ಪತಿ ಮಾರಾಟ ಮಾಡಿದ ಆಸ್ತಿಯಿಂದ ಪತ್ನಿಗೆ ‘ಜೀವನಾಂಶ’ ಪಡೆಯುವ ಹಕ್ಕಿದೆ : ಹೈಕೋರ್ಟ್ ಮಹತ್ವದ ತೀರ್ಪು

ಹಿಂದೂ ಪತ್ನಿಯು ತನ್ನ ಪತಿಯ ಸ್ಥಿರ ಆಸ್ತಿಯನ್ನು ವರ್ಗಾವಣೆ ಮಾಡಿದ ನಂತರವೂ ಜೀವನಾಂಶವನ್ನು ಪಡೆಯಲು ಅರ್ಹಳಾಗಿದ್ದಾಳೆ ಎಂದು ಕೇರಳ ಹೈಕೋರ್ಟ್ ಬುಧವಾರ ತೀರ್ಪು ನೀಡಿದೆ. ವರ್ಗಾವಣೆಗೆ ಮೊದಲು ಜೀವನಾಂಶಕ್ಕಾಗಿ ಕಾನೂನು ಕ್ರಮಗಳನ್ನು ಪ್ರಾರಂಭಿಸಿದ್ದರೆ ಅಥವಾ ಖರೀದಿದಾರರಿಗೆ ಅವಳ ಹಕ್ಕಿನ ಬಗ್ಗೆ ಸೂಚನೆ ನೀಡಿದ್ದರೆ. ಹಿಂದೂ ದತ್ತು ಮತ್ತು ನಿರ್ವಹಣಾ ಕಾಯ್ದೆ, 1956 ಪತ್ನಿಗೆ ತನ್ನ ಪತಿಯ ಸ್ಥಿರ ಆಸ್ತಿಯಿಂದ ಜೀವನಾಂಶವನ್ನು ಪಡೆಯಲು ಅನುಮತಿಸುತ್ತದೆಯೇ ಎಂಬ ವಿಷಯದ ಕುರಿತು ಸಂಘರ್ಷದ ತೀರ್ಪುಗಳನ್ನು ಗಮನಿಸಿದ ವಿಭಾಗೀಯ ಪೀಠವು ಮಾಡಿದ ಉಲ್ಲೇಖದ … Read more

ಹಾಲಾಯ್ತು ಹಾಲಾಹಾಲ – ರಾಸಾಯನಿಕ ಬಳಸಿ ನಕಲಿ ಹಾಲು ತಯಾರಿಕೆ ಮಾಡ್ತಿದ್ದ ಖದೀಮರು ಅರೆಸ್ಟ್‌!

ರಾಸಾಯನಿಕ ವಸ್ತುಗಳನ್ನು ಬಳಸಿ ನಕಲಿ ಹಾಲು (Milk) ತಯಾರು ಮಾಡುತ್ತಿದ್ದ ಅಡ್ಡೆಯ ಮೇಲೆ ಪೊಲೀಸರು (KGF Police) ದಾಳಿ ನಡೆಸಿ, ಐವರನ್ನು ಬಂಧಿಸಿರುವ ಘಟನೆ ಕೋಲಾರ (Kolara) ಜಿಲ್ಲೆಯಲ್ಲಿ ನಡೆದಿದೆ. ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಶೆಡ್‌ ಒಂದರಲ್ಲಿ ಅಕ್ರಮವಾಗಿ ಕಲಬೆರಕೆ ಹಾಲು ತಯಾರಿಸಲಾಗುತ್ತಿತ್ತು. ಕೆಜಿಎಫ್‌ ಪೊಲೀಸರು ನಕಲಿ ಹಾಲನ್ನು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ದಾಳಿ ಮಾಡಿ ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಂಧ್ರಪ್ರದೇಶ ಮೂಲದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಎಂದು ಗುರುತಿಸಲಾಗಿದೆ. … Read more

ಮೊಬೈಲ್ ಬಳಕೆದಾರರೇ ಎಚ್ಚರ : ಕುತ್ತಿಗೆಯಲ್ಲೇ ‘ಬ್ಲೂಟೂತ್ ನೆಕ್ ಬ್ಯಾಂಡ್’ ಸ್ಪೋಟಗೊಂಡು ಯುವಕ ಸಾವು.!

