ್ಟಕ್ಕೆ ಸಿಲುಕಿಸುತ್ತದೆ. ಇಂತಹದ್ದೇ ಅನುಭವ ಈ ವ್ಯಕ್ತಿಗೂ ಆಗಿದೆ. ಬೆಂಗಳೂರಿನ (Bengaluru) ವ್ಯಕ್ತಿಯೊಬ್ಬರು ತಮ್ಮ ಫ್ಲಾಟ್‌ನಲ್ಲಿ ಇಬ್ಬರೂ ಯುವತಿಯರಿಗೆ ರಾತ್ರಿ ಉಳಿಯಲು ಅವಕಾಶ ನೀಡಿದ್ದಾರೆ. ಒಂದು ರಾತ್ರಿ ಇಬ್ಬರು ಹುಡುಗಿಯರು ಬಂದಿದ್ದಕ್ಕೆ 5000 ರೂಪಾಯಿ ದಂಡ ಹಾಕಿರುವ ವಿಷಯವನ್ನು ಬೆಂಗಳೂರು ಮೂಲದ ಒಬ್ಬ ರೆಡ್ಡಿಟ್ ಬಳಕೆದಾರರು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತನ್ನ ಫ್ಲಾಟ್‌ನಲ್ಲಿ ಒಂದು ಹೆಣ್ಣು ರಾತ್ರಿ ಇದ್ದಳು ಎನ್ನುವ ಕಾರಣಕ್ಕಾಗಿ ಅವರಿಗೆ ₹5,000 ದಂಡ ಹಾಕಲಾಗಿದೆ … Read more

ಲಿವರ್‌ ನ್ನು ಹಾನಿಗೊಳಿಸುವ ಆಹಾರಗಳು ಇವು.. ವಿಸ್ಕಿ, ಬ್ರ್ಯಾಂಡಿಗಿಂತಲೂ ಡೇಂಜರಸ್‌!

ಲಿವರ್‌ ದೇಹದ ಒಂದು ಪ್ರಮುಖ ಭಾಗವಾಗಿದೆ. ಇದನ್ನು ದೇಹದ ರಾಸಾಯನಿಕ ಶಾಲೆ ಎಂದೂ ಕರೆಯುತ್ತಾರೆ. ಇದು ದೇಹದೊಳಗೆ ಅನೇಕ ಪ್ರಮುಖ ಕಾರ್ಯಗಳನ್ನು ನಿರ್ವಹಿಸುತ್ತದೆ. ಯಕೃತ್ತು ಪಿತ್ತರಸವನ್ನು ಉತ್ಪಾದಿಸುತ್ತದೆ, ಇದು ಕೊಬ್ಬನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಲಿವರ್‌ ದೇಹದಲ್ಲಿ ಹೆಚ್ಚುವರಿ ಗ್ಲೂಕೋಸ್ ಅನ್ನು ಗ್ಲೈಕೊಜೆನ್ ಆಗಿ ಸಂಗ್ರಹಿಸುತ್ತದೆ ಮತ್ತು ದೇಹಕ್ಕೆ ಶಕ್ತಿಯ ಅಗತ್ಯವಿದ್ದಾಗ ಅದನ್ನು ಮತ್ತೆ ಗ್ಲೂಕೋಸ್ ಆಗಿ ಪರಿವರ್ತಿಸುತ್ತದೆ. ಲಿವರ್‌ ದೇಹವನ್ನು ಪ್ರವೇಶಿಸುವ ಅನೇಕ ವಿಷಕಾರಿ ವಸ್ತುಗಳನ್ನು ನಿರುಪದ್ರವವಾಗಿಸುತ್ತದೆ ಮತ್ತು ದೇಹದಿಂದ ಅವುಗಳನ್ನು ತೆಗೆದುಹಾಕುತ್ತದೆ. ಇದು ರಕ್ತ … Read more

ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ – ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತ್ಯು. !

ಲಕ್ನೋ : ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ, ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ ಪ್ರದೇಶದ ಫ್ಲೈಓವರ್ ಬಳಿ ಬುಧವಾರ ರಾತ್ರಿ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಗಳು … Read more

ಸಿದ್ದರಾಮಯ್ಯ ನೆಗೆದುಬಿದ್ದಿದ್ದಾರೆ – ಸಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಮಾಜಿ ಸಚಿವ ಈಶ್ವರಪ್ಪ..!

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ನಾಲಿಗೆ ಹರಿಬಿಟ್ಟಿದ್ದಾರೆ. ಕೊಪ್ಪಳದಲ್ಲಿ ಇಂದು ಮಾಧ್ಯಮಗಳು, ಸಿದ್ದರಾಮಯ್ಯ ಸ್ಥಾನ ಭದ್ರ ಇದೆಯಾ..? ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ನೆಗೆದುಬಿದ್ದು ಹೋಗುತ್ತಿದ್ದಾರೆ. ಇನ್ನು ಬೇರೆ ಪದ ಹೇಳಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿನ್ನೆ ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ್ದ ಈಶ್ವರಪ್ಪ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸತ್ತು ಹೋಗಿದೆ. ಈ … Read more

