‘ರೊಟೀನ್ ಚೆಕಪ್’ ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ ಸಿಎಂ ಸಿದ್ದರಾಮಯ್ಯ.!

ಸಿಎಂ ಸಿದ್ದರಾಮಯ್ಯ ಅವರು ರೊಟೀನ್ ಚೆಕಪ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ.ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸುದ್ದಿಗೋಷ್ಟಿ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಅವರು ರೊಟೀನ್ ಚೆಕಪ್ ಗಾಗಿ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಸಿಎಂ ಸಿದ್ದರಾಮಯ್ಯ ಮಾತುಕತೆ ನಡೆಸಿದರು. ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಪಕ್ಷದ ವರಿಷ್ಠರು ಹೇಳಿದಂತೆ ನಡೆದುಕೊಳ್ಳುವುದಾಗಿ ಈಗಾಗಲೇ ತಿಳಿಸಿದ್ದೇನೆ. ಈಗಲೂ ಮತ್ತು … Read more

ಅನಗತ್ಯ ಗೊಂದಲಕ್ಕೆ ಬ್ರೇಕ್‌ ಹಾಕಲು ಇಬ್ಬರೂ ನಿರ್ಧರಿಸಿದ್ದೇವೆ – ಸಿಎಂ , ಡಿಸಿಎಂ ಜಂಟಿ ಪತ್ರಿಕಾಗೋಷ್ಠಿ

ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಇಬ್ಬರೂ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ಬಗ್ಗೆ ಮಾಹಿತಿ ನೀಡಿದ್ದಾರೆ. ಅನಗತ್ಯವಾಗಿ ಗೊಂದಲಗಳು ನಿರ್ಮಾಣವಾಗಿದ್ದು, ಇದಕ್ಕೆ ಬ್ರೇಕ್‌ ಹಾಕಲು ಇಬ್ಬರೂ ನಿರ್ಧರಿಸಿರುವುದಾಗಿ ಸಿಎಂ ಹೇಳಿದ್ದಾರೆ. ಹೈಕಮ್ಯಾಂಡ್‌ ತೀರ್ಮಾನಕ್ಕೆ ಇಬ್ಬರೂ ಬದ್ದರಾಗಿದ್ದೇವೆ. ಹೈಕಮ್ಯಾಂಡ್‌ ಅಸೆಂಬ್ಲಿ ನಡೆಯುವ ಮುಂಚೆ ಈ ಗೊಂದಲಗಳನ್ನು ತಿಳಿಗೊಳಿಸಿಕೊಳ್ಳಿ ಎಂದು ನಿರ್ದೇಶನ ನೀಡಿದ್ದರು. ಅದನ್ನು ಕೆಲವು ಮೀಡಿಯಾಗಳು ಸೃಷ್ಟಿಸಿದ್ದವೇ ಹೊರತು. ಈ ಕುರಿತು ನಮ್ಮಲ್ಲಿ ಯಾವುದೇ ಗೊಂದಲ ಇರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಕೆಲವು … Read more

ಮಂಗಳೂರು : ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ಮಗಳು : ವೀಡಿಯೋ ವೈರಲ್

ನಗರ ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೂಡುಶೆಡ್ಡೆಯ ಶಿವನಗರ ಎಂಬಲ್ಲಿ ತಾಯಿ ಮತ್ತು ಮಗಳು ವಾಸಿಸುತ್ತಿದ್ದು, ಇವರ ಮಧ್ಯೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ತಾಯಿ ಕಾವೂರು ಠಾಣೆಗೆ ತೆರಳಿ ದೂರುತ್ತಿದ್ದರು ಎಂದು ತಿಳಿದು ಬಂದಿದೆ. ಪೊಲೀಸರು ತಾಯಿ ಮತ್ತು ಮಗಳಿಗೆ ಬುದ್ಧಿ ಹೇಳಿ ಕಳುಹಿಸಿಕೊಡುತ್ತಿದ್ದರು ಎನ್ನಲಾಗಿದೆ. ಇತ್ತೀಚೆಗೆ ತಾಯಿಯು ಮೂಡುಶೆಡ್ಡೆ ಗ್ರಾ.ಪಂ.ಗೆ ತೆರಳಿ ಮಗಳ … Read more

ಹೈಕಮಾಂಡ್ ನಿಂದ ಬಂತು ಸಂದೇಶ : ಡಿಕೆಶಿ ದೆಹಲಿ ಟೂರ್ ಕ್ಯಾನ್ಸಲ್, ಸಿಎಂ ಜತೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಹಾಜರ್

