Meerpet Madhavi Case : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟೆಯ ಜಿಲ್ಲಾಲಗುಡದಲ್ಲಿ ನಡೆದ ಭೀಕರ ಕೊಲೆಯ ಪೊಲೀಸ್ ತನಿಖೆ ಮುಂದುವರೆದಿದೆ. ತನಿಖೆಯ ಸಮಯದಲ್ಲಿ ಈ ಪ್ರಕರಣದ ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ. ಆರೋಪಿ ಗುರುಮೂರ್ತಿಯ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸರು ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಪ್ಲಾನ್ ಮಾಡಿ ಕೊಲೆ ಮಾಡಿದ್ದ ಗುರುಮೂರ್ತಿ, ವೆಬ್ ಸರಣಿಯ ಶೈಲಿಯಲ್ಲಿ ಶವವನ್ನು ವಿಲೇವಾರಿ ಮಾಡಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಧವಿ ಕೊಲೆ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಆರೋಪಿ ಗುರುಮೂರ್ತಿಯನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪೊಲೀಸರು ಈಗಾಗಲೇ ಎರಡು ಬಾರಿ ಸ್ಥಳ ಮಹಜರು ಮಾಡಿದ್ದು, ನಿರ್ಣಾಯಕ ಪುರಾವೆಗಳನ್ನು ಸಂಗ್ರಹಿಸಿದ್ದಾರೆ. ತನಿಖಾ ತಂಡವು ಗುರುಮೂರ್ತಿಯ ಮನೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಶೋಧ ನಡೆಸಿತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಫೋನ್ ಸಿಗ್ನಲ್ಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮತ್ತೊಂದೆಡೆ, ಮಾಧವಿ ಕೊಲೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಕ್ಕಳ ಹೇಳಿಕೆಗಳನ್ನು ಸಹ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಹೇಳಿಕೆಗಳ ಸಮಯದಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ತಾಯಿ ಕಾಣೆಯಾದ ನಂತರ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು ಎಂದು ಮಕ್ಕಳು ಹೇಳಿದ್ದಾರೆ. ಪೊಲೀಸರು ಕುಟುಂಬ ಸದಸ್ಯರನ್ನು ಸಹ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ, ಆರೋಪಿಯ ಮಾಹಿತಿಯನ್ನು ಅವಲಂಬಿಸದೆ, ಪೊಲೀಸರು ವಿವಿಧ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಆರೋಪಿಯ ಫೋನ್ ಪರಿಶೀಲಿಸಿದಾಗ, ಅಲ್ಲಿ ಮತ್ತೊಬ್ಬ ಮಹಿಳೆಯ ಕೆಲವು ಫೋಟೋಗಳು ಇರುವುದು ಕಂಡುಬಂದಿದೆ. ಈ ತಿಂಗಳ 18ರಂದು ದಾಖಲಾಗಿದ್ದ ವೆಂಕಟ ಮಾಧವಿ ನಾಪತ್ತೆ ಪ್ರಕರಣವನ್ನು ಕೊಲೆ ಪ್ರಕರಣದ ಸೆಕ್ಷನ್ಗಳ ಅಡಿಯಲ್ಲಿ ವರ್ಗಾಯಿಸಲಾಗುತ್ತಿದೆ. ಇಂದು ಈ ಪ್ರಕರಣದಲ್ಲಿ ಸ್ವಲ್ಪ ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.
ನಡೆದಿದ್ದೇನು?
