Instant Loan App : ನಮಸ್ಕಾರ ಸ್ನೇಹಿತರೇ, ಮೊಬೈಲ್ ಆ್ಯಪ್ ಲೋನ್ ದಂಧೆಗೆ ಅನೇಕ ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸರೊಬ್ಬರ ಪ್ರಕಾರ ತಿಂಗಳಲ್ಲಿ ಇಂತಹ ಹತ್ತಾರು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಮೊಬೈಲ್ ಆ್ಯಪ್ಗಳನ್ನು ಬಳಸಿಕೊಂಡು ಸುಲಭವಾಗಿ ಸಾಲ ನೀಡಿ ನಂತರ ಅವರಿಂದ ಡಬಲ್ ಹಣ ವಸೂಲಿ ಮಾಡುವ ಈ ಮೋಸದ ಜಾಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಈ ಬಗ್ಗೆ ಎಚ್ಚರದಿಂದಿರಬೇಕು.
ಕೆಲವೊಮ್ಮೆ ತುರ್ತಾಗಿ 4-5 ಸಾವಿರ ರೂಪಾಯಿ ಕೈಸಾಲ ಬೇಕಾಗುತ್ತದೆ. ಗೆಳೆಯರಲ್ಲಿ ಕೇಳಿದಾಗ ಸಿಗುವುದಿಲ್ಲ. ಸಂಬಂಧಿಕರಲ್ಲಿ ಕೇಳಲು ಮುಜುಗರವಾಗುತ್ತದೆ. ಒಂದು ವಾರದಲ್ಲಿ ಹಿಂದಿರುಗಿಸುವ ಇಷ್ಟು ಸಣ್ಣ ಪ್ರಮಾಣದ ಸಾಲ ಬ್ಯಾಂಕುಗಳಲ್ಲೂ ದೊರೆಯುವುದಿಲ್ಲ. ತಕ್ಷಣ ಸಾಲ ಬೇಕಾಗಿರುವುದರಿಂದ ಯಾರ ರಗಳೆಯೂ ಬೇಡವೆಂದು ಆ್ಯಪ್ಗಳ ಮೊರೆ ಹೋಗುತ್ತಾರೆ.
Yashaswini Card : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.! ಬೇಕಾಗುವ ದಾಖಲೆಗಳೇನು.?
ಭಾರತದಲ್ಲಿ 600ಕ್ಕಿಂತ ಹೆಚ್ಚು ಲೋನ್ ಆ್ಯಪ್ಗಳಿವೆ. ಇವುಗಳಿಗೆ ಆರ್ಬಿಐ ಮಾನ್ಯತೆ ಇಲ್ಲ. ‘ಆನ್ಲೈನ್ ಲೋನ್ (Online Loan) ಎಂದು ಪ್ಲೇ ಸ್ಟೋರ್ನಲ್ಲಿ ಹುಡುಕಿದರೆ ರಾಶಿಗಟ್ಟಲೇ ಆ್ಯಪ್ಗಳು ಕಾಣಿಸಿಕೊಳ್ಳುತ್ತವೆ. ಈ ಆ್ಯಪ್ ಗಳನ್ನು ಇನ್ ಸ್ಟಾಲ್ ಮಾಡುವಾಗ ನಿಮ್ಮ ಮೊಬೈಲ್ ನಂಬರ್, ಭಾವಚಿತ್ರ, ವಿಡಿಯೋ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಕೆಲಸ ಮಾಡುವಲ್ಲಿನ ಐಡೆಂಟಿಟಿ ಕಾರ್ಡ್ ಫೋಟೋ ಹೀಗೆ ನಿಮ್ಮಿಂದ ಹತ್ತಾರು ದಾಖಲಾತಿಗಳನ್ನು ಪಡೆದು, ಹಲವಾರು ನೀತಿ ನಿಯಮಗಳಿಗೆ ನಿಮ್ಮ ಒಪ್ಪಿಗೆ ಪಡೆದ ನಂತರ ಮೊಬೈಲ್ಗೆ ಇನ್ ಸ್ಟಾಲ್ ಆಗುತ್ತದೆ.
ಎಷ್ಟು ಮೊತ್ತದ ಸಾಲ ಸಿಗುತ್ತದೆ?
