Drought Relief : ಕರ್ನಾಟಕ ರಾಜ್ಯದ ಎಲ್ಲ ರೈತರಿಗೆ ಗುಡ್ ನ್ಯೂಸ್! ರಾಜ್ಯದ ರೈತರ ಖಾತೆಗಳಿಗೆ ಬೆಳೆ ಹಾನಿ, ಬರ ಪರಿಹಾರ ಹಣ, ಎರಡನೇ ಕಂತಿನ ಹಣ ಜಮಾ. ರಾಜ್ಯ ಸರ್ಕಾರದಿಂದ ರಾಜ್ಯದ ಕೆಲವು ಜಿಲ್ಲೆಗಳಿಗೆ ಮತ್ತು ಕೆಲವು ತಾಲೂಕುಗಳನ್ನ ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿತ್ತು. ಬರಪೀಡಿತ ತಾಲೂಕುಗಳ ರೈತರ ಖಾತೆಗಳಿಗೆ ಪ್ರತಿ ಹೆಕ್ಟೇರ್ ಭೂಮಿಗೆ ₹22,500 ರೂಪಾಯಿಗಳನ್ನ ಬಿಡುಗಡೆ ಗೊಳಿಸಬೇಕೆಂದು ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ಮಾರ್ಗಸೂಚಿಗಳನ್ನ ಬಿಡುಗಡೆಗೊಳಿಸಲಾಗಿತ್ತು.
ಅದೇ ಪ್ರಕಾರವಾಗಿ, ರೈತರ ಖಾತೆಗಳಿಗೆ ಹಣ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಲಾಗಿದ್ದು, ರೈತರ ಖಾತೆಗಳಿಗೆ ವರ್ಗಾವಣೆಯಾಗಲಿದೆ. ಬರ ಪರಿಸ್ಥಿತಿಯಿಂದ ಶೇಕಡಾ 33 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಠ ಎರಡು ಹೆಕ್ಟೇರ್ ಗಳಿಗೆ ಸೀಮಿತಗೊಳಿಸಿ, ಮಳೆಯಾಶ್ರಿತ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹8500 ರೂ.ಗಳು, ನೀರಾವರಿ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹17,000 ರೂ ಗಳು ಮತ್ತು ಬಹುವಾರ್ಷಿಕ ಬೆಳೆಗೆ ಪ್ರತಿ ಹೆಕ್ಟೇರ್ಗೆ ₹22,500 ರೂ ಗಳು ನಿಗದಿಪಡಿಸಲಾಗಿದೆ.
ಇದನ್ನೂ ಕೂಡ ಓದಿ : Free Laptop Scheme : ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಭಾಗ್ಯ.! ಏನೆಲ್ಲಾ ದಾಖಲೆಗಳು ಬೇಕಾಗುತ್ತದೆ.?
2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರಿಗೆ ಬೆಳೆ ಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಬೆಳೆ ಹಾನಿ ಪರಿಹಾರವಾಗಿ ಅರ್ಹತೆಗೆ ಅನುಗುಣವಾಗಿ ಪ್ರತಿ ರೈತರಿಗೆ ಗರಿಷ್ಠ ₹2000 ರೂ ಗಳವರೆಗೆ ರೈತರಿಗೆ ಪಾವತಿಸಲು ಸರಕಾರವು ಅನುಮತಿಯನ್ನ ನೀಡಲಾಗಿರುತ್ತೆ. ಮತ್ತು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಎನ್ಡಿಆರ್ಎಫ್ ಅನುದಾನ ಬಿಡುಗಡೆಯಾದ ನಂತರ ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತಕ್ಕೆ ಅರ್ಹತೆ ಇರುವ ರೈತರಿಗೆ ಹೆಚ್ಚುವರಿ ಬೆಳೆ ಹಾನಿ ಪರಿಹಾರ ಬಿಡುಗಡೆ ಗೊಳಿಸಲಾಗುವುದು.
FID ಹೊಂದಿರುವ ರೈತರ ಮಾಹಿತಿಯನ್ನು ಆಧರಿಸಿ ಮೊದಲನೇ ಹಂತದಲ್ಲಿ ಗರಿಷ್ಠ ₹2000 ರೂ ಗಳಂತೆ ಒಟ್ಟು 65,170 ರೈತರಿಗೆ ಇನ್ ಪುಟ್ ಸಬ್ಸಿಡಿ ಮೊತ್ತವನ್ನ ಜಮೆ ಮಾಡಲಾಗುತ್ತದೆ. ಎಸ್ಡಿಆರ್ಎಫ್ ಮಾರ್ಗಸೂಚಿಗಳ ಪ್ರಕಾರ ಹೆಚ್ಚುವರಿ ಮೊತ್ತವನ್ನ ಮೇ 2 ರಂದು ಎಂಟು 40,810 ರೈತರಿಗೆ ಇನ್ ಪುಟ್ ಸಬ್ಸಿಡಿ ಹಣ ಜಮೆ ಮಾಡಲು ಅನುಮೋದನೆ ನೀಡಲಾಗಿತ್ತು. ಸರ್ಕಾರದಿಂದ ನೇರವಾಗಿ ಆಧಾರ್ ಸಂಖ್ಯೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆ ಮಾಡುತ್ತಾರೆ.
