Meerpet Madhavi Case : ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟೆಯ ಜಿಲ್ಲಾಲಗುಡದಲ್ಲಿ ನಡೆದ ಭೀಕರ ಕೊಲೆಯ ಪೊಲೀಸ್ ತನಿಖೆ ಮುಂದುವರೆದಿದೆ. ತನಿಖೆಯ ಸಮಯದಲ್ಲಿ ಈ ಪ್ರಕರಣದ ಆಘಾತಕಾರಿ ಸಂಗತಿಗಳು ಬೆಳಕಿಗೆ ಬರುತ್ತಿವೆ. ಆರೋಪಿ ಗುರುಮೂರ್ತಿಯ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸರು ಕಂಡುಕೊಂಡಿದ್ದಾರೆ ಎನ್ನಲಾಗಿದೆ. ಪ್ಲಾನ್ ಮಾಡಿ ಕೊಲೆ ಮಾಡಿದ್ದ ಗುರುಮೂರ್ತಿ, ವೆಬ್ ಸರಣಿಯ ಶೈಲಿಯಲ್ಲಿ ಶವವನ್ನು ವಿಲೇವಾರಿ ಮಾಡಿ, ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಧವಿ ಕೊಲೆ ಪ್ರಕರಣದಲ್ಲಿ ಆಕೆಯ ಪತಿ ಮತ್ತು ಆರೋಪಿ ಗುರುಮೂರ್ತಿಯನ್ನು ಪೊಲೀಸರು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಪೊಲೀಸರು ಈಗಾಗಲೇ ಎರಡು ಬಾರಿ ಸ್ಥಳ ಮಹಜರು ಮಾಡಿದ್ದು, ನಿರ್ಣಾಯಕ ಪುರಾವೆಗಳನ್ನು ಸಂಗ್ರಹಿಸಿದ್ದಾರೆ. ತನಿಖಾ ತಂಡವು ಗುರುಮೂರ್ತಿಯ ಮನೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಶೋಧ ನಡೆಸಿತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಫೋನ್ ಸಿಗ್ನಲ್ಗಳ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮತ್ತೊಂದೆಡೆ, ಮಾಧವಿ ಕೊಲೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಮಕ್ಕಳ ಹೇಳಿಕೆಗಳನ್ನು ಸಹ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಹೇಳಿಕೆಗಳ ಸಮಯದಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ತಾಯಿ ಕಾಣೆಯಾದ ನಂತರ ಮನೆಯಿಂದ ಕೆಟ್ಟ ವಾಸನೆ ಬರುತ್ತಿತ್ತು ಎಂದು ಮಕ್ಕಳು ಹೇಳಿದ್ದಾರೆ. ಪೊಲೀಸರು ಕುಟುಂಬ ಸದಸ್ಯರನ್ನು ಸಹ ವಿಚಾರಣೆ ನಡೆಸುತ್ತಿದ್ದಾರೆ. ಈ ಮಧ್ಯೆ, ಆರೋಪಿಯ ಮಾಹಿತಿಯನ್ನು ಅವಲಂಬಿಸದೆ, ಪೊಲೀಸರು ವಿವಿಧ ಕೋನಗಳಿಂದ ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ಆರೋಪಿಯ ಫೋನ್ ಪರಿಶೀಲಿಸಿದಾಗ, ಅಲ್ಲಿ ಮತ್ತೊಬ್ಬ ಮಹಿಳೆಯ ಕೆಲವು ಫೋಟೋಗಳು ಇರುವುದು ಕಂಡುಬಂದಿದೆ. ಈ ತಿಂಗಳ 18ರಂದು ದಾಖಲಾಗಿದ್ದ ವೆಂಕಟ ಮಾಧವಿ ನಾಪತ್ತೆ ಪ್ರಕರಣವನ್ನು ಕೊಲೆ ಪ್ರಕರಣದ ಸೆಕ್ಷನ್ಗಳ ಅಡಿಯಲ್ಲಿ ವರ್ಗಾಯಿಸಲಾಗುತ್ತಿದೆ. ಇಂದು ಈ ಪ್ರಕರಣದಲ್ಲಿ ಸ್ವಲ್ಪ ಸ್ಪಷ್ಟತೆ ಸಿಗುವ ಸಾಧ್ಯತೆಯಿದೆ.
