ಪುನೀತ 60 ಕೋಟಿ ವ್ಯವಹಾರ ಮಾಡ್ತಾ ಇದ್ದೀನಿ ಅಂದ ಒಂದು ಚಿಟಿಕೆಗೆ ಹೊರಟುಹೋದ ಎಂದ ನಟ ಜಗ್ಗೇಶ್

ನಿನ್ನೆ ( ಜೂನ್ 15 ) ವಿಶ್ವ ತಂದೆಯಂದಿರ ದಿನದ ಸಲುವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಹಿರಿಯ ನಟ ನವರಸ ನಾಯಕ ಜಗ್ಗೇಶ್ ತಂದೆಯ ಮಹತ್ವ ಹಾಗೂ ತ್ಯಾಗದ ಕುರಿತು ಭಾಷಣ ಮಾಡಿದರು. ತಂದೆ ಎಂಬ ವ್ಯಕ್ತಿಗೆ ಯಾವ ಯೋಚನೆಯೂ ಇರುವುದಿಲ್ಲ, ನನ್ನ ಹೆಂಡತಿ ಚೆನ್ನಾಗಿರಬೇಕು, ನನ್ನ ಮಕ್ಕಳು ಚೆನ್ನಾಗಿರಬೇಕು ಎಂದು ಯೋಚಿಸುವ ಒಂದು ಆತ ಓರ್ವ ನಿಷ್ಕಲ್ಮಶ ಜೀವಿ ಎಂದು ಕೊಂಡಾಡಿದರು. ಆತ ಎತ್ತು ದುಡಿದ ಹಾಗೆ ದುಡೀತಾನೆ, ಕೊನೆಗೆ ಸಾಯುತ್ತಾನೆ, ಆತ ನಿಮ್ಮಿಂದ … Read more

ಪ್ರೀತಿಸಿ ಮದುವೆಯಾದ ಯುವತಿಯನ್ನು ಗಂಡನ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಹೊತ್ತೊಯ್ದ ಪೋಷಕರು!

ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಆಕೆಯ ಪೋಷಕರು ಪತಿಯ ಮನೆಯಿಂದ ಗೋಣಿ ಚೀಲದಲ್ಲಿ ತುಂಬಿ ಬಲವಂತವಾಗಿ ಹೊತ್ತೊಯ್ದಿರುವಂತಹ ಆಘಾತಕಾರಿ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಬೈರಿಕೊಪ್ಪ ಗ್ರಾಮದ ನಿರಂಜನ್ ಹಾಗೂ ಸುಷ್ಮಾ ಪರಸ್ಪರ 8 ವರ್ಷಗಳಿಂದ ಪ್ರೀತಿಸುತ್ತಿದ್ದರು. ಜೋಡಿ ಎರಡು ವರ್ಷದ ಹಿಂದೆ ಗದಗದಲ್ಲಿ ರಿಜಿಸ್ಟರ್‌ ಮ್ಯಾರೇಜ್‌ ಆಗಿದ್ದರು. ಆದರೆ ಮದುವೆಗೆ ಪೋಷಕರ ವಿರೋಧವಿತ್ತು. ಇದರಿಂದ ಇಬ್ಬರು ದೂರವಾಗಿ ವೇದನೆ ಪಡುತ್ತಿದ್ದರು. ಆದರೆ ಸುಷ್ಮಾ ಪ್ರೀತಿಸಿದ ವ್ಯಕ್ತಿಯನ್ನು ಬಿಟ್ಟು ಇರಲಾಗದೆ ನಿರಂಜನ್‌ ಮನೆಗೆ ಹೋಗಿದ್ದಳು. ಈ ವಿಚಾರ ತಿಳಿದ … Read more

ಕಾಲ್ತುಳಿತ ಕೇಸ್ : ದುರಂತಕ್ಕೆ ಸಿಎಂ, ಡಿಸಿಎಂ ಹೊಣೆ ಅನ್ನೋದು ಸರಿಯಲ್ಲ – ಸಚಿವ HC ಮಹದೇವಪ್ಪ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4 ರಂದು ಸಂಭವಿಸಿದ್ದ ಕಾಲ್ತುಳಿತ ದುರಂತಕ್ಕೆ ಸಿಎಂ, ಹಾಗೂ ಡಿಸಿಎಂ ನೇರ ಹೊಣೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿದೆ. ಅಲ್ಲದೇ ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೂಡ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ವಿರುದ್ಧ ಆಕ್ರೋಶ ಹೊರ ಹಾಕಿದರು. ಈ ಬಗ್ಗೆ ಕಲಬುರ್ಗಿಯಲ್ಲಿ ಪ್ರತಿಕ್ರಿಯೆ ಕೊಟ್ಟಿರುವ ಸಚಿವ ಎಚ್ ಸಿ ಮಹದೇವಪ್ಪ, ಇವೆಲ್ಲವೂ ತುಂಬಾ ಬಾಲಿಷ ಹೇಳಿಕೆ ಎಂದಿದ್ದಾರೆ. ಕಾಲ್ತುಳಿತ ದುರಂತ ಆಗಬಾರದಿತ್ತು. ಘಟನೆಯಿಂದ ಎಲ್ರಿಗೂ ತುಂಬಾ ನೋವಾಗಿದೆ. … Read more

ಮೊಬೈಲ್ ಕದ್ದ ಆರೋಪ : ಯುವಕನ ಮೇಲೆ ಪೊಲೀಸರ ಎದುರಲ್ಲೇ ಮನಸೋ ಇಚ್ಛೆ ಲಾಠಿಯಿಂದ ಥಳಿಸಿದ ಸೆಕ್ಯೂರಿಟಿ ಗಾರ್ಡ್!