ಇದನ್ನೂ ಕೂಡ ಓದಿ : Drought Relief : ಬೆಳೆ ಪರಿಹಾರ ಹಣ ಬಿಡುಗಡೆ.! ನಿಮ್ಮ ಬ್ಯಾಂಕ್ ಖಾತೆಗೆ ಬಂದಿದೆಯಾ ಚೆಕ್ ಮಾಡಿಕೊಳ್ಳಿ
ಹೆಚ್ಚಿನ ಮಾಹಿತಿಗಾಗಿ ಹಾಗೂ ಬೆಳೆ ಪರಿಹಾರ ಹಣ ಖಾತೆಗೆ ಜಮಾ ಆಗದೇ ಇರುವ ಬಗ್ಗೆ ದೂರನ್ನ ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ. ಸಹಾಯವಾಣಿಯನ್ನೂ ತೆರೆಯಲಾಗಿತ್ತು. ಸಾರ್ವಜನಿಕರು ದೂರುಗಳನ್ನ ಬೆಳಿಗ್ಗೆ 10 ರಿಂದ ಸಂಜೆ 6:00 ಗಂಟೆವರೆಗೆ ಸಲ್ಲಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ. ಹಾಗೂ ಸಂಬಂಧಪಟ್ಟ ತಾಲೂಕು ಕೃಷಿ ಅಧಿಕಾರಿ ತಹಶೀಲ್ದಾರ್ ಅವರ ಕಚೇರಿಗೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- RSS ಸಭೆ ನಂತರ ರಾಜ್ಯದಲ್ಲಿ ಅನಾಹುತ ಸಾಧ್ಯತೆ, ಮೀಟಿಂಗ್ ಬಗ್ಗೆ ಹಲವು ಡೌಟ್ ಎಂದ ಹರಿಪ್ರಸಾದ್!
- Dina Bhavishya : ಇಂದಿನ ರಾಶಿಫಲ: ಒಂದೇ ಕ್ಲಿಕ್ನಲ್ಲಿ 12 ರಾಶಿಗಳ ಸಂಪೂರ್ಣ ಫಲ
- ದಿನ ಭವಿಷ್ಯ (10-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- SBI Bank Update : ನಿಮ್ಮ ಎಸ್ ಬಿಐ ಖಾತೆಯಿಂದ ₹236/- ಕಟ್ ಆಗಿದ್ಯಾ.? ಯಾಕೆ ಕಟ್ ಆಗಿದೆ ಗೊತ್ತಾ.?
- Arecanut Price : ಇಂದಿನ ಅಡಿಕೆ ಬೆಲೆ : ನಿಮ್ಮ ಊರಿನ ಮಾರುಕಟ್ಟೆಯಲ್ಲಿ ಎಷ್ಟು.?
- ‘ಅವನಿಗೆ ತಕ್ಕ ಶಾಸ್ತಿಯಾಗಿದೆ, ಮಗನಾದರೂ ಅವನ ಹೆಣವೂ ಬೇಡ! – ಅತ್ಯಾಚಾರ, ಕೊಲೆ ಆರೋಪಿಯ ಶವ ಪಡೆಯಲು ನಿರಾಕರಿಸಿದ ಹೆತ್ತ ತಾಯಿ!
- ಬೆಂಗಳೂರಲ್ಲಿ ಘೋರ ದುರಂತ ; ಶಾಲಾ ವಾಹನಕ್ಕೆ ಸಿಲುಕಿ ತಾಯಿ ಎದುರೇ 4 ವರ್ಷದ ಬಾಲಕಿ ಸಾವು.!
- ಇಂದಿನ ದಿನ ಭವಿಷ್ಯ : 12 ರಾಶಿಗಳ ಫಲ ಹೇಗಿದೆ.? ನಿಮ್ಮ ರಾಶಿಗೆ ಶುಭವೇ, ಸವಾಲೇ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- 1 ವರ್ಷದ ಬಳಿಕ ಶಿವಮೊಗ್ಗ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್, ಶವ ಸೂಟ್ಕೇಸ್ಲ್ಲಿಟ್ಟು ಪ್ರಪಾತಕ್ಕೆ ತಳ್ಳಿದ ಪಿಜಿ ಓನರ್ಸ್!
- ಬೆಳಗಾವಿಯ ಆರ್ಎಸ್ಎಸ್ ಸಮಾವೇಶ ಖಾಸಗಿ ಕಾರ್ಯಕ್ರಮ, ಅನುಮತಿ ಅಗತ್ಯವಿಲ್ಲ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
- Arecanut price : ಇಂದಿನ ಅಡಿಕೆ ಬೆಲೆ ಅಪ್ಡೇಟ್ | ರೈತರಿಗೆ ದೊಡ್ಡ ಸುದ್ದಿ!
- Income Tax : ಈಗ ಬ್ಯಾಂಕ್ ಖಾತೆಗೆ ಇಷ್ಟು ಹಣ ಜಮಾ ಮಾಡಿದರೆ, 60% ತೆರಿಗೆ ಪಾವತಿಸಬೇಕಾಗುತ್ತದೆ. ಜಾಗರೂಕರಾಗಿರಿ!
- Dina Bhavishya : ಇಂದಿನ ರಾಶಿಫಲ: ಶುಭಯೋಗಗಳು ಮತ್ತು ಸವಾಲುಗಳ ಸಂಪೂರ್ಣ ಮಾಹಿತಿ
- Post office Scheme : ಪೋಸ್ಟ್ ಆಫೀಸ್ನಲ್ಲಿ ಈ ಹೂಡಿಕೆ ಮಾಡಿ: ಪ್ರತಿ ತಿಂಗಳು 9250 ರೂಪಾಯಿ ಪಡೆದುಕೊಳ್ಳಿ!
- Pan Card : ಪಾನ್ ಕಾರ್ಡ್ ಕಳೆದು ಹೋದರೆ ಏನು ಮಾಡಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Arecanut price : ಇಂದಿನ ಅಡಿಕೆ ದರ : ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ?
- ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
- ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಅದೃಷ್ಟದ ಬಾಗಿಲು ತೆರೆಯಲಿದೆ?



