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಾಚರ್ಲಾ ಮಂಡಲದ ಜೆ.ಪಿ. ಚೆರುವು ಗ್ರಾಮದ ನಿವಾಸಿ ಗುರುಮೂರ್ತಿ ಮತ್ತು ಅದೇ ಗ್ರಾಮದ ವೆಂಕಟ ಮಾಧವಿ 13 ವರ್ಷಗಳ ಹಿಂದೆ ವಿವಾಹವಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಗುರುಮೂರ್ತಿ ಸೇನೆಯಲ್ಲಿ ಜವಾನನಾಗಿ ಸೇರಿ ನಾಯಕ್ ಸುಬೇದಾರ್ ಆಗಿ ನಿವೃತ್ತನಾದನು. ಪ್ರಸ್ತುತ ಕಾಂಚನ್ಬಾಗ್ ಡಿಆರ್ಡಿಎಯಲ್ಲಿ ಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಗುರುಮೂರ್ತಿ ಕೆಲ ಸಮಯದಿಂದ ತಮ್ಮ ಹತ್ತಿರದ ಸಂಬಂಧಿಯಾಗಿರುವ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತದೆ. ಈ ವಿಷಯ ಪತ್ನಿ ಮಾಧವಿಗೆ ತಿಳಿದು ಇಬ್ಬರ ನಡುವೆ ಅನೇಕ ಬಾರಿ ಜಗಳಗಳು ನಡೆದಿದ್ದವು. ತಮ್ಮ ಅನೈತಿಕ ಸಂಬಂಧಕ್ಕೆ ಇರುವ ಅಡಚಣೆಯನ್ನು ತೊಡೆದು ಹಾಕಲು ಪತ್ನಿಯನ್ನೇ ಕೊಲ್ಲಲು ಗುರುಮೂರ್ತಿ ಪ್ಲಾನ್ ಮಾಡಿದನು.
ಸಂಕ್ರಾಂತಿ ಹಬ್ಬದ ಸಮಯದಲ್ಲಿ ಗುರುಮೂರ್ತಿ ತನ್ನಿಬ್ಬರು ಮಕ್ಕಳನ್ನು ನಗರದಲ್ಲಿನ ತನ್ನ ಸಹೋದರಿಯ ಮನೆಯಲ್ಲಿ ಬಿಟ್ಟು ಹೋಗಿದ್ದ. ಜ. 13 ಮತ್ತು 14 ರಂದು ಗುರುಮೂರ್ತಿ ಮತ್ತು ಮಾಧವಿ ಬೆಳಗ್ಗೆ ತಮ್ಮ ಸಹೋದರಿಯ ಮನೆಗೆ ಹೋಗಿ ಸಂಜೆ ಹಿಂತಿರುಗಿದರು. ಜ. 15 ರಂದು ಬೆಳಗ್ಗೆ ಗುರುಮೂರ್ತಿ ಮತ್ತು ಮಾಧವಿ ಜಗಳವಾಡಲು ಶುರು ಮಾಡಿದರು. ಕಾರಣ ಏನೆಂದರೆ, ಗಂಡ ಇನ್ನೊಬ್ಬ ಮಹಿಳೆಯೊಂದಿಗೆ ಇರುವ ಕೆಲ ಫೋಟೋಗಳನ್ನು ಮಾಧವಿ ನೋಡಿದಳು. ಜಗಳ ನಡೆಯುತ್ತಿದ್ದಂತೆ ಮೊದಲೇ ಕೊಲೆಗೆ ಪ್ಲಾನ್ ಮಾಡಿದ್ದ ಗುರುಮೂರ್ತಿ, ಪತ್ನಿಯ ತಲೆಗೆ ಬಲವಾದ ಆಯುಧದಿಂದ ಹೊಡೆದನು. ಏಟು ತಾಳಲಾರದೇ ಮಾಧವಿ ಕೆಳಗೆ ಬಿದ್ದರು ಮತ್ತು ಸ್ಥಳದಲ್ಲೇ ಆಕೆ ಮೃತಪಟ್ಟಳು. ಬಳಿಕ ಆರು ತಿಂಗಳ ಹಿಂದೆ ಒಟಿಟಿಯಲ್ಲಿ ನೋಡಿದ ವೆಬ್ ಸರಣಿಯ ಪಾತ್ರಗಳಂತೆ ದೇಹವನ್ನು ವಿಲೇವಾರಿ ಮಾಡಲು ಗುರುಮೂರ್ತಿ ಮುಂದಾದನು. ಇದರ ಭಾಗವಾಗಿ, ದೇಹವನ್ನು ಶೌಚಾಲಯಕ್ಕೆ ತೆಗೆದುಕೊಂಡು ಹೋಗಿ ತುಂಡುಗಳಾಗಿ ಕತ್ತರಿಸಿದನು.
