ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ ಎಂದ ಬಿಜೆಪಿ ಎಂಎಲ್ ಸಿ ಎಚ್ ವಿಶ್ವನಾಥ್ ಹೊಸ ಬಾಂಬ್

ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗುತ್ತಿರುವಾಗಲೇ ಬಿಜೆಪಿ ಎಂಎಲ್ ಸಿ ಎಚ್ ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ. ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಸಿದ್ದರಾಮಯ್ಯ ಆಣೆ ಮಾಡಿದ್ರು ಎಂದಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವಿನ ಕುರ್ಚಿ ತಿಕ್ಕಾಟದ ವಿಚಾರದ ಬಗ್ಗೆ ಎಚ್ ವಿಶ್ವನಾಥ್ ಹೊಸ ವಿಚಾರವನ್ನು ಹೊರಹಾಕಿದ್ದಾರೆ.ದೆಹಲಿಯಲ್ಲಿ ಕೊಟ್ಟ ಮಾತಿನಂತೆ ಸಿದ್ದರಾಮಯ್ಯ ನಡೆದುಕೊಳ್ಳಬೇಕು. ವಚನ ಭ್ರಷ್ಟರಾಗಬಾರದು ಎಂದು ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಉಪಸ್ಥಿತಿಯಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ತಲೆಮೇಲೆ … Read more

ಡಿಕೆ ಶಿವಕುಮಾರ್ ಸಂಪರ್ಕದಲ್ಲಿದ್ದಾರಾ ಅಮಿತ್ ಶಾ.? ಸ್ಪಷ್ಟನೆ ಕೊಟ್ಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಕರ್ನಾಟಕ ರಾಜ್ಯ ರಾಜಕಾರಣ ದೇಶದಲ್ಲೇ ಸದ್ದು ಮಾಡುತ್ತಿದೆ. ಪ್ರಮುಖವಾಗಿ ಮುಖ್ಯಮಂತ್ರಿ ಬದಲಾವಣೆ, ಎರಡು ಬಣಗಳ ನಾಯಕರ ಸತತ ಸಭೆ, ಹೈಕಮಾಂಡ್ ಭೇಟಿಗಳಿಂದಾಗಿ ದೇಶದಲ್ಲಿ ರಾಜ್ಯದ ರಾಜಕೀಯ ಬೆಳವಣಿಗೆಯನ್ನು ಹಲವರು ಕೂತೂಹಲ ಕಣ್ಣಿನಿಂದ ನೋಡುತ್ತಿದ್ದಾರೆ. ಒಂದೆಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಎಂದಿದ್ದಾರ, ಮತ್ತೊಂದೆಡೆ ಡಿಕೆ ಶಿವಕುಮಾರ್ ದೊಡ್ಡವರು ಹೇಳಿದ ಮೇಲೆ ಚಿಕ್ಕವರಾದ ನಾವು ನಮ್ರತೆಯಿಂದ ಇರಬೇಕು ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪ ಮುಖ್ಯಮಂತ್ರಿ ಡಿಕೆ … Read more

