Instant Loan App : ನಮಸ್ಕಾರ ಸ್ನೇಹಿತರೇ, ಮೊಬೈಲ್ ಆ್ಯಪ್ ಲೋನ್ ದಂಧೆಗೆ ಅನೇಕ ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸರೊಬ್ಬರ ಪ್ರಕಾರ ತಿಂಗಳಲ್ಲಿ ಇಂತಹ ಹತ್ತಾರು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಮೊಬೈಲ್ ಆ್ಯಪ್ಗಳನ್ನು ಬಳಸಿಕೊಂಡು ಸುಲಭವಾಗಿ ಸಾಲ ನೀಡಿ ನಂತರ ಅವರಿಂದ ಡಬಲ್ ಹಣ ವಸೂಲಿ ಮಾಡುವ ಈ ಮೋಸದ ಜಾಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಈ ಬಗ್ಗೆ ಎಚ್ಚರದಿಂದಿರಬೇಕು.
ಕೆಲವೊಮ್ಮೆ ತುರ್ತಾಗಿ 4-5 ಸಾವಿರ ರೂಪಾಯಿ ಕೈಸಾಲ ಬೇಕಾಗುತ್ತದೆ. ಗೆಳೆಯರಲ್ಲಿ ಕೇಳಿದಾಗ ಸಿಗುವುದಿಲ್ಲ. ಸಂಬಂಧಿಕರಲ್ಲಿ ಕೇಳಲು ಮುಜುಗರವಾಗುತ್ತದೆ. ಒಂದು ವಾರದಲ್ಲಿ ಹಿಂದಿರುಗಿಸುವ ಇಷ್ಟು ಸಣ್ಣ ಪ್ರಮಾಣದ ಸಾಲ ಬ್ಯಾಂಕುಗಳಲ್ಲೂ ದೊರೆಯುವುದಿಲ್ಲ. ತಕ್ಷಣ ಸಾಲ ಬೇಕಾಗಿರುವುದರಿಂದ ಯಾರ ರಗಳೆಯೂ ಬೇಡವೆಂದು ಆ್ಯಪ್ಗಳ ಮೊರೆ ಹೋಗುತ್ತಾರೆ.
Yashaswini Card : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.! ಬೇಕಾಗುವ ದಾಖಲೆಗಳೇನು.?
ಭಾರತದಲ್ಲಿ 600ಕ್ಕಿಂತ ಹೆಚ್ಚು ಲೋನ್ ಆ್ಯಪ್ಗಳಿವೆ. ಇವುಗಳಿಗೆ ಆರ್ಬಿಐ ಮಾನ್ಯತೆ ಇಲ್ಲ. ‘ಆನ್ಲೈನ್ ಲೋನ್ (Online Loan) ಎಂದು ಪ್ಲೇ ಸ್ಟೋರ್ನಲ್ಲಿ ಹುಡುಕಿದರೆ ರಾಶಿಗಟ್ಟಲೇ ಆ್ಯಪ್ಗಳು ಕಾಣಿಸಿಕೊಳ್ಳುತ್ತವೆ. ಈ ಆ್ಯಪ್ ಗಳನ್ನು ಇನ್ ಸ್ಟಾಲ್ ಮಾಡುವಾಗ ನಿಮ್ಮ ಮೊಬೈಲ್ ನಂಬರ್, ಭಾವಚಿತ್ರ, ವಿಡಿಯೋ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಕೆಲಸ ಮಾಡುವಲ್ಲಿನ ಐಡೆಂಟಿಟಿ ಕಾರ್ಡ್ ಫೋಟೋ ಹೀಗೆ ನಿಮ್ಮಿಂದ ಹತ್ತಾರು ದಾಖಲಾತಿಗಳನ್ನು ಪಡೆದು, ಹಲವಾರು ನೀತಿ ನಿಯಮಗಳಿಗೆ ನಿಮ್ಮ ಒಪ್ಪಿಗೆ ಪಡೆದ ನಂತರ ಮೊಬೈಲ್ಗೆ ಇನ್ ಸ್ಟಾಲ್ ಆಗುತ್ತದೆ.
ಎಷ್ಟು ಮೊತ್ತದ ಸಾಲ ಸಿಗುತ್ತದೆ?
