Instant Loan App : ನಮಸ್ಕಾರ ಸ್ನೇಹಿತರೇ, ಮೊಬೈಲ್ ಆ್ಯಪ್ ಲೋನ್ ದಂಧೆಗೆ ಅನೇಕ ಯುವಕ-ಯುವತಿಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕ್ರೈಮ್ ಬ್ರಾಂಚ್ ಪೊಲೀಸರೊಬ್ಬರ ಪ್ರಕಾರ ತಿಂಗಳಲ್ಲಿ ಇಂತಹ ಹತ್ತಾರು ಪ್ರಕರಣಗಳು ರಾಜ್ಯದಲ್ಲಿ ದಾಖಲಾಗುತ್ತಿವೆ. ಮೊಬೈಲ್ ಆ್ಯಪ್ಗಳನ್ನು ಬಳಸಿಕೊಂಡು ಸುಲಭವಾಗಿ ಸಾಲ ನೀಡಿ ನಂತರ ಅವರಿಂದ ಡಬಲ್ ಹಣ ವಸೂಲಿ ಮಾಡುವ ಈ ಮೋಸದ ಜಾಲ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು ಮೊಬೈಲ್ ಬಳಕೆದಾರರು ಈ ಬಗ್ಗೆ ಎಚ್ಚರದಿಂದಿರಬೇಕು.
ಕೆಲವೊಮ್ಮೆ ತುರ್ತಾಗಿ 4-5 ಸಾವಿರ ರೂಪಾಯಿ ಕೈಸಾಲ ಬೇಕಾಗುತ್ತದೆ. ಗೆಳೆಯರಲ್ಲಿ ಕೇಳಿದಾಗ ಸಿಗುವುದಿಲ್ಲ. ಸಂಬಂಧಿಕರಲ್ಲಿ ಕೇಳಲು ಮುಜುಗರವಾಗುತ್ತದೆ. ಒಂದು ವಾರದಲ್ಲಿ ಹಿಂದಿರುಗಿಸುವ ಇಷ್ಟು ಸಣ್ಣ ಪ್ರಮಾಣದ ಸಾಲ ಬ್ಯಾಂಕುಗಳಲ್ಲೂ ದೊರೆಯುವುದಿಲ್ಲ. ತಕ್ಷಣ ಸಾಲ ಬೇಕಾಗಿರುವುದರಿಂದ ಯಾರ ರಗಳೆಯೂ ಬೇಡವೆಂದು ಆ್ಯಪ್ಗಳ ಮೊರೆ ಹೋಗುತ್ತಾರೆ.
Yashaswini Card : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.! ಬೇಕಾಗುವ ದಾಖಲೆಗಳೇನು.?
ಭಾರತದಲ್ಲಿ 600ಕ್ಕಿಂತ ಹೆಚ್ಚು ಲೋನ್ ಆ್ಯಪ್ಗಳಿವೆ. ಇವುಗಳಿಗೆ ಆರ್ಬಿಐ ಮಾನ್ಯತೆ ಇಲ್ಲ. ‘ಆನ್ಲೈನ್ ಲೋನ್ (Online Loan) ಎಂದು ಪ್ಲೇ ಸ್ಟೋರ್ನಲ್ಲಿ ಹುಡುಕಿದರೆ ರಾಶಿಗಟ್ಟಲೇ ಆ್ಯಪ್ಗಳು ಕಾಣಿಸಿಕೊಳ್ಳುತ್ತವೆ. ಈ ಆ್ಯಪ್ ಗಳನ್ನು ಇನ್ ಸ್ಟಾಲ್ ಮಾಡುವಾಗ ನಿಮ್ಮ ಮೊಬೈಲ್ ನಂಬರ್, ಭಾವಚಿತ್ರ, ವಿಡಿಯೋ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಕೆಲಸ ಮಾಡುವಲ್ಲಿನ ಐಡೆಂಟಿಟಿ ಕಾರ್ಡ್ ಫೋಟೋ ಹೀಗೆ ನಿಮ್ಮಿಂದ ಹತ್ತಾರು ದಾಖಲಾತಿಗಳನ್ನು ಪಡೆದು, ಹಲವಾರು ನೀತಿ ನಿಯಮಗಳಿಗೆ ನಿಮ್ಮ ಒಪ್ಪಿಗೆ ಪಡೆದ ನಂತರ ಮೊಬೈಲ್ಗೆ ಇನ್ ಸ್ಟಾಲ್ ಆಗುತ್ತದೆ.
