ಮೂವರು ಸಹೋದರರು ದುರಂತ ಸಾವು : IAS ಅಧಿಕಾರಿ ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರೂ ಉಳಿಯಲಿಲ್ಲ ಜೀವಗಳು, ಸಿಎಂ ಸೇರಿ ಹಲವರಿಂದ ಸಂತಾಪ

ಕಲಬುರಗಿ ಜಿಲ್ಲೆಯ ಜೀವರ್ಗಿ ತಾಲೂಕಿನ ಗೌನಹಳ್ಳಿ ಕ್ರಾಸ್ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದಾರೆ. 51 ವರ್ಷದ ಬೀಳಗಿ ಅವರು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಏಕಾಏಕಿ ನಾಯಿ ಅಡ್ಡ ಬಂದಿದ್ದು, ಅದನ್ನು ಉಳಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ … Read more

6 ತಿಂಗ್ಳ ನಂತ್ರ ಮನೆಗೆ ಮರಳಿದ ಪುಟ್ಟ ದೇವತೆ, ಹೆತ್ತವರಿಗೆ ಮರು ಜೀವ ಕೊಟ್ಟ ಮುಂಬೈ ಪೊಲೀಸ್‌ಗೆ ಆನಂದ್ ಮಹೀಂದ್ರಾ ಶ್ಲಾಘನೆ

ಮೇ ತಿಂಗಳಿನಿಂದ ಕಾಣೆಯಾಗಿದ್ದ ಬಾಲಕಿಯನ್ನು ಆಕೆಯ ಹೆತ್ತವರೊಂದಿಗೆ ಮತ್ತೆ ಸೇರಿಸಿದ ಮುಂಬೈ ಪೊಲೀಸರ ಕಾರ್ಯಕ್ಕೆ ಭಾರತೀಯ ಉದ್ಯಮಿ ಮತ್ತು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು X ನಲ್ಲಿ ಶ್ಲಾಘಿಸಿದ್ದಾರೆ. ಈ ಪೋಸ್ಟ್‌ನಲ್ಲಿ ಮುಂಬೈ ಪೊಲೀಸರ ಬದ್ಧತೆಯನ್ನ ಕೊಂಡಾಡಲಾಗಿದೆ. ಅಂದ ಹಾಗೆ ಮೂಲ ಪೋಸ್ಟ್ ಅನ್ನು ಮೋಹಿನಿ ಮಹೇಶ್ವರಿ ಎಂಬ ಬಳಕೆದಾರರು ಹಂಚಿಕೊಂಡಿದ್ದು, ಮುಂಬೈ ಪೊಲೀಸರನ್ನು ಶ್ಲಾಘಿಸುತ್ತಾ “ಕೆಲವು ಅಧಿಕಾರಿಗಳು ತಮ್ಮ ಶರ್ಟ್ ಜೇಬಿನಲ್ಲಿ ಬಾಲಕಿಯ ಫೋಟೋವನ್ನು ಸ್ವಂತ ಮಗುವಿನದ್ದೇನೋ ಎಂಬಂತೆ ಇಟ್ಟುಕೊಂಡು ಓಡಾಡಿದರು. ನಗರದಾದ್ಯಂತ … Read more

ರಾಜ್ಯ ರಾಜಕಾರಣ ಕುರಿತು ಹೈಕಮಾಂಡ್ ನಿರ್ಧಾರ ಎಂದ ಖರ್ಗೆ : ಸುಮ್ಮನೆ ನಾಮಕಾವಸ್ತೆಗೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದೀರಿ ಎಂದು BJP-JDS ವ್ಯಂಗ್ಯ

ರಾಜ್ಯ ರಾಜಕಾರಣದ ಪರಿಸ್ಥಿತಿ ಬಗ್ಗೆ “ನನಗೇನೂ ಗೊತ್ತಿಲ್ಲ, ನನ್ನನೇನೂ ಕೇಳಬೇಡಿ” ಎನ್ನುವ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಲ್ಲಿರುವ ಅಸಹಾಯಕತೆ ಕಾಂಗ್ರೆಸ್ ಪಕ್ಷದಲ್ಲಿ ಅವರಿಗಿರುವ ನಿಜವಾದ ಸ್ಥಾನಮಾನವನ್ನು ತೋರಿಸುತ್ತದೆ. ರಾಜ್ಯ ರಾಜಕಾರಣ ಕುರಿತು ನನಗೇನು ಗೊತ್ತಿಲ್ಲ, ನನ್ನೇನು ಕೇಳಬೇಡಿ, ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆಯವರು ಸೋಮವಾರ ಹೇಳಿದ್ದು, ಈ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಕುರಿತು ಬಿಜೆಪಿ ಹಾಗೂ ಜೆಡಿಎಸ್ ವ್ಯಂಗ್ಯವಾಡಿದೆ. ಖರ್ಗೆ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನಸಭೆ ವಿರೋಧ … Read more

