Petrol : ನಮಸ್ಕಾರ ಸ್ನೇಹಿತರೇ, ಇಂದು ನಮ್ಮ ದೇಶದಲ್ಲಿ ಪೆಟ್ರೋಲ್ ವಾಹನಗಳ ಬಳಕೆಯೇ ಹೆಚ್ಚು. ಎಲೆಕ್ಟ್ರಿಕ್ ವಾಹನಗಳ ಆವಿಷ್ಕಾರಗಳು ಈಗಾಗಲೇ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದೇ ಆದರೂ ಪೆಟ್ರೋಲ್ ಗಾಡಿಗಳ ಚಾಲನೆಯೇ ಅಧಿಕ ಸಂಖ್ಯೆಯಲ್ಲಿದೆ. ಇಂತಹ ವಾಹನಗಳ ಸಂಚಾರ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಅದರಲ್ಲೂ ಇಂಧನ ಬೆಲೆ ಗಗನಕ್ಕೇರಿದ್ದು, ವಾಹನ ಸವಾರರ ಅಳಲು ಕೂಡ ಮುಗಿಲು ಮುಟ್ಟಿದೆ. ಸದ್ಯ ಬೆಲೆ ಇಳಿಕೆ ದೂರದ ಮಾತಾಗಿದೆ. ಹೀಗಿರುವಾಗ ಪೆಟ್ರೋಲ್ (Petrol) ಬೈಕ್ ಮತ್ತು ಕಾರುಗಳನ್ನು ಚಲಾಯಿಸುವ ಬಹುತೇಕರು, ತಮ್ಮ ವಾಹನದ ಟ್ಯಾಂಕ್ ಖಾಲಿ ಆಗುವವರೆಗೂ ಪೆಟ್ರೋಲ್ ಹಾಕಿಸುವ ಆಲೋಚನೆ ಮಾಡುವುದಿಲ್ಲ. ಇದೇ ರೀತಿ ಒಂದಷ್ಟು ತಪ್ಪುಗಳನ್ನು ಮಾಡುವ ಸವಾರರು ಈ ಮಾಹಿತಿಯನ್ನು ತಪ್ಪದೇ ತಿಳಿಯುವುದು ಒಳಿತು.
ಎಷ್ಟು ಪ್ರಮಾಣದಲ್ಲಿ ಪೆಟ್ಟು ಬೀಳಬಹುದು.?
ಪೆಟ್ರೋಲ್ ಇಲ್ಲ ಎಂದರೆ ನಮ್ಮ ವಾಹನಗಳು ಒಂದು ಹೆಜ್ಜೆಯೂ ಮುಂದೆ ಹೋಗಲ್ಲ. ಇದು ಗಾಡಿ ಓಡಿಸುವ ಪ್ರತಿಯೊಬ್ಬರಿಗೂ ಗೊತ್ತಿರುವ ಸಾಮಾನ್ಯ ಸಂಗತಿಯೇ. ಪೆಟ್ರೋಲ್ ಹಾಕಿಸಿಕೊಳ್ಳುವಾಗ ನಾವು ಎಷ್ಟು ಜವಾಬ್ದಾರಿ ವಹಿಸಬೇಕು? ಏನು ತಪ್ಪು ಮಾಡಿದರೆ, ವಾಹನದ ಇಂಜಿನ್ಗೆ ಎಷ್ಟು ಪ್ರಮಾಣದಲ್ಲಿ ಪೆಟ್ಟು ಬೀಳಬಹುದು? ಇದರಿಂದ ವಾಹನದ ಬಾಳಿಕೆಗೆ ಯಾವ ರೀತಿಯ ಹೊಡೆತ ಎದುರಾಗಬಹುದು ಎಂಬ ಸೂಕ್ಷ್ಮತೆ ವಾಹನ ಬಳಕೆದಾರರಿಗೆ ತಿಳಿದರಲೇ ಬೇಕಾದ ವಿಷಯ. ಆದರೆ, ಇಂತಹ ವಿಚಾರಗಳನ್ನೇ ಮರೆಯುವ ವಾಹನ ಮಾಲೀಕರು, ಪದೇ ಪದೇ ಈ ತಪ್ಪುಗಳನ್ನು ಮಾಡಿ, ತಮ್ಮ ದುಬಾರಿ ವಾಹನಗಳ ಆಯಾಸ್ಸನ್ನು ತಾವೇ ತಮ್ಮ ಕೈಯಾರೆ ಕಡಿತಗೊಳಿಸುತ್ತಾರೆ.