ಎಷ್ಟು ಮೊತ್ತದ ಸಾಲ ಸಿಗುತ್ತದೆ?
ತುರ್ತಾಗಿ ಕೈ ಸಾಲಗಳನ್ನು ಪಡೆಯುವ ಯುವಕರೇ ಈ ಆ್ಯಪ್’ಗಳ ಟಾರ್ಗೆಟ್. 3,000 ದಿಂದ 10,000 ರೂಪಾಯಿ ವರೆಗೆ ಸಾಲವನ್ನು ಈ ಆ್ಯಪ್ಗಳು ನೀಡುತ್ತವೆ. ಮೊದಲೇ ಎಲ್ಲ ದಾಖಲೆಗಳನ್ನು ನೀಡಿರುವ ಕಾರಣ ಸಾಲ ಪಡೆಯುವುದು ಸುಲಭ. ಪಡೆದ ಸಾಲಕ್ಕೆ ಆ ದಿನದಿಂದಲೇ ದಿನವಾರು ಲೆಕ್ಕದಲ್ಲಿ ಶೇ30ರಿಂದ 60ರಷ್ಟು ಬಡ್ಡಿಯನ್ನು ವಿಧಿಸಿ ಗೊತ್ತುಪಡಿಸಿದ ದಿನದೊಳಗೆ ಸಾಲ ಚುಕ್ತಾ ಮಾಡಲು ಹೇಳುತ್ತಾರೆ.
ದಿನಗಳು, ತಿಂಗಳುಗಳ ಲೆಕ್ಕಾಚಾರದಲ್ಲಿ ಸಾಲ ನೀಡಲಾಗುತ್ತದೆ. ಸಣ್ಣ ಪ್ರಮಾಣದ ಸಾಲಗಳನ್ನು ಹೆಚ್ಚೆಂದರೆ ಒಂದು ತಿಂಗಳ ಅವಧಿಗೆ ನೀಡಲಾಗುತ್ತದೆ. ಬಡ್ಡಿ ಲೆಕ್ಕಾಚಾರದ ವಿಧಾನಗಳಲ್ಲಿ ಆ್ಯಪ್ಗಳಿಂದ ಆ್ಯಪ್ಗಳಿಗೆ ವ್ಯತ್ಯಾಸವಿದೆ. ಶೇ.30ರಿಂದ ಶೇ.60ರಷ್ಟು ಬಡ್ಡಿಯನ್ನು ದಿನವಾರು ಲೆಕ್ಕಾಚಾರದಲ್ಲಿ ಹಾಕುತ್ತಾರೆ. ಸಾಮಾನ್ಯವಾಗಿ 5,000 ರೂಪಾಯಿ ಸಾಲ ಪಡೆದರೆ ಒಂದು ವಾರಕ್ಕೆ ರೂ.1500 ಬಡ್ಡಿ ಸೇರಿ ರೂ. 6500 ಅನ್ನು ಪಾವತಿಸಬೇಕಾಗುತ್ತದೆ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಹಣ ಪಾವತಿಸದಿದ್ದರೆ ಬ್ಲಾಕ್ಮೇಲ್
ಸಾಲ ಪಡೆಯುವ ಆರಂಭದಲ್ಲಿ ಬಡ್ಡಿಯ ಸರಿಯಾದ ಲೆಕ್ಕಾಚಾರವನ್ನು ಆಪ್ಗಳು ನೀಡುವುದಿಲ್ಲ. ನಂತರ ಪಡೆದ ಸಾಲಕ್ಕೆ ವಿಧಿಸುವ ಬಡ್ಡಿ ಮೊತ್ತವು ಅಸಲಿನಷ್ಟೇ ಬೆಳೆದಿರುವುದರಿಂದ ಸಾಮಾನ್ಯವಾಗಿ ಅಷ್ಟು ಮೊತ್ತವನ್ನು ತಕ್ಷಣ ಪಾವತಿಸಲು ಸಾಲಗಾರರು ಸಿದ್ಧರಿರುವುದಿಲ್ಲ. ಒಂದೆರಡು ದಿನ ತಡವಾದರೂ ಅದು ಅವರಿಗೆ ಲಾಭವೇ. ಆ ದಿನಗಳಿಗೂ ಬಡ್ಡಿ ವಿಧಿಸುತ್ತಾರೆ.
