Govt House Scheme : ನಮಸ್ಕಾರ ಸ್ನೇಹಿತರೇ, ರಾಜ್ಯ ಕಾಂಗ್ರೆಸ್ ಸರ್ಕಾರದ ಸರ್ವರಿಗೂ ಸೂರು ಯೋಜನೆ ಅಡಿ ಬಡವರಿಗೆ ಬಂಪರ್ ಗಿಫ್ಟ್ ನೀಡಿದೆ. ಸರಿಸುಮಾರು 1.30 ಲಕ್ಷ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಒಟ್ಟು 5 ಲಕ್ಷ ರೂ. ಭರಿಸಲು ತೀರ್ಮಾನಿಸಿದೆ. ಅಂದರೆ 2 ಲಕ್ಷ ರೂಪಾಯಿ ಸಬ್ಸಿಡಿ ಜತೆಗೆ ಹೆಚ್ಚುವರಿ 3 ಲಕ್ಷ ರೂಪಾಯಿಯನ್ನು ಭರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಲ್ಲಿ ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ ಬಡ ಕುಟುಂಬಗಳಿಗಾಗಿ ನೀಡಲಾಗುತ್ತಿರುವ ಒಟ್ಟಾರೆ 1,29,457 ಮನೆಗಳಿಗೆ ಫಲಾನುಭವಿಗಳ ವಂತಿಗೆಯನ್ನು ಸರ್ಕಾರ ಭರಿಸಲು ತೀರ್ಮಾನಿಸಿದೆ. ಈ ಮೂಲಕ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ ಮುಕ್ತಿ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ.
ಇದನ್ನೂ ಕೂಡ ಓದಿ : Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
ಈ ಯೋಜನೆ ಅಡಿ ಪ್ರಸ್ತುತ ಪ್ರತಿ ಮನೆ ನಿರ್ಮಾಣಕ್ಕೆ ಒಟ್ಟು 7.5 ಲಕ್ಷ ರೂ. ಖರ್ಚಾಗುತ್ತದೆ. ಇದರಲ್ಲಿ ಕೇಂದ್ರದಿಂದ 1.5 ಲಕ್ಷ ಹಾಗೂ ರಾಜ್ಯ ಸರ್ಕಾರದಿಂದ 2 ಲಕ್ಷ ರೂ. ಸಬ್ಸಿಡಿ ಸಿಗುತ್ತದೆ. ಉಳಿದ ಹಣವನ್ನು ಫಲಾನುಭವಿಯೇ ಕಟ್ಟಬೇಕಿತ್ತು. ಆದರೆ ಈಗ ಅದರಲ್ಲಿ ಫಲಾನುಭವಿಗಳು 1 ಲಕ್ಷ ರೂ. ಪಾವತಿಸಿದರೆ ಸಾಕು, ಉಳಿದ ಹೆಚ್ಚುವರಿ 3 ಲಕ್ಷ ರೂಪಾಯಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಈ ಮೂಲಕ ಸರ್ಕಾರ ಒಟ್ಟು 5 ಲಕ್ಷ ರೂ. ಅರ್ಹ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ.
ಸರ್ವರಿಗೂ ಸೂರು ಯೋಜನೆ ಅಡಿಯಲ್ಲಿ ನಿರ್ಮಿಸಲಾಗುವ ಮನೆಗಳ ನಿರ್ಮಾಣದ ಹಣವನ್ನು ಸರ್ಕಾರವೇ ಭರಿಸಲು ಒಪ್ಪಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ, ನಿರ್ಮಾಣದ ವಿವಿಧ ಹಂತದಲ್ಲಿರುವ 1.29 ಲಕ್ಷ ಮನೆಗಳಿಗೆ ಎಷ್ಟು ವೆಚ್ಚ ಆಗುತ್ತದೆ. ಈ ವರ್ಷ ಗರಿಷ್ಠ ಎಷ್ಟು ಹಣ ಕೊಡಬಹುದು? ಮುಂದಿನ ವರ್ಷ ಎಷ್ಟು ಹಣ ಕೊಡಬಹುದು? ಎಂಬುದರ ಬಗ್ಗೆ ಪರಿಶೀಲಿಸುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು.
