Instant Loan App : ನಮಸ್ಕಾರ ಸ್ನೇಹಿತರೇ, ಮೊಬೈಲ್ ಆ್ಯಪ್ ಲೋನ್ ದಂಧೆಗೆ ಅನೇಕ ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸರೊಬ್ಬರ ಪ್ರಕಾರ ತಿಂಗಳಲ್ಲಿ ಇಂತಹ ಹತ್ತಾರು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಮೊಬೈಲ್ ಆ್ಯಪ್ಗಳನ್ನು ಬಳಸಿಕೊಂಡು ಸುಲಭವಾಗಿ ಸಾಲ ನೀಡಿ ನಂತರ ಅವರಿಂದ ಡಬಲ್ ಹಣ ವಸೂಲಿ ಮಾಡುವ ಈ ಮೋಸದ ಜಾಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಈ ಬಗ್ಗೆ ಎಚ್ಚರದಿಂದಿರಬೇಕು.
ಕೆಲವೊಮ್ಮೆ ತುರ್ತಾಗಿ 4-5 ಸಾವಿರ ರೂಪಾಯಿ ಕೈಸಾಲ ಬೇಕಾಗುತ್ತದೆ. ಗೆಳೆಯರಲ್ಲಿ ಕೇಳಿದಾಗ ಸಿಗುವುದಿಲ್ಲ. ಸಂಬಂಧಿಕರಲ್ಲಿ ಕೇಳಲು ಮುಜುಗರವಾಗುತ್ತದೆ. ಒಂದು ವಾರದಲ್ಲಿ ಹಿಂದಿರುಗಿಸುವ ಇಷ್ಟು ಸಣ್ಣ ಪ್ರಮಾಣದ ಸಾಲ ಬ್ಯಾಂಕುಗಳಲ್ಲೂ ದೊರೆಯುವುದಿಲ್ಲ. ತಕ್ಷಣ ಸಾಲ ಬೇಕಾಗಿರುವುದರಿಂದ ಯಾರ ರಗಳೆಯೂ ಬೇಡವೆಂದು ಆ್ಯಪ್ಗಳ ಮೊರೆ ಹೋಗುತ್ತಾರೆ.
Yashaswini Card : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.! ಬೇಕಾಗುವ ದಾಖಲೆಗಳೇನು.?
ಭಾರತದಲ್ಲಿ 600ಕ್ಕಿಂತ ಹೆಚ್ಚು ಲೋನ್ ಆ್ಯಪ್ಗಳಿವೆ. ಇವುಗಳಿಗೆ ಆರ್ಬಿಐ ಮಾನ್ಯತೆ ಇಲ್ಲ. ‘ಆನ್ಲೈನ್ ಲೋನ್ (Online Loan) ಎಂದು ಪ್ಲೇ ಸ್ಟೋರ್ನಲ್ಲಿ ಹುಡುಕಿದರೆ ರಾಶಿಗಟ್ಟಲೇ ಆ್ಯಪ್ಗಳು ಕಾಣಿಸಿಕೊಳ್ಳುತ್ತವೆ. ಈ ಆ್ಯಪ್ ಗಳನ್ನು ಇನ್ ಸ್ಟಾಲ್ ಮಾಡುವಾಗ ನಿಮ್ಮ ಮೊಬೈಲ್ ನಂಬರ್, ಭಾವಚಿತ್ರ, ವಿಡಿಯೋ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಕೆಲಸ ಮಾಡುವಲ್ಲಿನ ಐಡೆಂಟಿಟಿ ಕಾರ್ಡ್ ಫೋಟೋ ಹೀಗೆ ನಿಮ್ಮಿಂದ ಹತ್ತಾರು ದಾಖಲಾತಿಗಳನ್ನು ಪಡೆದು, ಹಲವಾರು ನೀತಿ ನಿಯಮಗಳಿಗೆ ನಿಮ್ಮ ಒಪ್ಪಿಗೆ ಪಡೆದ ನಂತರ ಮೊಬೈಲ್ಗೆ ಇನ್ ಸ್ಟಾಲ್ ಆಗುತ್ತದೆ.
ಎಷ್ಟು ಮೊತ್ತದ ಸಾಲ ಸಿಗುತ್ತದೆ?
