Meerpet Madhavi Case : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟೆಯ ಜಿಲ್ಲಾಲಗುಡದಲ್ಲಿ ನಡೆದ ಭೀಕರ ಕೊಲೆಯ ಪೊಲೀಸ್ ತನಿಖೆ ಮುಂದುವರೆದಿದೆ. ತನಿಖೆಯ ಸಮಯದಲ್ಲಿ ಈ ಪ್ರಕರಣದ ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ. ಆರೋಪಿ ಗುರುಮೂರ್ತಿಯ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸರು ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಪ್ಲಾನ್ ಮಾಡಿ ಕೊಲೆ ಮಾಡಿದ್ದ ಗುರುಮೂರ್ತಿ, ವೆಬ್ ಸರಣಿಯ ಶೈಲಿಯಲ್ಲಿ ಶವವನ್ನು ವಿಲೇವಾರಿ ಮಾಡಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಧವಿ ಕೊಲೆ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಆರೋಪಿ ಗುರುಮೂರ್ತಿಯನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪೊಲೀಸರು ಈಗಾಗಲೇ ಎರಡು ಬಾರಿ ಸ್ಥಳ ಮಹಜರು ಮಾಡಿದ್ದು, ನಿರ್ಣಾಯಕ ಪುರಾವೆಗಳನ್ನು ಸಂಗ್ರಹಿಸಿದ್ದಾರೆ. ತನಿಖಾ ತಂಡವು ಗುರುಮೂರ್ತಿಯ ಮನೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಶೋಧ ನಡೆಸಿತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಫೋನ್ ಸಿಗ್ನಲ್ಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮತ್ತೊಂದೆಡೆ, ಮಾಧವಿ ಕೊಲೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಕ್ಕಳ ಹೇಳಿಕೆಗಳನ್ನು ಸಹ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಹೇಳಿಕೆಗಳ ಸಮಯದಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ತಾಯಿ ಕಾಣೆಯಾದ ನಂತರ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು ಎಂದು ಮಕ್ಕಳು ಹೇಳಿದ್ದಾರೆ. ಪೊಲೀಸರು ಕುಟುಂಬ ಸದಸ್ಯರನ್ನು ಸಹ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ, ಆರೋಪಿಯ ಮಾಹಿತಿಯನ್ನು ಅವಲಂಬಿಸದೆ, ಪೊಲೀಸರು ವಿವಿಧ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಆರೋಪಿಯ ಫೋನ್ ಪರಿಶೀಲಿಸಿದಾಗ, ಅಲ್ಲಿ ಮತ್ತೊಬ್ಬ ಮಹಿಳೆಯ ಕೆಲವು ಫೋಟೋಗಳು ಇರುವುದು ಕಂಡುಬಂದಿದೆ. ಈ ತಿಂಗಳ 18ರಂದು ದಾಖಲಾಗಿದ್ದ ವೆಂಕಟ ಮಾಧವಿ ನಾಪತ್ತೆ ಪ್ರಕರಣವನ್ನು ಕೊಲೆ ಪ್ರಕರಣದ ಸೆಕ್ಷನ್ಗಳ ಅಡಿಯಲ್ಲಿ ವರ್ಗಾಯಿಸಲಾಗುತ್ತಿದೆ. ಇಂದು ಈ ಪ್ರಕರಣದಲ್ಲಿ ಸ್ವಲ್ಪ ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.
ನಡೆದಿದ್ದೇನು?
