ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ಹಿಂದೂ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದಿರುವ ಘಟನೆ ಬಾಂಗ್ಲಾದೇಶದ ಮೈಮೆನ್ ಸಿಂಗ್ ನ ಭಲುಕಾದಲ್ಲಿ ನಡೆದಿದೆ. ಭಾಲುಕಾ ಉಪಜಿಲ್ಲೆಯ ಸ್ಕ್ವೇರ್ ಮಾಸ್ಟರ್ ಬಾರಿ ದುಬಾಲಿಯಾ ಪಾರಾ ಪ್ರದೇಶದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ
ಆತನನ್ನು ಹೊಡೆದ ನಂತರ, ದಾಳಿಕೋರರು ಯುವಕನ ದೇಹವನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದರು ಎಂದು ಭಾಲುಕಾ ಪೊಲೀಸ್ ಠಾಣೆಯ ಕರ್ತವ್ಯ ಅಧಿಕಾರಿ ರಿಪ್ಪನ್ ಮಿಯಾ ಬಿಬಿಸಿ ಬಾಂಗ್ಲಾಗೆ ತಿಳಿಸಿದ್ದಾರೆ.
ಮೃತರನ್ನು ದೀಪು ಚಂದ್ರ ದಾಸ್ ಎಂದು ಪೊಲೀಸರು ಗುರುತಿಸಿದ್ದಾರೆ. ಅವರು ಸ್ಥಳೀಯ ಉಡುಪು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಈ ಪ್ರದೇಶದಲ್ಲಿ ಬಾಡಿಗೆದಾರರಾಗಿ ವಾಸಿಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ತಿಳಿಸಿದ್ದಾರೆ. “ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಆಕ್ರೋಶಗೊಂಡ ಜನಸಮೂಹವು ಪ್ರವಾದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿ ಆತನನ್ನು ಹಿಡಿದು ಹೊಡೆದು ಕೊಂದಿತು. ನಂತರ ಅವರು ಶವಕ್ಕೆ ಬೆಂಕಿ ಹಚ್ಚಿದರು” ಎಂದು ಕರ್ತವ್ಯ ಅಧಿಕಾರಿ ಮಿಯಾ ಬಿಬಿಸಿ ಬಾಂಗ್ಲಾಗೆ ತಿಳಿಸಿದ್ದಾರೆ.
ಮಾಹಿತಿ ಪಡೆದ ನಂತರ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ದಾಸ್ ಅವರ ಶವವನ್ನು ಮೈಮೆನ್ ಸಿಂಗ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.
‘ನಾವು ಅವರ ಸಂಬಂಧಿಕರನ್ನು ಹುಡುಕುತ್ತಿದ್ದೇವೆ. ಅವರು ಮುಂದೆ ಬಂದು ಪ್ರಕರಣ ದಾಖಲಿಸಿದರೆ, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ಮಿಯಾ ಹೇಳಿದರು.
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನನ್ನು ಥಳಿಸಿ ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಕರ್ಮಿಗಳು
WhatsApp Group
Join Now