ತುರ್ತಾಗಿ ಕೈ ಸಾಲಗಳನ್ನು ಪಡೆಯುವ ಯುವಕರೇ ಈ ಆ್ಯಪ್’ಗಳ ಟಾರ್ಗೆಟ್. 3,000 ದಿಂದ 10,000 ರೂಪಾಯಿ ವರೆಗೆ ಸಾಲವನ್ನು ಈ ಆ್ಯಪ್ಗಳು ನೀಡುತ್ತವೆ. ಮೊದಲೇ ಎಲ್ಲ ದಾಖಲೆಗಳನ್ನು ನೀಡಿರುವ ಕಾರಣ ಸಾಲ ಪಡೆಯುವುದು ಸುಲಭ. ಪಡೆದ ಸಾಲಕ್ಕೆ ಆ ದಿನದಿಂದಲೇ ದಿನವಾರು ಲೆಕ್ಕದಲ್ಲಿ ಶೇ30ರಿಂದ 60ರಷ್ಟು ಬಡ್ಡಿಯನ್ನು ವಿಧಿಸಿ ಗೊತ್ತುಪಡಿಸಿದ ದಿನದೊಳಗೆ ಸಾಲ ಚುಕ್ತಾ ಮಾಡಲು ಹೇಳುತ್ತಾರೆ.
ದಿನಗಳು, ತಿಂಗಳುಗಳ ಲೆಕ್ಕಾಚಾರದಲ್ಲಿ ಸಾಲ ನೀಡಲಾಗುತ್ತದೆ. ಸಣ್ಣ ಪ್ರಮಾಣದ ಸಾಲಗಳನ್ನು ಹೆಚ್ಚೆಂದರೆ ಒಂದು ತಿಂಗಳ ಅವಧಿಗೆ ನೀಡಲಾಗುತ್ತದೆ. ಬಡ್ಡಿ ಲೆಕ್ಕಾಚಾರದ ವಿಧಾನಗಳಲ್ಲಿ ಆ್ಯಪ್ಗಳಿಂದ ಆ್ಯಪ್ಗಳಿಗೆ ವ್ಯತ್ಯಾಸವಿದೆ. ಶೇ.30ರಿಂದ ಶೇ.60ರಷ್ಟು ಬಡ್ಡಿಯನ್ನು ದಿನವಾರು ಲೆಕ್ಕಾಚಾರದಲ್ಲಿ ಹಾಕುತ್ತಾರೆ. ಸಾಮಾನ್ಯವಾಗಿ 5,000 ರೂಪಾಯಿ ಸಾಲ ಪಡೆದರೆ ಒಂದು ವಾರಕ್ಕೆ ರೂ.1500 ಬಡ್ಡಿ ಸೇರಿ ರೂ. 6500 ಅನ್ನು ಪಾವತಿಸಬೇಕಾಗುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹಣ ಪಾವತಿಸದಿದ್ದರೆ ಬ್ಲಾಕ್ಮೇಲ್
ಸಾಲ ಪಡೆಯುವ ಆರಂಭದಲ್ಲಿ ಬಡ್ಡಿಯ ಸರಿಯಾದ ಲೆಕ್ಕಾಚಾರವನ್ನು ಆಪ್ಗಳು ನೀಡುವುದಿಲ್ಲ. ನಂತರ ಪಡೆದ ಸಾಲಕ್ಕೆ ವಿಧಿಸುವ ಬಡ್ಡಿ ಮೊತ್ತವು ಅಸಲಿನಷ್ಟೇ ಬೆಳೆದಿರುವುದರಿಂದ ಸಾಮಾನ್ಯವಾಗಿ ಅಷ್ಟು ಮೊತ್ತವನ್ನು ತಕ್ಷಣ ಪಾವತಿಸಲು ಸಾಲಗಾರರು ಸಿದ್ಧರಿರುವುದಿಲ್ಲ. ಒಂದೆರಡು ದಿನ ತಡವಾದರೂ ಅದು ಅವರಿಗೆ ಲಾಭವೇ. ಆ ದಿನಗಳಿಗೂ ಬಡ್ಡಿ ವಿಧಿಸುತ್ತಾರೆ.
