Meerpet Madhavi Case : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟೆಯ ಜಿಲ್ಲಾಲಗುಡದಲ್ಲಿ ನಡೆದ ಭೀಕರ ಕೊಲೆಯ ಪೊಲೀಸ್ ತನಿಖೆ ಮುಂದುವರೆದಿದೆ. ತನಿಖೆಯ ಸಮಯದಲ್ಲಿ ಈ ಪ್ರಕರಣದ ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ. ಆರೋಪಿ ಗುರುಮೂರ್ತಿಯ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸರು ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಪ್ಲಾನ್ ಮಾಡಿ ಕೊಲೆ ಮಾಡಿದ್ದ ಗುರುಮೂರ್ತಿ, ವೆಬ್ ಸರಣಿಯ ಶೈಲಿಯಲ್ಲಿ ಶವವನ್ನು ವಿಲೇವಾರಿ ಮಾಡಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಧವಿ ಕೊಲೆ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಆರೋಪಿ ಗುರುಮೂರ್ತಿಯನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪೊಲೀಸರು ಈಗಾಗಲೇ ಎರಡು ಬಾರಿ ಸ್ಥಳ ಮಹಜರು ಮಾಡಿದ್ದು, ನಿರ್ಣಾಯಕ ಪುರಾವೆಗಳನ್ನು ಸಂಗ್ರಹಿಸಿದ್ದಾರೆ. ತನಿಖಾ ತಂಡವು ಗುರುಮೂರ್ತಿಯ ಮನೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಶೋಧ ನಡೆಸಿತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಫೋನ್ ಸಿಗ್ನಲ್ಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮತ್ತೊಂದೆಡೆ, ಮಾಧವಿ ಕೊಲೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಕ್ಕಳ ಹೇಳಿಕೆಗಳನ್ನು ಸಹ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಹೇಳಿಕೆಗಳ ಸಮಯದಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ತಾಯಿ ಕಾಣೆಯಾದ ನಂತರ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು ಎಂದು ಮಕ್ಕಳು ಹೇಳಿದ್ದಾರೆ. ಪೊಲೀಸರು ಕುಟುಂಬ ಸದಸ್ಯರನ್ನು ಸಹ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ, ಆರೋಪಿಯ ಮಾಹಿತಿಯನ್ನು ಅವಲಂಬಿಸದೆ, ಪೊಲೀಸರು ವಿವಿಧ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಆರೋಪಿಯ ಫೋನ್ ಪರಿಶೀಲಿಸಿದಾಗ, ಅಲ್ಲಿ ಮತ್ತೊಬ್ಬ ಮಹಿಳೆಯ ಕೆಲವು ಫೋಟೋಗಳು ಇರುವುದು ಕಂಡುಬಂದಿದೆ. ಈ ತಿಂಗಳ 18ರಂದು ದಾಖಲಾಗಿದ್ದ ವೆಂಕಟ ಮಾಧವಿ ನಾಪತ್ತೆ ಪ್ರಕರಣವನ್ನು ಕೊಲೆ ಪ್ರಕರಣದ ಸೆಕ್ಷನ್ಗಳ ಅಡಿಯಲ್ಲಿ ವರ್ಗಾಯಿಸಲಾಗುತ್ತಿದೆ. ಇಂದು ಈ ಪ್ರಕರಣದಲ್ಲಿ ಸ್ವಲ್ಪ ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.
ನಡೆದಿದ್ದೇನು?
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಾಚರ್ಲಾ ಮಂಡಲದ ಜೆ.ಪಿ. ಚೆರುವು ಗ್ರಾಮದ ನಿವಾಸಿ ಗುರುಮೂರ್ತಿ ಮತ್ತು ಅದೇ ಗ್ರಾಮದ ವೆಂಕಟ ಮಾಧವಿ 13 ವರ್ಷಗಳ ಹಿಂದೆ ವಿವಾಹವಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಗುರುಮೂರ್ತಿ ಸೇನೆಯಲ್ಲಿ ಜವಾನನಾಗಿ ಸೇರಿ ನಾಯಕ್ ಸುಬೇದಾರ್ ಆಗಿ ನಿವೃತ್ತನಾದನು. ಪ್ರಸ್ತುತ ಕಾಂಚನ್ಬಾಗ್ ಡಿಆರ್ಡಿಎಯಲ್ಲಿ ಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಗುರುಮೂರ್ತಿ ಕೆಲ ಸಮಯದಿಂದ ತಮ್ಮ ಹತ್ತಿರದ ಸಂಬಂಧಿಯಾಗಿರುವ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತದೆ. ಈ ವಿಷಯ ಪತ್ನಿ ಮಾಧವಿಗೆ ತಿಳಿದು ಇಬ್ಬರ ನಡುವೆ ಅನೇಕ ಬಾರಿ ಜಗಳಗಳು ನಡೆದಿದ್ದವು. ತಮ್ಮ ಅನೈತಿಕ ಸಂಬಂಧಕ್ಕೆ ಇರುವ ಅಡಚಣೆಯನ್ನು ತೊಡೆದು ಹಾಕಲು ಪತ್ನಿಯನ್ನೇ ಕೊಲ್ಲಲು ಗುರುಮೂರ್ತಿ ಪ್ಲಾನ್ ಮಾಡಿದನು.