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಾಚರ್ಲಾ ಮಂಡಲದ ಜೆ.ಪಿ. ಚೆರುವು ಗ್ರಾಮದ ನಿವಾಸಿ ಗುರುಮೂರ್ತಿ ಮತ್ತು ಅದೇ ಗ್ರಾಮದ ವೆಂಕಟ ಮಾಧವಿ 13 ವರ್ಷಗಳ ಹಿಂದೆ ವಿವಾಹವಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಗುರುಮೂರ್ತಿ ಸೇನೆಯಲ್ಲಿ ಜವಾನನಾಗಿ ಸೇರಿ ನಾಯಕ್ ಸುಬೇದಾರ್ ಆಗಿ ನಿವೃತ್ತನಾದನು. ಪ್ರಸ್ತುತ ಕಾಂಚನ್ಬಾಗ್ ಡಿಆರ್ಡಿಎಯಲ್ಲಿ ಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಗುರುಮೂರ್ತಿ ಕೆಲ ಸಮಯದಿಂದ ತಮ್ಮ ಹತ್ತಿರದ ಸಂಬಂಧಿಯಾಗಿರುವ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತದೆ. ಈ ವಿಷಯ ಪತ್ನಿ ಮಾಧವಿಗೆ ತಿಳಿದು ಇಬ್ಬರ ನಡುವೆ ಅನೇಕ ಬಾರಿ ಜಗಳಗಳು ನಡೆದಿದ್ದವು. ತಮ್ಮ ಅನೈತಿಕ ಸಂಬಂಧಕ್ಕೆ ಇರುವ ಅಡಚಣೆಯನ್ನು ತೊಡೆದು ಹಾಕಲು ಪತ್ನಿಯನ್ನೇ ಕೊಲ್ಲಲು ಗುರುಮೂರ್ತಿ ಪ್ಲಾನ್ ಮಾಡಿದನು.
ಸಂಕ್ರಾಂತಿ ಹಬ್ಬದ ಸಮಯದಲ್ಲಿ ಗುರುಮೂರ್ತಿ ತನ್ನಿಬ್ಬರು ಮಕ್ಕಳನ್ನು ನಗರದಲ್ಲಿನ ತನ್ನ ಸಹೋದರಿಯ ಮನೆಯಲ್ಲಿ ಬಿಟ್ಟು ಹೋಗಿದ್ದ. ಜ. 13 ಮತ್ತು 14 ರಂದು ಗುರುಮೂರ್ತಿ ಮತ್ತು ಮಾಧವಿ ಬೆಳಗ್ಗೆ ತಮ್ಮ ಸಹೋದರಿಯ ಮನೆಗೆ ಹೋಗಿ ಸಂಜೆ ಹಿಂತಿರುಗಿದರು. ಜ. 15 ರಂದು ಬೆಳಗ್ಗೆ ಗುರುಮೂರ್ತಿ ಮತ್ತು ಮಾಧವಿ ಜಗಳವಾಡಲು ಶುರು ಮಾಡಿದರು. ಕಾರಣ ಏನೆಂದರೆ, ಗಂಡ ಇನ್ನೊಬ್ಬ ಮಹಿಳೆಯೊಂದಿಗೆ ಇರುವ ಕೆಲ ಫೋಟೋಗಳನ್ನು ಮಾಧವಿ ನೋಡಿದಳು. ಜಗಳ ನಡೆಯುತ್ತಿದ್ದಂತೆ ಮೊದಲೇ ಕೊಲೆಗೆ ಪ್ಲಾನ್ ಮಾಡಿದ್ದ ಗುರುಮೂರ್ತಿ, ಪತ್ನಿಯ ತಲೆಗೆ ಬಲವಾದ ಆಯುಧದಿಂದ ಹೊಡೆದನು. ಏಟು ತಾಳಲಾರದೇ ಮಾಧವಿ ಕೆಳಗೆ ಬಿದ್ದರು ಮತ್ತು ಸ್ಥಳದಲ್ಲೇ ಆಕೆ ಮೃತಪಟ್ಟಳು. ಬಳಿಕ ಆರು ತಿಂಗಳ ಹಿಂದೆ ಒಟಿಟಿಯಲ್ಲಿ ನೋಡಿದ ವೆಬ್ ಸರಣಿಯ ಪಾತ್ರಗಳಂತೆ ದೇಹವನ್ನು ವಿಲೇವಾರಿ ಮಾಡಲು ಗುರುಮೂರ್ತಿ ಮುಂದಾದನು. ಇದರ ಭಾಗವಾಗಿ, ದೇಹವನ್ನು ಶೌಚಾಲಯಕ್ಕೆ ತೆಗೆದುಕೊಂಡು ಹೋಗಿ ತುಂಡುಗಳಾಗಿ ಕತ್ತರಿಸಿದನು.
