ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು : ಮಧು ಬಂಗಾರಪ್ಪ

ಶಿಕ್ಷಣ ಸಚಿವರಾಗಿ ಒಂದು ವರ್ಷ ಪೂರೈಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸಚಿವ ಮಧು ಬಂಗಾರಪ್ಪ ತಮ್ಮ ಇಲಾಖೆ ಪ್ರಗತಿ ಸಾಧಿಸಿದೆ. ಇದನ್ನು ಸಿಎಂ ಸಿದ್ದರಾಮಯ್ಯ ಸರ್ ಕೂಡಾ ಮೆಚ್ಚಿದ್ದಾರೆ ಎಂದಿದ್ದಾರೆ. ‘ನನ್ನ ಇಲಾಖೆ ಬೇರೆ ಇಲಾಖೆಯಂತಲ್ಲ. ಇಲ್ಲಿ ಪ್ರಗತಿ ಕಣ್ಣಿಗೆ ಕಾಣಿಸಲ್ಲ. ಆದರೆ ಶಿಕ್ಷಣ ಎಂದರೆ ದೇವರ ಕೆಲಸ. ನನ್ನ ಇಲಾಖೆಯಲ್ಲಿ ಬಹಳ ಸಮಸ್ಯೆಗಳಿತ್ತು. ಹೀಗಾಗಿ ಸ್ವಲ್ಪ ಹುಷಾರಾಗಿ ನೋಡ್ಕೊಂಡು ಮಾಡು ಎಂದು ಮುಖ್ಯಮಂತ್ರಿಗಳು ನನಗೆ ಅಧಿಕಾರ ಕೊಟ್ರು. ನಿನ್ನೆ ನನ್ನ ಇಲಾಖೆಯ ಅಧಿಕಾರ ವಹಿಸಿ ಒಂದು … Read more

ಬೆಂಗಳೂರನ್ನು ಸಿಂಗಾಪುರ ಮಾಡಿ, ಆದ್ರೆ ನಮ್ಮ ಭಾಗವನ್ನೂ ಮರೀಬೇಡಿ ಎಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರನ್ನು ಸಿಂಗಾಪುರ ಮಾಡುವತ್ತ ನಮ್ಮ ಸರ್ಕಾರ ಹೆಜ್ಜೆ ಇಟ್ಟಿರುವುದು ಸಂತೋಷದ ವಿಚಾರ. ಆದರೆ, ಕಲ್ಯಾಣ ಕರ್ನಾಟಕ ಭಾಗವನ್ನು ಬೆಂಗಳೂರು-ಮೈಸೂರು ಮಾದರಿಯಲ್ಲಿ ಅಭಿವೃದ್ಧಿ ಮಾಡಿದರೆ ಇಲ್ಲಿನ ಜನ ರಾಜ್ಯ ಸರ್ಕಾರಕ್ಕೆ ಚಿರಋುಣಿಯಾಗಿರುತ್ತಾರೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಯಾದಗಿರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆದ ‘ಆರೋಗ್ಯ ಅವಿಷ್ಕಾರ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಿದ್ದರಾಮಯ್ಯನವರ ಮೈಸೂರು ಮತ್ತು ಡಿ.ಕೆ.ಶಿವಕುಮಾರ್‌ ಅವರ ಬೆಂಗಳೂರಿನಂತೆ ಈ ಪ್ರದೇಶದ ಅಭಿವೃದ್ಧಿ ಮಾಡಿದರೆ ಜನ ನಿಮ್ಮನ್ನು ಮರೆಯಲ್ಲ ಎಂದು … Read more

SBI Bank Rules : ಗ್ರಾಹಕರಿಗೆ ಗುಡ್‌ ನ್ಯೂಸ್ ನೀಡಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ : ಇಂದಿನಿಂದಲೇ ಹೊಸ ನಿಯಮ.!