ನಡೆದಿದ್ದೇನು?
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ರಾಚರ್ಲಾ ಮಂಡಲದ ಜೆ.ಪಿ. ಚೆರುವು ಗ್ರಾಮದ ನಿವಾಸಿ ಗುರುಮೂರ್ತಿ ಮತ್ತು ಅದೇ ಗ್ರಾಮದ ವೆಂಕಟ ಮಾಧವಿ 13 ವರ್ಷಗಳ ಹಿಂದೆ ವಿವಾಹವಾದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಗುರುಮೂರ್ತಿ ಸೇನೆಯಲ್ಲಿ ಜವಾನನಾಗಿ ಸೇರಿ ನಾಯಕ್ ಸುಬೇದಾರ್ ಆಗಿ ನಿವೃತ್ತನಾದನು. ಪ್ರಸ್ತುತ ಕಾಂಚನ್ಬಾಗ್ ಡಿಆರ್ಡಿಎಯಲ್ಲಿ ಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಗುರುಮೂರ್ತಿ ಕೆಲ ಸಮಯದಿಂದ ತಮ್ಮ ಹತ್ತಿರದ ಸಂಬಂಧಿಯಾಗಿರುವ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದರು ಎಂದು ಹೇಳಲಾಗುತ್ತದೆ. ಈ ವಿಷಯ ಪತ್ನಿ ಮಾಧವಿಗೆ ತಿಳಿದು ಇಬ್ಬರ ನಡುವೆ ಅನೇಕ ಬಾರಿ ಜಗಳಗಳು ನಡೆದಿದ್ದವು. ತಮ್ಮ ಅನೈತಿಕ ಸಂಬಂಧಕ್ಕೆ ಇರುವ ಅಡಚಣೆಯನ್ನು ತೊಡೆದು ಹಾಕಲು ಪತ್ನಿಯನ್ನೇ ಕೊಲ್ಲಲು ಗುರುಮೂರ್ತಿ ಪ್ಲಾನ್ ಮಾಡಿದನು.
ಸಂಕ್ರಾಂತಿ ಹಬ್ಬದ ಸಮಯದಲ್ಲಿ ಗುರುಮೂರ್ತಿ ತನ್ನಿಬ್ಬರು ಮಕ್ಕಳನ್ನು ನಗರದಲ್ಲಿನ ತನ್ನ ಸಹೋದರಿಯ ಮನೆಯಲ್ಲಿ ಬಿಟ್ಟು ಹೋಗಿದ್ದ. ಜ. 13 ಮತ್ತು 14 ರಂದು ಗುರುಮೂರ್ತಿ ಮತ್ತು ಮಾಧವಿ ಬೆಳಗ್ಗೆ ತಮ್ಮ ಸಹೋದರಿಯ ಮನೆಗೆ ಹೋಗಿ ಸಂಜೆ ಹಿಂತಿರುಗಿದರು. ಜ. 15 ರಂದು