Subsidy scheme : ಕುಶಲಕರ್ಮಿಗಳಿಗೆ ಸಿಹಿಸುದ್ಧಿ – ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

Spread the love

Subsidy Scheme : ನಮಸ್ಕಾರ ಸ್ನೇಹಿತರೇ, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಚರ್ಮ ಕುಶಲಕರ್ಮಿಗಳಾದ ಆದಿ ಕರ್ನಾಟಕ, ಆದಿ ಮಾದಿಗ, ಚಮ್ಮಾರ, ಸಮಗಾರ, ಡೋರ, ಮೋಚಿ ಜನಾಂಗದವರಿಗೆ 2024-25 ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗೆ ಅಕ್ಟೋಬರ್ 05 ರಿಂದ ಅಕ್ಟೋಬರ್ 30 ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಹ ಹಾಗು ಆಸಕ್ತ ಫಲಾನುಭವಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!

ಯಾವೆಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.?

• ಕೌಶಲ್ಯ ಉನ್ನತೀಕರಣ ಯೋಜನೆ
• ಸ್ವಾವಲಂಬಿ/ಸಂಚಾರಿ ಮಾರಾಟ ಮಳಿಗೆ
• ಮಹಿಳಾ ಕುಶಲಕರ್ಮಿಗಳಿಗೆ ಕಾಯಕ ಸ್ಫೂರ್ತಿ ಯೋಜನೆ
• ಚರ್ಮಶಿಲ್ಪಿ ಯೋಜನೆ
• ಪಾದುಕೆ ಕುಟೀರ ಯೋಜನೆ
• ಮಾರುಕಟ್ಟೆ ಸಹಾಯ ಯೋಜನೆ
• ಡಾ.ಬಾಬು ಜಗಜೀವನ ರಾಂ ವಸತಿ ಕಾರ್ಯಾಗಾರ ಯೋಜನೆ
• ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆಗಳಿದ್ದು, ಅರ್ಹ ಚರ್ಮ ಕುಶಲಕರ್ಮಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರ ದೂರವಾಣಿ ಸಂಖ್ಯೆ: 9880486220 ಅಥವಾ ಕಲ್ಯಾಣಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ: 9482300400 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now

Spread the love

Leave a Reply