ಇದನ್ನೂ ಕೂಡ ಓದಿ : Sewing Machine Scheme : ಬಟ್ಟೆ ಹೊಲಿಗೆ ಯಂತ್ರ ವಿತರಣೆ – ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ – ಇಲ್ಲಿದೆ ಡೈರೆಕ್ಟ್ ಲಿಂಕ್
ಕೊಳೆಗೇರಿಗಳ ಅಭಿವೃದ್ಧಿ ಮಂಡಳಿ ವತಿಯಿಂದ ಎರಡನೇ ಹಂತದಲ್ಲಿ 39,966 ಮನೆ ಹಂಚಿಕೆ ಮಾಡಲು ಸಿದ್ಧವಿದ್ದು, 862 ಕೋಟಿ ರೂ. ಹಣ ಅಗತ್ಯವಿದೆ. ಅದೇ ರೀತಿ, ರಾಜೀವ್ಗಾಂಧಿ ವಸತಿ ನಿಗಮ ವತಿಯಿಂದ ಮೊದಲ ಹಂತದಲ್ಲಿ ಹಂಚಿಕೆಗೆ 11,406 ಮನೆಗಳು ಸಿದ್ಧವಿದ್ದು, 529 ಕೋಟಿ ರೂ. ಅವಶ್ಯಕತೆ ಇದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರು. ಈ ಮೊದಲು ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಯೋಜನೆಗೆ ಅನುಮತಿ ದೊರೆತಿತ್ತು. ಬುಧವಾರದ ಸಭೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗೂ ಸಹ ಅನ್ವಯ ಮಾಡಲು ತಾತ್ವಿಕ ಒಪ್ಪಿಗೆ ದೊರೆಯಿತು.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- Dina Bhavishya : ಇಂದು ಈ ರಾಶಿಯವರು ತಮ್ಮ ನಿರ್ಧಾರ ಮತ್ತು ಸ್ವಭಾವವನ್ನು ಪರರಮೇಲೆ ಹೇರುವರು.
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- Health : ನಿಮಗೆ ಕ್ಯಾನ್ಸರ್ ಉಂಟು ಮಾಡುವ ಅಡುಗೆ ಮನೆಯಲ್ಲಿರುವ ಈ ವಸ್ತುಗಳ ಬಗ್ಗೆ ಎಚ್ಚರವಿರಲಿ!
- ಬಿಜೆಪಿ ಹೆಗಲೇರಿ 20 ಸೀಟು ಗೆಲ್ಲೋದು ಸಾಧನೆಯಲ್ಲ : ಹೆಚ್ಡಿಕೆಗೆ ಚಲುವರಾಯಸ್ವಾಮಿ ಟಾಂಗ್
- PM Vishwakarma : ಪಿಎಂ ವಿಶ್ವಕರ್ಮ ಯೋಜನೆಯಡಿಯಲ್ಲಿ ಹೇಗೆ ಸಾಲ ಪಡೆಯುವುದು.? ಬೇಕಾಗುವ ದಾಖಲೆಗಳೇನು.?
- Post Office Scheme : ಮಹಿಳೆಯರಿಗಾಗಿ ಪೋಸ್ಟ್ ಆಫೀಸ್ನಲ್ಲಿ ಬಂಪರ್ ಆಫರ್.! ಪೋಸ್ಟ್ ಆಫೀಸ್ ಖಾತೆ ಇದ್ದರೆ ತಪ್ಪದೇ ನೋಡಿ
- Arecanut Price : ಅಡಿಕೆ ಬೆಲೆ ಏರಿಕೆಯೇ? ಇಳಿಕೆಯೇ? ಇಂದಿನ ಲೈವ್ ಅಪ್ಡೇಟ್
- ಮಹಿಳೆಯರೇ ಎಚ್ಚರ : ಕರಿದ ಎಣ್ಣೆಯನ್ನು ಮತ್ತೆ ಅಡುಗೆಗೆ ಬಳಸಿದ್ರೆ ‘ಕ್ಯಾನ್ಸರ್’ ಬರಬಹುದು.!
