Labour Board Facilities : ನಮಸ್ಕಾರ ಸ್ನೇಹಿತರೇ, ಇಂತಹ ಕಾರ್ಮಿಕರಿಗೆ 19 ಬಗೆಯ ಸಹಾಯಧನ ಸೌಲಭ್ಯವನ್ನು ಸರಕಾರ ನೀಡುತ್ತದೆ. ಈ ಸಹಾಯಧನ ಪಡೆಯಲು ಕಾರ್ಮಿಕರು ಹೊಂದಿರಬೇಕಾದ
ಅರ್ಹತೆಗಳೇನು.? ಹಾಗು ಬೇಕಾಗುವ ದಾಖಲೆಗಳೇನು.? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಸುಧಾರಣೆಗಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಹಲವು ಸೌಲಭ್ಯಗಳನ್ನು ಜಾರಿಗೆ ತಂದಿದೆ. ಕಾರ್ಮಿಕ ಇಲಾಖೆಯಲ್ಲಿ ಅರ್ಹ ಫಲಾನುಭವಿಗಳು ಹೆಸರು ನೋಂದಾಯಿಸುವ ಮೂಲಕ ಈ ಸೌಲಭ್ಯಗಳನ್ನು ಪಡೆಯಬಹುದಾಗಿದೆ.
ಇದನ್ನೂ ಕೂಡ ಓದಿ : Crop Insurance : ಮುಂಗಾರು ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಅವಕಾಶ.! ಹೇಗೆ ಅರ್ಜಿ ಸಲ್ಲಿಸುವುದು.? ಡೈರೆಕ್ಟ್ ಲಿಂಕ್
ಕಟ್ಟಡ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳೇನು.?
ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವ ಕಾರ್ಮಿಕರು ಹಾಗೂ ಅವರ ಕುಟುಂಬದವರಿಗೆ ಮದುವೆ, ಹೆರಿಗೆ, ವೈದ್ಯಕೀಯ ಸಹಾಯಧನ, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ, ಅಂತ್ಯ ಸಂಸ್ಕಾರಕ್ಕೆ ಸಹಾಯಧನ ಸೇರಿ ಒಟ್ಟು 19 ರೀತಿಯ ಸೌಲಭ್ಯಗಳು ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿತ ಅರ್ಹ ಕಾರ್ಮಿಕರಿಗೆ ಸಿಗುತ್ತದೆ.
ಈ ಸೌಲಭ್ಯ ಪಡೆಯಲು ಏನೆಲ್ಲಾ ಅರ್ಹತೆಗಳಿರಬೇಕು.?
ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿಯ ಈ ಸೌಲಭ್ಯಗಳನ್ನು ಪಡೆಯಲು ಸುಮಾರು 51 ಬಗೆಯ ಕಟ್ಟಡ ನಿರ್ಮಾಣ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರು ಅರ್ಹರಾಗಿರುತ್ತಾರೆ. ವರ್ಷದ ಹನ್ನೆರಡು ತಿಂಗಳ ಅವಧಿಯಲ್ಲಿ ಕಟ್ಟಡ ಅಥವಾ ಇತರ ನಿರ್ಮಾಣ ಕೆಲಸಗಳಲ್ಲಿ ಕನಿಷ್ಠ 90 ದಿನ ತೊಡಗಿಸಿಕೊಂಡಿರುವ 18 ರಿಂದ 60 ವಯೋಮಿತಿಯವರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬಹುದು.
ಇದನ್ನೂ ಕೂಡ ಓದಿ : Subsidy Loan : ರೈತರಿಗೆ ಹೈನುಗಾರಿಕೆ ಮಾಡಲು ಸಬ್ಸಿಡಿ ಸಹಿತ 2 ಲಕ್ಷ ರೂಪಾಯಿ ಸಾಲ – ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
ಕಾರ್ಮಿಕ ಇಲಾಖೆಯಲ್ಲಿ ಹೇಗೆ ನೋಂದಣಿ ಮಾಡಿಕೊಳ್ಳುವುದು.?
ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಮಂಡಳಿ ನೋಂದಣಿಗೆ ನಮೂನೆ 5-1ರ ಅರ್ಜಿಯಲ್ಲಿ ಉದ್ಯೋಗ ದೃಢೀಕರಣ ಪತ್ರ / ಸ್ವಯಂ ದೃಢೀಕರಣ ಪತ್ರ, ಭಾವಚಿತ್ರ, ವಯಸ್ಸಿನ ದಾಖಲೆ, ತನ್ನ ಹಾಗೂ ಅವಲಂಬಿತ ಕುಟುಂಬದವರ ಆಧಾರ್ ಕಾರ್ಡ್ ಪ್ರತಿ ಲಗತ್ತಿಸಿ ಸಲ್ಲಿಸಿದರೆ ನೋಂದಣಿಯಾಗಲಿದೆ. ಬಳಿಕ ಮೂರು ವರ್ಷಕ್ಕೊಮ್ಮೆ ಪರಿಷ್ಕರಣೆ ಮಾಡಿಸಿಕೊಳ್ಳಬೇಕು.
