ಮಗು ಕೆಂಪಾಗಿ ಹುಟ್ಟಿದಕ್ಕೆ ಅನುಮಾನ : ಪತ್ನಿಯ ಕತ್ತು ಸೀಳಿ ಕೊಂದ ಪಾಪಿ ಪತಿ.!

ಮಗು ಕೆಂಪಾಗಿ ಹುಟ್ಟಿದಕ್ಕೆ ಅನುಮಾನಗೊಂಡ ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಕತಿಹಾರ್ ಜಿಲ್ಲೆಯ ಅಬಾದ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾರಾಯಣಪುರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಆರೋಪಿ ಗಂಡನ ವಿರುದ್ಧ ಪ್ರಕರಣ ದಾಖಲಿಸಿ, ಅವನನ್ನು ಹುಡುಕಲು ಪ್ರಾರಂಭಿಸಿದರು. ವರದಿಗಳ ಪ್ರಕಾರ, ಅಜಮ್‌ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಲ್ಕಿ ಗ್ರಾಮದ ನಿವಾಸಿ ಸುಕುಮಾರ್ ದಾಸ್ ನ ಹೆಂಡತಿ ಮೂರು ತಿಂಗಳ … Read more

ಒ.ಸಿ ಕಡ್ಡಾಯ ನಿಯಮ : ಸಿಎಂ ಸಿದ್ದರಾಮಯ್ಯ ಮನೆಗೂ ಸಿಗದ ವಿದ್ಯುತ್‌ ಸಂಪರ್ಕ

ಮೈಸೂರಿನ ಕುವೆಂಪು ನಗರದಲ್ಲಿ ನಿರ್ಮಿಸಿರುವ ಹೊಸ ಮನೆಗೆ ವಿದ್ಯುತ್‌ ಸಂಪರ್ಕ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೇ ಇನ್ನೂ ಸಾಧ್ಯವಾಗಿಲ್ಲ…!’ಸಿದ್ದರಾಮಯ್ಯ ಅವರು 80X120 ಅಡಿ ಅಳತೆಯ ನಿವೇಶನದಲ್ಲಿ ಮೂರು ಅಂತಸ್ತಿನ ಮನೆ ನಿರ್ಮಿಸಿದ್ದಾರೆ. ಆರು ತಿಂಗಳ ಹಿಂದೆಯೇ 94 ಕಿಲೊವಾಟ್‌ ವಿದ್ಯುತ್‌ ಮಂಜೂರಾಗಿದೆ. ಆದರೆ, ನ್ಯಾಯಾಲಯವು ನಕ್ಷೆ ಮಂಜೂರಾತಿ, ಸ್ವಾಧೀನಾನುಭವ ಪ್ರಮಾಣಪತ್ರ (ಒ.ಸಿ) ಕಡ್ಡಾಯ ಮಾಡಿರುವ ಕಾರಣ ವಿದ್ಯುತ್‌ ಸಂಪರ್ಕ ನೀಡಲು ಸಾಧ್ಯವಾಗಿಲ್ಲ’ ಎಂದು ಮೂಲಗಳು ಖಚಿತಪಡಿಸಿವೆ. ‘ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ, ಈ ವರ್ಷದ ಏಪ್ರಿಲ್‌ನಿಂದಲೇ ರಾಜ್ಯದ ಎಲ್ಲ … Read more

ಬೆಳ್ತಂಗಡಿ ಬಳಿ ಕಾರು ಹೋಂಡಾ ಆಕ್ಟಿವಾ ಮಧ್ಯೆ ಅಪಘಾತ : ಫೈನಲ್ ಇಯರ್‌ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು

ಕಾರು ಹಾಗೂ ಸ್ಕೂಟಿ ಮಧ್ಯೆ ನಡೆದ ಅಪಘಾತವೊಂದರಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ 21 ವರ್ಷದ ಅನನ್ಯಾ ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಪೃಥ್ವಿ ರಾವ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಬೆಳ್ತಂಗಡಿ ಬಳಿ ಕಾರು ಹೋಂಡಾ ಆಕ್ಟಿವಾ … Read more

ಕ್ಷಮಿಸು ಅಮ್ಮಾ… ಇದೇ ಕೊನೆ ; ಶಿಕ್ಷಕರ ಕಿರುಕುಳಕ್ಕೆ ನೊಂದು ಮೆಟ್ರೋಗೆ ಹಳಿಗೆ ಹಾರಿ 10ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆ

ಕ್ಷಮಿಸು ಅಮ್ಮ ನಿನ್ನ ಮನಸನ್ನು ಹಲವಾರು ಬಾರಿ ನೋಯಿಸಿದ್ದೇನೆ. ಇದು ಕೊನೆಯ ಬಾರಿ. ನಾನು ತೆಗೆದುಕೊಂಡ ಈ ತೀರ್ಮಾನಕ್ಕಾಗಿ ನಿಮ್ಮಲ್ಲಿ ಕ್ಷಮೆಯಾಚಿಸುತ್ತೇನೆ. ಶಾಲೆಯಲ್ಲಿ ನಡೆದ ಘಟನೆ ಎದುರಿಸಲು ನನ್ನ ಬಳಿ ಈ ನಿರ್ಧಾರ ಹೊರತುಪಡಿಸಿ ಬೇರೆ ಮಾರ್ಗವಿರಲಿಲ್ಲ ಎಂದು 10ನೇ ತರಗತಿ ವಿದ್ಯಾರ್ಥಿಯೊಬ್ಬ ಡೆತ್‌ ನೋಟ್‌ ಬರೆದಿಟ್ಟು ದೆಹಲಿ ಮೆಟ್ರೋ ಹಳಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ. ಈ ಘಟನೆಯಿಂದ ಪೋಷಕರು ಭಾರಿ ಅಘಾತಕ್ಕೊಳಗಾಗಿದ್ದಾರೆ. ಶಾಲಾ ಸಮವಸ್ತ್ರದಲ್ಲಿದ್ದ 16 ವರ್ಷದ ಶೌರ್ಯ ಪಾಟೀಲ್ ಎಂಬಾತ ಮಂಗಳವಾರ ಮಧ್ಯಾಹ್ನ ಮೆಟ್ರೋ … Read more

ರಾಹುಲ್‌ ‘ವೋಟ್‌ ಚೋರಿ’ ಆರೋಪದ ವಿರುದ್ಧ ಸಹಿ ಸಂಗ್ರಹ : ಮಾಜಿ ಜಡ್ಜ್ಗಳು, ನಿವೃತ್ತ ಸೈನಿಕರು ಸೇರಿ 272 ಗಣ್ಯರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವೋಟ್ ಚೋರಿ ಅಸ್ತ್ರ ಹೂಡಿದ್ದಾರೆ. ಕೆಲ ದಿನಗಳ ಹಿಂದೆ ಎಐಸಿಸಿ ನಾಯಕರು ಹಮ್ಮಿಕೊಂಡಿರೋ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿತ್ತು. ಇದೀಗ 272 ಗಣ್ಯರ ಸಹಿ ಸಂಗ್ರಹ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಇಂದು ಬರೋಬ್ಬರಿ 272 ಗಣ್ಯರು ಸಹಿ ಮಾಡಿದ ಮುಕ್ತ ಪತ್ರದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯವನ್ನು ಹಾಡಿ ಹೊಗಳಿದ್ದಾರೆ. ಜೊತೆಗೆ ಸಾಂವಿಧಾನಿಕ ಸಂಸ್ಥೆಗಳನ್ನು, ಅದರಲ್ಲೂ ಚುನಾವಣಾ ಆಯೋಗವನ್ನು (EC) ದುರ್ಬಲಗೊಳಿಸುವ … Read more

ದೇಶದಲ್ಲಿ `ಹೃದಯವಿದ್ರಾವಕ ಘಟನೆ’ : ಹಸಿವಿನಿಂದ ಮಗ ಸಾವು, ಅಂತ್ಯಕ್ರಿಯೆಗೆ ಹಣವಿಲ್ಲದೇ ತಂದೆಯ ಗೋಳಾಟ.!

ದೇಶದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಹಸಿವಿನಿಂದ ಅಂಗವಿಕಲ ಮಗ ಸಾವನ್ನಪ್ಪಿದ್ದು, ಅಂತ್ಯಕ್ರಿಯೆ ಹಣವಿಲ್ಲದೇ ತಂದೆಯೊಬ್ಬ ಸ್ಮಶಾನದಲ್ಲಿ ಗಂಟೆಗಟ್ಟಲೆ ಕಾದು ಕುಳಿತ ಘಟನೆ ಆಂಧ್ರಪ್ರದೇಶದ ಮಹಬೂಬ್ ನಗರದಲ್ಲಿ ನಡೆದಿದೆ. ಪಟ್ಟಣದ ಪ್ರೇಮ್ನಗರ ನಿವಾಸಿ ಬಾಲರಾಜ್ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಹಿಂದೆ ಗಿರಣಿ ಮುಚ್ಚಿದಾಗ ಕೆಲಸ ಕಳೆದುಕೊಂಡರು ಮತ್ತು ಆರ್ಥಿಕ ತೊಂದರೆಯಿಂದಾಗಿ ಅವರ ಪತ್ನಿಯೊಂದಿಗೆ ಆಗಾಗ್ಗೆ ಜಗಳವಾಡುತ್ತಿದ್ದರು. ಕೆಲವು ದಿನಗಳ ಹಿಂದೆ, ಅವರ ಪತ್ನಿ ತಮ್ಮ ಕಿರಿಯ ಮಗನನ್ನು ಕರೆದುಕೊಂಡು ಮನೆ ಬಿಟ್ಟು ಹೋದರು. … Read more