ತುರ್ತಾಗಿ ಕೈ ಸಾಲಗಳನ್ನು ಪಡೆಯುವ ಯುವಕರೇ ಈ ಆ್ಯಪ್’ಗಳ ಟಾರ್ಗೆಟ್. 3,000 ದಿಂದ 10,000 ರೂಪಾಯಿ ವರೆಗೆ ಸಾಲವನ್ನು ಈ ಆ್ಯಪ್ಗಳು ನೀಡುತ್ತವೆ. ಮೊದಲೇ ಎಲ್ಲ ದಾಖಲೆಗಳನ್ನು ನೀಡಿರುವ ಕಾರಣ ಸಾಲ ಪಡೆಯುವುದು ಸುಲಭ. ಪಡೆದ ಸಾಲಕ್ಕೆ ಆ ದಿನದಿಂದಲೇ ದಿನವಾರು ಲೆಕ್ಕದಲ್ಲಿ ಶೇ30ರಿಂದ 60ರಷ್ಟು ಬಡ್ಡಿಯನ್ನು ವಿಧಿಸಿ ಗೊತ್ತುಪಡಿಸಿದ ದಿನದೊಳಗೆ ಸಾಲ ಚುಕ್ತಾ ಮಾಡಲು ಹೇಳುತ್ತಾರೆ.
ದಿನಗಳು, ತಿಂಗಳುಗಳ ಲೆಕ್ಕಾಚಾರದಲ್ಲಿ ಸಾಲ ನೀಡಲಾಗುತ್ತದೆ. ಸಣ್ಣ ಪ್ರಮಾಣದ ಸಾಲಗಳನ್ನು ಹೆಚ್ಚೆಂದರೆ ಒಂದು ತಿಂಗಳ ಅವಧಿಗೆ ನೀಡಲಾಗುತ್ತದೆ. ಬಡ್ಡಿ ಲೆಕ್ಕಾಚಾರದ ವಿಧಾನಗಳಲ್ಲಿ ಆ್ಯಪ್ಗಳಿಂದ ಆ್ಯಪ್ಗಳಿಗೆ ವ್ಯತ್ಯಾಸವಿದೆ. ಶೇ.30ರಿಂದ ಶೇ.60ರಷ್ಟು ಬಡ್ಡಿಯನ್ನು ದಿನವಾರು ಲೆಕ್ಕಾಚಾರದಲ್ಲಿ ಹಾಕುತ್ತಾರೆ. ಸಾಮಾನ್ಯವಾಗಿ 5,000 ರೂಪಾಯಿ ಸಾಲ ಪಡೆದರೆ ಒಂದು ವಾರಕ್ಕೆ ರೂ.1500 ಬಡ್ಡಿ ಸೇರಿ ರೂ. 6500 ಅನ್ನು ಪಾವತಿಸಬೇಕಾಗುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹಣ ಪಾವತಿಸದಿದ್ದರೆ ಬ್ಲಾಕ್ಮೇಲ್
ಸಾಲ ಪಡೆಯುವ ಆರಂಭದಲ್ಲಿ ಬಡ್ಡಿಯ ಸರಿಯಾದ ಲೆಕ್ಕಾಚಾರವನ್ನು ಆಪ್ಗಳು ನೀಡುವುದಿಲ್ಲ. ನಂತರ ಪಡೆದ ಸಾಲಕ್ಕೆ ವಿಧಿಸುವ ಬಡ್ಡಿ ಮೊತ್ತವು ಅಸಲಿನಷ್ಟೇ ಬೆಳೆದಿರುವುದರಿಂದ ಸಾಮಾನ್ಯವಾಗಿ ಅಷ್ಟು ಮೊತ್ತವನ್ನು ತಕ್ಷಣ ಪಾವತಿಸಲು ಸಾಲಗಾರರು ಸಿದ್ಧರಿರುವುದಿಲ್ಲ. ಒಂದೆರಡು ದಿನ ತಡವಾದರೂ ಅದು ಅವರಿಗೆ ಲಾಭವೇ. ಆ ದಿನಗಳಿಗೂ ಬಡ್ಡಿ ವಿಧಿಸುತ್ತಾರೆ.
