Instant Loan App : ನಮಸ್ಕಾರ ಸ್ನೇಹಿತರೇ, ಮೊಬೈಲ್ ಆ್ಯಪ್ ಲೋನ್ ದಂಧೆಗೆ ಅನೇಕ ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸರೊಬ್ಬರ ಪ್ರಕಾರ ತಿಂಗಳಲ್ಲಿ ಇಂತಹ ಹತ್ತಾರು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಮೊಬೈಲ್ ಆ್ಯಪ್ಗಳನ್ನು ಬಳಸಿಕೊಂಡು ಸುಲಭವಾಗಿ ಸಾಲ ನೀಡಿ ನಂತರ ಅವರಿಂದ ಡಬಲ್ ಹಣ ವಸೂಲಿ ಮಾಡುವ ಈ ಮೋಸದ ಜಾಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಈ ಬಗ್ಗೆ ಎಚ್ಚರದಿಂದಿರಬೇಕು.
ಕೆಲವೊಮ್ಮೆ ತುರ್ತಾಗಿ 4-5 ಸಾವಿರ ರೂಪಾಯಿ ಕೈಸಾಲ ಬೇಕಾಗುತ್ತದೆ. ಗೆಳೆಯರಲ್ಲಿ ಕೇಳಿದಾಗ ಸಿಗುವುದಿಲ್ಲ. ಸಂಬಂಧಿಕರಲ್ಲಿ ಕೇಳಲು ಮುಜುಗರವಾಗುತ್ತದೆ. ಒಂದು ವಾರದಲ್ಲಿ ಹಿಂದಿರುಗಿಸುವ ಇಷ್ಟು ಸಣ್ಣ ಪ್ರಮಾಣದ ಸಾಲ ಬ್ಯಾಂಕುಗಳಲ್ಲೂ ದೊರೆಯುವುದಿಲ್ಲ. ತಕ್ಷಣ ಸಾಲ ಬೇಕಾಗಿರುವುದರಿಂದ ಯಾರ ರಗಳೆಯೂ ಬೇಡವೆಂದು ಆ್ಯಪ್ಗಳ ಮೊರೆ ಹೋಗುತ್ತಾರೆ.
Yashaswini Card : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.! ಬೇಕಾಗುವ ದಾಖಲೆಗಳೇನು.?
ಭಾರತದಲ್ಲಿ 600ಕ್ಕಿಂತ ಹೆಚ್ಚು ಲೋನ್ ಆ್ಯಪ್ಗಳಿವೆ. ಇವುಗಳಿಗೆ ಆರ್ಬಿಐ ಮಾನ್ಯತೆ ಇಲ್ಲ. ‘ಆನ್ಲೈನ್ ಲೋನ್ (Online Loan) ಎಂದು ಪ್ಲೇ ಸ್ಟೋರ್ನಲ್ಲಿ ಹುಡುಕಿದರೆ ರಾಶಿಗಟ್ಟಲೇ ಆ್ಯಪ್ಗಳು ಕಾಣಿಸಿಕೊಳ್ಳುತ್ತವೆ. ಈ ಆ್ಯಪ್ ಗಳನ್ನು ಇನ್ ಸ್ಟಾಲ್ ಮಾಡುವಾಗ ನಿಮ್ಮ ಮೊಬೈಲ್ ನಂಬರ್, ಭಾವಚಿತ್ರ, ವಿಡಿಯೋ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಕೆಲಸ ಮಾಡುವಲ್ಲಿನ ಐಡೆಂಟಿಟಿ ಕಾರ್ಡ್ ಫೋಟೋ ಹೀಗೆ ನಿಮ್ಮಿಂದ ಹತ್ತಾರು ದಾಖಲಾತಿಗಳನ್ನು ಪಡೆದು, ಹಲವಾರು ನೀತಿ ನಿಯಮಗಳಿಗೆ ನಿಮ್ಮ ಒಪ್ಪಿಗೆ ಪಡೆದ ನಂತರ ಮೊಬೈಲ್ಗೆ ಇನ್ ಸ್ಟಾಲ್ ಆಗುತ್ತದೆ.