ಅರುಣಾಚಲ ಭಾರತದ್ದಲ್ಲ, ಚೀನಾ ಭಾಗ, ಏರ್ ಪೋರ್ಟ್ ನಲ್ಲಿ ಭಾರತೀಯಳಿಗೆ ಪ್ರಯಾಣ ನಿರಾಕರಿಸಿದ ಚೀನಾ.!

ಭಾರತದ ಪಾಸ್ಪೋರ್ಟ್ ಹೊಂದಿದ್ದ ಅರುಣಾಚಲಪ್ರದೇಶ ಮೂಲದ ಮಹಿಳೆಯೊಬ್ಬರನ್ನು ಚೀನಾದ ಶಾಂಘೈ ಏರ್ಪೋರ್ಟ್ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ. ಈ ಅರುಣಾಚಲ ಪ್ರದೇಶಕ್ಕಾಗಿ ಚೀನಾ ಸದಾ ಭಾರತದ ವಿರುದ್ದ ಕತ್ತಿ ಮಸೆಯುತ್ತಿದೆ.ಇದೀಗ ಲಂಡನ್‌ನಿಂದ ಜಪಾನ್‌ಗೆ ಪ್ರಯಾಣ ಬೆಳೆಸಿದ ಭಾರತೀಯ ಮಹಿಳೆಗೆ ಚೀನಾದ ಶಾಂಘೈ ವಿಮಾನ ನಿಲ್ದಾಣದಲ್ಲಿ ಪ್ರಯಾಣ ಮುಂದುವರಿಸಲು ಅವಕಾಶ ನೀಡಿಲ್ಲ. ಕಾರಣ ಅರುಣಾಚಲ ಭಾರತದ ಭಾಗ, ನಿಮ್ಮ ಪಾಸ್‌ಫೋಸ್ ಇನ್‌ವ್ಯಾಲಿಡ್ ಎಂದು ಕಿರುಕುಳ ನೀಡಿದ ಘಟನೆ ನಡದಿದೆ. … Read more

ಪೋಷಕರಿಲ್ಲದ ವೇಳೆ ಮನೆಗೆ ತೆರಳಿ ವಿದ್ಯಾರ್ಥಿನಿ ಮೇಲೆ ಲೈ0ಗಿಕ ದೌರ್ಜನ್ಯ, ದೈಹಿಕ ಶಿಕ್ಷಕ ಅರೆಸ್ಟ್

ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಮೊದಲೇ ಸ್ಕೆಚ್ ಹಾಕುತ್ತಿದ್ದ. ವಿದ್ಯಾರ್ಥಿನಿಯನ್ನು ಬಲೆಗೆ ಬೀಳಿಸಲು ಹಲವು ಆಮಿಷ, ಜೀವ ಬೆದರಿಕೆ ಒಡ್ಡುತ್ತಿದ್ದ. ಬಳಿಕ ಪೋಷಕರಿಲ್ಲದ ವೇಳೆ ವಿದ್ಯಾರ್ಥಿನಿಯ ಮನೆಗೆ ತೆರಳಿ ಲೈ0ಗಿಕ ದೌರ್ಜನ್ಯ ನಡೆಸುತ್ತಿದ್ದ ದೈಹಿಕ ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ. ಉತ್ತರಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಘಟನೆ ನಡದಿದೆ. ಈ ವಿಚಾರ ಬಹಿರಂಗಪಡಿಸಿದರೆ ಕೊಲ್ಲುವುದಾಗಿ ಜೀವ ಬೆದರಿಕ ಹಾಕಿ ನಿರಂತರವಾಗಿ ಲೈ0ಗಿಕ ದೌರ್ಜನ್ಯ ಎಸಗಿದ್ದಾನೆ. ದೈಹಿಕ ಶಿಕ್ಷಕ ಕಿರಣ ಟೋಪೋಜಿ ಬಂಧಿತ ಆರೋಪಿ ಮುಂಡಗೋಡದ ಪ್ರತಿಷ್ಠಿತ ಖಾಸಗಿ ಪ್ರೌಢ ಶಾಲೆಯ … Read more