ನಂತರ ಹೀಟರ್ ಬಳಸಿ ಬಕೆಟ್ ನೀರನ್ನು ಬಿಸಿ ಮಾಡಿ ಮಾಂಸದ ತುಂಡುಗಳನ್ನು ಅದರೊಳಗೆ ಹಾಕಿದ್ದಾನೆ. ತುಂಡುಗಳನ್ನು ಮಾಡಿದ ನಂತರ, ಮಾಂಸವನ್ನು ಮೂಳೆಗಳಿಂದ ಬೇರ್ಪಡಿಸಿದ್ದಾರೆ. ಮಾಂಸ ಮತ್ತು ಮೂಳೆಗಳನ್ನು ಒಂದು ದೊಡ್ಡ ಕುಕ್ಕರ್ನಲ್ಲಿ ಬೇಯಿಸಿದ್ದಾನೆ. ಚೆನ್ನಾಗಿ ಬೇಯಿಸಿದ ಬಳಿಕ ಒಣಗಿಸಿ, ಮಾಂಸವನ್ನು ಸುಟ್ಟು ಹಾಕಿದ್ದಾನೆ. ಅಲ್ಲದೆ, ಮೂಳೆಗಳನ್ನು ಚೆನ್ನಾಗಿ ಪುಡಿ ಮಾಡಿದ್ದಾನೆ. ಇದಾದ ಬಳಿಕ ಬೂದಿಯನ್ನು ಒಳಚರಂಡಿ ಮ್ಯಾನ್ಹೋಲ್ನಲ್ಲಿ ಬೆರೆಸಿ ಉಳಿದ ಮೂಳೆಯ ಪುಡಿಯನ್ನು ಹತ್ತಿರದ ಜಿಲ್ಲಲಾಗುಡದ ಕೊಳಕ್ಕೆ ಎಸೆದಿದ್ದಾನೆ.
ಕೊಲೆಯಾದ ನಂತರ ಸುಮಾರು ಎರಡು ದಿನಗಳ ಕಾಲ ನಿದ್ದೆ ಮಾಡದೆ ಇದನ್ನೆಲ್ಲ ಮಾಡಿದೆ ಎಂದು ಆರೋಪಿ ಗುರುಮೂರ್ತಿ ಪೊಲೀಸರಿಗೆ ಹೇಳಿದ್ದಾನೆ. ದೇಹವನ್ನು ಕತ್ತರಿಸಿದ ಬಳಿಕ ಕೋಣೆಯನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾನೆ. 17ನೇ ತಾರೀಖಿನಂದು ಸಂಜೆ, ಮಾಧವಿಯ ಪಾಲಕರಿಗೆ ಕರೆ ಮಾಡಿ, ತನ್ನ ಹೆಂಡತಿ ಕಾಣೆಯಾಗಿದ್ದಾಳೆಂದು ಹೇಳಿದ್ದಾನೆ. ಸಣ್ಣ ಜಗಳದಿಂದಾಗಿ ಆಕೆ ಮನೆ ಬಿಟ್ಟು ಹೋದಳು ಎಂದು ಕತೆ ಕಟ್ಟಿದ್ದಾನೆ. ಮಾಧವಿ ಪಾಲಕರ ಜತೆಗೆ ತೆರಳಿ ದೂರು ಸಹ ದಾಖಲಿಸಿದ್ದ.
ಪ್ರಕರಣದ ತನಿಖೆ ನಡೆಸುತ್ತಿದ್ದಾಗ, ಪೊಲೀಸರಿಗೆ ಗುರುಮೂರ್ತಿಯ ಮೇಲೆ ಅನುಮಾನ ಮೂಡಿತು. ಮಾಧವಿ ಮನೆಗೆ ಪ್ರವೇಶಿಸುವುದನ್ನು ಹೊರತುಪಡಿಸಿ, ಆಕೆ ಹೊರಗೆ ಬರುವ ಯಾವುದೇ ದೃಶ್ಯಗಳು ಸಮೀಪದ ಸಿಸಿಟಿವಿಯಲ್ಲಿ ದಾಖಲಾಗಿರಲಿಲ್ಲ. ಇದರಿಂದ ಅನುಮಾನ ಮತ್ತಷ್ಟು ಬಲವಾಯಿತು. ಬಳಿಕ ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನಿಜವಾದ ಕತೆ ಬೆಳಕಿಗೆ ಬಂದಿತು. ಬುಧವಾರ ಮತ್ತು ಗುರುವಾರ ಆರೋಪಿಯ ನಿವಾಸವನ್ನು ಪರಿಶೀಲಿಸಿದ್ದ ತನಿಖಾ ತಂಡ ಮತ್ತು ವಿಧಿವಿಜ್ಞಾನ ತಂಡಗಳು, ಮನೆಯಿಂದ ನೀರಿನ ಬಕೆಟ್, ವಾಟರ್ ಹೀಟರ್ ಮತ್ತು ಕೆಲವು ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಅವುಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದೇಹವನ್ನು ತುಂಡು ಮಾಡಿ ಕುಕ್ಕರ್ನಲ್ಲಿ ಹಾಕಿ ಬೇಯಿಸಲಾಗಿದೆ ಎಂಬುದಕ್ಕೆ ಕೆಲವು ಪುರಾವೆಗಳು ಕಂಡುಬಂದಿವೆ.