ಸಾಲ ಹಿಂತಿರುಗಿಸದೆ ಇದ್ದಲ್ಲಿ ‘ಕ್ರೆಡಿಟ್ ರೇಟ್’ (Credit Rate) ಕಡಿಮೆಯಾಗುತ್ತದೆ ಎಂದು ಬ್ಲಾಕ್ ಮೇಲ್ ಮಾಡುತ್ತಾರೆ. ನಿಮ್ಮ ಮೊಬೈಲ್ಗಳಿಂದ ಚಿತ್ರಗಳನ್ನು ಕದ್ದು ಆಶ್ಲೀಲ ಚಿತ್ರಗಳಾಗಿ ಮಾರ್ಫಿಂಗ್ ಮಾಡಿ ಪರಿಚಯಸ್ಥರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಾರೆ. ಮುಂದುವರೆದು ಕೆಲವೊಮ್ಮೆನಕಲಿ ಎಫ್ಐಆರ್ ಪ್ರತಿಯನ್ನು ಕಳುಹಿಸುತ್ತಾರೆ. ಮುಂದೆ ನಿಮಗೆ ಯಾವ ಬ್ಯಾಂಕಿನಲ್ಲೂ ಸಾಲ ಸಿಗುವುದಿಲ್ಲ ಎಂದೂ ಹೆದರಿಸುತ್ತಾರೆ.
ಪೊಲೀಸ್ ಅಧಿಕಾರಿಯೊಬ್ಬರು ಹೇಳುವ ಪ್ರಕಾರ ಅವರು ಹೆದರಿಸುವ ಪರಿ ಹೇಗಿರುತ್ತದೆಯೆಂದರೆ ಸಾಲ ಪಡೆದ ಶೇ.80ರಷ್ಟು ಮಂದಿ ಉಪಾಯವಿಲ್ಲದೆ ಅವರು ತಿಳಿಸುವಷ್ಟು ಮೊತ್ತವನ್ನು ಹಿಂದಿರುಗಿಸುತ್ತಾರಂತೆ. ಒಂದಷ್ಟು ಮಂದಿ ಅವರಿಗೆ ಹಣ ಪಾವತಿಸಲು ಕಷ್ಟವಾಗಿ ಆತ್ಮಹತ್ಯೆಯಂತಹ ಮೊರೆ ಹೋಗುತ್ತಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನಿರಂತರ ಟಾರ್ಚರ್.!
ಆನ್ಲೈನ್ ಸಾಲ ನೀಡುವ ಸಂಸ್ಥೆಗಳ ಟಾರ್ಚರ್ ಯಾವ ರೀತಿ ಇರುತ್ತದೆಯೆಂದರೆ ನೀವು ಒಮ್ಮೆ ಆನ್ಲೈನ್ ಸಾಲ ಪಡೆದರೆ ಮತ್ತೆ ಜೀವಮಾನದಲ್ಲಿ ಅಂತಹ ಸಾಲದ ಮೊರೆ ಹೋಗುವುದಿಲ್ಲ. ಆನ್ಲೈನ್ ಮೂಲಕ ಸಾಲ ಪಡೆದ ಯುವಕನೋರ್ವ ಹೇಳುವ ಪ್ರಕಾರ ಸಾಮಾನ್ಯವಾಗಿ ನಾಲ್ಕು ವಿಧದಲ್ಲಿ ಟಾರ್ಚರ್ ನೀಡುತ್ತಾರೆ. ಆನ್ಲೈನ್ ಸಾಲವನ್ನು ಪಡೆದ ಬಳಿಕ ನಿಗದಿತ ಕಂತಿನಂತೆ ಮೊತ್ತವನ್ನು ಪಾವತಿ ಮಾಡಬೇಕು.
ಒಂದು ವೇಳೆ ಪಾವತಿ ಮಾಡದಿದ್ದರೆ ಈ ಪಾರಂಭಿಕ ಹಂತದಲ್ಲಿ ಮೊಬೈಲ್ ಕರೆ ಮಾಡಿ ಸಾಲ ಕಟ್ಟಲು ಒತ್ತಡ ಹಾಕಲಾಗುತ್ತದೆ. ಎರಡನೇ ಹಂತದಲ್ಲಿ ಗೂಂಡಾಗಳಿಂದ ಕರೆ ಮಾಡಿ ಬೆದರಿಕೆ ಹಾಕಲಾಗುತ್ತದೆ. ಇದಾದ ಬಳಿಕವೂ ಕಟ್ಟದಿದ್ದಲ್ಲಿ ಮೂರನೆಯದಾಗಿ ಆ್ಯಪ್ ಮೂಲಕ ಸಾಲಗಾರನ ಹತ್ತಿರದ ಸಂಬAಧಿ, ಗೆಳೆಯ/ತಿಯರಿಗೆ ಕರೆ, ಸಂದೇಶ ಕಳುಹಿಸಿ ಹಣ ಕಟ್ಟಲು ಒತ್ತಡ ಹಾಕುತ್ತಾರೆ.