- Dina Bhavishya : ಇಂದು ಈ ರಾಶಿಯವರು ದೊಡ್ಡ ವಿಚಾರದಲ್ಲಿ ಹೊಂದಾಣಿಕೆಯನ್ನು ಮಾಡಿಕೊಳ್ಳಲು ಇಚ್ಛಿಸರು.
- ಮಿಕ್ಸ್ಚರ್ನಲ್ಲಿದ್ದ ಶೇಂಗಾಬೀಜ ನುಂಗಿ ಮೂರು ವರ್ಷದ ಕಂದಮ್ಮ ದುರ್ಮರಣ
- ಅಧಿಕಾರಿಗಳಿಗೆ ಹೊಡೆಯಬೇಡಿ, ಬೇಕಾದ್ರೆ ನನಗೆ ಪೊರಕೆಯಲ್ಲಿ ಹೊಡೆಯಿರಿ: ಬಿಡದಿ ಘಟನೆಗೆ ಕಣ್ಣೀರು ಹಾಕಿದ ಸಿಎಂ ಡಿಕೆಶಿ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- 40 ವರ್ಷದ ನಂತರ ಮಹಿಳೆಯರಲ್ಲಿ ಕಿಡ್ನಿ ಹಾನಿ ಮಾಡುವ 5 ದೈನಂದಿನ ಅಭ್ಯಾಸಗಳು
- Dina Bhavishya : ಇಂದಿನ ದಿನ ಭವಿಷ್ಯ: ನಿಮ್ಮ ರಾಶಿಯ ಇಂದಿನ ಫಲಿತಾಂಶವನ್ನು ಈಗಲೇ ತಿಳಿಯಿರಿ
- ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರೂಲ್ಸ್ ತಿರುಪತಿಯಲ್ಲಿ ನಡೆಯಲ್ಲ, ಮೊದಲ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ
- Arecanut Rate : ಇಂದಿನ ಅಡಿಕೆ ಬೆಲೆ ಲೈವ್ ಅಪ್ಡೇಟ್ – ಪ್ರಮುಖ ಮಾರುಕಟ್ಟೆಗಳ ದರಗಳು
- ವರದಕ್ಷಿಣೆ ಎಂಬ ರಕ್ಕಸನಿಗೆ ಬಲಿಯಾದ ನವವಿವಾಹಿತೆ: ಅವರನ್ನು ಸುಮ್ಮನೆ ಬಿಡಬೇಡಿ ಅಮ್ಮ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿ ಆತ್ಮಹತ್ಯೆ
- Dina Bhavishya : ಇಂದು ಈ ರಾಶಿಗೆ ವೈಯಕ್ತಿಕ ವಿಚಾರದ ನಿರ್ಧಾರದಲ್ಲಿ ಗೊಂದಲ ಏರ್ಪಡುವ ಸಾಧ್ಯತೆ!
- ಬಿಎಂಟಿಸಿ ಬಸ್ ನಲ್ಲಿ ಸಚಿವ ಬೈರತಿ ಸುರೇಶ್ ದಿಢೀರ್ ರಿಯಾಲಿಟಿ ಚೆಕ್ : ಚಿಲ್ಲರೆ ಇಲ್ಲದ್ದಕ್ಕೆ ಸಚಿವರನ್ನೇ ಕೆಳಗಿಳಿಸಿದ ಕಂಡಕ್ಟರ್



