ಕಾರ್ಮಿಕರು ಮಕ್ಕಳ ಮದುವೆಗೆ ಸಹಾಯಧನ ಸೌಲಭ್ಯ ಪಡೆಯಬಹುದಾ.?
ಕಾರ್ಮಿಕರ ಮದುವೆ ಅಥವಾ ಅವರ ಎರಡು ಮಕ್ಕಳ ಮದುವೆಗೆ ಕಟ್ಟಡ ಕಾರ್ಮಿಕ ಮಂಡಳಿಯು 60,000/- ಸಹಾಯಧನವನ್ನ ನೀಡುತ್ತದೆ. ಹಾಗು ಮಂಡಳಿಯ ವತಿಯಿಂದ ನೋಂದಣಿ ಮಾಡಿಕೊಂಡಿರುವ ಕಟ್ಟಡ ಕಾರ್ಮಿಕರು ತಮಗೂ ಹಾಗೂ ತಮ್ಮ ಮಕ್ಕಳ ಮದುವೆಗಾಗಿ ಸಹಾಯಧನ ಪಡೆಯಬಹುದು.
ಇದನ್ನೂ ಕೂಡ ಓದಿ : PM Awas Yojana : ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಕುಟುಂಬಗಳಿಗೆ ಸ್ವಂತ ಮನೆ | ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್
ಮದುವೆ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ವಿಧಾನ :-
ಕಟ್ಟಡ ಕಾರ್ಮಿಕ ಮಂಡಳಿಯ ಸೌಲಭ್ಯಗಳಲ್ಲಿ ಕಾರ್ಮಿಕರು ಅಥವಾ ಅವರ ಇಬ್ಬರೂ ಮಕ್ಕಳ ಮದುವೆಗೆ ಆರ್ಥಿಕ ನೆರವು ನೀಡುವ ಸಲುವಾಗಿ ಕಟ್ಟಡ ಕಾರ್ಮಿಕ ಮಂಡಳಿಯು ಸಹಾಯಧನವನ್ನು ಘೋಷಿಸಿದೆ. ಕಟ್ಟಡ ಕಾರ್ಮಿಕ ಮಂಡಳಿ ನೀಡುವ ಮದುವೆ ಸಹಾಯಧನವನ್ನು ಸರಕಾರದಿಂದ ಪಡೆಯಲು ಕಾರ್ಮಿಕರು ಈ ಕೆಳಗೆ ನೀಡಿರುವ ಅರ್ಹತೆ ಮತ್ತು ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು.
- ಅರ್ಹ ಫಲಾನುಭವಿಗಳು ನೋಂದಣಿ ದಿನಾಂಕದಿಂದ ಮದುವೆ ದಿನಾಂಕದವರೆಗೆ ಕಾರ್ಮಿಕ ಮಂಡಳಿಯಲ್ಲಿ ಕನಿಷ್ಠ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
- ಒಂದು ನೋಂದಾಯಿತ ಕಾರ್ಮಿಕ ಕುಟುಂಬವು ಎರಡು ಬಾರಿ ಮಾತ್ರ ಈ ಸೌಲಭ್ಯ ಪಡೆಯಲು ಅವಕಾಶವಿದೆ.
- ಮದುವೆ ಸಹಾಯಧನವನ್ನು ಪಡೆಯಲು ಅರ್ಹ ಫಲಾನುಭವಿಗಳು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು.
ಕಟ್ಟಡ ಕಾರ್ಮಿಕ ಮಂಡಳಿಯ ಅರ್ಹ ಫಲಾನುಭವಿಗಳು ಮದುವೆಯ ದಿನಾಂಕದಿಂದ ಆರು ತಿಂಗಳೊಳಗೆ ಅರ್ಜಿ ಸಲ್ಲಿಸಿ ಈ ಸಹಾಯಧನ ಸೌಲಭ್ಯ ಪಡೆದುಕೊಳ್ಳಬಹುದು. ಇನ್ನೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಾರ್ಮಿಕ ಇಲಾಖೆ ಕಚೇರಿ ವಿಳಾಸ ಮತ್ತು ಸಂಪರ್ಕ ಸಂಖ್ಯೆಗೆ ಇಲ್ಲಿ ನೀಡಿರುವ ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ ಪ್ರಯೋಜನವನ್ನ ಪಡೆದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ವಿಟಮಿನ್ ಕೊರತೆಯಲ್ಲ, ಮೂಳೆಗೆ ಸಂಬಂಧ ಪಟ್ಟ ಕಾಯಿಲೆಯೂ ಅಲ್ಲ; ಹಾಗಿದ್ರೆ ಯಾಕೆ ಬರುತ್ತೆ ಸ್ನಾಯು ನೋವು.?