ಎಷ್ಟು ಮೊತ್ತದ ಸಾಲ ಸಿಗುತ್ತದೆ?
ತುರ್ತಾಗಿ ಕೈ ಸಾಲಗಳನ್ನು ಪಡೆಯುವ ಯುವಕರೇ ಈ ಆ್ಯಪ್’ಗಳ ಟಾರ್ಗೆಟ್. 3,000 ದಿಂದ 10,000 ರೂಪಾಯಿ ವರೆಗೆ ಸಾಲವನ್ನು ಈ ಆ್ಯಪ್ಗಳು ನೀಡುತ್ತವೆ. ಮೊದಲೇ ಎಲ್ಲ ದಾಖಲೆಗಳನ್ನು ನೀಡಿರುವ ಕಾರಣ ಸಾಲ ಪಡೆಯುವುದು ಸುಲಭ. ಪಡೆದ ಸಾಲಕ್ಕೆ ಆ ದಿನದಿಂದಲೇ ದಿನವಾರು ಲೆಕ್ಕದಲ್ಲಿ ಶೇ30ರಿಂದ 60ರಷ್ಟು ಬಡ್ಡಿಯನ್ನು ವಿಧಿಸಿ ಗೊತ್ತುಪಡಿಸಿದ ದಿನದೊಳಗೆ ಸಾಲ ಚುಕ್ತಾ ಮಾಡಲು ಹೇಳುತ್ತಾರೆ.
ದಿನಗಳು, ತಿಂಗಳುಗಳ ಲೆಕ್ಕಾಚಾರದಲ್ಲಿ ಸಾಲ ನೀಡಲಾಗುತ್ತದೆ. ಸಣ್ಣ ಪ್ರಮಾಣದ ಸಾಲಗಳನ್ನು ಹೆಚ್ಚೆಂದರೆ ಒಂದು ತಿಂಗಳ ಅವಧಿಗೆ ನೀಡಲಾಗುತ್ತದೆ. ಬಡ್ಡಿ ಲೆಕ್ಕಾಚಾರದ ವಿಧಾನಗಳಲ್ಲಿ ಆ್ಯಪ್ಗಳಿಂದ ಆ್ಯಪ್ಗಳಿಗೆ ವ್ಯತ್ಯಾಸವಿದೆ. ಶೇ.30ರಿಂದ ಶೇ.60ರಷ್ಟು ಬಡ್ಡಿಯನ್ನು ದಿನವಾರು ಲೆಕ್ಕಾಚಾರದಲ್ಲಿ ಹಾಕುತ್ತಾರೆ. ಸಾಮಾನ್ಯವಾಗಿ 5,000 ರೂಪಾಯಿ ಸಾಲ ಪಡೆದರೆ ಒಂದು ವಾರಕ್ಕೆ ರೂ.1500 ಬಡ್ಡಿ ಸೇರಿ ರೂ. 6500 ಅನ್ನು ಪಾವತಿಸಬೇಕಾಗುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹಣ ಪಾವತಿಸದಿದ್ದರೆ ಬ್ಲಾಕ್ಮೇಲ್
ಸಾಲ ಪಡೆಯುವ ಆರಂಭದಲ್ಲಿ ಬಡ್ಡಿಯ ಸರಿಯಾದ ಲೆಕ್ಕಾಚಾರವನ್ನು ಆಪ್ಗಳು ನೀಡುವುದಿಲ್ಲ. ನಂತರ ಪಡೆದ ಸಾಲಕ್ಕೆ ವಿಧಿಸುವ ಬಡ್ಡಿ ಮೊತ್ತವು ಅಸಲಿನಷ್ಟೇ ಬೆಳೆದಿರುವುದರಿಂದ ಸಾಮಾನ್ಯವಾಗಿ ಅಷ್ಟು ಮೊತ್ತವನ್ನು ತಕ್ಷಣ ಪಾವತಿಸಲು ಸಾಲಗಾರರು ಸಿದ್ಧರಿರುವುದಿಲ್ಲ. ಒಂದೆರಡು ದಿನ ತಡವಾದರೂ ಅದು ಅವರಿಗೆ ಲಾಭವೇ. ಆ ದಿನಗಳಿಗೂ ಬಡ್ಡಿ ವಿಧಿಸುತ್ತಾರೆ.