ಸಾಲ ಹಿಂತಿರುಗಿಸದೆ ಇದ್ದಲ್ಲಿ ‘ಕ್ರೆಡಿಟ್ ರೇಟ್’ (Credit Rate) ಕಡಿಮೆಯಾಗುತ್ತದೆ ಎಂದು ಬ್ಲಾಕ್ ಮೇಲ್ ಮಾಡುತ್ತಾರೆ. ನಿಮ್ಮ ಮೊಬೈಲ್ಗಳಿಂದ ಚಿತ್ರಗಳನ್ನು ಕದ್ದು ಆಶ್ಲೀಲ ಚಿತ್ರಗಳಾಗಿ ಮಾರ್ಫಿಂಗ್ ಮಾಡಿ ಪರಿಚಯಸ್ಥರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಾರೆ. ಮುಂದುವರೆದು ಕೆಲವೊಮ್ಮೆನಕಲಿ ಎಫ್ಐಆರ್ ಪ್ರತಿಯನ್ನು ಕಳುಹಿಸುತ್ತಾರೆ. ಮುಂದೆ ನಿಮಗೆ ಯಾವ ಬ್ಯಾಂಕಿನಲ್ಲೂ ಸಾಲ ಸಿಗುವುದಿಲ್ಲ ಎಂದೂ ಹೆದರಿಸುತ್ತಾರೆ.
ಪೊಲೀಸ್ ಅಧಿಕಾರಿಯೊಬ್ಬರು ಹೇಳುವ ಪ್ರಕಾರ ಅವರು ಹೆದರಿಸುವ ಪರಿ ಹೇಗಿರುತ್ತದೆಯೆಂದರೆ ಸಾಲ ಪಡೆದ ಶೇ.80ರಷ್ಟು ಮಂದಿ ಉಪಾಯವಿಲ್ಲದೆ ಅವರು ತಿಳಿಸುವಷ್ಟು ಮೊತ್ತವನ್ನು ಹಿಂದಿರುಗಿಸುತ್ತಾರಂತೆ. ಒಂದಷ್ಟು ಮಂದಿ ಅವರಿಗೆ ಹಣ ಪಾವತಿಸಲು ಕಷ್ಟವಾಗಿ ಆತ್ಮಹತ್ಯೆಯಂತಹ ಮೊರೆ ಹೋಗುತ್ತಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನಿರಂತರ ಟಾರ್ಚರ್.!
ಆನ್ಲೈನ್ ಸಾಲ ನೀಡುವ ಸಂಸ್ಥೆಗಳ ಟಾರ್ಚರ್ ಯಾವ ರೀತಿ ಇರುತ್ತದೆಯೆಂದರೆ ನೀವು ಒಮ್ಮೆ ಆನ್ಲೈನ್ ಸಾಲ ಪಡೆದರೆ ಮತ್ತೆ ಜೀವಮಾನದಲ್ಲಿ ಅಂತಹ ಸಾಲದ ಮೊರೆ ಹೋಗುವುದಿಲ್ಲ. ಆನ್ಲೈನ್ ಮೂಲಕ ಸಾಲ ಪಡೆದ ಯುವಕನೋರ್ವ ಹೇಳುವ ಪ್ರಕಾರ ಸಾಮಾನ್ಯವಾಗಿ ನಾಲ್ಕು ವಿಧದಲ್ಲಿ ಟಾರ್ಚರ್ ನೀಡುತ್ತಾರೆ. ಆನ್ಲೈನ್ ಸಾಲವನ್ನು ಪಡೆದ ಬಳಿಕ ನಿಗದಿತ ಕಂತಿನಂತೆ ಮೊತ್ತವನ್ನು ಪಾವತಿ ಮಾಡಬೇಕು.
ಒಂದು ವೇಳೆ ಪಾವತಿ ಮಾಡದಿದ್ದರೆ ಈ ಪಾರಂಭಿಕ ಹಂತದಲ್ಲಿ ಮೊಬೈಲ್ ಕರೆ ಮಾಡಿ ಸಾಲ ಕಟ್ಟಲು ಒತ್ತಡ ಹಾಕಲಾಗುತ್ತದೆ. ಎರಡನೇ ಹಂತದಲ್ಲಿ ಗೂಂಡಾಗಳಿಂದ ಕರೆ ಮಾಡಿ ಬೆದರಿಕೆ ಹಾಕಲಾಗುತ್ತದೆ. ಇದಾದ ಬಳಿಕವೂ ಕಟ್ಟದಿದ್ದಲ್ಲಿ ಮೂರನೆಯದಾಗಿ ಆ್ಯಪ್ ಮೂಲಕ ಸಾಲಗಾರನ ಹತ್ತಿರದ ಸಂಬAಧಿ, ಗೆಳೆಯ/ತಿಯರಿಗೆ ಕರೆ, ಸಂದೇಶ ಕಳುಹಿಸಿ ಹಣ ಕಟ್ಟಲು ಒತ್ತಡ ಹಾಕುತ್ತಾರೆ.