- ಕೇಬಲ್ ಟಿವಿಗೆ ಅಂತ್ಯ ಹಾಡಲಿದೆ ಜಿಯೋ : 1000+ ಲೈವ್ ಟಿವಿ ಚಾನೆಲ್ ಗಳು, 10+ OTT ಆಪ್, 100 Mbps ಡೇಟಾ.!
- ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ಹಿಂದೂ ಹೆಂಡ್ತಿ ; ಗಂಡ-ಮಕ್ಕಳಿಗೂ ಮತಾಂತರವಾಗಲು ಕಿರುಕುಳ!
- ಗ್ಯಾಸ್ ಗೀಸರ್ ಸೋರಿಕೆಯಿಂದ ಗಂಡನ ಸಾವು, ಮುಖವನ್ನೂ ನೋಡಲು ಧೈರ್ಯವಾಗದೇ ನೇಣಿಗೆ ಕೊರಳೊಡ್ಡಿದ ಪತ್ನಿ.!
- ಬಿಹಾರದಲ್ಲಿ ಕರ್ನಾಟಕದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ : ‘ಫ್ರೀ ಫೈರ್’ ಗೇಮ್ ಚಟಕ್ಕೆ ಇಡೀ ಸಂಸಾರ ಬಲಿ.!
- ‘ಸಂಘಕ್ಕೆ ಭೇಟಿ ಕೋಡಿ’ ; ಪ್ರಕಾಶ್ ರಾಜ್ ಗೆ ನಟ ಜಗ್ಗೇಶ್ ಆಹ್ವಾನ
- ಒಬ್ಬ ವಿದ್ಯಾರ್ಥಿ ಮೇಲೆ 4 ಜನ ಶಿಕ್ಷಕರಿಂದ ಹಲ್ಲೆ.! ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು
- ರೀಲ್ಸ್ ರಾಣಿ ಸುಚಿತ್ರಾ ಜೊತೆ ಸಂಕರ್ಪಕದಲ್ಲಿದ್ದ ಯುವಕರಿಗೂ ಶಾಕ್!
- Horoscope Today : 07 ಫೆಬ್ರವರಿ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಸಂಸತ್ತಲ್ಲಿ ಪ್ರಧಾನಿಗೆ ಬೆದರಿಕೆ, ಅಮಿತ್ ಶಾ ರಾಜೀನಾಮೆ ನೀಡಲಿ : ಬಿ.ಕೆ.ಹರಿಪ್ರಸಾದ್
- 10 ನಿಮಿಷದಲ್ಲಿ ಮನೆಗೆ ಬರುತ್ತೇನೆ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಬಲಿಯಾದ ಅವಳಿ ಸಹೋದರನ ಕೊನೆಯ ಕರೆ
- ರೆಹಮಾನ್ ವಿವಾದಕ್ಕೆ ಪ್ರಕಾಶ್ ರಾಜ್ ಎಂಟ್ರಿ : ಬಿಜೆಪಿ ಸಂಸದೆ ಕಂಗನಾ ವಿರುದ್ಧ ಹರಿಹಾಯ್ದ ನಟ ಪ್ರಕಾಶ್
- ಡಿಕೆಶಿಗೆ ಜಾವಾ ಬೈಕ್ಗೆ ಪೆಟ್ರೋಲ್ ಹಾಕಿಸಲು ಕಾಸಿರಲಿಲ್ಲ, ನಾನೇ ಕೊಟ್ಟಿದ್ದೆ; ನಾನೇ ‘ಕನಕಪುರ ಬಂಡೆ’ ಶ್ರೀನಿವಾಸ್!
- ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.! ಹೇಳಿದ್ದೇನು..?
- ಯಾರಿಗೆಲ್ಲಾ ಪಿರಿಯೆಡ್ಸ್ ಸಂದರ್ಭದಲ್ಲಿ ವಿಪರೀತ ಹೊಟ್ಟೆ ನೋವು ಕಾಡುತ್ತೋ, ಅವರಿಗೆ ಬೆಸ್ಟ್ ಈ ಮನೆಮದ್ದು
- ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ‘IT’ ನೋಟಿಸ್ ಬರಬಹುದು.!
- ರಾತ್ರಿ ಹಿಂದೂ ಮಹಿಳೆಯ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
- ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್’ಮೇಲ್ : 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದ ಮೂವರು ಅರೆಸ್ಟ್.!
- Arecanut Price : ಇಂದಿನ ಅಡಿಕೆ ಧಾರಣೆ – 06 ಫೆಬ್ರವರಿ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- ಕಾಲಿನಲ್ಲಿ ಕಾಣಿಸಿಕೊಳ್ಳುವ ‘ಆಣಿ’ ಗುಣ ಪಡಿಸಿಕೊಳ್ಳುವುದು ಹೇಗೆ.? ಇಲ್ಲಿದೆ ಮಾಹಿತಿ



















