Honey Bee Farming Subsidy : ನಮಸ್ಕಾರ ಸ್ನೇಹಿತರೇ, ರೈತರಿಗೆ ತೋಟಗಾರಿಕಾ ಇಲಾಖೆಯಿಂದ ಜೇನು ಕೃಷಿ ಮಾಡಲು ಎಷ್ಟು ಸಹಾಯಧನ ಸಿಗುತ್ತದೆ.? ಜೇನು ಸಾಕಣೆಯಿಂದ ರೈತರಿಗಾಗುವ ಲಾಭವೇನು? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಜೇನು ಕೃಷಿಗೆ (Bee Farming) ದೊಡ್ಡ ಮಟ್ಟದ ಬಂಡವಾಳ ಬೇಡ. ಕಡಿಮೆ ಬಂಡವಾಳದಲ್ಲಿ ಬಂಪರ್ ಆದಾಯ ಪಡೆಯುವ ವಿಶಿಷ್ಠ ಉಪ ಕಸುಬು ಇದು. ಜೇನು ಪ್ರಕೃತಿದತ್ತವಾಗಿ ಸೃಜಿಸುವ ಉತ್ಪನ್ನವಾದ್ದರಿಂದ ಇದಕ್ಕೆ ಯಾವುದೇ ರೀತಿಯ ನಿರ್ಧಿಷ್ಟ ಸ್ಥಳವೂ ಬೇಡ. ಜೇನಿಗೆ ಮಕರಂದ ಸವಿಯಲು ಪೂರಕವಾದ ಸ್ಥಳವಾದರೆ ಸಾಕು. ರೈತರು ಜಮೀನಿನ ಒಂದು ಭಾಗದಲ್ಲೇ ಇತರ ಕೃಷಿಯ ಜೊತೆಗೆ ಜೇನು ಸಾಕಾಣಿಕೆಯನ್ನು ನಡೆಸಬಹುದು.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಜೇನು ಸಾಕಾಣಿಕೆಯನ್ನು ಕೃಷಿ ಜತೆಗೆ ಉಪ ಕಸುಬನ್ನಾಗಿ ಮಾಡಿಕೊಂಡಿರುವ ಹಲವರು ವರ್ಷಕ್ಕೆ ಲಕ್ಷ ಲಕ್ಷ ಗಳಿಸುತ್ತಿರುವ ನಿದರ್ಶನಗಳಿವೆ. ತೀರಾ ಸಣ್ಣ ಮಟ್ಟದಲ್ಲಿ ಅಂದರೆ 5ರಿಂದ 10 ಜೇನು ಪೆಟ್ಟಿಗೆ ಇಟ್ಟುಕೊಂಡಿರುವವರು ಕೂಡ ಹೆಚ್ಚು ಪರಿಶ್ರಮವಿಲ್ಲದೆ ತಿಂಗಳಿಗೆ ಐದಾರು ಸಾವಿರ ರೂಪಾಯಿ ಗಳಿಸುವವರಿದ್ದಾರೆ.
ರೈತರಿಗೆ ಬಂಪರ್ ಇಳುವರಿ
ಜೇನು ಸಾಕಣೆಯಿಂದ ನೇರ ಆದಾಯ ಮಾತ್ರವಲ್ಲ, ಜೇನು ಪರಾಗಸ್ಪರ್ಶದಿಂದ ಬೆಳೆಯ ಇಳುವರಿ ಹೆಚ್ಚಿಸಿಕೊಳ್ಳುವ ಮೂಲಕ ಪರೋಕ್ಷ ಆದಾಯವನ್ನೂ ಗಳಿಸಬಹುದು. ಜೇನುನೊಣಗಳು ಪರಾಗಸ್ಪರ್ಶ ಕ್ರಿಯೆಗೆ ಸಹಾಯ ಮಾಡುವುದರಿಂದ ಬೆಳೆ ಇಳುವರಿ ಹೆಚ್ಚಾಗುತ್ತದೆ. ಜೇನುನೊಣಗಳ ಪರಾಗ ಸ್ಪರ್ಶದಿಂದ ವಿವಿಧ ತೋಟಗಾರಿಕೆ ಬೆಳೆಗಳಾದ ತೆಂಗು, ಮಾವು, ಅಡಿಕೆ ಇಳುವರಿಯಲ್ಲಿ ಶೇ.20, ಟೊಮೆಟೋ ಬೆಳೆಯಲ್ಲಿ ಶೇ.25, ದ್ರಾಕ್ಷಿ ಬೆಳೆಯಲ್ಲಿ ಶೇ.35, ಸೌತೆ, ಕುಂಬಳ, ಸೀಬೆಯಲ್ಲಿ ಶೇ.40 ಹಾಗೂ ಕಲ್ಲಂಗಡಿ ಬೆಳೆಯಲ್ಲಿ ಶೇ.80ರಷ್ಟು ಅಧಿಕ ಇಳುವರಿ ಪಡೆಯಬಹುದಾಗಿದೆ. ಅಷ್ಟೇ ಅಲ್ಲದೇ ಏಲಕ್ಕಿ, ನಿಂಬೆ, ತರಕಾರಿ, ಹೂವು, ಔಷಧಿ ಹಾಗೂ ಸುಗಂಧ ದ್ರವ್ಯ ಬೆಳೆಗಳೂ ಸಹ ಪರಾಗ ಸ್ಪರ್ಶದಿಂದ ಲಾಭದಾಯಕ ಪ್ರಯೋಜನ ಹೊಂದಲಿವೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಸರ್ಕಾರದಿಂದ ಸಿಗುವ ಸವಲತ್ತುಗಳು
ಜೇನು ಸಾಕಾಣಿಕೆಗೆ ಸರ್ಕಾರದಿಂದಲೂ ಬಹಳಷ್ಟು ಸವಲತ್ತುಗಳಿವೆ. ಕೇಂದ್ರ ಸರ್ಕಾರ ಕೆಲವು ವರ್ಷಗಳ ಹಿಂದೆ ಆರಂಭಿಸಿರುವ ಆತ್ಮನಿರ್ಭರ ಯೋಜನೆಯಡಿ ದೇಶೀಯ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಇದರಲ್ಲಿ ಜೇನು ಕೃಷಿಗೆ ಅತ್ಯುತ್ತಮ ಉತ್ತೇಜನ ಸಿಗುತ್ತಿದೆ. ರಾಷ್ಟ್ರೀಯ ಜೇನು ಮಂಡಳಿ (National Honey Board) ನಬಾರ್ಡ್ ಸಹಯೋಗದೊಂದಿಗೆ ಭಾರತದಲ್ಲಿ ಜೇನುಸಾಕಣೆಗೆ ಹಣಕಾಸು ಒದಗಿಸುತ್ತಿದೆ.
ಜೇನು ತುಪ್ಪ ಸಂಸ್ಕರಣೆ ಘಟಕ ನಿರ್ಮಾಣಕ್ಕೂ ನೆರವು ಕಲ್ಪಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಖಾದಿ ಆಯೋಗವೂ ಜೇನು ಕೃಷಿಗೆ ಬಹಳ ದೊಡ್ಡಮಟ್ಟದಲ್ಲಿಯೇ ನೆರವು ನೀಡುತ್ತಿದೆ. ಬೆಳೆಗಳ ಇಳುವರಿ ಹೆಚ್ಚಳಕ್ಕೆ ಜೇನು ಸಾಕಣೆ ಅತ್ಯಮೂಲ್ಯವಾಗಿ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಜೇನು ಕೃಷಿಗೆ ಸಾಕಷ್ಟು ನೆರವು ನೀಡುತ್ತಿದೆ.
ತೋಟಗಾರಿಕಾ ಇಲಾಖೆ ನೆರವು
ಜೇನು ಸಾಕಾಣಿಕೆಗೆ ಪೋತ್ಸಾಹ ನೀಡಲು ತೋಟಗಾರಿಕೆ ಇಲಾಖೆ ಕೋಟಿ ಕೋಟಿ ಅನುದಾನ ಮೀಸಲಿಡುತ್ತದೆ. ಮಧುವನ ಹಾಗೂ ಜೇನು ಸಾಕಾಣಿಕೆ ಅಭಿವೃದ್ಧಿ ಯೋಜನೆಯಡಿ ಶೇ.75ರಂತೆ 3,375 ರೂಪಾಯಿಗಳ ಸಹಾಯಧನ ನೀಡಲಾಗುತ್ತಿದೆ. ಜೇನು ಸಾಕಣೆ ಮಾಡುವ ಸಣ್ಣ ರೈತರಿಗೆ ತೋಟಗಾರಿಕೆ ಇಲಾಖೆ ಶೇ.75 ಸಬ್ಸಿಡಿ ನೀಡುತ್ತಿದೆ. ಎಸ್ಸಿ-ಎಸ್ಟಿ ಸಮುದಾಯದವರಿಗೆ ಶೇ.90 ಸಹಾಯಧನದ ಸೌಲಭ್ಯ ಇದೆ.
Business Loan : ಸ್ವ-ಉದ್ಯೋಗ ಆರಂಭಿಸಲು 2 ಲಕ್ಷ ರೂಪಾಯಿವರೆಗೆ ಸಾಲ ಹಾಗು ಸಹಾಯಧನ.! ಬೇಕಾಗುವ ದಾಖಲೆಗಳೇನು.?