ಮೆಕ್ಯಾನಿಕ್ ರೂಬೆನ್ ಹುಡುಕಿ ಬರುವ ಕಾಡುಹಂದಿ! ಪ್ರಾಣಿಗಳಿಗೆ ದಿನವೂ ಅನ್ನ ಹಾಕುವ ರೂಬೆನ್

ಕುದುರೆಮುಖ ಕಾಡಂಚಿನಲ್ಲಿ ಇಡೀ ಜೀವನವನ್ನು ಪ್ರಾಣಿಗಳಿಗಾಗಿ ಮೀಸಲಿಟ್ಟಿರುವ ಮೆಕ್ಯಾನಿಕ್ ಒಬ್ಬರು, ಸದ್ದಿಲ್ಲದೆ ಅವುಗಳೊಂದಿಗೆ ಸಹಜೀವನ ನಡೆಸುತ್ತಿದ್ದಾರೆ. ಇವರ ಪ್ರೀತಿ ಅರಸಿ ಕಾಡುಹಂದಿಯೂ ನಿತ್ಯ ಬರುವುದು ವಿಶೇಷ. ಕುದುರೆಮುಖ ಎಂದರೆ ಥಟ್ಟನೆ ನೆನಪಿಗೆ ಬರುವುದು ಪಶ್ಚಿಮಘಟ್ಟಗಳ ಪರ್ವತಶ್ರೇಣಿ, ಅಲ್ಲಿದ್ದ ಅದಿರು ಕಂಪನಿ, ರಾಷ್ಟ್ರೀಯ ಉದ್ಯಾನ, ಗುಡ್ಡಗಳ ನಡುವೆ ಪ್ರಶಾಂತವಾಗಿ ಹರಿಯುವ ನದಿಗಳು. ಅದಿರು ಕಂಪನಿ ಸ್ಥಗಿತಗೊಂಡ ಬಳಿಕ ಪಾಳುಬಿದ್ದಿರುವ ಕೇಂದ್ರೀಯ ವಿದ್ಯಾಲಯ, ಆಸ್ಪತ್ರೆ ಕಟ್ಟಡ, ನೆಹರೂ ಪ್ರತಿಮೆಗಳು, ಟೌನ್‌ಶಿಪ್‌ ಇದ್ದ ವೈಭವದ ಕುರುಹುಗಳನ್ನು ಹೇಳುತ್ತವೆ. ಅಳಿದುಳಿದಿರುವ ಈಗಿನ ಕುದುರೆಮುಖದಲ್ಲಿ … Read more

ರಾಜ್ಯದಲ್ಲಿ ಮತ್ತೊಂದು ಘೋರ ಘಟನೆ : ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ.!

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳ ಸಮೇತ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದೆ. ತಂದೆ ವಿಠ್ಠಲರಾವ್(85), ಪುತ್ರ ನಾರಾಯಣ ಶಿಂಧೆ(42) ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಮೃತ ದುರ್ವೈವಿಗಳು. ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಧಾರವಾಡ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಾರಾಯಣ ಶಿಂಧೆ ಹಾಗೂ ಶಿಲ್ಪಾ ಶಿಂಧೆ ದಂಪತಿಗೆ ಒಂದು ಗಂಡು ಮಗು ಮತ್ತು ಒಂದು … Read more

ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು ಎಂದ ಸಚಿವ ಮಹದೇವಪ್ಪ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಹಣಕಾಸಿನ ಸಚಿವರಾಗದಿದ್ದರೆ ಅನೇಕರ ಕುಟುಂಬಗಳು ಕೂಲಿ ಮಾಡಿ, ಸಾಲ ಮಾಡಿ ಬದುಕಬೇಕಾಗುತ್ತಿತ್ತು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು. ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಶುಕ್ರವಾರ ನಡೆದ ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘ ಆಯೋಜಿಸಿದ್ದ ಸಂಘದ ವಾರ್ಷಿಕೋತ್ಸವ, ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಿದ್ದರಾಮಯ್ಯ ಇರದಿದ್ದರೆ ಬಡವರು ಕತ್ತಲೆಯಲ್ಲಿ ಕಳೆಯಬೇಕಿತ್ತು : ಅವಕಾಶದಿಂದ ವಂಚಿತರಾದವರಿಗೆ ಅವಕಾಶ ಕೊಡದಿದ್ದರೆ ನನ್ನ ಜೀವನ ಸಂಪೂರ್ಣ ಕತ್ತಲಲ್ಲಿ … Read more

ಚಿಕಿತ್ಸೆಗೆ ಟೈಮೇ ಇಲ್ಲ, ಸರ್ಕಾರಿ ಆಸ್ಪತ್ರೆಯಲ್ಲೇ ಗರ್ಲ್‌ಫ್ರೆಂಡ್ ಜೊತೆ ವೈದ್ಯ ಸಿದ್ದಿಕಿ ಮಸ್ತ್ ಡ್ಯಾನ್ಸ್