ಬೆಳಗ್ಗೆ ಗುರುಮೂರ್ತಿ ಮತ್ತು ಮಾಧವಿ ಜಗಳವಾಡಲು ಶುರು ಮಾಡಿದರು. ಕಾರಣ ಏನೆಂದರೆ, ಗಂಡ ಇನ್ನೊಬ್ಬ ಮಹಿಳೆಯೊಂದಿಗೆ ಇರುವ ಕೆಲ ಫೋಟೋಗಳನ್ನು ಮಾಧವಿ ನೋಡಿದಳು. ಜಗಳ ನಡೆಯುತ್ತಿದ್ದಂತೆ ಮೊದಲೇ ಕೊಲೆಗೆ ಪ್ಲಾನ್ ಮಾಡಿದ್ದ ಗುರುಮೂರ್ತಿ, ಪತ್ನಿಯ ತಲೆಗೆ ಬಲವಾದ ಆಯುಧದಿಂದ ಹೊಡೆದನು. ಏಟು ತಾಳಲಾರದೇ ಮಾಧವಿ ಕೆಳಗೆ ಬಿದ್ದರು ಮತ್ತು ಸ್ಥಳದಲ್ಲೇ ಆಕೆ ಮೃತಪಟ್ಟಳು. ಬಳಿಕ ಆರು ತಿಂಗಳ ಹಿಂದೆ ಒಟಿಟಿಯಲ್ಲಿ ನೋಡಿದ ವೆಬ್ ಸರಣಿಯ ಪಾತ್ರಗಳಂತೆ ದೇಹವನ್ನು ವಿಲೇವಾರಿ ಮಾಡಲು ಗುರುಮೂರ್ತಿ ಮುಂದಾದನು. ಇದರ ಭಾಗವಾಗಿ, ದೇಹವನ್ನು ಶೌಚಾಲಯಕ್ಕೆ ತೆಗೆದುಕೊಂಡು ಹೋಗಿ ತುಂಡುಗಳಾಗಿ ಕತ್ತರಿಸಿದನು.
ನಂತರ ಹೀಟರ್ ಬಳಸಿ ಬಕೆಟ್ ನೀರನ್ನು ಬಿಸಿ ಮಾಡಿ ಮಾಂಸದ ತುಂಡುಗಳನ್ನು ಅದರೊಳಗೆ ಹಾಕಿದ್ದಾನೆ. ತುಂಡುಗಳನ್ನು ಮಾಡಿದ ನಂತರ, ಮಾಂಸವನ್ನು ಮೂಳೆಗಳಿಂದ ಬೇರ್ಪಡಿಸಿದ್ದಾರೆ. ಮಾಂಸ ಮತ್ತು ಮೂಳೆಗಳನ್ನು ಒಂದು ದೊಡ್ಡ ಕುಕ್ಕರ್ನಲ್ಲಿ ಬೇಯಿಸಿದ್ದಾನೆ. ಚೆನ್ನಾಗಿ ಬೇಯಿಸಿದ ಬಳಿಕ ಒಣಗಿಸಿ, ಮಾಂಸವನ್ನು ಸುಟ್ಟು ಹಾಕಿದ್ದಾನೆ. ಅಲ್ಲದೆ, ಮೂಳೆಗಳನ್ನು ಚೆನ್ನಾಗಿ ಪುಡಿ ಮಾಡಿದ್ದಾನೆ. ಇದಾದ ಬಳಿಕ ಬೂದಿಯನ್ನು ಒಳಚರಂಡಿ ಮ್ಯಾನ್ಹೋಲ್ನಲ್ಲಿ ಬೆರೆಸಿ ಉಳಿದ ಮೂಳೆಯ ಪುಡಿಯನ್ನು ಹತ್ತಿರದ ಜಿಲ್ಲಲಾಗುಡದ ಕೊಳಕ್ಕೆ ಎಸೆದಿದ್ದಾನೆ.