ಇತ್ತೀಚಿನ ದಿನಗಳಲ್ಲಿ, ಹೆಚ್ಚಿನ ಜನರು ಫೋನ್ನಲ್ಲಿ ಮಾತನಾಡಲು ಬ್ಲೂಟೂತ್ ನೆಕ್ಬ್ಯಾಂಡ್ಗಳು ಮತ್ತು ಇಯರ್ಬಡ್ಗಳನ್ನು ಬಳಸುತ್ತಿದ್ದಾರೆ. ನೀವು ಈ ಸಾಧನಗಳನ್ನು ಜನರ ಕಿವಿಗಳಲ್ಲಿ ಸುಲಭವಾಗಿ ನೋಡಬಹುದು. ಏತನ್ಮಧ್ಯೆ, ಕಳೆದ ಕೆಲವು ವರ್ಷಗಳಲ್ಲಿ ಇಯರ್ಫೋನ್ಗಳ ಪ್ರವೃತ್ತಿಯೂ ಗಮನಾರ್ಹವಾಗಿ ಹೆಚ್ಚಾಗಿದೆ.ಜನರು ಈಗ ವೈರ್ಡ್ ಇಯರ್ಫೋನ್ಗಳ ಬದಲಿಗೆ ಪೋರ್ಟಬಲ್ ಇಯರ್ ಫೋನ್ಗಳನ್ನು ಬಳಸುತ್ತಿದ್ದಾರೆ. ಜನರು ಆ ಜಟಿಲವಾದ ತಂತಿಗಳಿಗಿಂತ ಇಯರ್ ಫೋನ್ ಗಳು ಅಥವಾ ಇಯರ್ ಬಡ್ ಗಳನ್ನು ಚಾರ್ಜ್ ಮಾಡಲು ಬಯಸುತ್ತಾರೆ. ಈ ಇಯರ್ಫೋನ್ಗಳನ್ನು ಬಳಸಲು ತುಂಬಾ ಸುಲಭ, ಆದರೆ ಕಳೆದ … Read more

ಕೋಲಾರದ ನರ್ಸ್ ಸುಜಾತಾ ಮರ್ಡರ್ : 2 ಮಕ್ಕಳ ತಂದೆಯನ್ನು ಲವ್ ಮಾಡಿ ರಸ್ತೆ ಮಧ್ಯದಲ್ಲೇ ಹೆಣವಾದಳು.!

ಕೋಲಾರದಲ್ಲಿ ವಿವಾಹಿತ ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕೆಲಸಕ್ಕೆ ತೆರಳುತ್ತಿದ್ದ ನರ್ಸ್ ಸುಜಾತಾ ಕೊಲೆಗಿದ್ದು, ಪರಾರಿಯಾಗಲು ಯತ್ನಿಸಿದ ಆರೋಪಿ ಚಿರಂಜೀವಿಯನ್ನು ಸ್ಥಳೀಯರು ಹಿಗ್ಗಾಮುಗ್ಗ ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಪ್ರೀತಿ ಹಾಗೂ ಹಣಕಾಸಿನ ವ್ಯವಹಾರದ ನಡುವೆ ಉಂಟಾದ ವಿರಸವು ಕೊಲೆಯಲ್ಲಿ ಅಂತ್ಯವಾಗಿರುವ ಘೋರ ಘಟನೆ ಕೋಲಾರ ನಗರದ ಹೊರವಲಯದ ಬಂಗಾರಪೇಟೆ ಬ್ರಿಡ್ಜ್ ಬಳಿ ನಡೆದಿದೆ. ತನ್ನನ್ನು ಪ್ರೀತಿಸುತ್ತಿದ್ದ ಯುವತಿಯನ್ನೇ ಪ್ರಿಯಕರ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬಂಗಾರಪೇಟೆ ತಾಲ್ಲೂಕಿನ ದಾಸರಹೊಸಹಳ್ಳಿ … Read more

ಪತ್ನಿಗೆ ವಂಚಿಸಿ ಟೆಕ್ಕಿ ಪತಿ ಅಕ್ರಮ ಸಂಬಂಧ : ಪ್ರೇಯಸಿ ಜೊತೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ಸಿಕ್ಕಿಬಿದ್ದ!

ಪತ್ನಿಗೆ ಮೋಸ ಮಾಡಿ ಪ್ರೇಯಸಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಟೆಕ್ಕಿ ಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಪತ್ನಿಗೆ ಜಾತಿ ನಿಂದನೆ, ಹಲ್ಲೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಆರೋಪಿ ಟೆಕ್ಕಿ ಜೆಡ್ರೆಲಾ ಜಾಕೂಬ್ ಆರೂಪ್ನನ್ನು ಬೆಂಗಳೂರು ಡಿಸಿಆರ್‌ಇ ಪಶ್ಚಿಮ ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಎರಡು ವರ್ಷಗಳಿಂದ ಜಾಕೂಬ್ ತನ್ನ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಪತ್ನಿ ಖಾಸಗಿ ಸಂಸ್ಥೆಯಲ್ಲಿ ಪ್ರತಿಷ್ಠಿತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ರೂಪಾಯಿ ಸಂಬಳ ಪಡೆಯುತ್ತಿದ್ದರು. ಆದರೆ, ಜಾಕೂಬ್‌ಗೆ ಉದ್ಯೋಗ … Read more

ಶಬರಿಮಲೆಗೆ ಹೋಗಿ ಬಂದ, ಬಳಿಕ ಪತ್ನಿ ಕೊಂದ : ಸಿನಿಮಾ ಸ್ಟೈಲ್ನಲ್ಲಿ ನಡೀತು ಹತ್ಯೆ!

ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ್ದಕ್ಕೆ ಮೊದಲ‌ ಪತ್ನಿಯನ್ನ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನಜಿಲ್ಲೆ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ಪತ್ನಿ ರಾಧಾ(40) ಮೃತ ದುರ್ದೈವಿಯಾಗಿದ್ದು, ಶವವನ್ನು ಪತಿ ನದಿಗೆ ಎಸೆದಿದ್ದ ಎನ್ನಲಾಗಿದೆ. ಜನವರಿ 10ರರಂದು ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 22 ವರ್ಷಗಳ ಹಿಂದೆ ಕುಮಾರ ಜೊತೆ ರಾಧಾ ವಿವಾಹವಾಗಿತ್ತು. ಆದರೆ ತನ್ನ ಮೇಲೆ ಕುಮಾರ ಅನುಮಾನ ಪಡುತ್ತಿದ್ದ ಕಾರಣ ಕಳೆದ 8 ವರ್ಷಗಳಿಂದ ಪತಿಯಿಂದ ರಾಧಾ ಬೇರೆಯಾಗಿ ವಾಸ ಮಾಡುತ್ತಿದ್ದರು. … Read more

ಪೋಷಕರೇ ಎಚ್ಚರ : ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ಸಾವು.!

ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು 3 ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ವೈರಾ ಪುರಸಭೆಯ ಇಂದಿರಮ್ಮ ಕಾಲೋನಿಯಲ್ಲಿ ನಡೆದಿದೆ. ಛೇ..ನಿಜಕ್ಕೂಈ ಇಂತಹ ಘಟನೆಗಳು ನಡೆಯಬಾರದು. ಇಂತಹ ಘಟನೆಗಳು ನಡೆಯದಂತೆ ಪೋಷಕರು ಎಚ್ಚರ ವಹಿಸಬೇಕು. ಶತ್ರು ಕೂಡ ಇಂತಹ ಕಷ್ಟವನ್ನು ಎದುರಿಸಬಾರದು.ಬಾಲಕಿ ತಿಂಗಳುಗಟ್ಟಲೆ ಸಾವು ಬದುಕಿನ ನಡುವೆ ಹೋರಾಡಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದೆ. ಇಂದಿರಮ್ಮ ಕಾಲೋನಿಯ ಮುನಗಲ ಸಿಂಹಾದ್ರಿ ಮತ್ತು ಸರೋಜನಿ ದಂಪತಿಗಳು ಹಳೆಯ ಪಾತ್ರೆಗಳನ್ನು ವ್ಯಾಪಾರ ಮಾಡುವ ಮೂಲಕ ಜೀವನ ಸಾಗಿಸುತ್ತಿದ್ದರು. … Read more

ಅನ್ಯಕೋಮಿನ ಯುವಕನೊಂದಿಗೆ 3 ಮಕ್ಕಳ ತಾಯಿ ಲವ್ವಿಡವ್ವಿ : ಖಾಜಾನ ಪ್ರೀತಿಗೆ ಮನಸೋತು ಹೆಣವಾದಳು

ಆಕೆ ಮೂರು ಮಕ್ಕಳ ತಾಯಿ (mother). ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದರು. ರೈಲ್ವೆ ಸ್ಟೇಷನ್ನಲ್ಲಿ ಸ್ಟಾಲ್‌‌ವೊಂದರಲ್ಲಿ ಕೆಲಸ ಮಾಡಿಕೊಂಡು ತಮ್ಮ ಜೀವನ ಸಾಗಿಸುತ್ತಿದ್ದರು. ತಾವಾಯ್ತು ತಮ್ಮ ಕುಟುಂಬವಾಯ್ತು ಅಂತಾ ಇದ್ದವರಿಗೆ ಯುವಕನೊಬ್ಬನ ಪರಿಚಯವಾಗಿದೆ. ಪರಿಚಯ ಸಲುಗೆಗೆ ತಿರುಗಿ ಯಾರಿಗೂ ಗೊತ್ತಾಗದ ಹಾಗೆ ನಾಲ್ಕು ತಿಂಗಳ ಹಿಂದೆ ಮದುವೆ ಆಗಿದ್ದರು. ಆದರೆ ಅವರಿಬ್ಬರ ನಡುವೆ ಅದೇನಾಯ್ತು ಏನೋ, ಕತ್ತು ಕೊಯ್ದು ಭೀಕರ ಕೊಲೆ (Murder)  ಮಾಡಿದ್ದ. ನಡೆದದ್ದೇನು? ಉಮಾ (32) ಅವರಿಗೆ 12 ವರ್ಷಗಳ ಹಿಂದೆ ಮದುವೆಯಾಗಿತ್ತು. … Read more