ನಾಲ್ಕನೇ ಆಸ್ತವಾಗಿ ಸಾಲಗಾರನ ಫೋಟೋ ಮೇಲೆ ‘ವಂಚಕ’ ಎಂಬ ಸಂದೇಶ ಹಾಕಿ ಫೇಸ್ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡುತ್ತಾರೆ. ಇದಕ್ಕೆ ಹೆದರಿ ಈ ಹಂತಗಳಲ್ಲಿ ಸಾಕಷ್ಟು ಮಂದಿ ಆತ್ಮಹತ್ಯೆಯ ಮೊರೆ ಹೋಗುತ್ತಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯುವಕರೇ ಎಚ್ಚರ!
ತಿಂಗಳ ವೇತನ ಪಡೆಯುವ 25-45 ವರ್ಷದ ಯುವಕ/ ಯುವತಿಯರೇ ಇವರ ಟಾರ್ಗೆಟ್. ಆದ್ದರಿಂದ ಇಂತಹ ಆ್ಯಪ್ಗಳ ಬಗ್ಗೆ ಜಾಗರೂಕರಾಗಿರಿ. ಈ ಲೇಖನವನ್ನು ಓದಿ ತಮಾಷೆಗೆಂದೂ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡದಿರಿ.
ಯಾವುದೇ ಆ್ಯಪ್ಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಡೌನ್ಲೋಡ್ ಮಾಡಿಕೊಳ್ಳಬೇಡಿ. ಸಾಲ ಪಡೆದು ಸಮಸ್ಯೆಯಲ್ಲಿ ಸಿಲುಕದಿರಿ. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಿದಂತೆ ಇಂತಹ ಮೋಸ ಮಾಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಕುರಿತು ನಿಮಗೆ ಅರಿವಿರಲಿ.
- ಸ್ವಂತ ಕೃಷಿಭೂಮಿ ಇದ್ದವರಿಗೆ ದೀಪಾವಳಿ ಘೋಷಣೆ | ಹೊಸ 2 ಸೇವೆ – ಸಂಪೂರ್ಣ ಮಾಹಿತಿ ಇಲ್ಲಿದೆ
- ಈ 5 ದಾಖಲೆ ಸಾಬೀತು ಮಾಡಿದರೆ ಮಾತ್ರ BPL ಕಾರ್ಡ್ | ಹೊಸ ಆದೇಶ – BPL Ration Card
- ದಸರಾ ರಜೆ ಬೆನ್ನಲ್ಲೆ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ರಾಜ್ಯದ್ಯಂತ ಹೊಸ ರೂಲ್ಸ್ – SSLC Exam 2026
- ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಕೆ ಕುರಿತು ಹೊಸ ಆದೇಶ ಪ್ರಕಟ | Retirement Age
- ಈ 3 ಬ್ಯಾಂಕ್ ನಲ್ಲಿ 2 ಲಕ್ಷದವರೆಗೆ ಹಣ ಇದ್ದವರಿಗೆ ಹೊಸ ರೂಲ್ಸ್ | Bank Account Rules
- ದಸರಾ ರಜೆ ಮುಂದೂಡಿದ ಬೆನ್ನಲ್ಲೇ ಮಕ್ಕಳಿಗೆ ಹೊಸ ರೂಲ್ಸ್ | Dasara Holiday
- Gold Rate : ಅಲ್ಪ ಇಳಿಕೆ ಕಂಡಿದ ಚಿನ್ನದ ಬೆಲೆ.? ಎಷ್ಟಾಗಿದೆ ಗೊತ್ತಾ ಇವತ್ತಿನ ಚಿನ್ನದ ಬೆಲೆ.?
- ರಾಜ್ಯದಲ್ಲಿ ಸಿಎಂ ‘ಕುರ್ಚಿಗಾಗಿ’ ಹೊಡೆದಾಟ : ಸಿದ್ದರಾಮಯ್ಯ ‘CM’ ಸ್ಥಾನದ ಕುರಿತು ಬ್ರಹ್ಮಾಂಡ ಗುರೂಜಿ ಸ್ಫೋಟಕ ಭವಿಷ್ಯ!
