ಡಿಕೆಶಿಗೆ ಕೊಟ್ಟ ಮಾತಿಗೆ ಬೆಂಗಳೂರು, ದೆಹಲಿಯಲ್ಲಿ ಉತ್ತರ: ಸಚಿವ ಸತೀಶ್ ಜಾರಕಿಹೊಳಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೊಟ್ಟ ಮಾತಿನ ಬಗ್ಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉತ್ತರ ಸಿಗುತ್ತದೆ. ನಾವು ಕೂಡ ಆದಷ್ಟು ಬೇಗ ಪಕ್ಷದಲ್ಲಿ ಉಂಟಾಗಿರುವ ಗೊಂದಲ ಸರಿಪಡಿಸುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇವೆ. ಪಕ್ಷಕ್ಕಾಗಿ ದುಡಿದಿರುವ ಡಿ.ಕೆ.ಶಿವಕುಮಾರ ಅವರು ಕೂಲಿ ಕೇಳುವ ಸಂದರ್ಭ ಬಂದಾಗ ಚರ್ಚೆ ಮಾಡೋಣ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಹಲವರ ಪ್ರಯತ್ನದಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ, ಪಕ್ಷಕ್ಕಾಗಿ ದುಡಿದ ಎಲ್ಲರಿಗೂ ಅಧಿಕಾರ ಸಿಗಲ್ಲ. ಅಧಿಕಾರ ಕೆಲವರಿಗೆ ಮಾತ್ರ … Read more