ಸಿದ್ದರಾಮಯ್ಯನವರು ನಮ್ಮ ಪಕ್ಷಕ್ಕೆ ದೊಡ್ಡ ಆಸ್ತಿ ಎಂದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

‘ಸಿದ್ದರಾಮಯ್ಯನವರು ಹೇಳಿದ ಮೇಲೆ ಅದೇ ನಮಗೆ ವೇದವಾಕ್ಯ. ಅವರ ಮಾತಿಗೆ ಗೌರವ ನೀಡುತ್ತೇನೆ. ಸಿದ್ದರಾಮಯ್ಯ ನಮ್ಮ ಪಕ್ಷಕ್ಕೆ ದೊಡ್ಡ ಆಸ್ತಿ. ಅವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನಾವೆಲ್ಲರೂ ಹೈಕಮಾಂಡ್ ಮೇಲೆ ಗೌರವವನ್ನು ಇಟ್ಟಿದ್ದೇವೆ. ಅಧಿಕಾರ ಹಂಚಿಕೆ ಬಗ್ಗೆ ನಾನಾಗಲಿ ಯಾರೂ ಮಾತನಾಡಿಲ್ಲ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಸೋಮವಾರ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಮಾಧ್ಯಮದವರು ಅನವಶ್ಯಕವಾಗಿ ಇದರ ಬಗ್ಗೆ ಸುದ್ದಿ ಮಾಡುತ್ತಿದ್ದು, ಗೊಂದಲ ಮೂಡಿಸುತ್ತಿದ್ದಾರೆ. ನನಗೂ ಹಾಗೂ … Read more

ವಂದೇ ಭಾರತ್ ರೈಲಿಗೆ ಸಿಲುಕಿದ ಪ್ರೇಮಿಗಳು, ಸಿನಿಮಾ ಸ್ಟೈಲ್ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಜೋಡಿಹಕ್ಕಿ?

ಚಿಕ್ಕಬಾಣಾವರ ರೈಲು ನಿಲ್ದಾಣದಲ್ಲಿ ದಾರುಣ ಘಟನೆಯೊಂದು ನಡೆದಿದೆ. ವಂದೇ ಭಾರತ್‌ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಕೇರಳ ಮೂಲದ ಇಬ್ಬರು ನರ್ಸಿಂಗ್‌ ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ವಿದ್ಯಾರ್ಥಿ ಜಸ್ಟಿನ್ ಜೋಸೆಫ್ (21) ಹಾಗೂ ವಿದ್ಯಾರ್ಥಿನಿ ಸ್ಟೆರಿನ್ ಎಲ್ಜಾ ಸಜಿ (19) ಮೃತರು. ಘಟನೆ ಸಂಬಂಧ ಬೆಂಗಳೂರು ಗ್ರಾಮಾಂತರ ರೈಲ್ವೇ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇರಳದ ಪಟ್ಟನಂತಿಟ್ಟ ಮೂಲದವರಾದ ಇಬ್ಬರೂ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಎಸ್‌ಸಿ ನರ್ಸಿಂಗ್ ಎರಡನೇ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. … Read more

ಖರ್ಗೆ – ಕೆ ಜೆ ಜಾರ್ಜ್ ಭೇಟಿಯ ನಂತರ ಎಲ್ಲವೂ ಸುಸೂತ್ರ – ರಾಹುಲ್ ಸಮ್ಮುಖದಲ್ಲಿ ನಾಳೆ (ನ.25) ಫೈನಲ್?

ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಬದಲಾವಣೆ ಎನ್ನುವ ಗೊಂದಲಕ್ಕೆ ಇನ್ನೆರಡು ದಿನಗಳಲ್ಲಿ ಪರಿಹಾರ ಸಿಗುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ವಿದೇಶದಿಂದ ಹಿಂದಿರುಗುತ್ತಲೇ, ಎಲ್ಲಾ ಗೊಂದಲಕ್ಕೂ ಫುಲ್ ಸ್ಟಾಪ್ ಬೀಳಬಹುದು. ವಿದೇಶ ಪ್ರವಾಸದಿಂದ ರಾಹುಲ್ ಗಾಂಧಿ ಇಂದು (ನ. 24) ದೆಹಲಿಗೆ ವಾಪಸ್ ಆಗಲಿದ್ದಾರೆ. ನಾಳೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ರಾಹುಲ್ ಗಾಂಧಿ ಭೇಟಿಗೆ ಸಮಯವನ್ನು ಕೇಳಿದ್ದಾರೆಂದು ವರದಿಯಾಗಿದೆ. ಹಾಗಾಗಿ, ಇನ್ನೆರಡು ದಿನಗಳಲ್ಲಿ ಎಲ್ಲವೂ ಸುಸೂತ್ರವಾಗಿ ಇತ್ಯರ್ಥವಾಗಲಿದೆ. ಇಂಧನ ಇಲಾಖೆಯ … Read more