SBI Bank Rules : ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್‌ಬಿಐ ತನ್ನ ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ರೆಪೊ ದರ ಕಡಿತದ ಬಳಿಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗೃಹ ಸಾಲಗಳ ಬಡ್ಡಿದರವನ್ನು ಶೇಕಡಾ 0.50 ರಷ್ಟು ಕಡಿಮೆ ಮಾಡಿದೆ. ಈ ಮೂಲಕ ಗೃಹಸಾಲ ಪಡೆದುಕೊಂಡವರಿಗೆ ಗುಡ್ ನ್ಯೂಸ್ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬದಲಾವಣೆಯಾದ ಸಾಲ ದರಗಳು ಇಂದಿನಿಂದಲೇ … Read more

AI Plane Crash : ದುರಂತ ಸ್ಥಳ ಪರಿಶೀಲಿಸಿದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ ಶಿವಕುಮಾ‌ರ್

ಭೀಕರ ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಶನಿವಾರ(ಜೂ14) ಭೇಟಿ ನೀಡಿ ಪರಿಶೀಲಿಸಿದರು. ಇತರ ಕಾಂಗ್ರೆಸ್ ನಾಯಕರೊಂದಿಗೆ ಅಹಮದಾಬಾದ್‌ನ ನಾಗರಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ‘ಇಂತಹ ದುರಂತದ ಸಮಯದಲ್ಲಿ, ಯಾರೂ ಅದರ ಕ್ರೆಡಿಟ್ ತೆಗೆದುಕೊಳ್ಳಲು ಸ್ಪರ್ಧಿಸಬಾರದು. ಈಗ ಕಪ್ಪು ಪೆಟ್ಟಿಗೆ ಪತ್ತೆಯಾಗಿದೆ. ಫಲಿತಾಂಶ ಏನೆಂದು ನಾವು ನೋಡುತ್ತೇವೆ, ಏಕೆಂದರೆ ಸ್ಥಳದಲ್ಲೇ ಯಾರನ್ನಾದರೂ ದೂಷಿಸುವುದು … Read more

ನವೆಂಬರ್ ತಿಂಗಳಲ್ಲಿ ಸಿಎಂ ಬದಲಾವಣೆ : ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗೋದು ಗ್ಯಾರಂಟಿ ಎಂದು ಭವಿಷ್ಯ ನುಡಿದ ಹೆಚ್ ವಿಶ್ವನಾಥ್

ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯವಾಣಿ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದರಿಂದ ಇಂದು ಪ್ರತಿ ಬಾರಿಯೂ ಕೇಳಿಬರುತ್ತಿರುವ ಸಿಎಂ ಬದಲಾವಣೆ ಮಾತಿಗೆ ಫುಲ್ ಸ್ಟಾಂಪ್ ಬೀಳಲಿದೆ ಎಂದರು. ಹೈಕಮಾಂಡ್ ಗೆ ಹೆದರಿ … Read more

ನಿಜವಾಯ್ತು ದುರಂತದ ಬಗ್ಗೆ ಕೋಡಿಶ್ರೀ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯ! ಸಾಕ್ಷಿಯಾದ ಎರಡು ಘಟನೆಗಳು!

ದೇಶದಲ್ಲಿ ಸಂಭವಿಸಿದ ದುರಂತಗಳ ಕುರಿತು ಈ ಮೊದಲೇ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ ನಿಜವಾಗಿದ್ದು, ಅವರು ಹೇಳಿದಂತೆ ರಾಜ್ಯದಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತ ಹಾಗೂ ಅಹಮದಾಬಾದ್‌ನಲ್ಲಿ ವಿಮಾನ ದುರ್ಘಟನೆ ಆಗಿ ಅಪಾರ ಸಾವುನೋವು ಆಗಿವೆ. ಕಳೆದ 10 ದಿನದ ಹಿಂದಷ್ಟೇ ಬೆಳಗಾವಿಯಲ್ಲಿ ಹೇಳಿಕೆ ನೀಡಿದ್ದ ಕೋಡಿಮಠ ಶ್ರೀಗಳು, ”ವಾಯುಗಂಡ” ಇದ್ದು, ವಾಯುನಿಂದ ದೇಶದಲ್ಲಿ ದೊಡ್ಡ ಅನಾಹುತ ಸಂಭವಿಸಿ ಅತಿಹೆಚ್ಚು ಸಾವು ನೋವು ಆಗಲಿದೆ ಎಂದು ಎಚ್ಚರಿಸಿದ್ದರು. ಈ ಬೆನ್ನಲ್ಲೇ ಕಾಲ್ತುಳಿತದಲ್ಲಿ ಉಸಿರಾಟದ ಸಮಸ್ಯೆಯಿಂದ 11 ಆರ್‌ಸಿಬಿ ಅಭಿಮಾನಿಗಳು … Read more