ತುರ್ತಾಗಿ ಕೈ ಸಾಲಗಳನ್ನು ಪಡೆಯುವ ಯುವಕರೇ ಈ ಆ್ಯಪ್’ಗಳ ಟಾರ್ಗೆಟ್. 3,000 ದಿಂದ 10,000 ರೂಪಾಯಿ ವರೆಗೆ ಸಾಲವನ್ನು ಈ ಆ್ಯಪ್ಗಳು ನೀಡುತ್ತವೆ. ಮೊದಲೇ ಎಲ್ಲ ದಾಖಲೆಗಳನ್ನು ನೀಡಿರುವ ಕಾರಣ ಸಾಲ ಪಡೆಯುವುದು ಸುಲಭ. ಪಡೆದ ಸಾಲಕ್ಕೆ ಆ ದಿನದಿಂದಲೇ ದಿನವಾರು ಲೆಕ್ಕದಲ್ಲಿ ಶೇ30ರಿಂದ 60ರಷ್ಟು ಬಡ್ಡಿಯನ್ನು ವಿಧಿಸಿ ಗೊತ್ತುಪಡಿಸಿದ ದಿನದೊಳಗೆ ಸಾಲ ಚುಕ್ತಾ ಮಾಡಲು ಹೇಳುತ್ತಾರೆ.
ದಿನಗಳು, ತಿಂಗಳುಗಳ ಲೆಕ್ಕಾಚಾರದಲ್ಲಿ ಸಾಲ ನೀಡಲಾಗುತ್ತದೆ. ಸಣ್ಣ ಪ್ರಮಾಣದ ಸಾಲಗಳನ್ನು ಹೆಚ್ಚೆಂದರೆ ಒಂದು ತಿಂಗಳ ಅವಧಿಗೆ ನೀಡಲಾಗುತ್ತದೆ. ಬಡ್ಡಿ ಲೆಕ್ಕಾಚಾರದ ವಿಧಾನಗಳಲ್ಲಿ ಆ್ಯಪ್ಗಳಿಂದ ಆ್ಯಪ್ಗಳಿಗೆ ವ್ಯತ್ಯಾಸವಿದೆ. ಶೇ.30ರಿಂದ ಶೇ.60ರಷ್ಟು ಬಡ್ಡಿಯನ್ನು ದಿನವಾರು ಲೆಕ್ಕಾಚಾರದಲ್ಲಿ ಹಾಕುತ್ತಾರೆ. ಸಾಮಾನ್ಯವಾಗಿ 5,000 ರೂಪಾಯಿ ಸಾಲ ಪಡೆದರೆ ಒಂದು ವಾರಕ್ಕೆ ರೂ.1500 ಬಡ್ಡಿ ಸೇರಿ ರೂ. 6500 ಅನ್ನು ಪಾವತಿಸಬೇಕಾಗುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹಣ ಪಾವತಿಸದಿದ್ದರೆ ಬ್ಲಾಕ್ಮೇಲ್
ಸಾಲ ಪಡೆಯುವ ಆರಂಭದಲ್ಲಿ ಬಡ್ಡಿಯ ಸರಿಯಾದ ಲೆಕ್ಕಾಚಾರವನ್ನು ಆಪ್ಗಳು ನೀಡುವುದಿಲ್ಲ. ನಂತರ ಪಡೆದ ಸಾಲಕ್ಕೆ ವಿಧಿಸುವ ಬಡ್ಡಿ ಮೊತ್ತವು ಅಸಲಿನಷ್ಟೇ ಬೆಳೆದಿರುವುದರಿಂದ ಸಾಮಾನ್ಯವಾಗಿ ಅಷ್ಟು ಮೊತ್ತವನ್ನು ತಕ್ಷಣ ಪಾವತಿಸಲು ಸಾಲಗಾರರು ಸಿದ್ಧರಿರುವುದಿಲ್ಲ. ಒಂದೆರಡು ದಿನ ತಡವಾದರೂ ಅದು ಅವರಿಗೆ ಲಾಭವೇ. ಆ ದಿನಗಳಿಗೂ ಬಡ್ಡಿ ವಿಧಿಸುತ್ತಾರೆ.