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ(Siddaramaiah) ಹಾಗೂ ಡಿಕೆ ಶಿವಕುಮಾರ್  (DK Shivakumar) ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಕ್ಲೈಮ್ಯಾಕ್ಸ್​ ಹಂತಕ್ಕೆ ಬಂದಂತಿದೆ. ನಾಳೆ(ನವೆಂಬರ್ 29) ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಸಭೆ ನಡೆಯಲಿದ್ದು, ಕರ್ನಾಟಕ ಕುರ್ಚಿ ಕಾಳಗಕ್ಕೆ ತೆರೆ ಎಳೆಯಲಿದ್ದಾರೆ ಎನ್ನಲಾಗಿತ್ತು. ಆದ್ರೆ, ದೆಹಲಿಯಲ್ಲಿ ಸಭೆ ನಡೆಯೋ ಮುನ್ನವೇ ರಾಜ್ಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಸಿಎಂ ಡಿಸಿಎಂ ನಾಳೆ (ನವೆಂಬರ್ 29) ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ. ಕೆಸಿ ವೇಣುಗೋಪಾಲ್ ಅವರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​​ಗೆ ಕರೆ ಮಾಡಿ ಇಬ್ಬರು … Read more

ಬೆಂಗಳೂರಿನ ರಸ್ತೆ ಗುಂಡಿಯಿಂದ ಕೈ-ಕಾಲು ಮುರಿದುಕೊಂಡ ಬೈಕ್ ಸವಾರ, 6 ಲಕ್ಷ ರೂ. ಆಸ್ಪತ್ರೆ ಬಿಲ್‌

ಬೆಂಗಳೂರಿನ ಗುಂಡಿಗಳು (Bangalore Roads Crisis) ಮತ್ತೆ ಚರ್ಚೆಗೆ ಬಂದಿವೆ. ಈ ಹಿಂದೆ ಬೆಂಗಳೂರಿನ ಹೊಂಡಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇದೀಗ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಗುಂಡಿಗಳು ಮತ್ತೆ ಚರ್ಚೆಗೆ ಬರಲು ಈ ಘಟನೆ ಕಾರಣ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೆಂಗಳೂರಿನ ಗುಂಡಿಯಿಂದ ಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಿಂದಲ್ಲೇ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನನ್ನ ಈ ಸ್ಥಿತಿಗೆ ಕಳಪೆ ಮೂಲಸೌಕರ್ಯ ಕಾರಣ ಎಂದು ಆರೋಪಿಸಿದ್ದಾರೆ.ಈ … Read more

ಡಿಕೆ ಶಿವಕುಮಾರ್ ಗೆ ಅಧಿಕಾರ ಕೊಡದಿದ್ದಲ್ಲಿ ಮುಂದೇನು ಎಂದು ನಮ್ಮ ನಿಲುವು ಪ್ರಕಟಿಸುತ್ತೇವೆ : ಖಡಕ್ ಹೇಳಿಕೆ ನೀಡಿದ ನಂಜಾವಧೂತ ಶ್ರೀ

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಸಾಲಿನ ಮೊದಲ ಅವಧಿ ಮುಗಿಸಿದ್ದು ಎರಡನೇ ಅವಧಿಯನ್ನು ಡಿಕೆ ಶಿವಕುಮಾರ್ ಅವರಿಗೆ ಕೊಡುತ್ತಾರೆ ಎನ್ನುವ ವಿಶ್ವಾಸ ಇದೆ ಒಂದು ವೇಳೆ ಕಾಂಗ್ರೆಸ್ ಹೈಕಮಾಂಡ್ ಅವಕಾಶ ನೀಡದೇ ಇದ್ದರೆ ಆಗ ನಾವು ನಮ್ಮ ಮುಂದಿನ ನಿರ್ಧಾರ ,ನಿಲುವು ಏನು ಎನ್ನುವುದನ್ನು ಹೇಳುತ್ತೇವೆ ಎಂದು ತುಮಕೂರು ಜಿಲ್ಲೆ ಶಿರಾದ ಸ್ಫಟಿಕಪುರಿ ಮಠಾಧೀಶ ನಂಜಾವಧೂತ ಸ್ವಾಮೀಜಿ ಖಡಕ್ ಸಂದೇಶ ನೀಡಿದ್ದಾರೆ. ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದದ ಬಳಿಕ … Read more

‘ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ’ : ಮತ್ತೆ ಸಿಎಂಗೆ ಪರೋಕ್ಷವಾಗಿ ಕುಟುಕಿದ ಡಿಸಿಎಂ ಡಿಕೆಶಿ

ನಿಂಬೆಗಿಂತ ಹುಳಿ ಇಲ್ಲ ದುಂಬಿಗಿಂತ ತಪ್ಪಿಲ್ಲ ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸರ್ವಜ್ಞನ ವಚನ ಉಲ್ಲೇಖಿಸಿ ಮಾತನಾಡಿದರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಸಮಗ್ರ ಕೃಷಿ ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಸರ್ವಜ್ಞನ ವಚನ ದೊಂದಿಗೆ ಭಾಷಣ ಆರಂಭಿಸಿದರು. ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ ನಿಂಬೆಗಿಂತ ಹುಳಿ ಇಲ್ಲ ದುಂಬಿಗಿಂತ ಕಪ್ಪಿಲ್ಲ ದೇವರು ವರನೂ ಕೊಡಲ್ಲ ಶಾಪವೂ ಕೊಡಲ್ಲ ಆದರೆ ಅವಕಾಶ … Read more

15 ದಿನದ ಹಸುಗೂಸು, 5 ವರ್ಷದ ಮಗುವಿನೊಂದಿಗೆ ರಂಜಿತಾ ನಾಪತ್ತೆ : ಕಣ್ಣೀರಿಡುತ್ತಿರುವ ಕುಟುಂಬ.!