ವಿದೇಶಿ ಮಹಿಳೆಗೆ ‘ಖಾಸಗಿ ಅಂಗ’ ತೋರಿಸಿ ಯುವಕನಿಂದ ಲೈಂಗಿಕ ಕಿರುಕುಳ : ಆಘಾತಕಾರಿ ವೀಡಿಯೋ ವೈರಲ್

ಯುವಕನೋರ್ವ ವಿದೇಶಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ಶ್ರೀಲಂಕಾದಲ್ಲಿ ನಡೆದಿದೆ. ನ್ಯೂಜಿಲೆಂಡ್ ನಿಂದ ಬಂದ ವಿದೇಶಿ ಮಹಿಳೆಗೆ ಈತ ಕಿರುಕುಳ ನೀಡಿದ್ದು, ಮಹಿಳೆ ಸೋಶಿಯಲ್ ಮೀಡಿಯಾದಲ್ಲಿ ಕಿರುಕುಳದ ವಿಡಿಯೋ ಹಂಚಿಕೊಂಡಿದ್ದಾರೆ. ನ್ಯೂಜಿಲೆಂಡ್ನ ಮಹಿಳಾ ಪ್ರವಾಸಿಯೊಬ್ಬರು ಏಕಾಂಗಿ ಪ್ರವಾಸದ ಸಮಯದಲ್ಲಿ ಅನುಭವಿಸಿದ ಲೈಂಗಿಕ ಕಿರುಕುಳದ ಆಘಾತಕಾರಿ ಅನುಭವವನ್ನು ವಿವರಿಸುವ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಿಕ್ಷಾ ಶೈಲಿಯ ವಾಹನದಲ್ಲಿ ಶ್ರೀಲಂಕಾದ ಮೂಲಕ ಪ್ರಯಾಣಿಸುತ್ತಿದ್ದ ಮಹಿಳೆ, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ … Read more

ಎದೆ ನಡುಗಿಸುವ ಸಂಚು.. 32 ಕಾರುಗಳಲ್ಲಿತ್ತು ಬಾಂಬ್.: ಸ್ಪೋಟವಾಗಿದ್ದು ಒಂದು ಮಾತ್ರ!

ಇಲ್ಲಿನ ಐತಿಹಾಸಿಕ ಕೆಂಪುಕೋಟೆಯ ಬಳಿ ನಡೆದ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯು ಹಲವು ಅಂಶಗಳನ್ನು ಬಹಿರಂಗ ಮಾಡುತ್ತಿದೆ. ಕಳೆದ ಸೋಮವಾರ ಸಂಜೆ ವೇಳೆಗೆ ಕೆಂಪುಕೋಟೆ ಮೆಟ್ರೋ ಸ್ಟೇಶನ್‌ ಬಳಿ ಐ20 ಕಾರಿನಲ್ಲಿ ಸ್ಪೋಟವಾಗಿತ್ತು. ಆದರೆ ಇದೀಗ ಬೆಚ್ಚಿ ಬೀಳಿಸುವ ಮಾಹಿತಿಗಳು ಹೊರಬಿದ್ದಿದ್ದು, ಸುಮಾರು 32 ಕಾರುಗಳಲ್ಲಿ ಬಾಂಬ್‌ ಇರಿಸಲಾಗಿತ್ತು ಎನ್ನಲಾಗಿದೆ. ಮಾರುತಿ ಸುಜುಕಾ ಬ್ರೆಝಾ, ಮಾರುತಿ ಸ್ವಿಫ್ಟ್ ಡಿಜೈರ್ ಮತ್ತು ಫೋರ್ಡ್ ಇಕೋಸ್ಪೋರ್ಟ್ ಸೇರಿದಂತೆ ಮೂವತ್ತೆರಡು ಕಾರುಗಳನ್ನು ಸ್ಫೋಟಕ ವಸ್ತುಗಳನ್ನು ಸಾಗಿಸಲು ಮತ್ತು ಬಾಂಬ್‌ಗಳನ್ನು ತಲುಪಿಸಲು … Read more