ಈ ತಪ್ಪುಗಳು ಖಂಡಿತವಾಗಿಯೂ ನಿಮ್ಮ ಕಾರು ಮತ್ತು ಬೈಕ್ ಇಂಜಿನ್ ಮೇಲೆ ಪರಿಣಾಮ ಬೀರುತ್ತವೆ. ಎಷ್ಟೋ ಜನ ಪೆಟ್ರೋಲ್ ವಿಚಾರದಲ್ಲಿ ತಮಗೆ ಅರಿವಿಲ್ಲದೇ ಬಹಳ ನಿರ್ಲಕ್ಷ್ಯ ವಹಿಸುತ್ತಾರೆ. ಕಾರಿನಲ್ಲಿ ಪೆಟ್ರೋಲ್ ಖಾಲಿಯಾಗಿದೆಯೇ? ನೀವು ಪೆಟ್ರೋಲ್ ಬಂಕ್ಗೆ ಹೋಗಿದ್ದೀರಾ? ಪೆಟ್ರೋಲ್ ಹಾಕಿಸುವ ಸೂಕ್ತ ಕ್ರಮ ಹೇಗೆ? ನಾವು ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು? ಎಂಬುದರ ಬಗ್ಗೆ ಅದರ ಕೆಳಭಾಗಕ್ಕೆ ಹೋಗೋಣ.
ಪೆಟ್ರೋಲ್-ಡೀಸೆಲ್ ಟ್ಯಾಂಕ್ ಕೊಳಕು
ಇಂಜಿನ್ ವಾಹನದ ಹೃದಯವಿದ್ದಂತೆ. ಆದ್ದರಿಂದ ಇದನ್ನು ಸರಿಯಾಗಿ ನೋಡಿಕೊಳ್ಳಬೇಕು. ನಮ್ಮಲ್ಲಿ ಹೆಚ್ಚಿನವರು ಪೆಟ್ರೋಲ್ ಟ್ಯಾಂಕ್ ಸಂಪೂರ್ಣವಾಗಿ ಖಾಲಿಯಾಗುವವರೆಗೆ ಪೆಟ್ರೋಲ್ ಹಾಕಿಸುವ ಮನಸ್ಸು ಮಾಡುವುದೇ ಇಲ್ಲ. ಆದರೆ ಪೆಟ್ರೋಲ್ ಟ್ಯಾಂಕ್ ಖಾಲಿ ಇಡುವುದು ತುಂಬಾ ಅಪಾಯಕಾರಿ. ಕಾರಣ, ಪೆಟ್ರೋಲ್-ಡೀಸೆಲ್ ಟ್ಯಾಂಕ್ ಕೊಳಕು. ಪೆಟ್ರೋಲ್ ಖಾಲಿಯಾದ ನಂತರ, ಎಲ್ಲಾ ತ್ಯಾಜ್ಯ ವಸ್ತುಗಳು ವಾಹನಕ್ಕೆ ಪೆಟ್ರೋಲ್ ಪೂರೈಸುವ ಪಂಪ್ ಮೂಲಕ ಇಂಜಿನ್ ಪಾಲಾಗುತ್ತವೆ. ಆ ತ್ಯಾಜ್ಯವು ಫಿಲ್ಟರ್ ಅನ್ನು ಮುಚ್ಚುತ್ತದೆ. ಇದರಿಂದ ವಾಹನದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚು. ಕೆಲವೊಮ್ಮೆ ಈ ಕಾರಣದಿಂದಾಗಿ ವಾಹನವನ್ನು ಸರಿಯಾಗಿ ನಿಯಂತ್ರಿಸಲು ಆಗುವುದಿಲ್ಲ.