ಸಾಲ ಹಿಂತಿರುಗಿಸದೆ ಇದ್ದಲ್ಲಿ ‘ಕ್ರೆಡಿಟ್ ರೇಟ್’ (Credit Rate) ಕಡಿಮೆಯಾಗುತ್ತದೆ ಎಂದು ಬ್ಲಾಕ್ ಮೇಲ್ ಮಾಡುತ್ತಾರೆ. ನಿಮ್ಮ ಮೊಬೈಲ್ಗಳಿಂದ ಚಿತ್ರಗಳನ್ನು ಕದ್ದು ಆಶ್ಲೀಲ ಚಿತ್ರಗಳಾಗಿ ಮಾರ್ಫಿಂಗ್ ಮಾಡಿ ಪರಿಚಯಸ್ಥರಿಗೆ ಕಳುಹಿಸುವುದಾಗಿ ಬೆದರಿಕೆ ಹಾಕುತ್ತಾರೆ. ಮುಂದುವರೆದು ಕೆಲವೊಮ್ಮೆನಕಲಿ ಎಫ್ಐಆರ್ ಪ್ರತಿಯನ್ನು ಕಳುಹಿಸುತ್ತಾರೆ. ಮುಂದೆ ನಿಮಗೆ ಯಾವ ಬ್ಯಾಂಕಿನಲ್ಲೂ ಸಾಲ ಸಿಗುವುದಿಲ್ಲ ಎಂದೂ ಹೆದರಿಸುತ್ತಾರೆ.
ಪೊಲೀಸ್ ಅಧಿಕಾರಿಯೊಬ್ಬರು ಹೇಳುವ ಪ್ರಕಾರ ಅವರು ಹೆದರಿಸುವ ಪರಿ ಹೇಗಿರುತ್ತದೆಯೆಂದರೆ ಸಾಲ ಪಡೆದ ಶೇ.80ರಷ್ಟು ಮಂದಿ ಉಪಾಯವಿಲ್ಲದೆ ಅವರು ತಿಳಿಸುವಷ್ಟು ಮೊತ್ತವನ್ನು ಹಿಂದಿರುಗಿಸುತ್ತಾರಂತೆ. ಒಂದಷ್ಟು ಮಂದಿ ಅವರಿಗೆ ಹಣ ಪಾವತಿಸಲು ಕಷ್ಟವಾಗಿ ಆತ್ಮಹತ್ಯೆಯಂತಹ ಮೊರೆ ಹೋಗುತ್ತಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ನಿರಂತರ ಟಾರ್ಚರ್.!
ಆನ್ಲೈನ್ ಸಾಲ ನೀಡುವ ಸಂಸ್ಥೆಗಳ ಟಾರ್ಚರ್ ಯಾವ ರೀತಿ ಇರುತ್ತದೆಯೆಂದರೆ ನೀವು ಒಮ್ಮೆ ಆನ್ಲೈನ್ ಸಾಲ ಪಡೆದರೆ ಮತ್ತೆ ಜೀವಮಾನದಲ್ಲಿ ಅಂತಹ ಸಾಲದ ಮೊರೆ ಹೋಗುವುದಿಲ್ಲ. ಆನ್ಲೈನ್ ಮೂಲಕ ಸಾಲ ಪಡೆದ ಯುವಕನೋರ್ವ ಹೇಳುವ ಪ್ರಕಾರ ಸಾಮಾನ್ಯವಾಗಿ ನಾಲ್ಕು ವಿಧದಲ್ಲಿ ಟಾರ್ಚರ್ ನೀಡುತ್ತಾರೆ. ಆನ್ಲೈನ್ ಸಾಲವನ್ನು ಪಡೆದ ಬಳಿಕ ನಿಗದಿತ ಕಂತಿನಂತೆ ಮೊತ್ತವನ್ನು ಪಾವತಿ ಮಾಡಬೇಕು.