ಸರ್ಕಾರಿ ಆಸ್ಪತ್ರೆಯಲ್ಲಿ ಎಲ್ಲಾ ಸೌಲಭ್ಯವಿದೆ, ವೈದ್ಯರು, ನರ್ಸ್ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಇರುತ್ತಾರೆ. ಆದರೂ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಅನ್ನೋ ಆರೋಪಗಳು ಇಂದು ನಿನ್ನೆಯದಲ್ಲ. ಇದಕ್ಕೆ ಪುಷ್ಠಿ ನೀಡುವಂತೆ ಸರ್ಕಾರಿ ಆಸ್ಪತ್ರೆಯ ಪ್ರಮುಖ ವೈದ್ಯನ ವಿಡಿಯೋ ಒಂದು ಹೊರಬಂದಿದೆ. ತನ್ನ ಡ್ಯೂಟಿ ಸಮಯದಲ್ಲಿ ವೈದ್ಯ, ರೋಗಿಗಳ ಆರೈಕೆ, ಚಿಕಿತ್ಸೆ ಮಾಡಬೇಕಿತ್ತು. ಆದರೆ ಇದಕ್ಕೆ ಟೈಮೇ ಸಿಗುತ್ತಿಲ್ಲ. ರೋಗಿಗಳು ಕಾದು ಕಾದು ಸುಸ್ತಾಗಿ, ಕೊನೆಗೆ ಸಮಸ್ಯೆ ತೀವ್ರಗೊಂಡು ಬೇರೆಡೆ ಹೋದರೂ ಈ ವೈದ್ಯನಿಗೆ ಟೈಮೇ ಇಲ್ಲ. ಆಸ್ಪತ್ರೆಯಲ್ಲೇ ತನ್ನ … Read more

ಜೀವ ತೆಗೆದ ಫ್ಲೆಕ್ಸ್ : ಗೆಳೆಯನ ಮದ್ವೆಗೆಂದು ಜರ್ಮನಿಯಿಂದ ಬಂದ ಯುವಕ ದುರಂತ ಸಾವು

ನಗರದಲ್ಲಿ ಫ್ಲೆಕ್ಸ್ ಹಾವಳಿ (Flex Banner) ನಿಂತ್ತಿಲ್ಲ. ಇದೇ ಫ್ಲೆಕ್ಸ್ನಿಂದ ಮತ್ತೊಂದು ಜೀವ ಹೋಗಿದೆ. ಬೈಕ್ನಲ್ಲಿ ತೆರಳುವಾಗ ಫ್ಲೆಕ್ಸ್ ತಗುಲಿ ಯುವಕ ರಸ್ತೆಗೆ ಬಿದ್ದಿದ್ದಾನೆ. ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ತೇಜಸ್ ಗೌಡ (27) ಮೃತ ಯುವಕ. ಜರ್ಮನಿಯಲ್ಲಿ ಎಂ.ಎಸ್ ಓದುತ್ತಿದ್ದ ತೇಜಸ್ ಗೌಡ, ಸ್ನೇಹಿತನ ಮದುವೆ ಅಂತ ಊರಿಗೆ ಬಂದಿದ್ದ ವೇಳೆ ದುರಂತ ಸಂಭವಿಸಿದೆ. ನೆಲಮಂಗಲ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಿಸೆಪ್ಷನ್ ಮುಗಿಸಿ ಬೈಕ್ನಲ್ಲಿ ತೆರಳುವ … Read more

ಮದುವೆ ದಿನವೇ ಅಪಘಾತ, ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ಆಸ್ಪತ್ರೆಯಲ್ಲಿಯೇ ತಾಳಿ ಕಟ್ಟಿದ ವರ!

