ಎರಡ್ಮೂರು ಪಟ್ಟು ಹಣ ಕೇಳೋ ಆಟೋ ಚಾಲಕರ ನಟ್ಟು-ಬೋಲ್ಟು ಟೈಟ್‌ಗೆ ಮುಂದಾದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ರಾಜಧಾನಿ ಬೆಂಗಳೂರಿನ ಬಹುತೇಕ ಆಟೋ ಚಾಲಕರು ಬಾಯಿಗೆ ಬಂದಂತೆ ಹಣ ಕೇಳುವುದು ಸಾಮಾನ್ಯವಾಗಿದೆ. ಪ್ರಯಾಣಿಕರು ಕೊಂಚ ದುಬಾರಿಯಾದ್ರೂ ಆಪ್‌ಗಳ ಮೊರೆ ಹೋಗುತ್ತಾರೆ. ಆದ್ರೂ ಈ ಆಪ್‌ ಆಧರಿತ ಬೆಲೆಗಳು ಸಹ ಬೇರೆ ಬೇರೆಯಾಗಿರುತ್ತವೆ. ಇದೀಗ ಸಾರ್ವಜನಿಕ ಹಿತ ಕಾಪಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿದ್ರೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದೆ. ಪ್ರಯಾಣಿಕರಿಂದ ಹೆಚ್ಚು ದರ ವಸೂಲಿ ಮಾಡುತ್ತಿರುವ ಆಟೋ ಚಾಲಕರ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ಕಾನೂನು ಉಲ್ಲಂಘಿಸುವವರ … Read more

ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ವಿಜಯೇಂದ್ರ : ಯತ್ನಾಳ್ ಹೊಸ ಬಾಂಬ್!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಡಿದೆದ್ದಿದ್ದಾರೆ. ರಾಜ್ಯಾಧ್ಯಕ್ಷರ ಬದಲಾವಣೆಯಾಗಲೇಬೇಕು ಎಂದು ಒತ್ತಾಯಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿಸಿದ್ದು ಯಾರು? ವಿಜಯೇಂದ್ರ. ಬಿ.ವೈ.ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್ ಸೇರಿ ರಮೇಶ್ ಜಾರಕಿಹೊಳಿ ಜೀವನವನ್ನೇ ಹಾಳು ಮಾಡಿದರು ರೆಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದೇ ವೇಳೆ ವಿಜಯೇಂದ್ರ ವಿರುದ್ಧದ ನಮ್ಮ ಟೀಂ ಬಹಳ ದೊಡ್ಡದಿದೆ. ತಟಸ್ಥರು ಕೂಡ ವಿಜಯೇಂದ್ರ ವಿರುದ್ಧವಿದ್ದಾರೆ. ಅಷ್ಟೇ … Read more

ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧದ ಕೇಸ್ ರದ್ದು

ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿದೆ. ಬಸವರಾಜ ಬೊಮ್ಮಾಯಿ ಹೇಳಿದ್ದ ಹೇಳಿಕೆಯಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೆಂದು ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಇದೀಗ ಪ್ರಕರಣ ರದ್ದುಪಡಿಸಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಯ ಸವಣೂರು ಹಾಗೂ ಶಿಗ್ಗಾಂವಿ ಪೊಲೀಸ್ ಠಾಣೆಗಳಲ್ಲಿ 2024ರಲ್ಲಿ ಪ್ರಕರಣಗಳು ದಾಖಲಾಗಿದ್ದವು. ಬಳಿಕ ಕೇಸ್ ರದ್ದು … Read more

ಕುತ್ತಿಗೆ ಮೇಲೆ ಗಾಯಗಳ ಗುರುತು, ಶರ್ಟ್ ಹರಿತ, ತಳ್ಳಾಟ, ನೂಕಾಟ, ವಾಗ್ವಾದ, ‘ಭದ್ರಾ ಜ್ವಾಲೆ’ ಹೇಗಿತ್ತು?