ಬೆಂಗಳೂರಿನ ಹೆಚ್.ಎ.ಎಲ್ ಬಳಿ, 5 ವರ್ಷದ ಮಗ ಮತ್ತು 15 ದಿನದ ಹಸುಗೂಸಿನೊಂದಿಗೆ ರಂಜಿತಾ ಎಂಬ ತಾಯಿ ಕಾಣೆಯಾಗಿದ್ದಾರೆ. ಮಗನನ್ನು ಶಾಲೆಗೆ ಬಿಡಲು ಹೋದವರು ಮನೆಗೆ ಹಿಂತಿರುಗಿಲ್ಲ, ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಆ ಮಗು ಹುಟ್ಟಿ ಇನ್ನು 15 ದಿನ ಕಳೆದಿತ್ತು. ತಾಯಿ ಹಸುಗುಸು, 5 ವರ್ಷದ ಮಗನ ಜೊತೆ ಕಾಣೆಯಾಗಿದ್ದಾಳೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಪೊಲೀಸರು ಹುಡುಕಾಟ ನಡೆಸ್ತಿದ್ದಾರೆ.. ಎಷ್ಟೇ ಹುಡುಕಿದ್ರೂ ತಾಯಿ ಮಗು ಮಾತ್ರ ಇನ್ನು … Read more

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡ – ಭೀಕರವಾಗಿ ಹ*ತ್ಯೆಗೈದು ಶವವನ್ನೂ ಸುಟ್ಟ ಹೆಂಡತಿ!

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಅಪರಿಚಿತ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ (Crime news) ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಗಂಡನನ್ನು ಪತ್ನಿಯೇ ಪ್ರಿಯಕರನೊನೆ ಸೇರಿಕೊಂಡು ಹತ್ಯೆಗೈದಿದ್ದಾಳೆ ಎಂದು ತಿಳಿದುಬಂದಿದೆ. ಬಸವರಾಜು ಮೃತ ದುರ್ದೈವಿಯಾಗಿದ್ದು(28), ಶರಣಮ್ಮ(19) ಹಾಗೂ ವೀರಭದ್ರ(25) ಮತ್ತು ಅನಿಲ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಗಂಗೊಂಡಗಳ್ಳಿಯ ನಿರ್ಜನ ಪ್ರದೇಶದಲ್ಲಿ ಸುಟ್ಟ ಸ್ಥಿತಿಯಲ್ಲಿದ್ದ ಮೃತದೇಹವೊಂದು ಪತ್ತೆಯಾಗಿತ್ತು. ಶವದ ಗುರುತು ಪತ್ತೆ ಮಾಡಿದಾಗ ಅದು ಯಾದಗಿರಿ ಮೂಲದ ಬಸವರಾಜು ಎಂದು ತಿಳಿದುಬಂದಿತ್ತು. ಬಸವರಾಜು ಹಾಗೂ … Read more

ಒಂದಕ್ಕಿಂತ ಹೆಚ್ಚು ಮದುವೆಯಾದರೆ 7 ವರ್ಷ ಜೈಲು ಫಿಕ್ಸ್, ಅಸ್ಸಾಂನಲ್ಲಿ ಬಹುಪತ್ನಿತ್ವ ಮಸೂದೆ ಪಾಸ್! Marriage Act

ಅಸ್ಸಾಂ ಸರ್ಕಾರವು ನವೆಂಬರ್ 27, ಗುರುವಾರದಂದು ಬಹುಪತ್ನಿತ್ವ ಮಸೂದೆಯನ್ನು ಅಂಗೀಕರಿಸಿದೆ. ಅಂದರೆ, ಇನ್ನು ಮುಂದೆ ಅಸ್ಸಾಂನಲ್ಲಿ ಒಂದಕ್ಕಿಂತ ಹೆಚ್ಚು ಮದುವೆಯಾಗುವುದು ಅಪರಾಧವಾಗಲಿದ್ದು, ಹಾಗೆ ಮಾಡಿದರೆ ಜೈಲಿಗೆ ಹೋಗಬೇಕಾಗುತ್ತದೆ. ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಸರ್ಕಾರವು ಒಂದಕ್ಕಿಂತ ಹೆಚ್ಚು ಮದುವೆಗಳನ್ನು ತಡೆಯುವ ಉದ್ದೇಶದಿಂದ ‘ಪ್ರೊಹಿಬಿಷನ್ ಆಫ್ ಪಾಲಿಗ್ಯಾಮಿ ಬಿಲ್, 2025’ ಅನ್ನು ಅಂಗೀಕರಿಸಿದೆ. ಆದಾಗ್ಯೂ, ಈ ಮಸೂದೆ ಯಾವಾಗ ಕಾನೂನಾಗಿ ಜಾರಿಗೆ ಬರಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬಹುಪತ್ನಿತ್ವ ಮಸೂದೆಯಲ್ಲಿ ಏನಿದೆ? ಅಸ್ಸಾಂ ಸರ್ಕಾರದ ಈ ಹೊಸ … Read more