ತಾಯಿ ಸಮಾಧಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ! ಅಪಘಾತದ ಕಾರಣ ಕುಟುಂಬಸ್ಥರಿಂದ ಅಗ್ನಿಸ್ಪರ್ಶ!

ತಾಯಿಗೆ ಪಿಂಚಣಿ ನೀಡಲು ಲಂಚ ಕೇಳಿದ್ದ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಬೇಸತ್ತಿದ್ದ ಮಹಾಂತೇಶ್ ಬೀಳಗಿ, ಕಷ್ಟಪಟ್ಟು ಓದಿ ಐಎಎಸ್ ಅಧಿಕಾರಿಯಂತಹ ಉನ್ನತ ಹುದ್ದೆಗೇರಿದ್ದರು. ಹಾಲಿ ಕರ್ನಾಟಕ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ ಬೀಳಗಿ ಅವರು ನಿನ್ನೆ ಸಂಜೆ ನಡೆದ ಕಾರು ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದರು. ಅಪಾರ ಪ್ರೀತಿ ಹೊಂದಿದ್ದ ಅಮ್ಮನ ಸಮಾಧಿ ಪಕ್ಕದಲ್ಲಿಯೇ ಮಹಾಂತೇಶ್ ಅವರ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿದ್ದವು. ಆದರೆ, ಕೊನೇ ಕ್ಷಣದಲ್ಲಿ ಅಮ್ಮನ ಮಡಿಲು ಸೇರಿಸದೇ ಅಗ್ನಿ ಸ್ಪರ್ಶದ ಮೂಲಕ … Read more

ಕಲಬೆರೆಕೆ ನಂದಿನಿ ತುಪ್ಪ ಜಾಲ – ಗಂಡ ಹೆಂಡತಿಯೇ ಕಿಂಗ್‌ ಪಿನ್! ದಂಪತಿ ಅರೆಸ್ಟ್ – Nandini Ghee

ನಂದಿನಿ ತುಪ್ಪ (Nandini Ghee) ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದು ಈ ಪ್ರಕರಣದ ಕಿಂಗ್‌ ಪಿನ್‌ ಗಳಾಗಿದ್‌ ದಂಪತಿಯನ್ನು ಅರೆಸ್ಟ್‌ ಮಾಡಲಾಗಿದೆ. ಶಿವಕುಮಾರ್ ಹಾಗೂ ರಮ್ಯಾ ಬಂಧಿತ ಆರೋಪಿಗಳಾಗಿದ್ದು, ಈ ದಂಪತಿಗಳನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ನಕಲಿ ನಂದಿನಿ ತುಪ್ಪ ತಯಾರಿ ಘಟಕದ ಮೇಲೆ ಸಿಸಿಬಿ ಪೊಲೀಸರ ದಾಳಿ ನಡೆದಿದ್ದ ವೇಳೆ ಕಲಬೆರೆಕೆ ಮಾರಾಟ ಜಾಲ ಬೆಳಕಿಗೆ ಬಂದಿತ್ತು. ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕ ಹೊಂದಿದ್ದ ದಂಪತಿ , ದೊಡ್ಡ … Read more

ಪರಮೇಶ್ವರ್ ದುಡಿದಿರುವ ಕೂಲಿಯೇ ಬಾಕಿಯಿದೆ, ಡಿಕೆಶಿ ಲೆಕ್ಕ ಆಮೇಲೆ – ಮಾಜಿ ಸಚಿವ ಕೆ‌.ಎನ್. ರಾಜಣ್ಣ

ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಕೆಶಿ ನಡುವೆ ತೀವ್ರ ಪೈಪೋಟಿ ನಡುವೆಯೇ ಮಾಜಿ ಸಚಿವ ಕೆಎನ್ ರಾಜಣ್ಣ (Kn Rajanna) ಪ್ರತಿಕ್ರಿಯಿಸಿದ್ದು, ಜಿ ಪರಮೇಶ್ವರ್ ಸಿಎಂ ಆದರೆ ನಾನು ಅವರ ಪರವಾಗಿ ಇದ್ದೇನೆ, ಬದಲಾವಣೆ ಅಂತ ಆದರೆ ಪರಮೇಶ್ವರ್ ಅವರೇ ಸಿಎಂ ಆಗಬೇಕು ಎಂದು ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಕೂಲಿ ಬಗ್ಗೆ ಮಾತನಾಡುವುದಾದರೆ, ಪರಮೇಶ್ವರ್ 2013ರಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದವರು. ಪರಮೇಶ್ವರ್ ಅವರದ್ದು ಹಳೆ ಕೂಲಿ, … Read more

‘ಪ್ಲೀಸ್ ವೇಟ್‌ ಐ ವಿಲ್‌ ಕಾಲ್‌ ಯು’ : ಡಿಸಿಎಂ ಡಿಕೆಶಿಗೆ ರಾಹುಲ್ ಗಾಂಧಿ ಸಂದೇಶ..!

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯ ಪ್ಲೀಸ್ ವೇಟ್‌ ಐ ವಿಲ್‌ ಕಾಲ್‌ ಯು ಅಂತ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ರಾಹುಲ್‌ ಗಾಂಧಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಂದಿನ ಸನ್ನಿವೇಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಇನ್ನೂ ಸಚಿವ … Read more

ಕ್ರಿಕೆಟ್ ತಾರೆ ‘ಸ್ಮೃತಿ ಮಂಧಾನಾ’ಗೆ ಪಲಾಶ್ ಮೋಸ ಮಾಡಿದ್ರಾ.? ಚಾಟ್’ಗಳ ‘ಸ್ಕ್ರೀನ್ಶಾಟ್’ ವೈರಲ್

ಚಲನಚಿತ್ರ ನಿರ್ಮಾಪಕ-ಸಂಯೋಜಕ ಪಲಾಶ್ ಮುಚ್ಚಲ್ ಮತ್ತು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ನವೆಂಬರ್ 23ರ ಭಾನುವಾರದಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವಿವಾಹವಾಗಲು ಸಜ್ಜಾಗಿದ್ದರು. ಅದ್ರಂತೆ, ಮದುವೆ ಕಾರ್ಯಗಳು ಕೂಡ ಆರಂಭವಾಗಿದ್ದವು. ಆದ್ರೆ, ಇದ್ದಕ್ಕಿದ್ದಂತೆ ಸ್ಮೃತಿ ತಂದೆಗೆ ಅನಾರೋಗ್ಯ ಉಂಟಾಗಿದ್ದು ಮದುವೆ ಹಠಾತ್ತನೆ ನಿಂತುಹೋಯಿತು. ಸ್ಮೃತಿಯ ತಂದೆ ಶ್ರೀನಿವಾಸ್ ಮಂಧಾನ ಅವರನ್ನ ಹೃದಯಾಘಾತದ ಲಕ್ಷಣಗಳು ಕಂಡುಬಂದ ನಂತರ ಸರ್ವಿತ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಒಂದು ದಿನದ ನಂತರ, ಹಠಾತ್ ಆರೋಗ್ಯ ಸಮಸ್ಯೆಯ ವರದಿಗಳ ನಂತರ ಪಲಾಶ್ ಅವರನ್ನ … Read more

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್.! ಹೀಗೊಂದು ಬಾಂಬ್ ಹಾಕಿದ್ದು ಯಾರು.?