ಕುತ್ತಿಗೆ ಮೇಲೆ ಗಾಯದ ಗುರುತುಗಳು… ಶರ್ಟ್ ಹರಿತ.. ರಸ್ತೆಯಲ್ಲೇ ಕುಳಿತು ಆಕ್ರೋಶ… ತಳ್ಳಾಟ.. ನೂಕಾಟ… ವಾಗ್ದಾದ.. ಬಂಧನ.. ಬಿಡುಗಡೆ… ಇದು ಇಂದು ನಡೆದ ಭದ್ರಾ ಹೋರಾಟದ ಜ್ವಾಲೆಯ ಕೆಲ ಸ್ಯಾಂಪಲ್. ಮಧ್ಯ ಕರ್ನಾಟಕದ ಜೀವನಾಡಿ ಭದ್ರಾ ದಂಡೆಯ ಕಾಲುವೆಯನ್ನು ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ನೀರು ಹರಿಸಲು ಮುಂದಾಗಿರುವುದನ್ನು ವಿರೋಧಿಸಿ ಜಿಲ್ಲಾ ರೈತ ಸಂಘಟನೆ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಶನಿವಾರ ಜಿಲ್ಲಾ ಬಂದ್ ಗೆ ಕರೆಕೊಟ್ಟಿವೆ. ಹೈಡ್ರಾಮಾ : ಇದಕ್ಕೂ ಮುನ್ನ ಇಂದು … Read more

EMERGENCY 50 : ಸಂವಿಧಾನ ಹತ್ಯಾ ದಿವಸ್‌ ಆಚರಿಸುವುದು ಸರಿಯಲ್ಲ, ಅದೆಲ್ಲಾ ಹಿಂದಿನ ಕಥೆ – ಪ್ರಧಾನಿ ವಿರುದ್ಧ ಖರ್ಗೆ ಕಿಡಿ!

EMERGENCY 50 : ತುರ್ತು ಪರಿಸ್ಥಿತಿಯ 50ನೇ ವಾರ್ಷಿಕೋತ್ಸವವನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುವಂತೆ ಪ್ರಧಾನಿ ಮೋದಿ ನಡೆಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಆಕ್ರೋಶ ಹೊರಹಾಕಿದರು. ಭಾರತದ ಪ್ರಜಾಪ್ರಭುತ್ವ ಇತಿಹಾಸದ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಇಂದು ಐವತ್ತು ವರ್ಷಗಳು ತುಂಬಿವೆ. ಭಾರತದ ಜನರು ಈ ದಿನವನ್ನು ಸಂವಿಧಾನ ಹತ್ಯೆ ದಿವಸ್ ಎಂದು ಆಚರಿಸುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಇದೀಗ ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ … Read more

ಅತೃಪ್ತ ಶಾಸಕರ ಮನವೊಲಿಕೆ ಸಿಎಂ ಮಾಸ್ಟರ್‌ ಪ್ಲ್ಯಾನ್‌! ಸಿದ್ದರಾಮಯ್ಯ ಯೋಜನೆ ಏನು ಗೊತ್ತಾ.?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಅಲ್ಲದೆ ಶಾಸಕರೊಂದಿಗೆ ಉಪಾಹಾರ ಕೂಟ ನಡೆಸಿ ಅವರ ಸಮಸ್ಯೆ ಆಲಿಸಲಿದ್ದಾರೆ. ಈ ಮೂಲಕ ಅಸಮಾಧಾನ ತೋರ್ಪಡಿಸಿದ್ದ ಶಾಸಕರನ್ನು ತಣ್ಣಗಾಗಿಸಲು ಸಿದ್ದರಾಮಯ್ಯ ಅವರು ಯೋಜನೆ ರೂಪಿಸಿದ್ದಾರೆ. ಜುಲೈ ತಿಂಗಳಲ್ಲಿ ಶಾಸಕರ ಕ್ಷೇತ್ರಗಳಿಗೆ ತಲಾ 50 ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಸಿಎಂ ನಿರ್ಧರಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದರು. ದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ … Read more

ಆಟವಾಡುತ್ತಿದ್ದ ವೇಳೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತ ದಿಂದ ಸಾವು.!