ಸಂಕ್ರಾಂತಿ ಹಬ್ಬದ ಸಮಯದಲ್ಲಿ ಗುರುಮೂರ್ತಿ ತನ್ನಿಬ್ಬರು ಮಕ್ಕಳನ್ನು ನಗರದಲ್ಲಿನ ತನ್ನ ಸಹೋದರಿಯ ಮನೆಯಲ್ಲಿ ಬಿಟ್ಟು ಹೋಗಿದ್ದ. ಜ. 13 ಮತ್ತು 14 ರಂದು ಗುರುಮೂರ್ತಿ ಮತ್ತು ಮಾಧವಿ ಬೆಳಗ್ಗೆ ತಮ್ಮ ಸಹೋದರಿಯ ಮನೆಗೆ ಹೋಗಿ ಸಂಜೆ ಹಿಂತಿರುಗಿದರು. ಜ. 15 ರಂದು ಬೆಳಗ್ಗೆ ಗುರುಮೂರ್ತಿ ಮತ್ತು ಮಾಧವಿ ಜಗಳವಾಡಲು ಶುರು ಮಾಡಿದರು. ಕಾರಣ ಏನೆಂದರೆ, ಗಂಡ ಇನ್ನೊಬ್ಬ ಮಹಿಳೆಯೊಂದಿಗೆ ಇರುವ ಕೆಲ ಫೋಟೋಗಳನ್ನು ಮಾಧವಿ ನೋಡಿದಳು. ಜಗಳ ನಡೆಯುತ್ತಿದ್ದಂತೆ ಮೊದಲೇ ಕೊಲೆಗೆ ಪ್ಲಾನ್ ಮಾಡಿದ್ದ ಗುರುಮೂರ್ತಿ, ಪತ್ನಿಯ ತಲೆಗೆ ಬಲವಾದ ಆಯುಧದಿಂದ ಹೊಡೆದನು. ಏಟು ತಾಳಲಾರದೇ ಮಾಧವಿ ಕೆಳಗೆ ಬಿದ್ದರು ಮತ್ತು ಸ್ಥಳದಲ್ಲೇ ಆಕೆ ಮೃತಪಟ್ಟಳು. ಬಳಿಕ ಆರು ತಿಂಗಳ ಹಿಂದೆ ಒಟಿಟಿಯಲ್ಲಿ ನೋಡಿದ ವೆಬ್ ಸರಣಿಯ ಪಾತ್ರಗಳಂತೆ ದೇಹವನ್ನು ವಿಲೇವಾರಿ ಮಾಡಲು ಗುರುಮೂರ್ತಿ ಮುಂದಾದನು. ಇದರ ಭಾಗವಾಗಿ, ದೇಹವನ್ನು ಶೌಚಾಲಯಕ್ಕೆ ತೆಗೆದುಕೊಂಡು ಹೋಗಿ ತುಂಡುಗಳಾಗಿ ಕತ್ತರಿಸಿದನು.