- ಬೆಳೆಹಾನಿ ಪರಿಹಾರಕ್ಕಾಗಿ ಕಾಯುತ್ತಿದ್ದವರಿಗೆ ದೊಡ್ಡ ಗುಡ್ ನ್ಯೂಸ್ – Crop Insurance & Loan Waiver
- ರಾಜ್ಯದ ಎಲ್ಲಾ ಮಹಿಳೆಯರಿಗೆ ಹೊಸ ರೂಲ್ಸ್ | ಗೃಹಲಕ್ಷ್ಮೀ ಹಣಕ್ಕೆ ಹೊಸ ಆದೇಶ | Gruhalakshmi Scheme Rules
- Kantara : ‘ದೈವದ ಹೆಸರಲ್ಲಿ ಮಾಡಿದ ದುಡ್ಡನ್ನು ಆಸ್ಪತ್ರೆಗೆ ಸುರಿಸುತ್ತೇನೆ..’ ಕಾಂತಾರ ತಂಡಕ್ಕೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!
- ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ನ್ಯೂಸ್! 5 ಕೆಜಿ ಅಕ್ಕಿ ಜತೆ ಇಂದಿರಾ ಆಹಾರ ಕಿಟ್ ನೀಡಲು ಸಚಿವ ಸಂಪುಟ ನಿರ್ಣಯ ; ಕಿಟ್ನಲ್ಲಿ ಏನೆಲ್ಲಾ ಇರುತ್ತೆ?
- Gold Rate Today : ಭಾರೀ ಏರಿಕೆಯತ್ತ ಸಾಗುತ್ತಿದೆಯಾ ಚಿನ್ನ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- JIO ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ : 449 ರೂ.ನಲ್ಲಿ ಮೂರು ನಂಬರ್ ಬಳಕೆಗೆ ಅವಕಾಶ! ಏನಿದು ಪ್ಲ್ಯಾನ್?
- ರಕ್ಷಿತಾ ಹೇಳಿದ್ದ ಡೈಲಾಗ್ ವೈರಲ್..! ಬಿಗ್ ಬಾಸ್ ಶೋ ಬಂದ್ : ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ
- ಕೊನೆಗೂ ಬಿಗ್ ಬಾಸ್ ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ಬಿಗ್ ಬಾಸ್ ಪುನಾರಂಭಕ್ಕೆ ಡಿಸಿಎಂ ಡಿಕೆಶಿ ಗ್ರೀನ್ ಸಿಗ್ನಲ್!
- ತುಂಡುಡುಗೆ ಧರಿಸಿದ್ದಕ್ಕೆ ಅಕ್ಕನನ್ನೇ ಬ್ಯಾಟ್ ನಿಂದ ಹೊಡೆದು ಕ್ರೂರವಾಗಿ ಹತ್ಯೆಗೈದ ತಮ್ಮ.!
- ಮನೆಯಲ್ಲಿ ಬಾಯ್ಲರ್ ಸ್ಫೋಟ – 11ರ ಬಾಲಕಿ ಸಾವು, ಮೂವರಿಗೆ ಗಂಭೀರ – Girl dies in boiler explosion
- Gold Rate Today : ಚಿನ್ನದ ಬೆಲೆಯಲ್ಲಿ ಎಷ್ಟು ಏರಿಳಿತ ಕಂಡಿದೆ ಗೊತ್ತಾ.? ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ?