ಕೊಲೆಯಾದ ನಂತರ ಸುಮಾರು ಎರಡು ದಿನಗಳ ಕಾಲ ನಿದ್ದೆ ಮಾಡದೆ ಇದನ್ನೆಲ್ಲ ಮಾಡಿದೆ ಎಂದು ಆರೋಪಿ ಗುರುಮೂರ್ತಿ ಪೊಲೀಸರಿಗೆ ಹೇಳಿದ್ದಾನೆ. ದೇಹವನ್ನು ಕತ್ತರಿಸಿದ ಬಳಿಕ ಕೋಣೆಯನ್ನು ನೀರಿನಿಂದ ಸ್ವಚ್ಛಗೊಳಿಸಿದ್ದಾನೆ. 17ನೇ ತಾರೀಖಿನಂದು ಸಂಜೆ, ಮಾಧವಿಯ ಪಾಲಕರಿಗೆ ಕರೆ ಮಾಡಿ, ತನ್ನ ಹೆಂಡತಿ ಕಾಣೆಯಾಗಿದ್ದಾಳೆಂದು ಹೇಳಿದ್ದಾನೆ. ಸಣ್ಣ ಜಗಳದಿಂದಾಗಿ ಆಕೆ ಮನೆ ಬಿಟ್ಟು ಹೋದಳು ಎಂದು ಕತೆ ಕಟ್ಟಿದ್ದಾನೆ. ಮಾಧವಿ ಪಾಲಕರ ಜತೆಗೆ ತೆರಳಿ ದೂರು ಸಹ ದಾಖಲಿಸಿದ್ದ.
ಪ್ರಕರಣದ ತನಿಖೆ ನಡೆಸುತ್ತಿದ್ದಾಗ, ಪೊಲೀಸರಿಗೆ ಗುರುಮೂರ್ತಿಯ ಮೇಲೆ ಅನುಮಾನ ಮೂಡಿತು. ಮಾಧವಿ ಮನೆಗೆ ಪ್ರವೇಶಿಸುವುದನ್ನು ಹೊರತುಪಡಿಸಿ, ಆಕೆ ಹೊರಗೆ ಬರುವ ಯಾವುದೇ ದೃಶ್ಯಗಳು ಸಮೀಪದ ಸಿಸಿಟಿವಿಯಲ್ಲಿ ದಾಖಲಾಗಿರಲಿಲ್ಲ. ಇದರಿಂದ ಅನುಮಾನ ಮತ್ತಷ್ಟು ಬಲವಾಯಿತು. ಬಳಿಕ ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ನಿಜವಾದ ಕತೆ ಬೆಳಕಿಗೆ ಬಂದಿತು. ಬುಧವಾರ ಮತ್ತು ಗುರುವಾರ ಆರೋಪಿಯ ನಿವಾಸವನ್ನು ಪರಿಶೀಲಿಸಿದ್ದ ತನಿಖಾ ತಂಡ ಮತ್ತು ವಿಧಿವಿಜ್ಞಾನ ತಂಡಗಳು, ಮನೆಯಿಂದ ನೀರಿನ ಬಕೆಟ್, ವಾಟರ್ ಹೀಟರ್ ಮತ್ತು ಕೆಲವು ಪ್ರಮುಖ ಸಾಕ್ಷ್ಯಗಳನ್ನು ಸಂಗ್ರಹಿಸಿವೆ. ಅವುಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದೇಹವನ್ನು ತುಂಡು ಮಾಡಿ ಕುಕ್ಕರ್ನಲ್ಲಿ ಹಾಕಿ ಬೇಯಿಸಲಾಗಿದೆ ಎಂಬುದಕ್ಕೆ ಕೆಲವು ಪುರಾವೆಗಳು ಕಂಡುಬಂದಿವೆ.