ಮೊಬೈಲ್ ಕದ್ದ ಆರೋಪದಲ್ಲಿ ಸೆಕ್ಯೂರಿಟಿ ಗಾರ್ಡ್ ಯುವಕನಿಗೆ ಮನಸೋ ಇಚ್ಛೆ ಲಾಠಿಯಿಂದ ಹೊಡೆದು ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಯುವಕನೊಬ್ಬ ಆಸ್ಪತ್ರೆಗೆ ಬಂದಿದ್ದ. ಈ ವೇಳೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರ ಮೊಬೈಲ್ ಕದ್ದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಯುವಕನನ್ನು ಹಿಡಿದು ಸೆಕ್ಯೂರಿಟಿಗಾರ್ಡ್ ಗಳು ಮನಬಂದಂತೆ ಹೊಡೆದಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಪೊಲೀಸರ ಎದುರಲ್ಲೇ ಸೆಕ್ಯೂರೀಟಿ ಗಾರ್ಡ್ ಓರ್ವ ಯುವಕನ ಕೈ-ಕಾಲುಗಳ ಮೇಲೆ ಲಾಠಿಯಿಂದ … Read more

ಎರಡು ಮಕ್ಕಳ ತಾಯಿಯ ಗುಪ್ತಾಂಗಕ್ಕೆ ಕಾದ ಕಬ್ಬಿಣ ಇಟ್ಟು ಕೊಂದ ಪಾಪಿಗಳು : ಗಂಡನ ಮನೆಯವರ ಕಿರುಕುಳ

ಆಕೆಯ ಹೆಸರು ಸಂಗೀತಾ ವಯಸ್ಸು ಕೇವಲ 32 ಮದುವೆಯಾಗಿ 10 ವರ್ಷಗಳೇ ಕಳೆದಿತ್ತು, 10 ವರ್ಷದ ದಾಂಪತ್ಯಕ್ಕೆ ಪ್ರತಿಯಾಗಿ ಇಬ್ಬರು ಮುದ್ದಾದ ಮಕ್ಕಳು ಇದ್ದಾರೆ. ಆದರೆ ಮದುವೆಯಾಗಿ ಇಷ್ಟು ವರ್ಷಗಳು ಕಳೆದರೂ ಆಕೆಯನ್ನು ಗಂಡನ ಮನೆಯವರು ಮಾತ್ರ ಹೊರಗಿನವಳಂತೆಯೇ ನೋಡುತ್ತಿದ್ದರು. ವರದಕ್ಷಿಣೆಯಾಗಿ ತವರು ಮನೆಯಿಂದ ಬುಲೆಟ್ ಬೈಕ್ ಹಾಗೂ ಎಮ್ಮೆಯೊಂದನ್ನು ತರುವಂತೆ ಆಕೆಯನ್ನು ದಿನಾ ಪೀಡಿಸುತ್ತಿದ್ದರು. ಆಕೆ ಈ ಬೇಡಿಕೆ ಈಡೇರಿಸದೇ ಹೋದಾಗ ಆಕೆಯನ್ನು ದೈಹಿಕವಾಗಿ ಹಿಂಸೆ ನೀಡಿ ಎರಡು ಮಕ್ಕಳಿದ್ದಾರೆ ಎಂಬುದನ್ನೂ ನೋಡದೇ ಕೊಂದೇ ಬಿಟ್ಟಿದ್ದಾರೆ … Read more

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ

ಶಿಕ್ಷಣ ಸಚಿವರಾಗಿ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ ತಮ್ಮ ಇಲಾಖೆ ಪ್ರಗತಿ ಸಾಧಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಸರ್ ಕೂಡಾ ಮೆಚ್ಚಿದ್ದಾರೆ ಎಂದಿದ್ದಾರೆ. ‘ನನ್ನ ಇಲಾಖೆ ಬೇರೆ ಇಲಾಖೆಯಂತಲ್ಲ. ಇಲ್ಲಿ ಪ್ರಗತಿ ಕಣ್ಣಿಗೆ ಕಾಣಿಸಲ್ಲ. ಆದರೆ ಶಿಕ್ಷಣ ಎಂದರೆ ದೇವರ ಕೆಲಸ. ನನ್ನ ಇಲಾಖೆಯಲ್ಲಿ ಬಹಳ ಸಮಸ್ಯೆಗಳಿತ್ತು. ಹೀಗಾಗಿ ಸ್ವಲ್ಪ ಹುಷಾರಾಗಿ ನೋಡ್ಕೊಂಡು ಮಾಡು ಎಂದು ಮುಖ್ಯಮಂತ್ರಿಗಳು ನನಗೆ ಅಧಿಕಾರ ಕೊಟ್ರು. ನಿನ್ನೆ ನನ್ನ ಇಲಾಖೆಯ ಅಧಿಕಾರ ವಹಿಸಿ ಒಂದು … Read more