ನಂತರ ಹೀಟರ್ ಬಳಸಿ ಬಕೆಟ್ ನೀರನ್ನು ಬಿಸಿ ಮಾಡಿ ಮಾಂಸದ ತುಂಡುಗಳನ್ನು ಅದರೊಳಗೆ ಹಾಕಿದ್ದಾನೆ. ತುಂಡುಗಳನ್ನು ಮಾಡಿದ ನಂತರ, ಮಾಂಸವನ್ನು ಮೂಳೆಗಳಿಂದ ಬೇರ್ಪಡಿಸಿದ್ದಾರೆ. ಮಾಂಸ ಮತ್ತು ಮೂಳೆಗಳನ್ನು ಒಂದು ದೊಡ್ಡ ಕುಕ್ಕರ್ನಲ್ಲಿ ಬೇಯಿಸಿದ್ದಾನೆ. ಚೆನ್ನಾಗಿ ಬೇಯಿಸಿದ ಬಳಿಕ ಒಣಗಿಸಿ, ಮಾಂಸವನ್ನು ಸುಟ್ಟು ಹಾಕಿದ್ದಾನೆ. ಅಲ್ಲದೆ, ಮೂಳೆಗಳನ್ನು ಚೆನ್ನಾಗಿ ಪುಡಿ ಮಾಡಿದ್ದಾನೆ. ಇದಾದ ಬಳಿಕ ಬೂದಿಯನ್ನು ಒಳಚರಂಡಿ ಮ್ಯಾನ್ಹೋಲ್ನಲ್ಲಿ ಬೆರೆಸಿ ಉಳಿದ ಮೂಳೆಯ ಪುಡಿಯನ್ನು ಹತ್ತಿರದ ಜಿಲ್ಲಲಾಗುಡದ ಕೊಳಕ್ಕೆ ಎಸೆದಿದ್ದಾನೆ.
ಕೊಲೆಯಾದ ನಂತರ ಸುಮಾರು ಎರಡು ದಿನಗಳ ಕಾಲ ನಿದ್ದೆ ಮಾಡದೆ ಇದನ್ನೆಲ್ಲ ಮಾಡಿದೆ ಎಂದು ಆರೋಪಿ ಗುರುಮೂರ್ತಿ ಪೊಲೀಸರಿಗೆ ಹೇಳಿದ್ದಾನೆ. ದೇಹವನ್ನು ಕತ್ತರಿಸಿದ ಬಳಿಕ ಕೋಣೆಯನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾನೆ. 17ನೇ ತಾರೀಖಿನಂದು ಸಂಜೆ, ಮಾಧವಿಯ ಪಾಲಕರಿಗೆ ಕರೆ ಮಾಡಿ, ತನ್ನ ಹೆಂಡತಿ ಕಾಣೆಯಾಗಿದ್ದಾಳೆಂದು ಹೇಳಿದ್ದಾನೆ. ಸಣ್ಣ ಜಗಳದಿಂದಾಗಿ ಆಕೆ ಮನೆ ಬಿಟ್ಟು ಹೋದಳು ಎಂದು ಕತೆ ಕಟ್ಟಿದ್ದಾನೆ. ಮಾಧವಿ ಪಾಲಕರ ಜತೆಗೆ ತೆರಳಿ ದೂರು ಸಹ ದಾಖಲಿಸಿದ್ದ.
ಪ್ರಕರಣದ ತನಿಖೆ ನಡೆಸುತ್ತಿದ್ದಾಗ, ಪೊಲೀಸರಿಗೆ ಗುರುಮೂರ್ತಿಯ ಮೇಲೆ ಅನುಮಾನ ಮೂಡಿತು. ಮಾಧವಿ ಮನೆಗೆ ಪ್ರವೇಶಿಸುವುದನ್ನು ಹೊರತುಪಡಿಸಿ, ಆಕೆ ಹೊರಗೆ ಬರುವ ಯಾವುದೇ ದೃಶ್ಯಗಳು ಸಮೀಪದ ಸಿಸಿಟಿವಿಯಲ್ಲಿ ದಾಖಲಾಗಿರಲಿಲ್ಲ. ಇದರಿಂದ ಅನುಮಾನ ಮತ್ತಷ್ಟು ಬಲವಾಯಿತು. ಬಳಿಕ ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನಿಜವಾದ ಕತೆ ಬೆಳಕಿಗೆ ಬಂದಿತು. ಬುಧವಾರ ಮತ್ತು ಗುರುವಾರ ಆರೋಪಿಯ ನಿವಾಸವನ್ನು ಪರಿಶೀಲಿಸಿದ್ದ ತನಿಖಾ ತಂಡ ಮತ್ತು ವಿಧಿವಿಜ್ಞಾನ ತಂಡಗಳು, ಮನೆಯಿಂದ ನೀರಿನ ಬಕೆಟ್, ವಾಟರ್ ಹೀಟರ್ ಮತ್ತು ಕೆಲವು ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಅವುಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದೇಹವನ್ನು ತುಂಡು ಮಾಡಿ ಕುಕ್ಕರ್ನಲ್ಲಿ ಹಾಕಿ ಬೇಯಿಸಲಾಗಿದೆ ಎಂಬುದಕ್ಕೆ ಕೆಲವು ಪುರಾವೆಗಳು ಕಂಡುಬಂದಿವೆ.