ಪೊಲೀಸರ ತನಿಖೆಗೆ ಟ್ವಿಸ್ಟ್
ಆರೋಪಿ ಹೇಳಿರುವ ವಿಷಯಗಳನ್ನು ಆಧರಿಸಿ ತನಿಖಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದರೂ ಹೊಸ ಟ್ವಿಸ್ಟ್ ತಲೆನೋವಾಗಿ ಪರಿಣಮಿಸಿದೆ. ಮೂಳೆಗಳನ್ನು ಕೆರೆಗೆ ಎಸೆದಿರುವುದಾಗಿ ಹೇಳಿದ್ದರೂ ಅಲ್ಲಿ ಇನ್ನೂ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಶವದ ಕುರುಹುಗಳೇನಾದರೂ ಕಂಡುಬಂದರೆ, ಅದನ್ನು ಮಾಧವಿಯ ಮಕ್ಕಳ ಡಿಎನ್ಎ ಜೊತೆ ಹೋಲಿಸುವ ಸಾಧ್ಯತೆಯಿದೆ. ಆದರೆ, ಇಲ್ಲಿಯವರೆಗೆ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ. ಇಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ನಿರ್ಣಾಯಕವಾಗಿರುತ್ತದೆ. ಮಾಧವಿ ನಾಪತ್ತೆ ಬಗ್ಗೆ ಪ್ರಕರಣ ದಾಖಲಾಗಿದ್ದು, ಅವರು ಮನೆಯೊಳಗೆ ಹೋಗುತ್ತಿರುವ ದೃಶ್ಯಗಳು ಮಾತ್ರ ಪತ್ತೆಯಾಗಿವೆ ಎಂದು ಎಲ್ಬಿ ನಗರ ಡಿಸಿಪಿ ಪ್ರವೀಣ್ ಹೇಳಿದ್ದಾರೆ. ಸದ್ಯ ತನಿಖೆ ಮುಂದುವರಿದಿದೆ.
- ಅರ್ಚಕನ ಸಾವು ಕೇಸ್ಗೆ ಬಿಗ್ ಟ್ವಿಸ್ಟ್; ತನ್ನ ಕಾಮದಾಟಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನ ಜೊತೆಗೂಡಿ ಮುಗಿಸಿದ ಪತ್ನಿ!
- ಹೊಸ ಬಟ್ಟೆ ತರಲು ಹೋಗಿದ್ದ ವಿದ್ಯಾರ್ಥಿ ದುರಂತ ಅಂತ್ಯ: ಚೀಲದಲ್ಲಿ ತುಂಬಿ ಕೆರೆಗೆಸೆದ ಸ್ನೇಹಿತರು
- Horoscope Today : 11 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅನ್ಯಧರ್ಮದವನೊಂದಿಗೆ ಮೊಮ್ಮಗಳು ವಿವಾಹ: ಇದೇ ಸಿಟ್ಟಿನಲ್ಲಿ ಮರಿಮೊಮ್ಮಗನನ್ನ ಕೊಂದ ಅಜ್ಜಿ
- ಮೂರು ಬಾರಿ ವಿಷ ಕೊಟ್ಟರೂ ಸಾಯದ ಪತ್ನಿ : ನಾಲ್ಕನೇ ಬಾರಿ ಪ್ಲಾನ್ ಬದಲಿಸಿದ ಗಂಡನಿಗೆ ಕಾದಿತ್ತು ಶಾಕ್.!
- ಸಿಲಿಂಡರ್ ಕೊರತೆಯಿಂದ ಹೋಟೆಲ್ ಉದ್ಯಮಕ್ಕೆ ಹೊಡೆತ.. ಕೇಂದ್ರದ ಮೌನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ
- ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
- ಹಿರಿಯ ನಟ ದ್ವಾರಕೀಶ್ ಸೊಸೆಯಿಂದ ಸರಣಿ ವಂಚನೆ, ರಸ್ತೆಯಲ್ಲೇ ಪೊರಕೆ ಹಿಡಿದು ವ್ಯಕ್ತಿ ಮೇಲೆ ಹಲ್ಲೆ!
