ಈಶ್ವರಪ್ಪಗೆ ಶಾಲು ಹೊದಿಸಿ ಸನ್ಮಾನಿಸಿದ ಬಿ ಎಸ್‍ ಯಡಿಯೂರಪ್ಪ – ಹೆಗಲ ಮೇಲೆ ಕೈ ಹಾಕಿ ಮಾತಾಡಿದ ಕುಚಿಕುಗಳು!

ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ಆರತಕ್ಷತೆಯಲ್ಲಿ ಈಶ್ವರಪ್ಪ ಭಾಗಿಯಾಗಿದ್ದಾರೆ. ಈ ವೇಳೆ ಬಿಎಸ್‍ವೈ ಆತ್ಮೀಯವಾಗಿ ಅವರನ್ನು ಸ್ವಾಗತಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಸಂಸದ ರಾಘವೇಂದ್ರ ಅವರ ಮಗನ ಆರತಕ್ಷತೆ ಕಾರ್ಯಕ್ರಮಕ್ಕೆ ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್ ಬಂದಿದ್ದರು. ಈ ವೇಳೆ ಈಶ್ವರಪ್ಪ ಅವರ ಹೆಗಲ ಮೇಲೆ ಕೈ ಹಾಕಿ ಆತ್ಮೀಯವಾಗಿ ಯಡಿಯೂರಪ್ಪ ಮಾತಾಡಿಸಿದರು. ಅಲ್ಲದೇ, ಶಾಲು ಹೊದಿಸಿ ಈಶ್ವರಪ್ಪ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ಕಾಂತೇಶ್ ಆಶೀರ್ವಾದ ಪಡೆದರು. … Read more

ಕ್ರಮ ತೆಗೆದುಕೊಳ್ಳಲಿ ನಾನು ಬೆಂಬಲಿಸುವುದಿಲ್ಲ; ಕಾಂಗ್ರೆಸ್ ಶಾಸಕರ ಮೇಲೆ ಇಡಿ ದಾಳಿ ಬಗ್ಗೆ ಸಿದ್ದು ಶಾಕಿಂಗ್ ರಿಯಾಕ್ಷನ್‌

ಇಂದು (ಜೂನ್ 11) ಬೆಳ್ಳಂಬೆಳಗ್ಗೆಯೇ ಇಡಿ ಅಧಿಕಾರಿಗಳು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯದ 8 ಕಡೆ ದಾಳಿ ನಡೆಸಿದ್ದು, ಸಂಸದ ಇ. ತುಕಾರಾಂ ಸೇರಿದಂತೆ ನಾಲ್ವರು ಶಾಸಕರ ಮನೆಯಲ್ಲೂ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿಯ ಐದು ಕಡೆ ಹಾಗೂ ಬೆಂಗಳೂರಿನ ಮೂರು ಕಡೆ ಸೇರಿದಂತೆ ರಾಜ್ಯದ ಒಟ್ಟು 8 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಚುನಾವಣೆ ಸಮಯದಲ್ಲಿ ನಿಗಮದ ಹಣ ದುರ್ಬಳಕೆಯಾಗಿರುವುದರ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಸಂಡೂರಿನಲ್ಲಿರುವ ಸಂಸದ ಇ. ತುಕಾರಾಂ, ಕಂಪ್ಲಿ … Read more

“ನನ್ನಂತೆಯೇ ಸಾವಿರಾರು ಮಂದಿ ಶ್ರಮಿಸಿದ್ದಾರೆ, ಅನಗತ್ಯ ಪ್ರಚಾರ ಬೇಡ, ನನ್ನ ಗೌಪ್ಯತೆಯನ್ನು ಗೌರವಿಸಿ”ಎಂದ ಚೆನಾಬ್ ಸೇತುವೆ ಯೋಜನಾ ಇಂಜಿನಿಯರ್