ಪೊಲೀಸರ ತನಿಖೆಗೆ ಟ್ವಿಸ್ಟ್
ಆರೋಪಿ ಹೇಳಿರುವ ವಿಷಯಗಳನ್ನು ಆಧರಿಸಿ ತನಿಖಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರೂ ಹೊಸ ಟ್ವಿಸ್ಟ್ ತಲೆನೋವಾಗಿ ಪರಿಣಮಿಸಿದೆ. ಮೂಳೆಗಳನ್ನು ಕೆರೆಗೆ ಎಸೆದಿರುವುದಾಗಿ ಹೇಳಿದ್ದರೂ ಅಲ್ಲಿ ಇನ್ನೂ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಶವದ ಕುರುಹುಗಳೇನಾದರೂ ಕಂಡುಬಂದರೆ, ಅದನ್ನು ಮಾಧವಿಯ ಮಕ್ಕಳ ಡಿಎನ್ಎ ಜೊತೆ ಹೋಲಿಸುವ ಸಾಧ್ಯತೆಯಿದೆ. ಆದರೆ, ಇಲ್ಲಿಯವರೆಗೆ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಇಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ನಿರ್ಣಾಯಕವಾಗಿರುತ್ತದೆ. ಮಾಧವಿ ನಾಪತ್ತೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಅವರು ಮನೆಯೊಳಗೆ ಹೋಗುತ್ತಿರುವ ದೃಶ್ಯಗಳು ಮಾತ್ರ ಪತ್ತೆಯಾಗಿವೆ ಎಂದು ಎಲ್ಬಿ ನಗರ ಡಿಸಿಪಿ ಪ್ರವೀಣ್ ಹೇಳಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.
- Gold Rate Today : ಚಿನ್ನ ಖರೀದಿಗೆ ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ನೋಡಿ ಇಂದಿನ ಚಿನ್ನದ ನಿಖರ ಬೆಲೆ.?
- Gold Rate : ಇಳಿಕೆಯತ್ತ ಮುಖ ಮಾಡಿದ ಚಿನ್ನ.! ಇವತ್ತಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Gold Rate Today : ಭಾರೀ ಏರಿಕೆಯತ್ತ ಸಾಗಿದ ಚಿನ್ನದ ಬೆಲೆ.! ಹೆಣ್ಣುಮಕ್ಕಳ ಮುಖದಲ್ಲಿ ಮಂದಹಾಸ ಮೂಡುತ್ತಾ.?
- ಪತಿಯ ಬಂಧನ ಭೀತಿ : ಮಗುವಿಗೆ ನೇಣು ಬಿಗಿದು ತಾಯಿಯೂ ಆತ್ಮಹತ್ಯೆ – ಪೊಲೀಸರ ನೋಟಿಸ್, ಬೆದರಿಕೆಯಿಂದ ನೊಂದ ಮಹಿಳೆ
- ಚಾಮುಂಡಿ ಬೆಟ್ಟ ಹಿಂದೂಗಳದ್ದು, ರಾಜಕೀಯಕ್ಕೆ ಚಾಮುಂಡಿ ತಾಯಿ ಹೆಸರು ಎಳೆದು ತಂದಿದ್ದು ಬೇಸರ ತರಿಸಿದೆ ಎಂದ ರಾಜಮಾತೆ ಪ್ರಮೋದಾದೇವಿ ಒಡೆಯರ್
- ಹಣೆಗೆ ಅರಿಶಿಣ, ಕುಂಕುಮವಿಟ್ಟು, ಹೂ ಮುಡಿದು ದಸರಾ ಉದ್ಘಾಟನೆ ಮಾಡೋದಾದ್ರೆ ಬನ್ನಿ ಎಂದ ಪ್ರತಾಪ್ ಸಿಂಹ
- ಇಂದೇ ಲೋಕಸಭೆ ಚುನಾವಣೆ ನಡೆದರೆ ಎನ್ಡಿಎ 324 ಸ್ಥಾನ ಗೆಲ್ಲುವ ಸಾಧ್ಯತೆ – ಇಂಡಿಯಾ ಮೈತ್ರಿಕೂಟಕ್ಕೆ ಆಘಾತ!