‘ವಿಜಯ್ ದೇವರಕೊಂಡ ಅಂಥವರು ಪ್ರತಿಯೊಬ್ಬರ ಜೀವನದಲ್ಲಿ ಸಿಗಬೇಕು ಎಂಬುದು ನನ್ನ ಭಾವನೆ, ಅವರು ಒಂದು ವರ’ : ರಶ್ಮಿಕಾ ಮಂದಣ್ಣ

‘ದಿ ಗರ್ಲ್‌ಫ್ರೆಂಡ್’ ಚಿತ್ರದ ಯಶಸ್ಸಿನ ಸಂಭ್ರಮಾಚರಣೆಯಲ್ಲಿ ರಶ್ಮಿಕಾ ಮಂದಣ್ಣ, ಪ್ರತಿಯೊಬ್ಬರ ಜೀವನದಲ್ಲಿ ವಿಜಯ್ ದೇವರಕೊಂಡ ಅಂಥವರು ಹೇಗೆ ಮತ್ತು ಏಕೆ ಇರಬೇಕು ಎಂಬುದರ ಕುರಿತು ಮಾತನಾಡಿದರು. ರಶ್ಮಿಕಾ ಮಂದಣ್ಣ ನಟನೆಯ ‘ದಿ ಗರ್ಲ್‌ಫ್ರೆಂಡ್’ ಚಿತ್ರದ ಸಕ್ಸಸ್ ಇವೆಂಟ್ ಹೈದರಾಬಾದ್‌ನಲ್ಲಿ ನಿನ್ನೆ ಸಾಯಂಕಾಲ ನಡೆಯಿತು. ಇದಕ್ಕೆ ವಿಜಯ್ ದೇವರಕೊಂಡ ಅತಿಥಿಯಾಗಿ ಬಂದಿದ್ದರು. ಈ ವೇಳೆ ರಶ್ಮಿಕಾ ಭಾವುಕರಾದರು. ವಿಜಯ್ ದೇವರಕೊಂಡ ಬಗ್ಗೆ ಮಾತನಾಡಿದ ರಶ್ಮಿಕಾ, ನಮ್ಮ ಜೀವನದಲ್ಲಿ ಅವರಂತಹ ವ್ಯಕ್ತಿ ಇರುವುದು ಒಂದು ವರ ಎಂದರು. ವಿಜಯ್ ಮೊದಲಿನಿಂದಲೂ … Read more

ಬೆಂಗಳೂರು ಫ್ಲ್ಯಾಟ್‌ನಲ್ಲಿ ಇಬ್ಬರು ಯುವತಿಯರ ಜೊತೆ ವಾಸವಾಗಿದ್ದ ಯುವಕ ಶವವಾಗಿ ಪತ್ತೆ

ಇಬ್ಬರು ಯುವತಿಯರ ಜೊತೆ ಬೆಂಗಳೂರಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿದ್ದ ಯುವಕ ದುರಂತ ಅಂತ್ಯಕಂಡಿದ್ದಾನೆ. ಕೆಲಸದ ಕಾರಣದಿಂದ ಕೆಳೆದ ಕೆಲ ವರ್ಷಗಳಿಂದ ಯುವಕ ಹಾಗೂ ಇಬ್ಬರು ಯುವತಿಯರು ಬೆಂಗಳೂರಿನ ಯಲ್ಲನೇಹಳ್ಳಿಯ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈ ಮೂವರು ಮೂಲತಃ ಕೇರಳದ ತಿರುವನಂತಪುರಂದವರು. ಹೀಗಾಗಿ ಬೆಂಗಳೂರಿನಲ್ಲಿ ಜೊತೆಯಾಗಿ ಒಂದೇ ಫ್ಲ್ಯಾಟ್‌ನಲ್ಲಿ ವಾಸವಿದ್ದರು. ಈ ಪೈಕಿ ಒಬ್ಬಳ ಜೊತೆ ಪ್ರೀತಿಯಲ್ಲಿ ಬಿದ್ದಿದ್ದೆ, ಮೂವರ ಜಗಳಕ್ಕೆ ಕಾರಣವಾಗಿದೆ ಎಂಬ ಆರೋಪ ಕೇಳಿಬಂದಿದೆ. ಪರಿಣಾಮ ಇಬ್ಬರು ಯುವತಿರ ಕಿರುಕುಳ ಹೆಚ್ಚಾಗಿ, … Read more