ಸಾಲ ಹಿಂತಿರುಗಿಸದೆ ಇದ್ದಲ್ಲಿ ‘ಕ್ರೆಡಿಟ್ ರೇಟ್’ (Credit Rate) ಕಡಿಮೆಯಾಗುತ್ತದೆ ಎಂದು ಬ್ಲಾಕ್ ಮೇಲ್ ಮಾಡುತ್ತಾರೆ. ನಿಮ್ಮ ಮೊಬೈಲ್ಗಳಿಂದ ಚಿತ್ರಗಳನ್ನು ಕದ್ದು ಆಶ್ಲೀಲ ಚಿತ್ರಗಳಾಗಿ ಮಾರ್ಫಿಂಗ್ ಮಾಡಿ ಪರಿಚಯಸ್ಥರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಾರೆ. ಮುಂದುವರೆದು ಕೆಲವೊಮ್ಮೆನಕಲಿ ಎಫ್ಐಆರ್ ಪ್ರತಿಯನ್ನು ಕಳುಹಿಸುತ್ತಾರೆ. ಮುಂದೆ ನಿಮಗೆ ಯಾವ ಬ್ಯಾಂಕಿನಲ್ಲೂ ಸಾಲ ಸಿಗುವುದಿಲ್ಲ ಎಂದೂ ಹೆದರಿಸುತ್ತಾರೆ.
ಪೊಲೀಸ್ ಅಧಿಕಾರಿಯೊಬ್ಬರು ಹೇಳುವ ಪ್ರಕಾರ ಅವರು ಹೆದರಿಸುವ ಪರಿ ಹೇಗಿರುತ್ತದೆಯೆಂದರೆ ಸಾಲ ಪಡೆದ ಶೇ.80ರಷ್ಟು ಮಂದಿ ಉಪಾಯವಿಲ್ಲದೆ ಅವರು ತಿಳಿಸುವಷ್ಟು ಮೊತ್ತವನ್ನು ಹಿಂದಿರುಗಿಸುತ್ತಾರಂತೆ. ಒಂದಷ್ಟು ಮಂದಿ ಅವರಿಗೆ ಹಣ ಪಾವತಿಸಲು ಕಷ್ಟವಾಗಿ ಆತ್ಮಹತ್ಯೆಯಂತಹ ಮೊರೆ ಹೋಗುತ್ತಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನಿರಂತರ ಟಾರ್ಚರ್.!
ಆನ್ಲೈನ್ ಸಾಲ ನೀಡುವ ಸಂಸ್ಥೆಗಳ ಟಾರ್ಚರ್ ಯಾವ ರೀತಿ ಇರುತ್ತದೆಯೆಂದರೆ ನೀವು ಒಮ್ಮೆ ಆನ್ಲೈನ್ ಸಾಲ ಪಡೆದರೆ ಮತ್ತೆ ಜೀವಮಾನದಲ್ಲಿ ಅಂತಹ ಸಾಲದ ಮೊರೆ ಹೋಗುವುದಿಲ್ಲ. ಆನ್ಲೈನ್ ಮೂಲಕ ಸಾಲ ಪಡೆದ ಯುವಕನೋರ್ವ ಹೇಳುವ ಪ್ರಕಾರ ಸಾಮಾನ್ಯವಾಗಿ ನಾಲ್ಕು ವಿಧದಲ್ಲಿ ಟಾರ್ಚರ್ ನೀಡುತ್ತಾರೆ. ಆನ್ಲೈನ್ ಸಾಲವನ್ನು ಪಡೆದ ಬಳಿಕ ನಿಗದಿತ ಕಂತಿನಂತೆ ಮೊತ್ತವನ್ನು ಪಾವತಿ ಮಾಡಬೇಕು.
