LPG Subsidy : ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯಲು ಈ ಸುದ್ದಿ ತಪ್ಪದೇ ಓದಿ

Spread the love

LPG Subsidy : ನಮಸ್ಕಾರ ಸ್ನೇಹಿತರೇ, ಕೋಟಿಗಟ್ಟಲೆ ಜನರು ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸಬ್ಸಿಡಿ ಪಡೆಯುತ್ತಾರೆ. ಈ ಸಬ್ಸಿಡಿ 300 ರೂಪಾಯಿ ಆಗಿದ್ದು, ಈ ಸಬ್ಸಿಡಿ ಪ್ರಯೋಜನ 12 ಸಿಲಿಂಡರ್‌ಗಳಿಗೆ ಮಾತ್ರ ಲಭ್ಯವಿರುತ್ತದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ₹300 ಸಬ್ಸಿಡಿಯನ್ನ ಕೇಂದ್ರದಿಂದ ನೀಡಲಾಗುತ್ತಿದೆ.

WhatsApp Group Join Now

ಇದನ್ನೂ ಕೂಡ ಓದಿ : Mahalakshmi Scheme : ಮಹಿಳೆಯರಿಗೆ ಪ್ರತಿ ತಿಂಗಳು ₹8,500/- ನೀಡುವ ಕಾಂಗ್ರೆಸ್ ಗ್ಯಾರಂಟಿ. ಹೇಗೆ ಅರ್ಜಿ ಸಲ್ಲಿಸುವುದು.? ಸಂಪೂರ್ಣ ಮಾಹಿತಿ

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಗ್ಯಾಸ್ ಸಂಪರ್ಕಗಳನ್ನು ಉಚಿತವಾಗಿ ನೀಡಲಾಗಿದ್ದರೂ ಅವರು ಮಾರುಕಟ್ಟೆ ಬೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳನ್ನು ತುಂಬಿಸಬೇಕಾಗಿತ್ತು. ಬಳಿಕ ಸಬ್ಸಿಡಿ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಎಲ್ಲರ ಖಾತೆಗೆ ಸಬ್ಸಿಡಿ ಜಮಾ ಮಾಡುವುದಾಗಿ ತಿಳಿಸಲಾಯಿತು.

WhatsApp Group Join Now

ಆದರೆ, ಈಗಲೂ ಕೂಡ ಸಬ್ಸಿಡಿ ಹಣ ಬಂದಿಲ್ಲ ಎಂದು ಹಲವು ಮಂದಿ ಆರೋಪಿಸುತ್ತಿದ್ದಾರೆ. ಅದಕ್ಕಾಗಿ ಕೆವೈಸಿ ಮಾಡಿರಬೇಕು. ಗ್ರಾಹಕರು ಆಯಾ ಗ್ಯಾಸ್ ಡೀಲರ್‌ ಹತ್ತಿರ ಹೋಗಬಹುದು ಮತ್ತು ಎಲ್‌ಪಿಜಿ ಸಿಲಿಂಡರ್‌ಗಾಗಿ ಇ-ಕೆವೈಸಿ ಪೂರ್ಣಗೊಳಿಸಬಹುದು. ಕೇಂದ್ರ ಸರ್ಕಾರ ಈಗಾಗಲೇ ಎಲ್ಲಾ ಗ್ಯಾಸ್ ಡೀಲರ್‌ಗಳಿಗೆ ಆದೇಶ ನೀಡಿದೆ.

ಇದನ್ನೂ ಕೂಡ ಓದಿ : Laptop Scheme : ಹೀಗೆ ಮಾಡಿದರೆ ಸಿಗಲಿದೆ ಕರ್ನಾಟಕ ಸರ್ಕಾರದಿಂದ ಉಚಿತ ಲ್ಯಾಪ್‌ಟಾಪ್.! ಡೈರೆಕ್ಟ್ ಲಿಂಕ್

WhatsApp Group Join Now

ಇಂಧನ ಬೆಲೆ ಏರಿಕೆಯಿಂದಾಗಿ ಉಜ್ವಲಾ ಯೋಜನೆಯ ಫಲಾನುಭವಿಗಳಿಗೆ 2022 ರ ಮೇ ತಿಂಗಳಲ್ಲಿ ಕೇಂದ್ರ ಸರ್ಕಾರವು ಪ್ರತಿ ಸಿಲಿಂಡರ್‌ಗೆ 200 ರೂ ಸಬ್ಸಿಡಿ ನೀಡಿ ಆದೇಶ ಹೊರಡಿಸಿತ್ತು. ಆಗಿನಿಂದ 200 ರೂಪಾಯಿ ಸಬ್ಸಿಡಿ ಸಿಗುತ್ತಿತ್ತು. ಬಳಿಕ ಅಕ್ಟೋಬರ್, 2023 ರಲ್ಲಿ ಇದನ್ನು 300 ರೂಪಾಯಿಗೆ ಹೆಚ್ಚಿಸಲಾಯಿತು. ಈ ಸಬ್ಸಿಡಿ ವರ್ಷಕ್ಕೆ 12 ಎಲ್‌ಪಿಜಿ ಸಿಲಿಂಡರ್‌ಗಳಲ್ಲಿ ಲಭ್ಯವಿದೆ. 

ಕೆವೈಸಿ ಮಾಡಿಸುವುದಕ್ಕೆ ಯಾವ ದಾಖಲೆಗಳು ಬೇಕು.?

  • ಗ್ಯಾಸ್ ಗ್ರಾಹಕರ ಸಂಖ್ಯೆ,
  • ವಿಳಾಸ ಪುರಾವೆಯಾಗಿ ಆಧಾರ್ ಕಾರ್ಡ್,
  • ಡ್ರೈವಿಂಗ್ ಲೈಸೆನ್ಸ್,
  • ಗುತ್ತಿಗೆ ಒಪ್ಪಂದ,
  • ಮತದಾರ ಗುರುತಿನ ಚೀಟಿ, (VOTER ID)
  • ಪಾಸ್ಪೋರ್ಟ್,
  • ಪ್ಯಾನ್ ಕಾರ್ಡ್,
  • ಕೇಂದ್ರ ಮತ್ತು ರಾಜ್ಯ ಸರ್ಕಾರದ ಗುರುತಿನ ಚೀಟಿ ಇತ್ಯಾದಿಗಳನ್ನು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗೆ ಸಲ್ಲಿಸಿ ನೊಂದಾಯಿಸಿಕೊಳ್ಳಬೇಕಾಗುತ್ತದೆ. 

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

mahima bhat - kannada news time

ಕಂಟೆಂಟ್ ರೈಟರ್,
SDM ಉಜಿರೆ ಯಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಪಡೆದು, ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಕಳೆದ 4 ವರ್ಷದಿಂದ ಕಟೆಂಟ್ ರೈಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕನ್ನಡ ಹಾಗು ಪತ್ರಿಕೋದ್ಯಮ ವಿಷಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ನಾಟಕ, ಸಾಹಿತ್ಯ, ಭರತನಾಟ್ಯ, ಯಕ್ಷಗಾನ ಇವರ ಹವ್ಯಾಸ.


Spread the love

Leave a Reply