ಸಾಲ ಹಿಂತಿರುಗಿಸದೆ ಇದ್ದಲ್ಲಿ ‘ಕ್ರೆಡಿಟ್ ರೇಟ್’ (Credit Rate) ಕಡಿಮೆಯಾಗುತ್ತದೆ ಎಂದು ಬ್ಲಾಕ್ ಮೇಲ್ ಮಾಡುತ್ತಾರೆ. ನಿಮ್ಮ ಮೊಬೈಲ್ಗಳಿಂದ ಚಿತ್ರಗಳನ್ನು ಕದ್ದು ಆಶ್ಲೀಲ ಚಿತ್ರಗಳಾಗಿ ಮಾರ್ಫಿಂಗ್ ಮಾಡಿ ಪರಿಚಯಸ್ಥರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಾರೆ. ಮುಂದುವರೆದು ಕೆಲವೊಮ್ಮೆನಕಲಿ ಎಫ್ಐಆರ್ ಪ್ರತಿಯನ್ನು ಕಳುಹಿಸುತ್ತಾರೆ. ಮುಂದೆ ನಿಮಗೆ ಯಾವ ಬ್ಯಾಂಕಿನಲ್ಲೂ ಸಾಲ ಸಿಗುವುದಿಲ್ಲ ಎಂದೂ ಹೆದರಿಸುತ್ತಾರೆ.
ಪೊಲೀಸ್ ಅಧಿಕಾರಿಯೊಬ್ಬರು ಹೇಳುವ ಪ್ರಕಾರ ಅವರು ಹೆದರಿಸುವ ಪರಿ ಹೇಗಿರುತ್ತದೆಯೆಂದರೆ ಸಾಲ ಪಡೆದ ಶೇ.80ರಷ್ಟು ಮಂದಿ ಉಪಾಯವಿಲ್ಲದೆ ಅವರು ತಿಳಿಸುವಷ್ಟು ಮೊತ್ತವನ್ನು ಹಿಂದಿರುಗಿಸುತ್ತಾರಂತೆ. ಒಂದಷ್ಟು ಮಂದಿ ಅವರಿಗೆ ಹಣ ಪಾವತಿಸಲು ಕಷ್ಟವಾಗಿ ಆತ್ಮಹತ್ಯೆಯಂತಹ ಮೊರೆ ಹೋಗುತ್ತಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನಿರಂತರ ಟಾರ್ಚರ್.!
ಆನ್ಲೈನ್ ಸಾಲ ನೀಡುವ ಸಂಸ್ಥೆಗಳ ಟಾರ್ಚರ್ ಯಾವ ರೀತಿ ಇರುತ್ತದೆಯೆಂದರೆ ನೀವು ಒಮ್ಮೆ ಆನ್ಲೈನ್ ಸಾಲ ಪಡೆದರೆ ಮತ್ತೆ ಜೀವಮಾನದಲ್ಲಿ ಅಂತಹ ಸಾಲದ ಮೊರೆ ಹೋಗುವುದಿಲ್ಲ. ಆನ್ಲೈನ್ ಮೂಲಕ ಸಾಲ ಪಡೆದ ಯುವಕನೋರ್ವ ಹೇಳುವ ಪ್ರಕಾರ ಸಾಮಾನ್ಯವಾಗಿ ನಾಲ್ಕು ವಿಧದಲ್ಲಿ ಟಾರ್ಚರ್ ನೀಡುತ್ತಾರೆ. ಆನ್ಲೈನ್ ಸಾಲವನ್ನು ಪಡೆದ ಬಳಿಕ ನಿಗದಿತ ಕಂತಿನಂತೆ ಮೊತ್ತವನ್ನು ಪಾವತಿ ಮಾಡಬೇಕು.