ಒಂದು ವೇಳೆ ಪಾವತಿ ಮಾಡದಿದ್ದರೆ ಈ ಪಾರಂಭಿಕ ಹಂತದಲ್ಲಿ ಮೊಬೈಲ್ ಕರೆ ಮಾಡಿ ಸಾಲ ಕಟ್ಟಲು ಒತ್ತಡ ಹಾಕಲಾಗುತ್ತದೆ. ಎರಡನೇ ಹಂತದಲ್ಲಿ ಗೂಂಡಾಗಳಿಂದ ಕರೆ ಮಾಡಿ ಬೆದರಿಕೆ ಹಾಕಲಾಗುತ್ತದೆ. ಇದಾದ ಬಳಿಕವೂ ಕಟ್ಟದಿದ್ದಲ್ಲಿ ಮೂರನೆಯದಾಗಿ ಆ್ಯಪ್ ಮೂಲಕ ಸಾಲಗಾರನ ಹತ್ತಿರದ ಸಂಬAಧಿ, ಗೆಳೆಯ/ತಿಯರಿಗೆ ಕರೆ, ಸಂದೇಶ ಕಳುಹಿಸಿ ಹಣ ಕಟ್ಟಲು ಒತ್ತಡ ಹಾಕುತ್ತಾರೆ.
ನಾಲ್ಕನೇ ಆಸ್ತವಾಗಿ ಸಾಲಗಾರನ ಫೋಟೋ ಮೇಲೆ ‘ವಂಚಕ’ ಎಂಬ ಸಂದೇಶ ಹಾಕಿ ಫೇಸ್ಬುಕ್, ಟ್ವಿಟರ್, ಇನ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ ಒಡ್ಡುತ್ತಾರೆ. ಇದಕ್ಕೆ ಹೆದರಿ ಈ ಹಂತಗಳಲ್ಲಿ ಸಾಕಷ್ಟು ಮಂದಿ ಆತ್ಮಹತ್ಯೆಯ ಮೊರೆ ಹೋಗುತ್ತಾರೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ಯುವಕರೇ ಎಚ್ಚರ!
ತಿಂಗಳ ವೇತನ ಪಡೆಯುವ 25-45 ವರ್ಷದ ಯುವಕ/ ಯುವತಿಯರೇ ಇವರ ಟಾರ್ಗೆಟ್. ಆದ್ದರಿಂದ ಇಂತಹ ಆ್ಯಪ್ಗಳ ಬಗ್ಗೆ ಜಾಗರೂಕರಾಗಿರಿ. ಈ ಲೇಖನವನ್ನು ಓದಿ ತಮಾಷೆಗೆಂದೂ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಳ್ಳುವ ಪ್ರಯತ್ನವನ್ನು ಮಾಡದಿರಿ.
ಯಾವುದೇ ಆ್ಯಪ್ಗಳ ಬಗ್ಗೆ ಸರಿಯಾದ ಮಾಹಿತಿ ಇಲ್ಲದೇ ಡೌನ್ಲೋಡ್ ಮಾಡಿಕೊಳ್ಳಬೇಡಿ. ಸಾಲ ಪಡೆದು ಸಮಸ್ಯೆಯಲ್ಲಿ ಸಿಲುಕದಿರಿ. ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಿದಂತೆ ಇಂತಹ ಮೋಸ ಮಾಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಈ ಕುರಿತು ನಿಮಗೆ ಅರಿವಿರಲಿ.