ಪೊಲೀಸರ ತನಿಖೆಗೆ ಟ್ವಿಸ್ಟ್
ಆರೋಪಿ ಹೇಳಿರುವ ವಿಷಯಗಳನ್ನು ಆಧರಿಸಿ ತನಿಖಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರೂ ಹೊಸ ಟ್ವಿಸ್ಟ್ ತಲೆನೋವಾಗಿ ಪರಿಣಮಿಸಿದೆ. ಮೂಳೆಗಳನ್ನು ಕೆರೆಗೆ ಎಸೆದಿರುವುದಾಗಿ ಹೇಳಿದ್ದರೂ ಅಲ್ಲಿ ಇನ್ನೂ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಶವದ ಕುರುಹುಗಳೇನಾದರೂ ಕಂಡುಬಂದರೆ, ಅದನ್ನು ಮಾಧವಿಯ ಮಕ್ಕಳ ಡಿಎನ್ಎ ಜೊತೆ ಹೋಲಿಸುವ ಸಾಧ್ಯತೆಯಿದೆ. ಆದರೆ, ಇಲ್ಲಿಯವರೆಗೆ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಇಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ನಿರ್ಣಾಯಕವಾಗಿರುತ್ತದೆ. ಮಾಧವಿ ನಾಪತ್ತೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಅವರು ಮನೆಯೊಳಗೆ ಹೋಗುತ್ತಿರುವ ದೃಶ್ಯಗಳು ಮಾತ್ರ ಪತ್ತೆಯಾಗಿವೆ ಎಂದು ಎಲ್ಬಿ ನಗರ ಡಿಸಿಪಿ ಪ್ರವೀಣ್ ಹೇಳಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
- ಹೊಸ ರೇಷನ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್! ಪ್ರತ್ಯೇಕ ಕಾರ್ಡ್ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ
- ದೇಶಾದ್ಯಂತ ಇನ್ಮೇಲೆ ಇಂತವರಿಗೆ ಬ್ಯಾಂಕ್ ಸಾಲ ಸಿಗದಂತೆ ಹೊಸ ರೂಲ್ಸ್ | Bank Loan New Rules 2026
- ‘ಬ್ಯಾಂಕ್’ ಗ್ರಾಹಕರೇ ಗಮನಿಸಿ : ಖಾತೆಯಿಂದ ಈ 10 ವಹಿವಾಟು ಮಾಡಿದ್ರೆ ನಿಮಗೆ ‘IT ನೋಟಿಸ್’ ಗ್ಯಾರೆಂಟಿ.! Bank Rules
- ಅನ್ಯ ಧರ್ಮಿಯ ಜೊತೆ ಮದುವೆ : ಪುತ್ರಿಗೆ ಅಪ್ಪನ ಆಸ್ತಿಯಲ್ಲಿ ಹಕ್ಕಿಲ್ಲ – ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
- ಗುರುವಾರದ ರಾಶಿ ಭವಿಷ್ಯ : ಯಾರಿಗೆ ಅದೃಷ್ಟ, ಯಾರಿಗೆ ಎಚ್ಚರಿಕೆ.?
- ಸೊಸೆಗೆ ಅತ್ತೆ, ಮಾವ ಊಟ ಕೇಳಿದರೆ ಅದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್.!
- ಶಿಕ್ಷಣ ಸಾಲಕ್ಕೆ ಪೋಷಕರ ‘ಸಿಬಿಲ್ ಸ್ಕೋರ್’ ಮಾನದಂಡವಲ್ಲ: ಹೈಕೋರ್ಟ್ ಮಹತ್ವದ ತೀರ್ಪು


