ನಂತರ ಹೀಟರ್ ಬಳಸಿ ಬಕೆಟ್ ನೀರನ್ನು ಬಿಸಿ ಮಾಡಿ ಮಾಂಸದ ತುಂಡುಗಳನ್ನು ಅದರೊಳಗೆ ಹಾಕಿದ್ದಾನೆ. ತುಂಡುಗಳನ್ನು ಮಾಡಿದ ನಂತರ, ಮಾಂಸವನ್ನು ಮೂಳೆಗಳಿಂದ ಬೇರ್ಪಡಿಸಿದ್ದಾರೆ. ಮಾಂಸ ಮತ್ತು ಮೂಳೆಗಳನ್ನು ಒಂದು ದೊಡ್ಡ ಕುಕ್ಕರ್ನಲ್ಲಿ ಬೇಯಿಸಿದ್ದಾನೆ. ಚೆನ್ನಾಗಿ ಬೇಯಿಸಿದ ಬಳಿಕ ಒಣಗಿಸಿ, ಮಾಂಸವನ್ನು ಸುಟ್ಟು ಹಾಕಿದ್ದಾನೆ. ಅಲ್ಲದೆ, ಮೂಳೆಗಳನ್ನು ಚೆನ್ನಾಗಿ ಪುಡಿ ಮಾಡಿದ್ದಾನೆ. ಇದಾದ ಬಳಿಕ ಬೂದಿಯನ್ನು ಒಳಚರಂಡಿ ಮ್ಯಾನ್ಹೋಲ್ನಲ್ಲಿ ಬೆರೆಸಿ ಉಳಿದ ಮೂಳೆಯ ಪುಡಿಯನ್ನು ಹತ್ತಿರದ ಜಿಲ್ಲಲಾಗುಡದ ಕೊಳಕ್ಕೆ ಎಸೆದಿದ್ದಾನೆ.
ಕೊಲೆಯಾದ ನಂತರ ಸುಮಾರು ಎರಡು ದಿನಗಳ ಕಾಲ ನಿದ್ದೆ ಮಾಡದೆ ಇದನ್ನೆಲ್ಲ ಮಾಡಿದೆ ಎಂದು ಆರೋಪಿ ಗುರುಮೂರ್ತಿ ಪೊಲೀಸರಿಗೆ ಹೇಳಿದ್ದಾನೆ. ದೇಹವನ್ನು ಕತ್ತರಿಸಿದ ಬಳಿಕ ಕೋಣೆಯನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾನೆ. 17ನೇ ತಾರೀಖಿನಂದು ಸಂಜೆ, ಮಾಧವಿಯ ಪಾಲಕರಿಗೆ ಕರೆ ಮಾಡಿ, ತನ್ನ ಹೆಂಡತಿ ಕಾಣೆಯಾಗಿದ್ದಾಳೆಂದು ಹೇಳಿದ್ದಾನೆ. ಸಣ್ಣ ಜಗಳದಿಂದಾಗಿ ಆಕೆ ಮನೆ ಬಿಟ್ಟು ಹೋದಳು ಎಂದು ಕತೆ ಕಟ್ಟಿದ್ದಾನೆ. ಮಾಧವಿ ಪಾಲಕರ ಜತೆಗೆ ತೆರಳಿ ದೂರು ಸಹ ದಾಖಲಿಸಿದ್ದ.