ಪ್ರೀತಿಸಿ ಮದ್ವೆಯಾಗಿದ್ರೂ ಮತ್ತೊಬ್ಬಳ ಜತೆ ಲವ್ವಿಡವ್ವಿ : ಪ್ರಶ್ನಿಸಿದ ಹೆಂಡ್ತಿಗೆ ಚಟ್ಟ ಕಟ್ಟಿದ

ಎರಡನೇ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪತ್ನಿಯ (wife) ಕತ್ತು ಹಿಸುಕಿ ಪತಿ ಕೊಲೆ (murder) ಮಾಡಿರುವಂತಹ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಪಂಡರಹಳ್ಳಿ ಕ್ಯಾಂಪ್ನಲ್ಲಿ ನಡೆದಿದೆ. ಜ.11ರಂದು ಮನೆಯಲ್ಲಿ ಉಸಿರುಗಟ್ಟಿಸಿ ಚಂದನಾಬಾಯಿ ಅನ್ನು ಪತಿ ಗೋಪಿ ಕೊಲೆ ಮಾಡಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹೊಳೆಹೊನ್ನೂರು ಪೊಲೀಸರ ತನಿಖೆ ವೇಳೆ ಗೋಪಿ ಸಿಕ್ಕಿಬಿದಿದ್ದು, ಇದೀಗ ಆತನ ಬಂಧನವಾಗಿದೆ. ನಡೆದದ್ದೇನು? ಡಿ.ಬಿ.ಹಳ್ಳಿಯ ಲಂಬಾಣಿ ಸಮುದಾಯದ ಚಂದನಾಬಾಯಿ ಮತ್ತು ಪಂಡರಹಳ್ಳಿಯ ಬೋವಿ ಸಮಾಜದ ಗೋಪಿ ಪರಸ್ಪರ ಬೇರೆ ಜಾತಿಯವರಾಗಿದ್ದು, ಇಬ್ಬರು … Read more

ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲು, ಅವರನ್ನೇ ಪಕ್ಷದವರು ಪಾಲಿಸ್ತಿದ್ದಾರೆ : ಮಾಜಿ ಸಂಸದ ಪ್ರತಾಪ್ ಸಿಂಹ

ಶಿಡ್ಲಘಟ್ಟದ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡನಿಂದ ಧಮ್ಕಿ ಹಾಕಿದ ಘಟನೆ ನಡೆದಿತ್ತು.. ಈ ಬಗ್ಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ಅಧಿಕಾರಿಗೆ ಧಮ್ಕಿ ಹಾಕಿದ ಪುಡಾರಿಯನ್ನು ಒದ್ದು ಒಳಗೆ ಹಾಕಿ. ಸಿಎಂ ಸಿದ್ದರಾಮಯ್ಯನವರ ಬಾಯಿಯೇ ಬಚ್ಚಲಾಗಿದೆ. ಅವರೇ ಯಾರಿಗೂ ಮರ್ಯಾದೆ ಕೊಡೋದಿಲ್ಲ. ಇದನ್ನೇ ಅವರ ಪಕ್ಷದವರು ಅನುಸರಿಸುತ್ತಿದ್ದಾರೆ ಎಂದು ಹೇಳಿದರು. ಶಿಡ್ಲಘಟ್ಟ ನಗರದಲ್ಲಿಕಲ್ಟ್‌ ಸಿನಿಮಾ ಪ್ರಚಾರದ ಬ್ಯಾನರ್‌ಅನ್ನು ತೆರವುಗೊಳಿಸಿದ್ದಕ್ಕೆ ಕುಪಿತಗೊಂಡ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡ, ನಗರಸಭೆ ಪೌರಾಯುಕ್ತೆಗೆ ಮೊಬೈಲ್‌ ಕರೆ ಮಾಡಿ ಧಮ್ಕಿ ಹಾಕಿ ಅವಾಚ್ಯ ಶಬ್ದಗಳಿಂದ … Read more