- ಸೇತುವೆಯಿಂದ ಟ್ರ್ಯಾಕ್ಟರ್ ಬಿದ್ದು 6 ಮಂದಿ ಸಾವು, ದೇವರ ದರ್ಶನಕ್ಕೆ ಹೊರಟವರು ಮಸಣಕ್ಕೆ, 5ಲಕ್ಷ ರೂ ಪರಿಹಾರ
- ಶತಕ ದಾಟಿದ ಪೆಟ್ರೋಲ್ ದರ : ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
- ಮೋದಿಗೆ ಧೈರ್ಯವಿದ್ದರೆ 12 ವರ್ಷ ಸಾಧನೆ ಹೇಳಿಕೊಳ್ಳಲಿ: RSS ನವ್ರು ದೇಶದ್ರೋಹಿಗಳು ಎಂದ ಪ್ರಿಯಾಂಕ್ ಖರ್ಗೆ
- ಮುಂದಿನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಂದು ಬ್ಯಾನರ್… ಹೊಸ ಎಡವಟ್ಟು ಮಾಡಿಕೊಂಡ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ
- ಬಾಲಕಿಯರ ವಿಡಿಯೋ ಚಿತ್ರೀಕರಿಸಿ ಆನ್ಲೈನ್ಗೆ ಅಪ್ಲೋಡ್: ಹುಡುಕಿ ಇಬ್ಬರನ್ನ ಬಂಧಿಸಿದ ರಾಮನಗರ ಪೊಲೀಸರು
- ಮೂರುಕಾಸಿನ ಕೆಲಸ ಮಾಡದ ಸಿದ್ದರಾಮಯ್ಯ, ಡಿಕೆಶಿಗೆ ಮುಖ ಮುಚ್ಚಲು ಬುರ್ಖಾ ಬೇಕು, ಪ್ರತಾಪ್ ಸಿಂಹ ಕಿಡಿ
- ಪತ್ನಿಯ ಮುಂದೆ ಅವಮಾನ ಮಾಡಿದ ತಂದೆ-ತಾಯಿಯನ್ನೇ ಕುಟ್ಟಾಣಿಯಿಂದ ಹೊಡೆದು ಕೊಂದ ಮಗ!
- ಬೆಳಗ್ಗೆ ಎದ್ದ ತಕ್ಷಣ ಮಾಡುವ ತಪ್ಪು ಶೇ.80ರಷ್ಟು ಹೃದಯಾಘಾತಕ್ಕೆ ಕಾರಣ? ತಜ್ಞರು ಹೇಳೋದೇನು?
- ಮಹಾರಾಷ್ಟ್ರದಲ್ಲಿ ಘೋರ ದುರಂತ: ಧಾರೆ ಎರೆದುಕೊಡುವ ಮುಹೂರ್ತದಲ್ಲೇ ಹೃದಯಾಘಾತದಿಂದ ವಧುವಿನ ತಂದೆ ಸಾವು!
- ತುಂಗಭದ್ರಾ ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್: 7 ಮಂದಿ ದಾರುಣ ಸಾವು, ಹಲವರ ಸ್ಥಿತಿ ಗಂಭೀರ
- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪ!
- 13 ವರ್ಷಗಳ ನಂತರ ಪತ್ತೆಯಾದ ‘ಅಪಹರಣಕ್ಕೊಳಗಾಗಿದ್ದ’ ಬಾಲಕಿ: ಈಗ ನಾಲ್ಕು ಮಕ್ಕಳ ತಾಯಿ! ಸತ್ಯ ತಿಳಿದು ಕುಟುಂಬಸ್ಥರು ಕಂಗಾಲು!
- ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿಯ ಬಾಳು ಅಂತ್ಯ: ಟ್ರ್ಯಾಕ್ಟರ್ ಅಟ್ಟಹಾಸಕ್ಕೆ ಬಲಿಯಾದ ಪೂರ್ಣಿಮಾ ಭಟ್!
- ನಿರೀಕ್ಷೆಯಂತೆಯೇ ವಿವಿಧ ರಾಜ್ಯಗಳ ಚುನಾವಣೆ ಮುಗಿದ ಮೇಲೆ ಪೆಟ್ರೋಲ್ ಡೀಸೆಲ್ ದರ ಹೆಚ್ಚಿಸಿದ್ದಾರೆ: ಕೇಂದ್ರದ ವಿರುದ್ಧ ಸಿಎಂ ಕಿಡಿ
- ದಕ್ಷ ಅಧಿಕಾರಿ ಇನ್ಸ್ಪೆಕ್ಟರ್ ಶಿವಪ್ಪ ನಾಯಕರ್ ಹೃದಯಾಘಾತದಿಂದ ನಿಧನ; ಪೊಲೀಸ್ ಇಲಾಖೆಯಲ್ಲಿ ಶೋಕ
- ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್
- ಹೃದಯಾಘಾತ ತಡೆಯುವ ಶಕ್ತಿಶಾಲಿ ಹಣ್ಣು… ತಿಂಗಳಲ್ಲಿ ಒಮ್ಮೆ ತಿನ್ನಿ ಸಾಕು ಹಾರ್ಟ್ ಅಟ್ಯಾಕ್ ಹತ್ತಿರಕ್ಕೂ ಸುಳಿಯಲ್ಲ!