ಆಯತಪ್ಪಿ ಬಿದ್ದ ಕಾರ್ಮಿಕ ಸಾ*ವು: ಸಿಮೆಂಟ್‌ ಕಾರ್ಖಾನೆ ಮೇಲೆ ಕಲ್ಲು ತೂರಾಟ

ಬೆಳಗಾವಿ : ಸಿಮೆಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಆಯತಪ್ಪಿ ಬಿದ್ದ ಪರಿಣಾಮ ಓರ್ವ ಕಾರ್ಮಿಕ (Labor) ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ‌ ಈ ದುರ್ಘಟನೆ ನಡೆದಿದೆ. ರಮೇಶ್‌ ಮೃತ ದುರ್ದೈವಿಯಾಗಿದ್ದು, ನಂದಕುಮಾರ್‌ ಹಾಗೂ ಮಹೇಂದ್ರ ಗಂಭೀರ ಗಾಯಗೊಂಡವರಾಗಿದ್ದಾರೆ. ಈ ಮೂವರು ಕಾರ್ಮಿಕರು ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ಇವರನ್ನು ಬಾಗಲಕೋಟ ‌ಜಿಲ್ಲೆಯ ಕೆರೂಡಿ … Read more

ಬಟ್ಟೆ ಒಣ ಹಾಕುವ ಹಗ್ಗದಿಂದ ಕುತ್ತಿಗೆ ಬಿಗಿದು ಪತ್ನಿಯ ಹತ್ಯೆ ಮಾಡಿದ ವೃದ್ಧ.!

ಬೆಂಗಳೂರಿನಲ್ಲಿ ವೃದ್ಧ ದಂಪತಿಗಳ ನಡುವಿನ ಜಗಳ ವಿಕೋಪಕ್ಕೆ ತಿರುಗಿ ದುರಂತ ಸಾವಿನಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆಯೊಂದು ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವೆಂಕಟೇಶನ್ (65) ಎಂಬ ನಿವೃತ್ತ ಚಾಲಕ ತನ್ನ ಪತ್ನಿ ಬೇಬಿ(60) ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿದ್ದಾನೆ. ವೆಂಕಟೇಶನ್ BMTC ಡ್ರೈವರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಘಟನೆಗೆ ಕಾರಣವೇನು? ಹತ್ಯೆಗೀಡಾದ ವೃದ್ಧೆ ಬೇಬಿಗೆ ಸ್ಟ್ರೋಕ್ ಹೊಡೆದಿದ್ದ ಕಾರಣ ಹಾಸಿಗೆ ಹಿಡಿದು (ಬೆಡ್ ರಿಡನ್) ಮಲಗಿದ್ದರು ಎನ್ನಲಾಗಿದೆ. ಈ ವೃದ್ಧ ದಂಪತಿಗಳಿಗೆ ಇಬ್ಬರು … Read more

ಮುಸ್ಲಿಮರು ಜಿಹಾದ್ ಶುರು ಮಾಡಬೇಕಾಗುತ್ತೆ – ಅಧಿವೇಶನದಲ್ಲಿ ಸಮಾಜವಾದಿ ಪಕ್ಷದ ಸಂಸದ ವಾರ್ನಿಂಗ್‌!

ಸಮಾಜವಾದಿ ಪಕ್ಷದ ಸಂಸದ ಮೊಹಿಬ್ಬುಲ್ಲಾ ನದ್ವಿ ಸಂಸತ್ತಿನಲ್ಲಿ “ಮುಸ್ಲಿಮರು ಜಿಹಾದ್(jihad) ಮಾಡಬೇಕಾಗಬಹುದು. ಎಷ್ಟು ಸಮಯದವರೆಗೆ ಮುಸ್ಲಿಮರನ್ನು ದಮನಿಸಲಾಗುತ್ತದೆ?” ಎಂದು ಹೇಳುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದರು. ಲೋಕಸಭೆಯಲ್ಲಿ ಮಾತನಾಡಿದ ನದ್ವಿ, ಭಾರತದಲ್ಲಿ ಮುಸ್ಲಿಮರು ಹೆಚ್ಚುತ್ತಿರುವ ಅಂಚಿನಲ್ಲಿರುವಿಕೆಯನ್ನು ಎದುರಿಸುತ್ತಿದ್ದಾರೆ ಮತ್ತು ಅವರ ಸಾಂವಿಧಾನಿಕ ಸ್ವಾತಂತ್ರ್ಯಗಳನ್ನು ಮೊಟಕುಗೊಳಿಸಲಾಗುತ್ತಿದೆ ಎಂದು ವಾದಿಸಿದರು. ಇವರ ಮಾತು ಸಂವಿಧಾನದ ಮೇಲಿನ ನೇರ ದಾಳಿ ಎಂದು ಬಿಜೆಪಿಯ(BJP) ಶೆಹಜಾದ್ ಪೂನವಾಲ್ಲಾ ಹೇಳಿದ್ದಾರೆ. ಭಾರತೀಯ ಸಂವಿಧಾನದ 25 ಮತ್ತು 26 ನೇ ವಿಧಿಗಳನ್ನು ಈ ಸರ್ಕಾರ ದುರ್ಬಲಗೊಳಿಸಿದೆ … Read more

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್ : ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಕೇವಲ ಉಪಹಾರ ಇಲಾಖೆ ಮಾತ್ರ ಸಕ್ರಿಯವಾಗಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬ್ರೇಕ್‌ಫಾಸ್ಟ್ ಮತ್ತು ಡಿನ್ನರ್ ಮೀಟಿಂಗ್‌ಗಳನ್ನು ವ್ಯಂಗ್ಯಭರಿತವಾಗಿ ಟೀಕಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಆಂತರಿಕ ರಾಜಕೀಯ ಮತ್ತು ಅಧಿಕಾರ ಉಳಿಸಿಕೊಳ್ಳುವ ಕಸರತ್ತುಗಳೇ ಹೆಚ್ಚಾಗಿವೆ. … Read more