ಕೇರಳದ ಆಲಪ್ಪುಳದ ಥಂಪೋಲಿಯಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ವರ ತಾಳಿ ಕಟ್ಟಿರುವ ಘಟನೆ ನಡೆದಿದೆ. ಹೌದು. ಮದುವೆಗಾಗಿ ದೇವಸ್ಥಾನಕ್ಕೆ ತೆರಳುವ ಮುನ್ನ ಮೇಕಪ್ ಮಾಡಿಸಿಕೊಳ್ಳಲು ಇಂದು ಬೆಳಗ್ಗೆಯೇ ಮನೆಯಿಂದ ತೆರಳಿದ್ದ ವಧು ಅವನಿ ಅನಿರೀಕ್ಷಿತ ಅಪಘಾತದಿಂದ ಗಾಯಗೊಂಡಿದ್ದಾರೆ. ಆರಂಭದಲ್ಲಿ ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಧಾವಿಸಿದ ನಂತರ ಅವರನ್ನು ವಿಶೇಷ ಆರೈಕೆಗಾಗಿ ಕೊಚ್ಚಿಯ ವಿಪಿಎಸ್ ಲೇಕ್‌ಶೋರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬೆನ್ನುಮೂಳೆಯ ಗಾಯದಿಂದ ತೀವ್ರವಾದ ನೋವಿನ … Read more

ದುಬೈ ಏರ್‌ಶೋ : HAL ನಿರ್ಮಿತ ‘ತೇಜಸ್’ ಲಘು ಯುದ್ಧವಿಮಾನ ಪತನ

ಇಲ್ಲಿನ ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ‘ದುಬೈ ಏರ್ ಶೋ 2025’ರಲ್ಲಿ ಭಾರತದ ‘ತೇಜಸ್’ ಲಘು ಯುದ್ಧವಿಮಾನ ಪತನವಾಗಿದೆ. ಏರ್‌ಶೋನಲ್ಲಿ ‘ತೇಜಸ್’ ಯುದ್ಧವಿಮಾನ ಪ್ರದರ್ಶನ ನಡೆಸುತ್ತಿದ್ದಾಗ ಪತನವಾಗಿದೆ. ಈ ಘಟನೆ ಶುಕ್ರವಾರ ಮಧ್ಯಾಹ್ನ 2:10ರ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆ ಕುರಿತು ಭಾರತೀಯ ವಾಯುಪಡೆ ತನಿಖೆಗೆ ಆದೇ‌ಶ ಮಾಡಿದೆ. sjnkannadanewstime.in

ವಿಚ್ಛೇದಿತ ಮಹಿಳೆಯರಿಗೆ ವಂಚನೆ ಆರೋಪಿ ಸೂಸೈಡ್ : ಹೆದರಿ ಪ್ರಾಣ ಕಳೆದುಕೊಂಡ್ನಾ ಗಿರೀಶ್?

ವಿಚ್ಛೇದಿತ ಮಹಿಳೆಯರನ್ನು ಮರುಮದುವೆ ಆಗೋದಾಗಿ ವಂಚನೆ ಮಾಡಿದ್ದ ಪ್ರಕರಣದ ಆರೋಪಿ ಸಿ.ಎಂ.ಗಿರೀಶ್ ನೇಣಿಗೆ ಶರಣಾಗಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಕನ್ನಂಪಲ್ಲಿ ಮನೆಯಲ್ಲಿ ನೇಣು ಬಿಗಿದು ಗಿರೀಶ್ ಸೂಸೈಡ್ ಮಾಡಿಕೊಂಡಿದ್ದು, ವಂಚನೆ ಪ್ರಕರಣ ಸಂಬಂಧ ನಾಲ್ವರು ಸಂತ್ರಸ್ತೆಯರು ಈತನ ವಿರುದ್ಧ ದೂರು ನೀಡಿದ್ದರು. ಈ ಬಗ್ಗೆ ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಭಯದಿಂದ ಗಿರೀಶ್ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ತಿಂಗಳ ಹಿಂದೆಯೂ ಈತ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆದಿದ್ದ ಎನ್ನಲಾಗಿದೆ. ಸಿ.ಎಂ.ಗಿರೀಶ್ … Read more