ಬೆಂಗಳೂರನ್ನು ಸಿಂಗಾಪುರ ಮಾಡಿ, ಆದ್ರೆ ನಮ್ಮ ಭಾಗವನ್ನೂ ಮರೀಬೇಡಿ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರನ್ನು ಸಿಂಗಾಪುರ ಮಾಡುವತ್ತ ನಮ್ಮ ಸರ್ಕಾರ ಹೆಜ್ಜೆ ಇಟ್ಟಿರುವುದು ಸಂತೋಷದ ವಿಚಾರ. ಆದರೆ, ಕಲ್ಯಾಣ ಕರ್ನಾಟಕ ಭಾಗವನ್ನು ಬೆಂಗಳೂರು-ಮೈಸೂರು ಮಾದರಿಯಲ್ಲಿ ಅಭಿವೃದ್ಧಿ ಮಾಡಿದರೆ ಇಲ್ಲಿನ ಜನ ರಾಜ್ಯ ಸರ್ಕಾರಕ್ಕೆ ಚಿರಋುಣಿಯಾಗಿರುತ್ತಾರೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ‘ಆರೋಗ್ಯ ಅವಿಷ್ಕಾರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯನವರ ಮೈಸೂರು ಮತ್ತು ಡಿ.ಕೆ.ಶಿವಕುಮಾರ್‌ ಅವರ ಬೆಂಗಳೂರಿನಂತೆ ಈ ಪ್ರದೇಶದ ಅಭಿವೃದ್ಧಿ ಮಾಡಿದರೆ ಜನ ನಿಮ್ಮನ್ನು ಮರೆಯಲ್ಲ ಎಂದು … Read more

SBI Bank Rules : ಗ್ರಾಹಕರಿಗೆ ಗುಡ್‌ ನ್ಯೂಸ್ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ : ಇಂದಿನಿಂದಲೇ ಹೊಸ ನಿಯಮ.!

SBI Bank Rules : ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್‌ಬಿಐ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ರೆಪೊ ದರ ಕಡಿತದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹ ಸಾಲಗಳ ಬಡ್ಡಿದರವನ್ನು ಶೇಕಡಾ 0.50 ರಷ್ಟು ಕಡಿಮೆ ಮಾಡಿದೆ. ಈ ಮೂಲಕ ಗೃಹಸಾಲ ಪಡೆದುಕೊಂಡವರಿಗೆ ಗುಡ್ ನ್ಯೂಸ್ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬದಲಾವಣೆಯಾದ ಸಾಲ ದರಗಳು ಇಂದಿನಿಂದಲೇ … Read more

AI Plane Crash : ದುರಂತ ಸ್ಥಳ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾ‌ರ್

ಭೀಕರ ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಶನಿವಾರ(ಜೂ14) ಭೇಟಿ ನೀಡಿ ಪರಿಶೀಲಿಸಿದರು. ಇತರ ಕಾಂಗ್ರೆಸ್ ನಾಯಕರೊಂದಿಗೆ ಅಹಮದಾಬಾದ್‌ನ ನಾಗರಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ‘ಇಂತಹ ದುರಂತದ ಸಮಯದಲ್ಲಿ, ಯಾರೂ ಅದರ ಕ್ರೆಡಿಟ್ ತೆಗೆದುಕೊಳ್ಳಲು ಸ್ಪರ್ಧಿಸಬಾರದು. ಈಗ ಕಪ್ಪು ಪೆಟ್ಟಿಗೆ ಪತ್ತೆಯಾಗಿದೆ. ಫಲಿತಾಂಶ ಏನೆಂದು ನಾವು ನೋಡುತ್ತೇವೆ, ಏಕೆಂದರೆ ಸ್ಥಳದಲ್ಲೇ ಯಾರನ್ನಾದರೂ ದೂಷಿಸುವುದು … Read more

ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ : ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದ ಹೆಚ್ ವಿಶ್ವನಾಥ್

ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯವಾಣಿ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದರಿಂದ ಇಂದು ಪ್ರತಿ ಬಾರಿಯೂ ಕೇಳಿಬರುತ್ತಿರುವ ಸಿಎಂ ಬದಲಾವಣೆ ಮಾತಿಗೆ ಫುಲ್ ಸ್ಟಾಂಪ್ ಬೀಳಲಿದೆ ಎಂದರು. ಹೈಕಮಾಂಡ್ ಗೆ ಹೆದರಿ … Read more