ನಾಲ್ಕನೇ ಆಸ್ತವಾಗಿ ಸಾಲಗಾರನ ಫೋಟೋ ಮೇಲೆ ‘ವಂಚಕ’ ಎಂಬ ಸಂದೇಶ ಹಾಕಿ ಫೇಸ್ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡುತ್ತಾರೆ. ಇದಕ್ಕೆ ಹೆದರಿ ಈ ಹಂತಗಳಲ್ಲಿ ಸಾಕಷ್ಟು ಮಂದಿ ಆತ್ಮಹತ್ಯೆಯ ಮೊರೆ ಹೋಗುತ್ತಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯುವಕರೇ ಎಚ್ಚರ!
ತಿಂಗಳ ವೇತನ ಪಡೆಯುವ 25-45 ವರ್ಷದ ಯುವಕ/ ಯುವತಿಯರೇ ಇವರ ಟಾರ್ಗೆಟ್. ಆದ್ದರಿಂದ ಇಂತಹ ಆ್ಯಪ್ಗಳ ಬಗ್ಗೆ ಜಾಗರೂಕರಾಗಿರಿ. ಈ ಲೇಖನವನ್ನು ಓದಿ ತಮಾಷೆಗೆಂದೂ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡದಿರಿ.
ಯಾವುದೇ ಆ್ಯಪ್ಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಡೌನ್ಲೋಡ್ ಮಾಡಿಕೊಳ್ಳಬೇಡಿ. ಸಾಲ ಪಡೆದು ಸಮಸ್ಯೆಯಲ್ಲಿ ಸಿಲುಕದಿರಿ. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಿದಂತೆ ಇಂತಹ ಮೋಸ ಮಾಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಕುರಿತು ನಿಮಗೆ ಅರಿವಿರಲಿ.
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ
- ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ
- NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್! : ಆರೋಪಿ ಶುಭಂ ಅಸಲಿಗೆ ಯಾರು?
- ಸಾರ್. ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!
- ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ
- ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್
- ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!
- ಟ್ರೆಕ್ಕಿಂಗ್ ಪ್ರಿಯರಿಗೆ ಸರ್ಕಾರ ಶಾಕ್..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?
- ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್
- ಬಂಗಾಳದ ಮಾಜಿ ಚುನಾವಣಾಧಿಕಾರಿ ಈಗ ರಾಜ್ಯದ ‘ಮುಖ್ಯ ಕಾರ್ಯದರ್ಶಿ’: ಇದು ‘ನಾಚಿಕೆಗೇಡು’ ಎಂದ ತೃಣಮೂಲ ಕಾಂಗ್ರೆಸ್!
- ‘ಮಳೆಗಾಲದಲ್ಲಿ ಪ್ರವಾಹ ಉಂಟಾದ್ರೆ ಸೂಟ್ ಧರಿಸಿ ಜನರ ಸೇವೆ ಹೇಗೆ ಮಾಡ್ತೀರಿ’; ಸಿಎಂ ವಿಜಯ್ ಗೆ ಅಣ್ಣಾಮಲೈ ಟಾಂಗ್
- ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ
- PWD ಇಂಜಿನಿಯರ್ ದುರಂತ ಅಂತ್ಯ, ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಪ್ರಾಣಬಿಟ್ಟ!!
- Horoscope Today : 12 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ : ಹಾಸ್ಟೆಲ್ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿನಿ..