ಒಂದು ವೇಳೆ ಪಾವತಿ ಮಾಡದಿದ್ದರೆ ಈ ಪಾರಂಭಿಕ ಹಂತದಲ್ಲಿ ಮೊಬೈಲ್ ಕರೆ ಮಾಡಿ ಸಾಲ ಕಟ್ಟಲು ಒತ್ತಡ ಹಾಕಲಾಗುತ್ತದೆ. ಎರಡನೇ ಹಂತದಲ್ಲಿ ಗೂಂಡಾಗಳಿಂದ ಕರೆ ಮಾಡಿ ಬೆದರಿಕೆ ಹಾಕಲಾಗುತ್ತದೆ. ಇದಾದ ಬಳಿಕವೂ ಕಟ್ಟದಿದ್ದಲ್ಲಿ ಮೂರನೆಯದಾಗಿ ಆ್ಯಪ್ ಮೂಲಕ ಸಾಲಗಾರನ ಹತ್ತಿರದ ಸಂಬAಧಿ, ಗೆಳೆಯ/ತಿಯರಿಗೆ ಕರೆ, ಸಂದೇಶ ಕಳುಹಿಸಿ ಹಣ ಕಟ್ಟಲು ಒತ್ತಡ ಹಾಕುತ್ತಾರೆ.
ನಾಲ್ಕನೇ ಆಸ್ತವಾಗಿ ಸಾಲಗಾರನ ಫೋಟೋ ಮೇಲೆ ‘ವಂಚಕ’ ಎಂಬ ಸಂದೇಶ ಹಾಕಿ ಫೇಸ್ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡುತ್ತಾರೆ. ಇದಕ್ಕೆ ಹೆದರಿ ಈ ಹಂತಗಳಲ್ಲಿ ಸಾಕಷ್ಟು ಮಂದಿ ಆತ್ಮಹತ್ಯೆಯ ಮೊರೆ ಹೋಗುತ್ತಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯುವಕರೇ ಎಚ್ಚರ!
ತಿಂಗಳ ವೇತನ ಪಡೆಯುವ 25-45 ವರ್ಷದ ಯುವಕ/ ಯುವತಿಯರೇ ಇವರ ಟಾರ್ಗೆಟ್. ಆದ್ದರಿಂದ ಇಂತಹ ಆ್ಯಪ್ಗಳ ಬಗ್ಗೆ ಜಾಗರೂಕರಾಗಿರಿ. ಈ ಲೇಖನವನ್ನು ಓದಿ ತಮಾಷೆಗೆಂದೂ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡದಿರಿ.
ಯಾವುದೇ ಆ್ಯಪ್ಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಡೌನ್ಲೋಡ್ ಮಾಡಿಕೊಳ್ಳಬೇಡಿ. ಸಾಲ ಪಡೆದು ಸಮಸ್ಯೆಯಲ್ಲಿ ಸಿಲುಕದಿರಿ. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಿದಂತೆ ಇಂತಹ ಮೋಸ ಮಾಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಕುರಿತು ನಿಮಗೆ ಅರಿವಿರಲಿ.
- ಬೆಂಗಳೂರಿನ ‘ಡೇ ಕೇರ್’ ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಕೇಸ್ : ಇಬ್ಬರು ಸಿಬ್ಬಂದಿಗಳು ಅರೆಸ್ಟ್
- Maandhan Yojana : ನೀವು ರೈತರಾಗಿದ್ರೆ ಪ್ರತೀ ತಿಂಗಳು ಸಿಗಲಿದೆ ʼಪಿಂಚಣಿʼ – ಬೇಕಾಗುವ ದಾಖಲೆಗಳೇನು.?
- Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್
- Post Office Scheme : ಪೋಸ್ಟ್ ಆಫೀಸ್ ನಲ್ಲಿ ಪ್ರತಿದಿನ ₹333 ಹೂಡಿಕೆ ಮಾಡಿ ₹17 ಲಕ್ಷ ನಿಮ್ಮದಾಗಿಸಿಕೊಳ್ಳಿ
- ಭೀಕರ ಬರಗಾಲದ ಮುನ್ಸೂಚನೆ: ನೀರಿಲ್ಲ, ಬೆಳೆ ಬೆಳೆಯಬೇಡಿ ಎಂದ ಸಿ.ಎಂ ಡಿ.ಕೆ ಶಿವಕುಮಾರ್
- ಶಾಲಾ ಬಸ್ನಲ್ಲಿ ಮಕ್ಕಳು ಮನೆ ತಲುಪುವವರೆಗೂ ಶಾಲೆಯದ್ದೇ ಜವಾಬ್ದಾರಿ : ಹೈಕೋರ್ಟ್ ಮಹತ್ವದ ಆದೇಶ!
- ಚಿಕ್ಕಬಳ್ಳಾಪುರದಲ್ಲಿ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಕತ್ತು ಕೊಯ್ಯಲು ಯತ್ನ.!
- ಗೃಹಜ್ಯೋತಿ ಯೋಜನೆ ಪರಿಷ್ಕರಣೆ ಬಗ್ಗೆ ಜೆಡಿಎಸ್ ಕಿಡಿ: ವಿಪಕ್ಷಗಳ ಆರೋಪಕ್ಕೆ ಇಂಧನ ಸಚಿವರಿಂದಲೇ ಸ್ಪಷ್ಟನೆ
- ರಾತ್ರಿಯಿಡೀ ಮೊಬೈಲ್ ನೋಡ್ಕೊಂಡು ಎದ್ದಿರ್ತಿರಾ.? ಸಾವಿನ ಅಪಾಯ ಹೆಚ್ಚು.!
- ಗುಟ್ಕಾ ಉಗಿಯಲು ಬಗ್ಗಿದ ಯುವಕನ ತಲೆಗೆ ಗುದ್ದಿದ ಟಿಪ್ಪರ್; ರಸ್ತೆಗೆ ಬಿದ್ದ ರುಂಡ, ಬಸ್ಸಿನಲ್ಲಿ ನೇತಾಡಿದ ಮುಂಡ!
- ಘಜ್ನಿ ಬಿಟ್ಟರೆ ಗುಡಿಗಳ ಸಂಪತ್ತು ಕೊಳ್ಳೆ ಹೊಡೆದಿದ್ದು ಸಂಘ ಪರಿವಾರ ಹಾಗೂ ಬಿಜೆಪಿ : ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್
- ಗ್ರಾಹಕರಿಗೆ ಗುಡ್ ನ್ಯೂಸ್: LPG ಸಿಲಿಂಡರ್ ದರ ಇಳಿಕೆ ಬೆನ್ನಲ್ಲೇ ಪೆಟ್ರೋಲ್ 5 ರೂ., ಡೀಸೆಲ್ ದರ 3 ರೂ. ಇಳಿಕೆ
- ಫ್ಯಾಟಿ ಲಿವರ್ : ಮೂವರಲ್ಲಿ ಒಬ್ಬರಿಗಿದೆ ಈ ಅಪಾಯಕಾರಿ ಕಾಯಿಲೆ, ಇಂತಹ ಲಕ್ಷಣ ಕಾಣಿಸಿಕೊಂಡ್ರೆ ಜೀವಕ್ಕೇ ಆಪತ್ತು!
- ಬೆಳಗ್ಗೆ ಈ ಲಕ್ಷಣಗಳು ಕಾಣಿಸಿಕೊಂಡರೆ ಸ್ಟ್ರೋಕ್ ಬರುತ್ತಿದೆ ಎಂದರ್ಥ; ಎಚ್ಷರ, ನಿರ್ಲಕ್ಷಿಸಬೇಡಿ
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ

































