Loan Interest Waiver : ನಮಸ್ಕಾರ ಸ್ನೇಹಿತರೇ, ರಾಜ್ಯದ ರೈತರು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಬಡ್ಡಿ ಮನ್ನಾ ಮಾಡಲು ಸರ್ಕಾರವು ರೈತರಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಪಶುಪಾಲನಾ ಇಲಾಖೆಯಿಂದ ರೈತರು ಹೈನುಗಾರಿಕೆ ಮಾಡಲು ಬ್ಯಾಂಕುಗಳಲ್ಲಿ ಪಡೆದಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡಲು ಅರ್ಹ ಫಲಾನುಭವಿ ರೈತ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.
ಪಶುಪಾಲನಾ ಇಲಾಖೆಯ ಈ ಯೋಜನೆಗೆ ಯಾರೆಲ್ಲಾ ಅರ್ಜಿಯನ್ನ ಸಲ್ಲಿಸಬಹುದು.? ಹೇಗೆ ಅರ್ಜಿ ಸಲ್ಲಿಸಬೇಕು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು.?ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Anganwadi Recruitment 2024 : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಈ ಡೈರೆಕ್ಟ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ
ಸಾಲದ ಮೇಲಿನ ಬಡ್ಡಿ ಸಹಾಯಧನ :-
ರಾಜ್ಯದ ಪಶುಪಾಲನಾ ಇಲಾಖೆಯು ರೈತರು ಹೈನುಗಾರಿಕೆ ಮಾಡಿ ಉತ್ತಮ ಆದಾಯ ಗಳಿಸಲಿ ಎನ್ನುವ ಉದ್ದೇಶದಿಂದಾಗಿ ಸಾಲದ ಸೌಲಭ್ಯವನ್ನು ನೀಡುತ್ತಿದ್ದು, ಅದರ ಜೊತೆಗೆ ಸಾಲದ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಮನ್ನಾ ಮಾಡುವ ಅಥವಾ ಬಡ್ಡಿ ಸಹಾಯಧನವನ್ನು ನೀಡುತ್ತಿದೆ. ಈ ಯೋಜನೆಯ ಅಡಿಯಲ್ಲಿ ರೈತ ಮಹಿಳೆಯರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಹೈನುರಾಸುಗಳನ್ನು ಖರೀದಿಸಲು ತೆಗೆದುಕೊಂಡಿರುವಂತಹ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡುತ್ತಿದೆ.
ಸಾಲದ ಮೇಲಿನ ಬಡ್ಡಿ ಎಷ್ಟು ಮನ್ನಾ ಆಗಲಿದೆ.?
ರೈತರು ಹೈನುಗಾರಿಕೆ ಮಾಡಲು ಖರೀದಿಸಿರುವಂತಹ ಹಸು ಹಾಗು ಎಮ್ಮೆಗಳ ಮೇಲೆ ಸಾಲವನ್ನು ಮಾಡಿ, ನಿಗದಿತ ಅವಧಿಯ ಒಳಗೆ ಮರುಪಾವತಿ ಮಾಡಿದ್ದರೆ ರಾಜ್ಯ ಸರ್ಕಾರದ ಪಶುಪಾಲನೆ ಇಲಾಖೆಯಿಂದ ಶೇ. 6% ರಷ್ಟು ಬಡ್ಡಿ ಸಹಾಯಧನವನ್ನು ನೀಡಲಾಗುತ್ತದೆ.
ಇದನ್ನೂ ಕೂಡ ಓದಿ : KSRTC Recruitment 2024 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯಲ್ಲಿ 3000ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ ತರಗತಿ ಪಾಸಾಗಿದ್ದರೂ ಸಾಕಂತೆ.!
ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು.!
ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಹೈನುಗಾರಿಕೆ ಮಾಡುವ ಸಲುವಾಗಿ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ ಅರ್ಹ ರೈತ ಫಲಾನುಭವಿ ಮಹಿಳೆಯರು ಮಾಡಿರುವ ಸಾಲಕ್ಕೆ, ಬಡ್ಡಿಮನ್ನಾ ಮಾಡುವ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಪ್ರಮುಖವಾಗಿ ನಿಗದಿತ ಅವಧಿಯ ಒಳಗಾಗಿ ಸಾಲ ಮರುಪಾವತಿ ಮಾಡಿರುವ ಅರ್ಹ ಫಲಾನುಭವಿ ರೈತ ಮಹಿಳೆಯರು ಮಾತ್ರ ಈ ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಬೇಕಾಗುವ ದಾಖಲೆಗಳೇನು.?
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಬ್ಯಾಂಕ್ ಖಾತೆ ಪಾಸ್ ಬುಕ್
- ಉತಾರ
- ಭಾವಚಿತ್ರ
ಇದನ್ನೂ ಕೂಡ ಓದಿ : Lineman Recruitment : 2000 ಲೈನ್ ಮ್ಯಾನ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ. ಎಸ್ಎಸ್ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ.
ಎಲ್ಲಿ ಅರ್ಜಿ ಸಲ್ಲಿಸುವುದು.?
ಸಾಲದ ಮೇಲಿನ ಬಡ್ಡಿಮನ್ನಾ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅರ್ಹ ಫಲಾನುಭವಿ ಮಹಿಳಾ ರೈತರು ನಿಮ್ಮ ತಾಲೂಕಿನ ಪಶು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿಯನ್ನ ಪಡೆದುಕೊಂಡು, ಈ ಯೋಜನೆಗೆ ಅರ್ಜಿಯನ್ನ ಸಲ್ಲಿಸಬಹುದಾಗಿದೆ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಚಪ್ಪಲಿ ರಾಜಕೀಯ..! ಸಿದ್ದರಾಮಯ್ಯ ಎದುರು ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್
- ಕಿವಿಯಲ್ಲಿ ದಾಸವಾಳ ಇಟ್ಟುಕೊಂಡು ಕೂತಿದ್ದೀನಾ?: ಜಿಬಿಎ ಸಭೆಯಲ್ಲಿ ಅಧಿಕಾರಿಗಳ ಮೇಲೆ ಸಚಿವ ಕೃಷ್ಣಭೈರೇಗೌಡ ಗರಂ
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ



