ನಿನ್ನೆ ಜೇವರ್ಗಿ ಬೈಪಾಸ್ ಬಳಿ ಕಾರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಹಿರಿಯ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿಯವರದ್ದು ಮರ್ಡರ್ ಎಂದು ಬಾಂಬ್ ಹಾಕಲಾಗಿದೆ. ಇಂತಹದ್ದೊಂದು ಆರೋಪ ಮಾಡಿದವರು ಯಾರು ಗೊತ್ತಾ? ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಮಹಂತೇಶ್ ಬೀಳಗಿ, ಅವರ ಸಹೋದರ ಸೇರಿದಂತೆ ಐವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಕಾರಿಗೆ ನಾಯಿ ಅಡ್ಡ ಬಂದಿದ್ದರಿಂದ ತಪ್ಪಿಸಲು ಹೋದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವನ ಸ್ಥಿತಿ ಗಂಭೀರವಾಗಿದೆ. ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಬಚಾವ್ … Read more

ಇದು ‘ಮಹಾಂತೇಶ್ ಬೀಳಗಿ’ ಅವರು ‘IAS ಅಧಿಕಾರಿ’ಯಾದ ಹಿಂದಿನ ಮನಕಲಕುವ ಕತೆ

ಜಿಲ್ಲೆಯಲ್ಲಿ ಅತ್ಯಂತ ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಸಹೋದರರೊಂದಿಗೆ ದುರ್ಮರಣ ಹೊಂದಿದ್ದಾರೆ. ಆದರೇ ತಮ್ಮ ಅಧಿಕಾರಾವಧಿಯಲ್ಲಿ ಒಂದೇ ಒಂದು ರೂಪಾಯಿಗೂ ಲಂಚಕ್ಕೆ ಬೇಡಿಕೆ ಇಡದಂತ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂಬುದು ಅವರನ್ನು ಬಲ್ಲವರ ಮಾತು. ಇದಕ್ಕೊಂದು ಕಾರಣವಿದೆ. ಜೊತೆ ಜೊತೆಗೆ ಅವರು ಐಎಎಸ್ ಅಧಿಕಾರಿಯಾದ ಹಿಂದೆ ಮನಕಲಕುವ ಕತೆ ಇದೆ. ತನಗೆ 5 ವರ್ಷವಿದ್ದಾಗ ತನ್ನ ತಂದೆಯನ್ನು ಮಹಾಂತೇಶ್ ಬೀಳಗಿ ಕಳೆದುಕೊಂಡರು. ಕಡು ಬಡತನದಲ್ಲಿ ತಾಯಿ ಕೂಲಿ ನಾಲಿ ಮಾಡಿ ಮಗ … Read more

ಹಣ ಕೇಳಿ ಹಿಂಸೆ ಕೊಟ್ಟ ಬೀದಿ ಕಾಮಣ್ಣ.. ಬೆಂಗಳೂರಿನ ಹೆಣ್ಣು ಮಕ್ಕಳೇ ಹುಷಾರ್..!

ಬೆಂಗಳೂರಲ್ಲಿ  ಬೀದಿ ಕಾಮಣ್ಣರ ಕಾಟ ಹೆಚ್ಚಾಗಿದ್ದು, ಹೆಣ್ಣು ಮಕ್ಕಳು ಹೆದರಿ ಓಡಾಡೋ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ವೈಟೀಲ್ಡ್ ಬಸ್‌ ಸ್ಟ್ಯಾಂಡ್‌ನಲ್ಲಿ ಯುವತಿಯ ಜತೆ ಕಾಮಿಷ್ಟನೊಬ್ಬ ಅನುಚಿತವಾಗಿ ವರ್ತಿಸಿದ್ದಾನೆ.ಹಣ ಕೊಟ್ಟು ಸಹಾಯ ಮಾಡಿದ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿಯೊಬ್ಬಳ ಬಳಿ ಬಂದು ನಾನು ಮೆಜೆಸ್ಟಿಕ್‌ಗೆ ಹೋಗಬೇಕು 100 ರೂ. ಕೊಡಿ ಎಂದು ಸಹಾಯ ಕೋರಿದ್ದಾನೆ.ಹಣ ಕೊಟ್ಟ ಬಳಿಕ ಬಲವಂತವಾಗಿ ಮೈಮುಟ್ಟಿ, ಹಗ್ ಮಾಡು ಎಂದು ಹಿಂಸೆ ಕೊಟ್ಟಿದ್ದಾನೆ. ಯುವತಿ ಆತನ ಕಷ್ಟಕ್ಕೆ ಕರಗಿ ಹಣ ಕೊಟ್ಟ … Read more