ಜಮೀನು ಹೊಂದಿರುವ ರೈತರಿಗೆ ಗರಿಷ್ಟ 10 ಜೇನು ಪೆಟ್ಟಿಗೆ, ಕುಟುಂಬ (ಜೇನುನೊಣಗಳ ಸಮೂಹ) ಹಾಗೂ ಸ್ಟಾಂಡ್ ಖರೀದಿಗೆ ಸಹಾಯಧನ ಲಭ್ಯವಿದ್ದರೆ, ಜಮೀನು ರಹಿತ ಕುಟುಂಬಗಳಿಗೆ ಗರಿಷ್ಟ 4 ಜೇನು ಪೆಟ್ಟಿಗೆ, ಕುಟುಂಬ (ಜೇನುನೊಣಗಳ ಸಮೂಹ) ಹಾಗೂ ಸ್ಟಾಂಡ್ ಖರೀದಿಸಲು ಇಲಾಖೆ ವತಿಯಿಂದ ಸಹಾಯಧನ ಸಿಗಲಿದೆ.
ಜೇನುಕೃಷಿಯನ್ನು ಅಳವಡಿಸಿಕೊಳ್ಳುವುದರಿಂದ ರೈತರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೆಚ್ಚು ಲಾಭ ಗಳಿಸಬಹುದಾಗಿದೆ. ಅಲ್ಲದೇ ಕೃಷಿಕರಲ್ಲದವರೂ ಸಹ ಜೇನುಕೃಷಿಯನ್ನು ನಡೆಸಬಹುದು. ತಾಲ್ಲೂಕು ತೋಟಗಾರಿಕೆ ಇಲಾಖೆಯ ಮೂಲಕ ಸರ್ಕಾರದ ಸಹಾಯಧನ ಪಡೆಯಬಹುದಾಗಿದೆ.
ಜೇನು ಕೃಷಿ ಬಗ್ಗೆ ಹೆಚ್ಚಿನ ಮಾಹಿತಿಗಾಗಿ : 9620736384, 0816-2211808
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ
- 27 ಎಕರೆ ಜಮೀನಿಗಾಗಿ ಹೆತ್ತ ತಂದೆಯ ಸಾವು ಸಸ್ಪೆನ್ಸ್! ಅಣ್ಣನೇ ಕೊಲೆಗಾರ ಎಂದ ತಂಗಿಯರು, ತಂಗಿಯರೇ ಹಂತಕರು ಎಂದ ಅಣ್ಣ!
- ಅತ್ತಿಗೆಯ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣನನ್ನೇ ಕೊಂದ ತಮ್ಮ.! ಉತ್ತರ ಕನ್ನಡದಲ್ಲಿ ಬೆಚ್ಚಿಬೀಳಿಸುವ ಕೊಲೆ
- ಪ್ರೀತಿಸಿ ಮದುವೆಯಾದ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪತಿ ; ಶೀಲ ಶಂಕೆಯೇ ಯುವತಿಯ ಜೀವ ಬಲಿ!
- ಈ ಕರುಳಿನ ಸೋಂಕು ಸದ್ದಿಲ್ಲದೆ ಹರಡುತ್ತದೆ , ಹೊಟ್ಟೆಯೊಳಗೆ ಹೀಗೆಲ್ಲಾ ಆದರೆ ನೆಗ್ಲೆಕ್ಟ್ ಮಾಡಲು ಹೋಗಬೇಡಿ
- ರಕ್ತನಾಳಗಳ ಉಬ್ಬುವಿಕೆ ಏಕೆ ಆಗುತ್ತದೆ.? ಯಾವ ಕಾರಣಗಳಿಂದ ಈ ಸಮಸ್ಯೆ ಹೆಚ್ಚಾಗುತ್ತದೆ.? ಇದಕ್ಕಿರುವ ಚಿಕಿತ್ಸೆ ಏನು.?
- ದೇಹದ ಒಂದು ಭಾಗದಲ್ಲಿ ಮರಗಟ್ಟುತ್ತಿದ್ದರೆ ಅದನ್ನು ಸಾಮಾನ್ಯ ಎಂದು ತಿಳಿಯುವ ತಪ್ಪು ಮಾಡದಿರಿ
- ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು
- ಗೃಹಲಕ್ಷ್ಮಿ ಯೋಜನೆಯಲ್ಲಿ ₹250 ಕೋಟಿ ಹಗರಣ?; ‘ಸಿಬಿಐ ತನಿಖೆಗೆ ಬಿಜೆಪಿ ಮುಖಂಡ ಸಿ.ಟಿ. ರವಿ ಆಗ್ರಹ





