ಕಳಪೆ ಗುಣಮಟ್ಟದ ಇಂಧನ
ಒಮ್ಮೊಮ್ಮೆ ಇದರಿಂದ ಅಪಘಾತ ಸಂಭವವು ಅಧಿಕ. ಹಾಗಾಗಿ ಖಂಡಿತ ಈ ಬಗ್ಗೆ ವಾಹನ ಸವಾರರು ಜಾಗರೂಕರಾಗಿರಿ. ಯಾವತ್ತೂ ಈ ರೀತಿ ಪೆಟ್ರೋಲ್ ಖಾಲಿಯಾಗುವವರೆಗೂ ಕಾದು, ತುಂಬಿಸಬೇಡಿ. ಇದು ಅತ್ಯಂತ ಮುಖ್ಯವಾದ ಸಂಗತಿ. ಅದೇ ಇಂಧನ ಗುಣಮಟ್ಟ. ಕೆಲವರು ಪೆಟ್ರೋಲ್ ಗುಣಮಟ್ಟದಿಂದ ದೂರ ಉಳಿದಿರುವ ಬಂಕ್ಗಳಿಂದ ಪೆಟ್ರೋಲ್ ಹಾಕಿಸಿಕೊಳ್ಳುತ್ತಾರೆ. ಆದರೆ ಅಂತಹ ಕಳಪೆ ಗುಣಮಟ್ಟದ ಪೆಟ್ರೋಲ್ ವಾಹನಕ್ಕೆ ಒಳ್ಳೆಯದಲ್ಲ. ಪೆಟ್ರೋಲ್ ಉತ್ತಮ ಗುಣಮಟ್ಟದಲ್ಲಿಲ್ಲದಿದ್ದರೆ ಅದು ಇಂಜಿನ್ನಲ್ಲಿ ಸಂಗ್ರಹವಾಗುತ್ತದೆ. ಆಗ ವಾಹನದ ಕಾರ್ಯಕ್ಷಮತೆ ಉತ್ತಮವಾಗಿರುವುದಿಲ್ಲ. ಹಾಗಾಗಿ ಯಾವುದೇ ಸಮಯದಲ್ಲಿ ವಾಹನಕ್ಕೆ ಗುಣಮಟ್ಟದ ಪೆಟ್ರೋಲ್ ಬಳಸುವುದು ಒಳಿತು.
ಇಂಜಿನ್ ಕಾರ್ಯಕ್ಷಮತೆ ಕುಸಿಯುತ್ತದೆ
ಪೆಟ್ರೋಲ್ ಖಾಲಿಯಾದ ನಂತರ, ಇಂಧನ ಟ್ಯಾಂಕ್ನ ಕ್ಯಾಪ್ ಅನ್ನು ಸರಿಯಾಗಿ ಮುಚ್ಚಲಾಗಿದೆಯೇ? ಎಂಬುದನ್ನು ಎಚ್ಚರಿಕೆಯಿಂದ ಪರಿಶೀಲಿಸಬೇಕು. ಇಲ್ಲದಿದ್ದರೆ ಗಾಳಿ ಮತ್ತು ತೇವಾಂಶವು ಟ್ಯಾಂಕಿನೊಳಗೆ ಹೋಗುತ್ತದೆ. ಈ ಕಾರಣದಿಂದಾಗಿ, ನೀರಿನ ಆವಿಯು ಪೆಟ್ರೋಲ್ನೊಂದಿಗೆ ಮಿಕ್ಸ್ ಆಗಿ ಪೆಟ್ರೋಲ್ ಗುಣಮಟ್ಟವನ್ನು ಕುಸಿಯುವಂತೆ ಮಾಡುತ್ತದೆ. ಇದು ವಾಹನದ ಎಂಜಿನ್ ಕಾರ್ಯಕ್ಷಮತೆಯನ್ನು ಕಡಿಮೆ ಮಾಡುತ್ತದೆ. ಕೆಲವರು ಪೆಟ್ರೋಲ್ ಟ್ಯಾಂಕ್ ಸದಾ ತುಂಬಿರಲಿ ಎಂದು ಪಂಪ್ನಲ್ಲಿ ಪೆಟ್ರೋಲ್ ತುಂಬಿಸುತ್ತಲೇ ಇರುತ್ತಾರೆ. ಇದು ಅತಿಯಾದ ಭರ್ತಿಗೆ ಕಾರಣವಾಗುತ್ತದೆ. ಹೀಗೆ ಮಾಡುವುದರಿಂದ ಇಂಧನ ಪೈಪ್ನಲ್ಲಿ ಸೋರಿಕೆಯಾಗುವ ಅಪಾಯವಿರಲಿದೆ. ಇದರಿಂದ ಇಂಜಿನ್ ಹಾಳಾಗುತ್ತದೆ ಎನ್ನುತ್ತಾರೆ ಟೆಕ್ ತಜ್ಞರು.
ಮೈಲೇಜ್ ಮತ್ತು ಇಂಜಿನ್