- LPG : ಗ್ರಾಹಕರಿಗೆ ಭರ್ಜರಿ ಸುದ್ದಿ, ದೀಪಾವಳಿ ಹಬ್ಬಕ್ಕೆ ಅಡುಗೆ ಅನಿಲ ದರ ಇಳಿಕೆ ಸಾಧ್ಯತೆ
- ದಸರಾ ರಜೆಯಲ್ಲಿ ಹೊಸ ಬದಲಾವಣೆ | ಮಕ್ಕಳಿಗೆ ಗುಡ್ ನ್ಯೂಸ್| Dasara Holiday
- ಗಂಡನ ಆಸ್ತಿಗೆ ಕೇಳುವ ಹೆಂಡತಿಯರಿಗೆ ಹೇಗಿದೆ ನಿಯಮ | ಗಂಡನ ಆಸ್ತಿಯಲ್ಲಿ ಪತ್ನಿಗೆ ಪಾಲು ಇದೆಯಾ.? property Rules
- ದಸರಾ ರಜೆ ಇನ್ನಷ್ಟು ದಿನ ವಿಸ್ತರಣೆ.! ಮಕ್ಕಳಿಗೆ ಸಿಹಿಸುದ್ದಿ ಇದೆಯಾ.? Dasara Holidays
- ದೇಶದ ಎಲ್ಲರಿಗೂ ಗುಡ್ ನ್ಯೂಸ್ ಕೊಟ್ಟು ಪ್ರಧಾನಿ ನರೇಂದ್ರ ಮೋದಿ | ಕೂಡಲೇ ಈ ಕೆಲಸ ಮಾಡಿ
- ಡ್ರೈವಿಂಗ್ ಲೈಸನ್ಸ್ ಇದ್ದವರಿಗೆ ಇಂದಿನಿಂದಲೇ ಹೊಸ ರೂಲ್ಸ್ | ಮತ್ತೊಂದು ಆದೇಶ – mParivahan
- ಪೊಲೀಸರ ಈ ಅಧಿಕಾರವನ್ನು ಕಿತ್ತುಕೊಂಡ ಕೋರ್ಟ್ | ಹೊಸ ಆದೇಶ | Property Rules
- 60 ವರ್ಷದವರಿಗೆ ಸಿಹಿಸುದ್ದಿ ಕೊಟ್ಟ ಈ 3 ಬ್ಯಾಂಕುಗಳು | Senior Citizens FD Interest Rate Hike
- ಸಮೀಕ್ಷೆಗೆ ವಿರೋಧ ಮಾಡಿದ್ರೆ ಅದು ಸಂವಿಧಾನಕ್ಕೆ ವಿರೋಧ : ಸಚಿವ ಕೃಷ್ಣಬೈರೇಗೌಡ – ಆರ್ ಅಶೋಕ್ ಗೆ ತಿರುಗೇಟು
- BSNL eSIM : ಸಿಮ್ ಕಾರ್ಡ್ ಇಲ್ಲದೆ ಕಾಲ್-ಇಂಟರ್ನೆಟ್ ಆನಂದಿಸಿ : ಬಿಎಸ್ಎನ್ಎಲ್ ನಿಂದ ಬಂಪರ್.!
- ಕೇಸರಿ ಪಾಳಯಕ್ಕೆ ಯತ್ನಾಳ್ ಶಾಕ್! “ಭಗವಾ ಝಂಡಾ” ಪಕ್ಷದ ಮೂಲಕ ಬುಲ್ಡೋಜರ್ ಸರ್ಕಾರ ರಚನೆ ಖಚಿತ; ಸಿದ್ದು, ಸವದಿ ಟಿವಿಯಲ್ಲಿ ನೋಡ್ತಾರೆ! – ಯತ್ನಾಳ್
- ಬಿಎಸ್ಎನ್ಎಲ್ (BSNL) ಪೂರ್ತಿ 1 ತಿಂಗಳಿಗೆ ಅನ್ಲಿಮಿಟೆಡ್ ಕರೆ ಮತ್ತು ದಿನಕ್ಕೆ 2GB ಡೇಟಾದ ಪ್ಲಾನ್ ಸಿಕ್ಕಾಪಟ್ಟೆ ಕಡಿಮೆ ಬೆಲೆಗೆ ಲಭ್ಯ!
- ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಕೇಸರಿ ಧ್ವಜ ತೆರವಿಗೆ ಪೊಲೀಸರು ಸೂಚನೆ ; ದಿಢೀರ್ ಪ್ರತಿಭಟನೆ
- ದೇಶಾದ್ಯಂತ ಆಧಾರ್ ಕಾರ್ಡ್ ನಿಯಮ ಬದಲು | ಹೊಸ ನಿಯಮವೇನು.? Aadhaar Card Rules Updates
- ಜೈಲು ಹತ್ರ ಬರಬೇಡ, ಹಣೆಬರಹದಲ್ಲಿ ಇದ್ದಂತೆ ಆಗುತ್ತೆ : ಪತ್ನಿ ಮುಂದೆ ದರ್ಶನ್ ಬೇಸರ