ಒಂದು ವೇಳೆ ಪಾವತಿ ಮಾಡದಿದ್ದರೆ ಈ ಪಾರಂಭಿಕ ಹಂತದಲ್ಲಿ ಮೊಬೈಲ್ ಕರೆ ಮಾಡಿ ಸಾಲ ಕಟ್ಟಲು ಒತ್ತಡ ಹಾಕಲಾಗುತ್ತದೆ. ಎರಡನೇ ಹಂತದಲ್ಲಿ ಗೂಂಡಾಗಳಿಂದ ಕರೆ ಮಾಡಿ ಬೆದರಿಕೆ ಹಾಕಲಾಗುತ್ತದೆ. ಇದಾದ ಬಳಿಕವೂ ಕಟ್ಟದಿದ್ದಲ್ಲಿ ಮೂರನೆಯದಾಗಿ ಆ್ಯಪ್ ಮೂಲಕ ಸಾಲಗಾರನ ಹತ್ತಿರದ ಸಂಬAಧಿ, ಗೆಳೆಯ/ತಿಯರಿಗೆ ಕರೆ, ಸಂದೇಶ ಕಳುಹಿಸಿ ಹಣ ಕಟ್ಟಲು ಒತ್ತಡ ಹಾಕುತ್ತಾರೆ.
ನಾಲ್ಕನೇ ಆಸ್ತವಾಗಿ ಸಾಲಗಾರನ ಫೋಟೋ ಮೇಲೆ ‘ವಂಚಕ’ ಎಂಬ ಸಂದೇಶ ಹಾಕಿ ಫೇಸ್ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡುತ್ತಾರೆ. ಇದಕ್ಕೆ ಹೆದರಿ ಈ ಹಂತಗಳಲ್ಲಿ ಸಾಕಷ್ಟು ಮಂದಿ ಆತ್ಮಹತ್ಯೆಯ ಮೊರೆ ಹೋಗುತ್ತಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯುವಕರೇ ಎಚ್ಚರ!
ತಿಂಗಳ ವೇತನ ಪಡೆಯುವ 25-45 ವರ್ಷದ ಯುವಕ/ ಯುವತಿಯರೇ ಇವರ ಟಾರ್ಗೆಟ್. ಆದ್ದರಿಂದ ಇಂತಹ ಆ್ಯಪ್ಗಳ ಬಗ್ಗೆ ಜಾಗರೂಕರಾಗಿರಿ. ಈ ಲೇಖನವನ್ನು ಓದಿ ತಮಾಷೆಗೆಂದೂ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡದಿರಿ.
ಯಾವುದೇ ಆ್ಯಪ್ಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಡೌನ್ಲೋಡ್ ಮಾಡಿಕೊಳ್ಳಬೇಡಿ. ಸಾಲ ಪಡೆದು ಸಮಸ್ಯೆಯಲ್ಲಿ ಸಿಲುಕದಿರಿ. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಿದಂತೆ ಇಂತಹ ಮೋಸ ಮಾಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಕುರಿತು ನಿಮಗೆ ಅರಿವಿರಲಿ.
- ಪ್ಲಾಸ್ಟಿಕ್, ಸ್ಟೀಲ್, ಮಣ್ಣು, ತಾಮ್ರ – ಆರೋಗ್ಯಕ್ಕೆ ಯಾವ ಬಾಟಲಿ ನೀರು ಶ್ರೇಷ್ಠ?
- ಫ್ಯಾಟಿ ಲಿವರ್ನಿಂದ ಬಿಪಿವರೆಗೆ: ಮಕ್ಕಳನ್ನೇ ಕಾಡುತ್ತಿರುವ ‘ದೊಡ್ಡವರ ಕಾಯಿಲೆಗಳು’!
- Ration Card : ಪ್ರತ್ಯೇಕ ಪಡಿತರ ಚೀಟಿಗೆ ಯಾವಾಗ ಅರ್ಜಿ ಸಲ್ಲಿಸಬಹುದು? ಅವಿವಾಹಿತ ವ್ಯಕ್ತಿಗಳಿಗಿರುವ ಆಯ್ಕೆಗಳೇನು?
- ಭಾರತೀಯ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2026: ಪರೀಕ್ಷೆಯಿಲ್ಲದೆ 25,000+ GDS ಹುದ್ದೆಗಳಿಗೆ ಅರ್ಜಿ ಆಹ್ವಾನ! 10ನೇ ತರಗತಿ ಪಾಸಾದವರಿಗೆ ಬಂಪರ್ ಆಫರ್.