ಪ್ರಕರಣದ ತನಿಖೆ ನಡೆಸುತ್ತಿದ್ದಾಗ, ಪೊಲೀಸರಿಗೆ ಗುರುಮೂರ್ತಿಯ ಮೇಲೆ ಅನುಮಾನ ಮೂಡಿತು. ಮಾಧವಿ ಮನೆಗೆ ಪ್ರವೇಶಿಸುವುದನ್ನು ಹೊರತುಪಡಿಸಿ, ಆಕೆ ಹೊರಗೆ ಬರುವ ಯಾವುದೇ ದೃಶ್ಯಗಳು ಸಮೀಪದ ಸಿಸಿಟಿವಿಯಲ್ಲಿ ದಾಖಲಾಗಿರಲಿಲ್ಲ. ಇದರಿಂದ ಅನುಮಾನ ಮತ್ತಷ್ಟು ಬಲವಾಯಿತು. ಬಳಿಕ ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನಿಜವಾದ ಕತೆ ಬೆಳಕಿಗೆ ಬಂದಿತು. ಬುಧವಾರ ಮತ್ತು ಗುರುವಾರ ಆರೋಪಿಯ ನಿವಾಸವನ್ನು ಪರಿಶೀಲಿಸಿದ್ದ ತನಿಖಾ ತಂಡ ಮತ್ತು ವಿಧಿವಿಜ್ಞಾನ ತಂಡಗಳು, ಮನೆಯಿಂದ ನೀರಿನ ಬಕೆಟ್, ವಾಟರ್ ಹೀಟರ್ ಮತ್ತು ಕೆಲವು ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಅವುಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದೇಹವನ್ನು ತುಂಡು ಮಾಡಿ ಕುಕ್ಕರ್ನಲ್ಲಿ ಹಾಕಿ ಬೇಯಿಸಲಾಗಿದೆ ಎಂಬುದಕ್ಕೆ ಕೆಲವು ಪುರಾವೆಗಳು ಕಂಡುಬಂದಿವೆ.
ಪೊಲೀಸರ ತನಿಖೆಗೆ ಟ್ವಿಸ್ಟ್
ಆರೋಪಿ ಹೇಳಿರುವ ವಿಷಯಗಳನ್ನು ಆಧರಿಸಿ ತನಿಖಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರೂ ಹೊಸ ಟ್ವಿಸ್ಟ್ ತಲೆನೋವಾಗಿ ಪರಿಣಮಿಸಿದೆ. ಮೂಳೆಗಳನ್ನು ಕೆರೆಗೆ ಎಸೆದಿರುವುದಾಗಿ ಹೇಳಿದ್ದರೂ ಅಲ್ಲಿ ಇನ್ನೂ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಶವದ ಕುರುಹುಗಳೇನಾದರೂ ಕಂಡುಬಂದರೆ, ಅದನ್ನು ಮಾಧವಿಯ ಮಕ್ಕಳ ಡಿಎನ್ಎ ಜೊತೆ ಹೋಲಿಸುವ ಸಾಧ್ಯತೆಯಿದೆ. ಆದರೆ, ಇಲ್ಲಿಯವರೆಗೆ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಇಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ನಿರ್ಣಾಯಕವಾಗಿರುತ್ತದೆ. ಮಾಧವಿ ನಾಪತ್ತೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಅವರು ಮನೆಯೊಳಗೆ ಹೋಗುತ್ತಿರುವ ದೃಶ್ಯಗಳು ಮಾತ್ರ ಪತ್ತೆಯಾಗಿವೆ ಎಂದು ಎಲ್ಬಿ ನಗರ ಡಿಸಿಪಿ ಪ್ರವೀಣ್ ಹೇಳಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.
- ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ – ರಾಜ್ಯಪಾಲರಿಗೆ ದೂರು
- ಹೆಂಡತಿಗೆ ಮೆಸೇಜ್ ಮಾಡುತ್ತಿದ್ದಕ್ಕೆ ಸ್ನೇಹಿತನನ್ನ ಸ್ಥಳಕ್ಕೆ ಕರೆಸಿಕೊಂಡ ಪತಿ ಮುಂದೇನಾಯ್ತು ನೋಡಿ!