- Electricity bill : ನಿಮ್ಮ ಮನೆಯ ‘ಕರೆಂಟ್ ಬಿಲ್’ ಕಡಿಮೆ ಮಾಡಲು ತಪ್ಪದೇ ಈ ನಿಯಮಗಳನ್ನು ಪಾಲಿಸಿ
- ಅಮ್ಮನ ಕಳೆದುಕೊಂಡಿದ್ದ ಅಪ್ರಾಪ್ತೆ ಮೇಲೆ, ನೆರೆ ಮನೆಯವನಿಂದಲೇ ಅತ್ಯಾಚಾರ! ರಾಜ್ಯದಲ್ಲಿ ಪೈಶಾಚಿಕ ಕೃತ್ಯ
- Horoscope Today : 15 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಶಿಕ್ಷಕಿಯ ಮೇಲೆ 10ನೇ ತರಗತಿ ವಿದ್ಯಾರ್ಥಿಗಳಿಂದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ: ಬೆಚ್ಚಿಬೀಳಿಸುವ ಘಟನೆ
- ಮೂಗಿನ ಕೂದಲನ್ನು ಕತ್ತರಿಸುವವರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಿ.!
- ಪಾದಗಳಲ್ಲಿ ಈ ರೀತಿ ಲಕ್ಷಣಗಳು ಕಾಣಿಸಿಕೊಂಡರೆ ಅದು ಹೃದಯ ಮತ್ತು ಕಿಡ್ನಿ ಸಮಸ್ಯೆಯ ಲಕ್ಷಣವಾಗಿರಬಹುದು ಎಚ್ಚರ.!
- ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ
- ಬಿಜೆಪಿ ನಾಯಕರ ಮಕ್ಕಳು ಕೇಸರಿ ಶಾಲು ಹಾಕಿ ಶಾಲೆಗೆ ಹೋಗ್ತಾರಾ? ಹಿಜಾಬ್ ವಿವಾದಕ್ಕೆ ಪ್ರಿಯಾಂಕ್ ಖರ್ಗೆ ವಾಗ್ದಾಳಿ
- ದೇಣಿಗೆ ಪಡೆಯುವ ಬದಲು ಭಕ್ತರಿಗೆ ‘ಹಣ’ವನ್ನೇ ಪ್ರಸಾದವಾಗಿ ನೀಡುತ್ತಿರುವ ದೇವಸ್ಥಾನ ; ವಿಡಿಯೋ ವೈರಲ್
- ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದು, ಆದರೆ ಕೇಸರಿ ಶಾಲು ಹಾಕುವಂತಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
- ಕರ್ನಾಟಕದಲ್ಲಿ ಮದ್ಯ ದರ ಏರಿಕೆ: ಬಡವರ ಬ್ರ್ಯಾಂಡ್ ತುಟ್ಟಿ, ಶ್ರೀಮಂತರ ಮದ್ಯ ಸಸ್ತಾ.. ಸಂಪೂರ್ಣ ವಿವರ ಇಲ್ಲಿದೆ
- ಹಿಜಾಬ್ಗೆ ಗ್ರೀನ್ ಸಿಗ್ನಲ್; ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ವಿರೋಧ – ಉಗ್ರ ಪ್ರತಿಭಟನೆ ಎಚ್ಚರಿಕೆ
- Horoscope Today : 14 ಮೇ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯಾರು ಇಲ್ಲಿ ಅತಿ ದೊಡ್ಡ ಮೂರ್ಖರು? ಇಂಧನ ಉಳಿಸಿ ಎಂದು ಹೇಳಿದ ಬೆನ್ನಲ್ಲೇ ರೋಡ್ ಶೋ ಮಾಡಿದ ಮೋದಿಯೋ? ಜನರೋ?
- ‘ನಿಮ್ಮನ್ನು ಕೇರಳ ಕ್ಷಮಿಸಲ್ಲ, ಮತ್ತೆ ಚುನಾವಣೆಯಲ್ಲಿ ಗೆಲ್ಲಲ್ಲ’; ಸಿಎಂ ಆಯ್ಕೆ ವಿಳಂಬ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ವಿರುದ್ಧ ಪೋಸ್ಟರ್ ಪ್ರೊಟೆಸ್ಟ್
- ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ
- “ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ

