ರೊಟ್ಟಿ ವ್ಯಾಪಾರ ಮಾಡಿ ಮಹಾಂತೇಶ್ ಬೀಳಗಿ ಸಾಕಿದ್ದ ತಾಯಿ, IAS ಅಧಿಕಾರಿ ಹುಟ್ಟೂರಿನಲ್ಲಿ ನೀರವ ಮೌನ

ಐಎಸ್ ಅಧಿಕಾರಿ , ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸರಳ ಹಾಗೂ ಸಜ್ಜನಿಕೆಯ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು ರಾಜ್ಯವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ಕುಟುಂಬಸ್ಥರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಕಲಬರುಗಿಯ ಜೇವರ್ಗಿ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಮೃತಪಟ್ಟಿದ್ದಾರೆ. ಇವರ ಜೊತೆ ಮೂವರು ಸಂಬಂಧಿಕರು ಮೃತಪಟ್ಟಿದ್ದಾರೆ. ಕಡು ಬಡತನದಲ್ಲಿ ಬೆಳೆದ ಮಹಾಂತೇಶ್ ಬೀಳಗಿ ಉನ್ನತ ಸ್ಥಾನಕ್ಕೇರಿದ ಮಾದರಿ ವ್ಯಕ್ತಿತ್ವ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಟೆಯ ಮಹಾಂತೇಶ್ ಬೀಳಗಿ, … Read more

ಭಯ್ಯಾ ಅನ್ನಬೇಡಿ, ಆಟಿಟ್ಯೂಡ್‌ ನಿಮ್ಮ ಜೇಬಲ್ಲಿಡಿ : ಬೆಂಗಳೂರು ಕ್ಯಾಬ್‌ ಚಾಲಕನಿಂದ ಆರು ರೂಲ್ಸ್‌!

ಬೆಂಗಳೂರಿನ ಕ್ಯಾಬ್‌ ಚಾಲಕರೊಬ್ಬರು ಪ್ರಯಾಣಿಕರಿಗಾಗಿ ತಮ್ಮದೇ ಆದ ರೂಲ್ಸ್‌ ಜಾರಿ ಮಾಡಿದ್ದಾರೆ. ಈ ಬಗ್ಗೆ ಪ್ರಯಾಣಿಕರಿಗೆ ತಿಳಿಯಲಿ ಎಂದು ತಮ್ಮ ಕ್ಯಾಬ್‌ನಲ್ಲಿ ರೂಲ್ಸ್‌ ಚಾರ್ಟ್‌ ಕೂಡ ಹಾಕಿದ್ದಾರೆ. ಸದ್ಯ ಈ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಬೆಂಗಳೂರಿನ ಕ್ಯಾಬ್‌ವೊಂದರಲ್ಲಿ ಪ್ರಯಾಣಿಕರಿಗಾಗಿ ಆರು ನಿಯಮಗಳನ್ನು ಒಳಗೊಂಡಿರುವ ಕುತೂಹಲಕಾರಿ ಸೈನ್‌ಬೋರ್ಡ್ ಕಂಡುಬಂದಿದೆ. ರೆಡ್ಡಿಟ್ ಬಳಕೆದಾರರೊಬ್ಬರು ಈ ಫೋಟೋ ಶೇರ್‌ ಮಾಡಿದ್ದಾರೆ. ಇದು ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಜನರು ಕ್ಯಾಬ್ ಚಾಲಕರೊಂದಿಗೆ ಹೇಗೆ ವರ್ತಿಸಬೇಕು? ಎಂಬುದರ ಕುರಿತು ಚರ್ಚೆಯನ್ನು ಹುಟ್ಟುಹಾಕಿದೆ. … Read more