- Horoscope Today : 10 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು
- ಸ್ನೇಹಿತೆಯ ಲವ್ನಲ್ಲಿ ಮಧ್ಯಸ್ಥಿಕೆ : ಗಂಡ ಹೆಂಡ್ತಿ ಗಲಾಟೆ ಸಾವಿನಲ್ಲಿ ಅಂತ್ಯ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ: ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷ ಪಾಪು
- Kidney Stone : ಮೂತ್ರಪಿಂಡದ ಆರೋಗ್ಯಕ್ಕೆ ‘ಸೂಪರ್ ಡ್ರಿಂಕ್ಸ್’: ಕಿಡ್ನಿ ಸ್ಟೋನ್ ತಡೆಯಲು ಇಲ್ಲಿದೆ ಪರಿಣಾಮಕಾರಿ ಮಾರ್ಗ
- ಸ್ಟ್ರೋಕ್ ಬರುವ ಮುನ್ನವೇ ದೇಹ ನೀಡುವ ಲಕ್ಷಣಗಳು : ಈ ರೋಗಲಕ್ಷಣಗಳನ್ನು ನಿರ್ಲಕ್ಷಿಸಬೇಡಿ!
- ಪ್ರಗ್ನೆಂಟ್ ಆದಾಗ ಕೇಸರಿ ಹಾಲು ಕುಡಿಯುವುದರಿಂದ ಮಗು ಬೆಳ್ಳಗೆ ಹುಟ್ಟುತ್ತಾ.? ಆ ಸತ್ಯ ಹೇಳೇಬಿಟ್ರು ಡಾಕ್ಟರ್
- ಪತ್ನಿ ತುಂಬು ಗರ್ಭಿಣಿ; ಮದುವೆಯಾಗಿ ವರ್ಷ ಕಳೆಯೋ ಮುನ್ನವೇ ಲೈನ್ ಮ್ಯಾನ್ ದುರಂತ ಅಂತ್ಯ
- ಕಲಬುರಗಿಯಲ್ಲಿ ಘೋರ ದುರಂತ : ರಥದ ಚಕ್ರಕ್ಕೆ ಸಿಲುಕಿ ಮಹಿಳೆಯ ಎರಡು ಕಾಲುಗಳು ಕಟ್.!
- ಹಾಸ್ಟೆಲ್ನ ವಾರ್ಡನ್ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್: ಗಾಯಗೊಂಡಿದ್ದ ಓರ್ವ ಬಾಲಕ ಸಾವು
- ಕೇವಲ 10 ರೂಪಾಯಿಯ ಈ ವಸ್ತುವಿನಿಂದ ‘ಮೊಣಕಾಲು’ ನೋವಿಗೆ ಸಿಗಲಿದೆ ಮುಕ್ತಿ !
- ಗಂಡನಿಗೆ ಕೈಕೊಟ್ಟು ಮುಸ್ಲಿಂ ವ್ಯಕ್ತಿ ಹಿಂದೆ ಹೋಗಿದ್ದ ಶ್ರೀದೇವಿ ಬೀದಿಪಾಲು, ನ್ಯಾಯಕ್ಕಾಗಿ ಅಲೆದಾಟ
- Horoscope Today : 09 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 08 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಬಳ್ಳಾರಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಯ ಹುಚ್ಚಾಟ: ಓರ್ವ ವಿದ್ಯಾರ್ಥಿ ಸಾವು, ವಾರ್ಡನ್ ಸೇರಿ 7 ಜನರಿಗೆ ಗಾಯ
- ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು! ಕೇಂದ್ರ ಸರ್ಕಾರ ಪ್ರಮುಖ ಘೋಷಣೆ!
- ಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನ ಹೊಲಕ್ಕೆ ಕರೆದೊಯ್ದು ಬಲತ್ಕಾರ, ಕಾಮುಕನ ವಿರುದ್ದ FIR
- ದೇಶದ ಜನತೆಗೆ ಬಿಗ್ ಶಾಕ್: ಗೃಹಬಳಕೆ ಗ್ಯಾಸ್ ಸಿಲಿಂಡರ್ 60 ರೂ., ವಾಣಿಜ್ಯ ಸಿಲಿಂಡರ್ 115 ರೂ.ಗಳಷ್ಟು ಹೆಚ್ಚಳ
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!


