ಪ್ರಧಾನಿ ಮೋದಿ ಏನ್ ಪೈಲಟ್ಟಾ.? ಅವನ್ಯಾಕೆ ರಾಜೀನಾಮೆ ಕೊಡಬೇಕು? – ಸಿ.ಎಂ.ಇಬ್ರಾಹಿಂ ಬ್ಯಾಟಿಂಗ್

ಗುಜರಾತಿನ ಅಹಮದಾಬಾದ್‌ನಲ್ಲಿ ಸಂಭವಿಸಿದೆ ವಿಮಾನ ಅಪಘಾತದಲ್ಲಿ ಒಟ್ಟು 265 ಜನ ಸಾವನ್ನಪ್ಪಿದ್ದಾರೆ. ಇನ್ನು ಈ ದುರಂತದ ಬಗ್ಗೆ ನಾನಾ ಚರ್ಚೆ ನಡೆಯುತ್ತಿವೆ. ಕಾಂಗ್ರೆಸ್‌ನ ಕೆಲ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದೇ ವಿಚಾರದ ಬಗ್ಗೆ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಪ್ರತಿಕ್ರಿಯಿಸಿದ್ದು, ಮೋದಿ ಪರ ಬ್ಯಾಟಿಂಗ್ ಮಾಡಿದ್ದಾರೆ. ಈ ಪ್ರಕರಣಕ್ಕೂ ಮೋದಿಗೆ ಏನು ಸಂಬಂಧ? ಮೋದಿ ಏನು ಪೈಲೆಟಾ? ಯಾಕೆ ರಾಜೀನಾಮೆ ಕೊಡಬೇಕು? ಬೇಕಿದ್ದರೆ ನಾಗರಿಕ ವಿಮಾನಯಾನ ಸಚಿವರು ರಾಜೀನಾಮೆ … Read more

ಜಾತಿಗಣತಿ : ಸಿಎಂ ನಿರ್ಧಾರಕ್ಕೆ ಬಲೆ ಹಣೆದ ಹೈಕಮಾಂಡ್ ; ಸ್ವತಃ ರಾಹುಲ್ ಗಾಂಧಿ ಕೂಡ ಅತೃಪ್ತಿ

“ಯಾರು ಏನೇ ಹೇಳಲಿ, ಜೂ.12ರಂದು ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಅಂಗೀಕರಿಸುವುದು ಶತಃಸಿದ್ಧ’….! ಹೀಗೆಂದು ಸಿಎಂ ಸಿದ್ದರಾಮಯ್ಯ ಜೂ.6ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ಖಡಾಖಂಡಿತವಾಗಿ ಪ್ರಕಟಿಸಿದ್ದು, ಇದು ಅವರ ಸಂಪುಟ ಸಹೋದ್ಯೋಗಿಗಳ ಜಂಘಾಬಲವನ್ನೇ ಉಡುಗಿಸಿತ್ತು. ಅಂದು ಸಿದ್ದರಾಮಯ್ಯ ತೋರಿದ ಹಠ, ವರದಿ ಸ್ವೀಕಾರಕ್ಕೆ ಪ್ರಕಟಿಸಿದ ಮುಹೂರ್ತ, ಕಾಲ್ತುಳಿತ ಪ್ರಕರಣದಲ್ಲಿ ಆದ ಹಿನ್ನಡೆ ಸೃಷ್ಟಿಸಿದ ರೋಶ, ಅವರು ಇಂಥದ್ದೊಂದು ನಿರ್ಧಾರದಿಂದ ಹಿಂದೆ ಸರಿಯುವುದು ಸಾಧ್ಯವೇ ಇಲ್ಲ ಎಂಬ ಸನ್ನಿವೇಶ ಸೃಷ್ಟಿಸಿತ್ತು. ಆದರೆ ಅದೇ ದಿನ … Read more