ಪ್ರಧಾನಿ ನರೇಂದ್ರ ಮೋದಿ ಕಳೆದ ಶುಕ್ರವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾದ ಚೆನಾಬ್ ಸೇತುವೆಯನ್ನು ಉದ್ಘಾಟಿಸಿದರು. ರಾಷ್ಟ್ರ ಈ ಸಾಧನೆಯನ್ನು ಆಚರಿಸುತ್ತಿದ್ದಂತೆ, ಈ ಯೋಜನೆಗೆ ದೀರ್ಘಕಾಲದಿಂದ ಕೊಡುಗೆ ನೀಡಿದ ಪ್ರೊಫೆಸರ್ ಜಿ ಮಾಧವಿ ಲತಾ ಅವರು ದೇಶಾದ್ಯಂತ ಸುದ್ದಿಯಾಗಿದ್ದರು. ತಮ್ಮ ಬಗ್ಗೆ ಅಗತ್ಯಕ್ಕಿಂತ ಹೆಚ್ಚು ಸುದ್ದಿಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಮಾಧವಿ ಲತಾ, ಈ ಯೋಜನೆಯಲ್ಲಿ ಸಾವಿರಾರು ಮಂದಿ ತನ್ನಂತೆಯೇ ಕೊಡುಗೆ ನೀಡಿದ್ದು ಅವರೆಲ್ಲಾ ತೆರೆ ಮರೆಯಲ್ಲಿದ್ದಾರೆ, ನಾನೂ ಅವರಂತೆಯೇ … Read more

ದಿಲ್ಲಿಗೆ ಹೋದ ಸಿಎಂ ಸಿದ್ದರಾಮಯ್ಯರಿಗೆ ಭಾರೀ ಹಿನ್ನಡೆ.? ದೆಹಲಿಯಲ್ಲಿ ಸಿಎಂ ಚರ್ಚೆ ಮಾಡಿರುವುದೇನು.?

ಕರ್ನಾಟಕದಲ್ಲಿ ವಿವಾದ ಸೃಷ್ಟಿಸಿರುವ ಜಾತಿಗಣತಿ ವರದಿ ಜಾರಿಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಜಾತಿಗಣತಿ ವೇಳೆ ಪಡೆದ ದತ್ತಾಂಶಗಳ ಮರುಗಣತಿಗೆ ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿದ್ದು, ಜೂನ್ 12 ರಂದು ನಡೆಯಲಿರುವ ವಿಶೇಷ ಕ್ಯಾಬಿನೆಟ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಜಾತಿಗಣತಿ ನಡೆಸಿದ 9ರಿಂದ 10 ವರ್ಷಗಳು ಕಳೆದಿವೆ. ಹಾಗಾಗಿ ಹೊಸದಾಗಿ ಸರ್ವೆ ಮಾಡುವಂತೆ ಹೈಕಮಾಂಡ್ ತಿಳಿಸಿದೆ. ಹಾಗಾಗಿ 90 ದಿನಗಳಲ್ಲಿ ಸರ್ವೆ ಮುಗಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ‘ಸೋತ’ರಾಮಯ್ಯ! ಯಾಕಿಂಗೆ?ಸಿಎಂ ಸಿದ್ದರಾಮಯ್ಯ ಪ್ರಬಲ ಜಾತಿ … Read more

‘ಚೆನ್ನೈಗೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನ ಇದೆ, ನಾನು ಮೊದಲ ಕಲಿತ ಭಾಷೆ ತಮಿಳು’ ಎಂದು ಪೋಸ್ಟ್ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ಅವರ ಹೆಸರು ದೇಶಾದ್ಯಂತ ಚಾಲ್ತಿಯಲ್ಲಿ ಇದೆ. ಅವರು ಇತ್ತೀಚೆಗೆ ‘ಪುಷ್ಪ 2’ ಚಿತ್ರದಿಂದ ಅವರು ದೊಡ್ಡ ಗೆಲುವು ಪಡೆದರು. ಆ ಬಳಿಕ ‘ಛಾವಾ’ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈಗ ರಶ್ಮಿಕಾ ಮಂದಣ್ಣ ಅವರು ತಮಿಳು ಚಿತ್ರರಂಗಕ್ಕೆ ಮರಳಿದ್ದಾರೆ. ‘ವಾರಿಸು’ ಬಳಿಕ ಅವರು ಮತ್ತೆ ತಮಿಳು ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ರಶ್ಮಿಕಾ ಮಂದಣ್ಣಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದು, ಈಗ ವೈರಲ್ ಆಗಿದೆ. ಈ ಫೋಟೋಗೆ ಚೆನ್ನೈ ಹಾಗೂ ತಮಿಳು ಭಾಷೆ ಬಗ್ಗೆ … Read more

ಬೆಂಗಳೂರು ಕಾಲ್ತುಳಿತದಲ್ಲಿ 11 ಮಂದಿ ಸಾವು : ರಾಹುಲ್ ಗಾಂಧಿಗೆ ಐದು ಪ್ರಶ್ನೆಗಳು, ಹೆದರದೇ ಉತ್ತರಿಸಿ..!