- ವಿದ್ಯುತ್ ಸಂಪರ್ಕದ ಹೆಸರು ಬದಲಾವಣೆಗೆ ಇನ್ನು ಕಚೇರಿಗೆ ಅಲೆಯುವ ಅಗತ್ಯವಿಲ್ಲ
- ಪೋಸ್ಟ್ ಆಫೀಸ್ನಲ್ಲಿ ‘ಡಬಲ್ ಎಂಜಿನ್’ ಹೂಡಿಕೆ ತಂತ್ರ : 13% ವರೆಗೆ ರಿಟರ್ನ್ಸ್.?
- ಗೃಹಜ್ಯೋತಿ ಮರು ಸರ್ವೆಗೆ 5 ದಿನ ಬಾಕಿ: ಅನರ್ಹರಿಗೆ ಯೋಜನೆ ಸ್ಥಗಿತ, ಮೈಸೂರಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಬೇಕಾದ ಅನಿವಾರ್ಯತೆ!
- PhonePe Loan: ಫೋನ್ ಪೇ ಮೂಲಕ ಕೇವಲ 5 ನಿಮಿಷಗಳಲ್ಲಿ 2 ಲಕ್ಷಗಳವರೆಗೆ ಲೋನ್ ಪಡೆಯಬಹುದು.! ಯಾವ ರೀತಿ ಅರ್ಜಿ ಸಲ್ಲಿಸುವುದು.! ಬಡ್ಡಿ ದರ ಎಷ್ಟು.?
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಸದ್ದಿಲ್ಲದೆ ನಿಮ್ಮನ್ನ ಕೊಲ್ಲುತ್ತಿದೆ ‘ಶ್ವೇತ ವಿಷ’..! ಆದಷ್ಟೂ ಇದರಿಂದ ದೂರವಿರುವುದೇ ಉತ್ತಮ
- ದಿನ ಭವಿಷ್ಯ (22-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಸಿಜೆಪಿಯ ಶಾಲಾ ತಪಾಸಣೆ ಅಭಿಯಾನದ ವೇಳೆ ಘರ್ಷಣೆ – ಶಾಲೆಗಳನ್ನು ಪರಿಶೀಲನೆ ಮಾಡದಂತೆ ಅಡ್ಡಿಪಡಿಲು ಬಿಜೆಪಿ ಗೂಂಡಾಗಳನ್ನು ಕಳುಹಿಸಿದೆ : ಸಿಜೆಪಿ
- ದಿನಕ್ಕೆ 333 ರೂಪಾಯಿ ಉಳಿಸಿದರೆ ಸಿಗಲಿದೆ ಬರೋಬ್ಬರಿ 17 ಲಕ್ಷ : ಇದು ಪೋಸ್ಟ್ ಆಫೀಸ್ ಆರ್ಡಿ ಮ್ಯಾಜಿಕ್.!
- ಹೆತ್ತವರನ್ನು ನೋಡಿಕೊಳ್ಳದ ಮಕ್ಕಳಿಗೆ ಶಾಕ್! ಆಸ್ತಿ-ಮನೆಯಿಂದ ಹೊರಹಾಕಬಹುದೇ?
ಸುಪ್ರೀಂ ಕೋರ್ಟ್ ಹೇಳಿದ್ದೇನು? - ಸಹಜೀವನ ವಿವಾಹಕ್ಕೆ ಸಮಾನ.. ಪೋಷಕರು ಮಧ್ಯಪ್ರವೇಶಿಸುವಂತಿಲ್ಲ; ಹೈಕೋರ್ಟ್ ಮಹತ್ವದ ತೀರ್ಪು
- ರಾಜ್ಯದ ಸಣ್ಣ ರೈತರಿಗೆ ಗುಡ್ ನ್ಯೂಸ್: ‘ರೈತ ಮಿತ್ರ’ ಯೋಜನೆಯಡಿ ಕೃಷಿ ಯಂತ್ರೋಪಕರಣ ಬಾಡಿಗೆಗೆ ಶೇ. 50 ಸಬ್ಸಿಡಿ.!
- 21 ಆಗಸ್ಟ್ ದಿನ ಭವಿಷ್ಯ: ಈ 3 ರಾಶಿಗಳಿಗೆ ಹಣದ ಮಳೆ! 12 ರಾಶಿಗಳ ಸಂಪೂರ್ಣ ಭವಿಷ್ಯ ಇಲ್ಲಿದೆ!
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ

