- ತನ್ನ ಎಲೆ ಮೇಲೆ ಆನೆ ಬಿದ್ದಿದ್ದರೂ ನೊಣ ಹುಡುಕುವ ಢೋಂಗಿ ಬುದ್ಧಿ : ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
- ಪ್ರೀತಿಸಿ ಮದುವೆಯಾದ ಒಂದೇ ತಿಂಗಳಲ್ಲೇ ದುರಂತ ಅಂತ್ಯ ಕಂಡ ನವದಂಪತಿ! ಅನುಮಾನ ತಂದ ಆಪತ್ತು.!
- ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಇಬ್ಬರು ಮಕ್ಕಳ ತಾಯಿ : ಪ್ರೇಮಿ ಕೈಕೊಟ್ಟನೆಂದು ಮರಳಿ ಗಂಡನ ಬಳಿ ಬಂದ ಮಹಿಳೆ
- ಓದುವ ಆಸೆಯಿದ್ದ ವಿದ್ಯಾರ್ಥಿನಿ ಮದುವೆ ಭಯಕ್ಕೆ ಬಲಿ: ವಿಷ ಸೇವಿಸಿ ದುರಂತ ಅಂತ್ಯ.! ಅಸಲಿಗೆ ನಡೆದಿದ್ದೇನು?
- ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್ ಸ್ಥಾನವೇನು.?
- ರಾಹುಲ್-ವಿಜಯ್ ಸೃಷ್ಟಿಸಿದ ದಾಖಲೆಗೆ ಇನ್ಸ್ಟಾಗ್ರಾಮ್ ಬ್ರೇಕ್ : ಕಾಂಗ್ರೆಸ್ ಆಕ್ರೋಶ, ಇನ್ಸ್ಟಾಗೆ ನಟಿ ರಮ್ಯಾ ಪ್ರಶ್ನೆ!
- ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ ಕೇಸ್, ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ
- ಮೂಲವ್ಯಾಧಿ (Piles) ಸಮಸ್ಯೆಗೆ ಶಾಶ್ವತ ಮುಕ್ತಿ: ಖಾಲಿ ಹೊಟ್ಟೆಯಲ್ಲಿ ಈ ಬೀಜಗಳ ನೀರು ಕುಡಿದರೆ ಸಾಕು!
- ರಾಜ್ಯ ಸರ್ಕಾರಿ ನೌಕರರಿಗೆ ಶೇ.1.5 ರಷ್ಟು ‘ತುಟ್ಟಿಭತ್ಯೆ’ ಹೆಚ್ಚಳಕ್ಕೆ CM ಸಿದ್ದರಾಮಯ್ಯ ಅಧಿಕೃತ ಅನುಮೋದನೆ
- ಸಾನ್ವಿ ಸುದೀಪ್ ಬೆನ್ನ ಮೇಲೆ ಅರಳಿದ ಗಣಪತಿ ದೇವರ ಟ್ಯಾಟೂ.. ಇದಕ್ಕಾಗಿ ಹೋಗಿದ್ದು ಯಾವ ನಗರಕ್ಕೆ? ವಿಡಿಯೋ
- ಫ್ಯಾಟಿ ಲಿವರ್ ಸಮಸ್ಯೆ ಇದ್ದರೆ ಈ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಸಬಹುದು ಹುಷಾರ್!
- ನಾದಿನಿಯ ಫೋಟೋ ತೆಗೆದಿದ್ದಕ್ಕೆ “ಬಾವ” ನೆಗೆ ಧಕ್ಕೆ – ಐವರ ಮೇಲೆ ಆಸಿಡ್ ದಾಳಿ.!
- ಆಸ್ತಿ ಹಪಾಹಪಿಗೆ ರಕ್ತ ಸಂಬಂಧಗಳ ಬಲಿ.! ತಾಯಿ, ತಮ್ಮನನ್ನೇ ಕೊಲೆಗೈದ ಪಾಪಿ ಮಗ.!
- ‘ಇಂಧನ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ..’ ಪ್ರಧಾನಿ ಮೋದಿ ಮಹತ್ವದ ಕರೆ
- ಕೊರೋನಾ ಬಳಿಕ ವಿಶ್ವದೆಲ್ಲೆಡೆ ಹರಡುತ್ತಿದೆ ‘ಹ್ಯಾಂಟಾ ವೈರಸ್’… ಈ ಲಕ್ಷಣ ಕಂಡು ಬಂದ್ರೆ ಹುಷಾರಾಗಿರಿ

