ಕ್ರೆಡಿಟ್‌ಗಾಗಿ ಹಪಾಹಪಿಸುವ ನಿಮ್ಮ ಪಕ್ಷದ ನಾಯಕರಾದ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಈಗ ನಿಮ್ಮನ್ನು ಭೇಟಿ ಮಾಡಲು ಬರುತ್ತಿದ್ದಾರೆ. ಆದರೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಸರ್ಕಾರಿ ಪ್ರಾಯೋಜಿತ ಕಾಲ್ತುಳಿತದ ಕುರಿತು ನಾವು ಅವರಿಗೆ ಪ್ರಶ್ನೆಗಳನ್ನು ಕೇಳಿದ್ದೇವೆ ಆದರೆ ಅವರಲ್ಲಿ ಉತ್ತರವೇ ಇಲ್ಲ ಎಂದು ಬಿಜೆಪಿ ವ್ಯಂಗ್ಯವಾಡಿದೆ. 1. ಕರ್ನಾಟಕದಲ್ಲಿ 11 ಯುವಜನರ ಅಮೂಲ್ಯ ಜೀವವನ್ನು ಬಲಿತೆಗೆದುಕೊಂಡ, ನಿಮ್ಮ ಕಾಂಗ್ರೆಸ್ ಸರ್ಕಾರ ತಪ್ಪಿಸಬಹುದಾಗಿದ್ದ ಭೀಕರ ದುರಂತಕ್ಕೆ ಯಾರನ್ನು ಹೊಣೆಗಾರರನ್ನಾಗಿ ಮಾಡುತ್ತೀರಿ? 2. ವಿಧಾನಸೌಧದಲ್ಲಿ ಇಂತಹ … Read more

ಅಡ್ಡವಾಗಿ ಕಾಲುಗಳು, ಮೂಲೆಯಲ್ಲಿ ತಲೆ – ಸೂಟ್‌ಕೇಸ್‌ನಲ್ಲಿ ಮಹಿಳೆಯ ಮೃತದೇಹ ಪತ್ತೆ

ಉತ್ತರಪ್ರದೇಶದ ಗಾಜಿಯಾಬಾದ್‌ನ ಸೂಟ್‌ಕೇಸ್‌ವೊಂದರಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಹಿಳೆಯ ವಯಸ್ಸು ಸುಮಾರು 25-28 ಎಂದು ಅಂದಾಜಿಸಲಾಗಿದ್ದು, ಸಿಂಧೂರ ಹಾಗೂ ಕಾಲು ಉಂಗುರ ಧರಿಸಿರುವುದು ಕಂಡುಬಂದಿದೆ ಎಂದಿದ್ದಾರೆ. ಗಾಜಿಯಾಬಾದ್‌ನ ಲೋನಿ ಗಡಿ ಪ್ರದೇಶದ ಕಾಲುವೆಯಲ್ಲಿ ಮಹಿಳೆಯ ಛಿದ್ರಗೊಂಡ ಮೃತದೇಹ ಸೂಟ್‌ಕೇಸ್‌ವೊಂದರಲ್ಲಿ ಪತ್ತೆಯಾಗಿದೆ. ಈ ಕುರಿತು ಮಂಗಳವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸೂಟ್‌ಕೇಸ್‌ನಲ್ಲಿ ಕಾಲುಗಳನ್ನು ಅಡ್ಡಲಾಗಿ ಇರಿಸಲಾಗಿದ್ದು, ಕೈ … Read more

Fact Check : ಚಿನ್ನಸ್ವಾಮಿ ಕಾಲ್ತುಳಿತದ ಒತ್ತಡಕ್ಕೆ ಹೆದರಿ ಖಾತೆ ಬದಲಿಸಿ ಇಲ್ಲ ರಾಜೀನಾಮೆ ಕೊಡ್ತೀನಿ ಎಂದ ಪರಮೇಶ್ವ‌ರ್!

ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವ‌ರ್ ಅವರು ತಮ್ಮ ಖಾತೆ ಬದಲಾವಣೆಯ ಬಗ್ಗೆ ಮುಖ್ಯಮಂತ್ರಿಗಳನ್ನು ಕೇಳಿಕೊಂಡಿದ್ದಾರೆ ಎಂಬ ಮಾಧ್ಯಮ ವರದಿಗಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ”ನಾನು ಯಾವತ್ತೂ ನಿರ್ಧಿಷ್ಟವಾಗಿ ಯಾವ ಖಾತೆ ಬೇಕು ಎಂದು ಮುಖ್ಯಮಂತ್ರಿಗಳನ್ನು ಕೇಳಿಲ್ಲ. ಇದು ಸತ್ಯಕ್ಕೆ ದೂರವಾದ ವದಂತಿ ಮತ್ತು ವಿಪಕ್ಷದವರು ಹಬ್ಬಿಸುತ್ತಿರುವ ಸುದ್ದಿ” ಎಂದು ಅವರು ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಸಾರವಾದ ಸುದ್ದಿಗಳ ಪ್ರಕಾರ ಗೃಹ ಸಚಿವರಾಗಿರುವ ಡಾ. ಪರಮೇಶ್ವರ್ ಅವರು ತಮ್ಮ … Read more

ಕಾಲ್ತುಳಿತ ದುರಂತ : ಐವರು ಪೊಲೀಸ್ ಅಧಿಕಾರಿಗಳ ಅಮಾನತು, ಸಿಎಂಗೆ ಭಾರತೀಯ ಪೊಲೀಸ್ ಒಕ್ಕೂಟ ಖಡಕ್ ಪತ್ರ.!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಆರ್‌ಸಿಬಿಯ 11 ಅಭಿಮಾನಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರ್ತವ್ಯ ಲೋಪದ ಕಾರಣ ನೀಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ್ ಸೇರಿಂದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಕ್ಕೆ ಸಾರ್ವಜನಿಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರ ಮಾಡಿದ ತಪ್ಪಿಗೆ ದಕ್ಷ ಅಧಿಕಾರಿಗಳನ್ನು ಅಮಾನತು ಮಾಡಿದ್ದು ಏಕೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪರ-ವಿರೋಧದ ಚರ್ಚೆಯಾಗುತ್ತಿದೆ. ಸರ್ಕಾರದ … Read more

2 ಮಕ್ಕಳ ತಾಯಿ ಮೇಲಿನ ಹುಚ್ಚು ಪ್ರೀತಿ ; ಓಯೊ ರೂಮ್‌ನಲ್ಲಿ ಬೆತ್ತಲೆಗೊಳಿಸಿ 17 ಬಾರಿ ಚುಚ್ಚಿ ಕೊಲೆ.!

ಎರಡು ಮಕ್ಕಳ ತಾಯಿಯ ಮೇಲಿನ ಹುಚ್ಚು ಪ್ರೀತಿಗೆ ಪಾಗಲ್ ಪ್ರೇಮಿಯೊಬ್ಬ ಬರ್ಬರ ಹತ್ಯೆ ನಡೆಸಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. 25 ವರ್ಷದ ಇಂಜಿನಿಯರ್ ಯಶಸ್ ಕೊಲೆ ಆರೋಪಿಯಾಗಿದ್ದು, 33 ವರ್ಷದ ಹರಿಣಿ ಮೃತ ಮಹಿಳೆ. ಇಬ್ಬರೂ ಸಹ ಕೆಂಗೇರಿ ನಿವಾಸಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಯಶಸ್‌ ಸ್ನೇಹಿತರ ಸಂಬಂಧಿಯಾಗಿರುವ ಹರಿಣಿ ಜಾತ್ರೆಯೊಂದರಲ್ಲಿ ಯಶಸ್‌ಗೆ ಪರಿಚಯವಾಗಿ ನಂಬರ್‌ ಬದಲಿಸಿಕೊಂಡಿದ್ದರು. ಹೀಗೆ ಶುರುವಾದ ಸ್ನೇಹ ಕಾಮಕ್ಕೆ ತಿರುಗಿ ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದರು. ಇತ್ತ ಯಶಸ್‌ ಹರಿಣಿಯ ಮೇಲೆ ವ್ಯಾಮೋಹ ಬೆಳೆಸಿಕೊಂಡಿದ್ದ. … Read more