- ಸ್ನೇಹಿತನ ಹೆಂಡತಿಯನ್ನೇ ಹಾರಿಸಿಕೊಂಡು ಹೋದ ಭೂಪ! ಕಣ್ಣೀರಿಟ್ಟು ‘ಬಂದ್ ಬಿಡು’ ಎಂದ ರಿಯಲ್ ಗಂಡ
- ಇನ್ಸ್ಟಾಗ್ರಾಂ ಪ್ರೀತಿ ಕೊಲೆಯಲ್ಲಿ ಅಂತ್ಯ; ಲಿವ್-ಇನ್ನಲ್ಲಿದ್ದ ಗೆಳತಿಯ ಕತ್ತು ಹಿಸುಕಿ ಕೊಂದು ವಕೀಲರಿಗೆ ಕರೆ ಮಾಡಿದ ವಾಟರ್ ಟ್ಯಾಂಕರ್ ಚಾಲಕ!
- ಮಹಾ ಮಾಯಾಂಗಿ: ಗಂಡನನ್ನೇ ಮುಗಿಸಿ, 2 ಕೋಟಿ ಹಣದಲ್ಲಿ ‘ಲವ್ವರ್’ ಜೊತೆ ಮಜಾ ಉಡಾಯಿಸಿದ ಆಂಟಿ!
- ಬೆಳಿಗ್ಗೆ ಸ್ನಾನ ಮಾಡುವಾಗ ದೇಹದಲ್ಲಿ ಈ 4 ಲಕ್ಷಣಗಳು ಕಂಡುಬಂದರೆ, ಎಚ್ಚರ, ಅದು ಹೊಟ್ಟೆಯ ಕ್ಯಾನ್ಸರ್!
- ಬೆಳಗ್ಗೆ ಎದ್ದಾಗ ಕಣ್ಣಿನಲ್ಲಿನ ಈ ಬದಲಾವಣೆ ಕಿಡ್ನಿ ಡ್ಯಾಮೇಜ್ನ ಪ್ರಮುಖ ಲಕ್ಷಣ.!
- ನಾನು ಹಿಂದೂ ಧರ್ಮಕ್ಕೆ ಲೆಕ್ಕ ಕೇಳ್ತಿಲ್ಲ, ಸಂಘದ ಲೆಕ್ಕ ಕೇಳ್ತಿದ್ದೇನೆ, ತಪ್ಪೇನಿದೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
- ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್: 2 ಕೋಟಿ ಹಣಕ್ಕಾಗಿ ಚಟ್ಟ, FSL ವರದಿಯನ್ನೇ ಬದಲಿಸಿದ್ದ ಖತರ್ನಾಕ್ ಗ್ಯಾಂಗ್
- ರೈತರ ಬಡ್ಡಿ ರಹಿತ ಸಾಲ ಸೌಲಭ್ಯದ ದುರುಪಯೋಗಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
- ರಾಜ್ಯದಲ್ಲಿ ಗ್ಯಾರಂಟಿ ಯೋಜನೆ’ ಲಾಭ ಪಡೆಯಲು ‘ವೋಟರ್ ಐಡಿ’ ಕಡ್ಡಾಯ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ
- ಮೈಸೂರಿನಲ್ಲಿ, ನಟ ಪ್ರೀತಂ ಮಾಲೀಕತ್ವದ ಪಬ್ನಲ್ಲಿ ಬೆಂಕಿ ಅವಘಡ ; ಇಬ್ಬರು ಸಜೀವ ದಹನ
- ಈ ಚಿಕ್ಕ ಲಕ್ಷಣಗಳನ್ನು ಲೈಟಾಗಿ ತೆಗೆದುಕೊಳ್ಳಬೇಡಿ : ಪಾರ್ಶ್ವವಾಯು ದಾಳಿಯ ಮೊದಲು ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ…
- ಮಗನ ಶವ ನೋಡಿ ಅಲ್ಲೇ ಪ್ರಾಣಬಿಟ್ಟ ತಾಯಿ: ಒಂದೇ ಮನೆಯಿಂದ ಹೊರಟಿತು ಎರಡು ಹೆಣ! ತಾಯಿ, ಮಗ ಇಬ್ಬರ ಕಣ್ಣುಗಳನ್ನು ದಾನ ಮಾಡಿದ ಕುಟುಂಬ
- ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ
- ಕರ್ನಾಟಕ ಸರ್ಕಾರದ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಮೋಹನ್ ಭಾಗವತ್ ಕೌಂಟರ್!
