ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿಯ ವಿಚಾರವಾಗಿ ಆಂತರಿಕ ಕಿಚ್ಚಾಟ ಹೆಚ್ಚಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕು ಎಲ್ಲವನ್ನು ಮಾಡಿದ್ದೇನೆ.
ನಾನು ಎಲ್ಲರ ಹಾಗೆ ಸ್ಟೇಜ್ ಮೇಲೆ ಬಂದು ಭಾಷಣ ಮಾಡಿಕೊಂಡು ಸುಮ್ಮನೆ ಹೋಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ನಾನು ಬಾವುಟ ಕಟ್ಟಿದ್ದೇನೆ. ಕಸ ಗುಡಿಸಿದ್ದೇನೆ. ಪಕ್ಷಕ್ಕೆ ಏನೇನು ಬೇಕು ಎಲ್ಲವನ್ನು ಮಾಡಿದ್ದೇನೆ. ಭಾಷಣ ಮಾಡಿಕೊಂಡು ಹೋಗು ಕೆಲಸ ಮಾಡಿಲ್ಲ ಸ್ಟೇಜ್ ಗೆ ಬಂದ ಮೇಲೆ ಭಾಷಣ ಮಾಡಿಕೊಂಡು ಹೋಗಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾವು ಲೈಫ್ ಟೈಮ್ ವರ್ಕರ್. ನಾನು ಸಿದ್ದರಾಮಯ್ಯ ಈಗಾಗಲೇ ಹೇಳಿದ್ದೇವೆ ಹೈಕಮಾಂಡ್ ಏನ್ ಹೇಳುತ್ತೆ ಅದರಂತೆ ಹೇಳಿಕೊಂಡು ಹೋಗುತ್ತೇವೆ ಅಂತ ಹೇಳಿದ್ದೇವೆ. ನಾನು ನನಗೆ ಯಾವ ಪೋಸ್ಟ್ ಇದ್ದರು ಪಕ್ಷದ ವರ್ಕರ್. ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದಿನಿ ಪೋಸ್ಟರ್ ಅಂಟಿಸಿದ್ದೇನೆ ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.
ನಾನು ಪಕ್ಷದ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ, ಸ್ಟೇಜ್ ಮೇಲೆ ಬಂದು ಭಾಷಣ ಮಾಡಿ ಹೋಗಿಲ್ಲ : ಡಿಸಿಎಂ ಡಿಕೆ ಶಿವಕುಮಾರ್
WhatsApp Group
Join Now