- ಯಾದಗಿರಿ ಹಾಸ್ಟೆಲ್ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹೈಸ್ಕೂಲ್ ವಿದ್ಯಾರ್ಥಿನಿ : ಗರ್ಭಿಣಿಯಾಗಿದ್ದೇ ಗೊತ್ತಿಲ್ಲ ಎಂದ ವಾರ್ಡನ್
- ಬೆಳ್ಳಂಬೆಳಗ್ಗೆ 5 ಗಂಟೆಗೆ ಆಗಮಿಸಿ ಎಸ್ಐಟಿ ಅಧಿಕಾರಿಗಳಿಗೆ ಶಾಕ್ ಕೊಟ್ಟ ಸುಜಾತ ಭಟ್! ಅನನ್ಯಾ ಭಟ್ ನಾಪತ್ತೆ ಪ್ರಕರಣ!
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- ದಸರಾ ಉದ್ಘಾಟಿಸುವ ಮುನ್ನ ಭಾನು ಮುಷ್ತಾಕ್ ತಾಯಿ ಭುವನೇಶ್ವರಿ, ಚಾಮುಂಡೇಶ್ವರಿ ಬಗೆಗಿನ ಗೌರವ ಸ್ಪಷ್ಟಪಡಿಸಬೇಕು ಎಂದ ಬಿಜೆಪಿ ಸಂಸದ ಯದುವೀರ್
- ‘ಇದ್ರೆ ನೆಮ್ಮದಿಯಾಗ್ ಇರ್ಬೇಕ್’ ಹಾಡು 24 ಗಂಟೆಯಲ್ಲಿ ಪಡೆದ ವೀವ್ಸ್ ಎಷ್ಟು ಗೊತ್ತಾ.? ಡಿಬಾಸ್ ಅಭಿಮಾನಿಗಳಿಗೆ ಸಂತಸದ ಸುದ್ಧಿ!
- ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ : ಮೊಬೈಲ್ ಸ್ಫೋಟಗೊಂಡು ಸತ್ತಿದ್ದಾಳೆ ಎಂದು ಕಥೆ ಕಟ್ಟಿದ್ದ ಪ್ರಿಯಕರ ಅರೆಸ್ಟ್
- ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ಫಂಡಿಂಗ್ ಬರ್ತಿತ್ತು ಅನ್ನೋದು ಸುಳ್ಳು, ಕೂಲಿ ಮಾಡಿದ್ರಷ್ಟೇ ಜೀವನ ನಡೀತಿತ್ತು – ಚಿನ್ನಯ್ಯನ 2ನೇ ಪತ್ನಿ ಕಣ್ಣೀರು
- ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಿಡಿ
- Gold Rate Today : ಏರಿಳಿತ ಕಾಣುತ್ತಿರುವ ಬಂಗಾರದ ಬೆಲೆ.? ಇವತ್ತಿನ ಚಿನ್ನದ ರೇಟ್ ಎಷ್ಟಿದೆ ಗೊತ್ತಾ.?
- Gold Rate : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.?ಇಂದಿನಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate : ಭಾರೀ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಮತ್ತೆ ಅಲ್ಪ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ನನ್ನನ್ನು ಬೇಕಾದರೆ ಜೈಲಿಗೆ ಹಾಕಿ ಆದರೆ ಧರ್ಮಸ್ಥಳ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಜನಾರ್ಧನ ಪೂಜಾರಿ ಗುಡುಗು
- LPG Gas Cylinder : ಮನೆಯಲ್ಲಿ ‘ಗ್ಯಾಸ್’ ಸಂಪರ್ಕವಿದ್ಯಾ.? ಹಾಗಿದ್ರೆ, ನೀವು 50 ಲಕ್ಷ ರೂ.ಗಳ ಉಚಿತ ವಿಮೆಗೆ ಹೇಗೆ ಅರ್ಹರು ಗೊತ್ತಾ.?
- Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Kisan Credit Card Scheme : ಇನ್ನು ಮುಂದೆ ಎಲ್ಲ ರೈತರಿಗೂ ಪಶು ಕಿಸಾನ್ ಕಾರ್ಡ್ ನಲ್ಲಿ 3 ಲಕ್ಷದವರೆಗೆ ಸಾಲ ಸೌಲಭ್ಯ.! ಅರ್ಜಿ ಸಲ್ಲಿಸುವುದು ಹೇಗೆ.?
- Gold Rate Today : ಭಾರೀ ಇಳಿಕೆ ಕಂಡಿದ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Post Office FD : ಸ್ಥಿರ ಠೇವಣಿದಾರರಿಗೆ ಭರ್ಜರಿ ಸಿಹಿ ಸುದ್ದಿ, ಪೋಸ್ಟ್ ಆಫೀಸ್ನಲ್ಲಿ ಅದ್ಭುತ ಸ್ಕೀಮ್