- BREAKING : ಖ್ಯಾತ ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ |Indira Lankesh Passes away
- ರಾಜಸ್ಥಾನದಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಬೆಂಗಳೂರು ಪೊಲೀಸ್, ‘ಸಸ್ಪೆಂಡ್ ಮಾಡಿದ್ದೀವಿ’ ಎಂದ ಪ್ರಿಯಾಂಕ್ ಖರ್ಗೆ
- ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ ಕೆಲಸಕ್ಕೆ ಶಾಕ್ ವಿಡಿಯೋ
- ಅನಾರೋಗ್ಯ ಪೀಡಿತ ಗಂಡನನ್ನು ಜ್ಯೂಸ್ನಲ್ಲಿ ನಿದ್ದೆ ಮಾತ್ರೆ ಹಾಕಿ ಕೊಂದ ಹೆಂಡತಿ! 3 ತಿಂಗಳ ಬಳಿಕ ಪ್ರಿಯಕರನಿಂದಲೇ ಸೀಕ್ರೆಟ್ ಬಯಲು!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಬೆಂಗಳೂರಿನಲ್ಲಿ ಘೋರ ದುರಂತ! ಬೆಟ್ಟಿಂಗ್ ಚಟಕ್ಕೆ ಹೋಂ ಗಾರ್ಡ್ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿ.! ಕೊಲೆಗೂ ಮುನ್ನ ವಿಡಿಯೋ ಶಾಕ್!
- ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್
- ತಿರುವು ಪಡೆದ ಬ್ಯಾಡರಹಳ್ಳಿ ಹತ್ಯಾಕಾಂಡಕ : ಮೊದಲ ಹೆಂಡತಿ ವಿಷಯ ಗೊತ್ತಾಗಿ ಭವಾನಿ ಬೇರೆ ಮದುವೆಗೆ ಒಪ್ಪಿದ್ದಕ್ಕೇ ಕೊಲೆ ಮಾಡಿದ್ನಾ ವಂಚಕ ಪ್ರಿಯಕರ?!
- 10 ಸ್ನೇಹಿತರ ಟ್ರಿಪ್… ಮನೆಗೆ ವಾಪಸ್ ಬಂದದ್ದು 7 ಜನ ಮಾತ್ರ! ಗೂಗಲ್ ಮ್ಯಾಪ್ ತೋರಿಸಿದ ದಾರಿ ಕೊನೆಗೆ ಸಾವಿನ ಬಾಗಿಲಿಗೆ!
- 3 ಎಕರೆ ಇದ್ದ ಜಮೀನು 1400 ಕೋಟಿ ಆಗಿದ್ದು ಹೇಗೆ? ಡಿಕೆಶಿ ರಿಯಲ್ ಎಸ್ಟೇಟ್ ದೊರೆ ಎಂದು ಕುಮಾರಸ್ವಾಮಿ ಕಿಡಿ
- ಜೈಪುರದಲ್ಲಿ ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು.! ಲೇಡಿ ಪಿಎಸ್ಐ ಸೇರಿ ಮೂವರು ಅರೆಸ್ಟ್

