ಏರ್ ಇಂಡಿಯಾ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದ 11A ಸೀಟಿನಲ್ಲಿದ್ದ ವ್ಯಕ್ತಿ

ಏ‌ರ್ ಇಂಡಿಯಾ ವಿಮಾನ AI171 ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ ಒಬ್ಬರಾದ ರಮೇಶ್ ವಿಶ್ವಸುಮಾರ್ ಬುಚರ್ವಾಡಾ ಇಂದು ನಡೆದ ಭೀಕರ ವಿಮಾನ ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದಿದ್ದಾರೆ. 11A ನಲ್ಲಿ ಕುಳಿತಿದ್ದ 38 ವರ್ಷದ ರಮೇಶ್ ಘಟನೆಯ ಸಮಯದಲ್ಲಿ ವಿಮಾನದಿಂದ ಜಿಗಿದಿದ್ದಾರೆ ಎಂದು ವರದಿಯಾಗಿದೆ. ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಬದುಕುಳಿದಿದ್ದಾರೆ ಎಂದು ಅಹಮದಾಬಾದ್ ಪೊಲೀಸ್ ಆಯುಕ್ತ ಜಿಎಸ್ ಮಲಿಕ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. “ಪೊಲೀಸರು 11A ಸೀಟಿನಲ್ಲಿ ಒಬ್ಬ ಬದುಕುಳಿದ … Read more

‘ಏರ್ ಇಂಡಿಯಾ ದುರಂತ : ಟೀ ಸ್ಟಾಲ್ ಬಳಿ ನಿಂತಿದ್ದ14 ವರ್ಷದ ಬಾಲಕ ದುರ್ಮರಣ.!

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದಲ್ಲಿ 261 ಜನರು ಸಾವನ್ನಪ್ಪಿದ್ದಾರೆ. ವಿಮಾನ ಅಪಘಾತದಿಂಸ ಸಂಭವಿಸಿದ ಬೆಂಕಿ ಅವಘಡದಲ್ಲಿ ಟೀ ಸ್ಟಾಲ್ ಬಳಿ ನಿಂತಿದ್ದ ಬಾಲಕ ಕೂಡ ಮೃತಪಟ್ಟಿದ್ದಾನೆ. ಏರ್ ಇಂಡಿಯಾ ವಿಮಾನ ಪತನಗೊಂಡು ಬಿ.ಜೆ.ಹಾಸ್ಟೆಲ್ ಗೆ ಅಪ್ಪಳಿಸಿತ್ತು. ಈ ವೇಳೆ ಇಡೀ ಹಾಸ್ಟೆಲ್ ಕಟ್ಟಡ ಸುಟ್ಟು ಕರಕಲಾಗಿದೆ. ಹಾಸ್ಟೇಲ್ ನಲ್ಲಿದ್ದ ಹಲವು ವಿದ್ಯಾರ್ಥಿಗಳು, ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. ಹಾಸ್ಟೆಲ್ ಪಕ್ಕದಲ್ಲಿದ್ದ ಕಟ್ಟಡಗಳು ಬೆಂಕಿಗಾಹುತಿಯಾಗಿವೆ. ಹಾಸ್ಟೆಲ್ ಮುಂಭಾಗ ತಮ್ಮದೇ ಟೀ ಅಂಗಡಿ ಮುಂದೆ ನಿಂತಿದ್ದ … Read more