ಕಳೆದ ಒಂದು ತಿಂಗಳಲ್ಲಿ ಹಾಸನದಲ್ಲಿ ಹೃದಯಾಘಾತಕ್ಕೆ ಒಟ್ಟು 13 ಜನರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಬೆಳಗಾವಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಶಾಲೆಯಲ್ಲಿ ಆಟವಾಡುವ ವೇಳೆಯೆ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಎಂಬ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂಜಯ ಬಂಡಗಾರ (15) ಮೃತ ಬಾಲಕಿ ಹೆಸರು. ಚಮಕೇರಿ ಗ್ರಾಮದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬೆಳಗಿನ ಜಾವ ಶಾಲಾ ಆವರಣದಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ವೇಳೆ, ಅಸ್ವಸ್ಥಳಾಗಿ ಕುಸಿದುಬಿದ್ದಳು. … Read more

ಇಂಗ್ಲೆಂಡ್‌ ವಿರುದ್ಧ ಸೋತ ಟೀಮ್ ಇಂಡಿಯಾವನ್ನು ನಾಯಿಗೆ ಹೋಲಿಸಿದ ದಿನೇಶ್‌ ಕಾರ್ತಿಕ್‌

ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್‌  ತಂಡಗಳ ನಡುವೆ ನಡೆದ ಪ್ರಥಮ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್‌ 5 ವಿಕೆಟ್‌ಗಳ ಭರ್ಜರಿ ಗೆಲುವನ್ನು ಕಂಡು 1 – 0 ಅಂತರದ ಮುನ್ನಡೆಯನ್ನು ಸಾಧಿಸಿದೆ. ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 471 ರನ್‌ಗಳಿಗೆ ಯಶಸ್ವಿ ಜೈಸ್ವಾಲ್‌, ಶುಭ್‌ಮನ್‌ ಗಿಲ್‌ ಹಾಗೂ ರಿಷಭ್‌ ಪಂತ್‌ ಶತಕಗಳ ನೆರವಿನಿಂದ ಆಲ್‌ಔಟ್‌ ಆಗಿತ್ತು. ಬಳಿಕ ಇಂಗ್ಲೆಂಡ್‌ 465 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಈ ಮೂಲಕ ಭಾರತ ಮೊದಲ … Read more

ದಿನಸಿ ತರಲು ಹೋದ ಯುವತಿಗೆ ಲೈಂಗಿಕ ಕಿರುಕುಳ! ಪೈಶಾಚಿಕತೆಯ ಮತ್ತೊಂದು Video, 5 ಮಂದಿ ಬಂಧನ

ದಿನಸಿ ತರಲು ಹೋದ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪುಂಡರ ಗ್ಯಾಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದು, 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಂತೆಯೇ ಪುಂಡರ ಪೈಶಾಚಿಕತೆಯ ಮತ್ತೊಂದು ವಿಡಿಯೋ ವೈರಲ್ ಆಗುತ್ತಿದೆ. ಬೆಂಗಳೂರಿನ ಆನೇಕಲ್ ತಾಲೂಕಿನ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದ್ದ ಯುವತಿ ಮೇಲಿನ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬನ್ನೇರುಘಟ್ಟ ಪೊಲೀಸರು ಒಟ್ಟು ಐದು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತರನ್ನು ಜಾನ್ ರಿಚರ್ಡ್, ಪುನೀತ್, ಅನುಷ್ … Read more

ಪ್ರೇಮಿ ಜೊತೆಗಿನ ಖಾಸಗಿ ವಿಡಿಯೋ ಕಳಿಸಿದ ಹೆಂಡ್ತಿ : ಬಿಕ್ಕಿ ಬಿಕ್ಕಿ ಅತ್ತು ಪ್ರಾಣ ಕಳೆದುಕೊಂಡ ಗಂಡ!

ಜೂನ್ 18ರಂದು ಹರಿಯಾಣದ ದೊಹ್ನ ಎಂಬ ಹಳ್ಳಿಯಲ್ಲಿ ಮಗನ್ ಅಲಿಯಾಸ್ ಅಜಯ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಇದೀಗ ಸಾಯುವ ಮುನ್ನ ಮಾಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿದೆ. ಈ ವಿಡಿಯೋ ನೋಡಿದ ಪುರುಷ ನೆಟ್ಟಿಗರು, #JusticeForMen ಎಂಬ ಹ್ಯಾಶ್ ಟ್ಯಾಗ್ ಬಳಕೆ ಮಾಡುವ ಮೂಲಕ ಮಗನ್ ಸಾವಿನ ನ್ಯಾಯ ಸಿಗಬೇಕೆಂದು (Justice For Men – Save Men Save Country) ಆಗ್ರಹಿಸಿದ್ದಾರೆ. ಈ ಹಿಂದೆ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಸಾವಿನ ಬೆನ್ನಲ್ಲೆ ಪುರುಷರ ಮೇಲಾಗುವ … Read more