ಮದುವೆಗೆ ಸಂಬಂಧಿಸಿದ ಎಲ್ಲ ಪೋಸ್ಟ್‌ಗಳನ್ನು ಅಳಿಸಿದ ಸ್ಮೃತಿ ಮಂಧಾನ; ಅನುಮಾನಕ್ಕೀಡಾದ ಜೆಮಿಮಾ ರೊಡ್ರಿಗಸ್ ನಡೆ!

ಮದುವೆಯ ಸಂಭ್ರಮದಲ್ಲಿರಬೇಕಾಗಿದ್ದ ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ ಇದೀಗ ಅನಿರೀಕ್ಷಿತ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಅವರ ತಂದೆ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಾದ ಬಳಿಕ ತಮ್ಮ ಮದುವೆಗೆ ಸಂಬಂಧಿಸಿದ ಆಚರಣೆಗಳ ಎಲ್ಲ ಇನ್‌ಸ್ಟಾಗ್ರಾಂ ಪೋಸ್ಟ್‌ಗಳನ್ನು ತೆಗೆದುಹಾಕಿದ್ದುು, ಇದೀಗ ವ್ಯಾಪಕ ಕುತೂಹಲ ಮನೆಮಾಡಿದೆ. ಅಲ್ಲದೆ, ತಮ್ಮ ಭಾವಿ ಪತಿಯಾದ ಪಲಾಶ್ ಮುಚ್ಚಲ್ ಕೂಡ ಆರೋಗ್ಯ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಬಳಿಕ ಬಿಡುಗಡೆಯಾಗಿದ್ದಾರೆ. ಇದೀಗ ಸ್ಮೃತಿ ಅವರು ಮದುವೆ ಮತ್ತು ನಿಶ್ಚಿತಾರ್ಥಕ್ಕೆ ಸಂಬಂಧಿಸಿದ ಎಲ್ಲ ವಿಡಿಯೋಗಳನ್ನು, ಪಲಾಶ್ ಅವರು … Read more

SHOCKING : ಬೆಂಗಳೂರಲ್ಲಿ ‘ಮಹಿಳಾ ಪೈಲಟ್’ ಮೇಲೆ ಸಹೋದ್ಯೋಗಿಯಿಂದ ಅತ್ಯಾಚಾರ : ‘FIR’ ದಾಖಲು.!

ಬೆಂಗಳೂರಿನಲ್ಲಿ ಕರ್ತವ್ಯದ ವೇಳೆ ಸಹ ಪೈಲಟ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳಾ ಪೈಲಟ್ ಆರೋಪಿಸಿದ್ದಾರೆ. ಆರಂಭದಲ್ಲಿ ಪ್ರಕರಣವನ್ನು ಹೈದರಾಬಾದ್ನಲ್ಲಿ ದಾಖಲಿಸಲಾಗಿತ್ತು ಮತ್ತು ನಂತರ ಹೆಚ್ಚಿನ ತನಿಖೆಗಾಗಿ ಬೆಂಗಳೂರು ಪೊಲೀಸರಿಗೆ ವರ್ಗಾಯಿಸಲಾಗಿದೆ.ದೂರಿನ ಪ್ರಕಾರ, ನವೆಂಬರ್ 18 ರಂದು ಮಹಿಳಾ ಸಹ ಪೈಲಟ್ ಮತ್ತು ಇಬ್ಬರು ಪುರುಷ ಪೈಲಟ್ಗಳು ಬೇಗಂಪೇಟೆ ವಿಮಾನ ನಿಲ್ದಾಣದಿಂದ ಪುಟ್ಟಪರ್ತಿ ಮೂಲಕ ಬೆಂಗಳೂರಿಗೆ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸಿದರು.ಮರುದಿನ ಅವರು ಮತ್ತೊಂದು ವಿಮಾನವನ್ನು ಚಲಾಯಿಸಲು ನಿರ್ಧರಿಸಲಾಗಿದ್ದರಿಂದ, ಮೂವರೂ ರಾತ್ರಿ ಒಂದೇ ಹೋಟೆಲ್ನಲ್ಲಿ ಉಳಿದುಕೊಂಡರು. … Read more