ಇನ್ನು ಕೆಲವರು ಪೆಟ್ರೋಲ್ ತುಂಬಿಸುವಾಗ ವಾಹನದ ಇಂಜಿನ್ ಅನ್ನು ಆನ್ನಲ್ಲಿ ಇಟ್ಟುಕೊಳ್ಳುತ್ತಾರೆ. ಈ ರೀತಿ ಮಾಡುವುದು ತುಂಬಾ ಅಪಾಯಕಾರಿ. ಇದು ಮೈಲೇಜ್ ಮತ್ತು ಇಂಜಿನ್ ಕಾರ್ಯಕ್ಷಮತೆಯನ್ನು ಕಡಿಮೆ ಮಾಡುತ್ತದೆ. ಅಲ್ಲದೇ ಕೆಲವೊಮ್ಮೆ ಬೆಂಕಿ ಅವಘಡ ಸಂಭವಿಸುವ ಅಪಾಯವೂ ಇರುತ್ತದೆ. ಆದ್ದರಿಂದ ಎಂದಿಗೂ ಇಂಜಿನ್ ಅನ್ನು ಆನ್ನಲ್ಲಿಟ್ಟು, ಪೆಟ್ರೋಲ್ ಹಾಕಿಸಬೇಡಿ. ನಿಮ್ಮ ವಾಹನಕ್ಕೆ ಪೆಟ್ರೋಲ್ ಅಥವಾ ಡೀಸೆಲ್ ತುಂಬಿಸುವಾಗ ಈ ವಿಷಯಗಳನ್ನು ತಪ್ಪದೆ ನೆನಪಿನಲ್ಲಿಡಿ.
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- 12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
- ‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’
- ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್
- ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
- Horoscope Today : ಇಂದು ಈ ರಾಶಿಯವರಿಂದ ನಿಮ್ಮ ಮೇಲೆ ತಪ್ಪು ಕಲ್ಪನೆ ಆರೋಪಗಳು ಬರಲಿವೆ
- ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ನಕಲಿ ಕ್ಲಿನಿಕ್ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು
- ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್ : ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!
- ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು
- ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!
- ಗೋ ಮಾತೆಗೆ ಚಿಕನ್ ಮೋಮಸ್ ತಿನ್ನಿಸಿದ ಯುವಕ; ಹಲ್ಲೆ ಮಾಡಿ, ಮೆರವಣಿಗೆ ಮಾಡಿಸಿದ ಬಜರಂಗ ದಳ!
- ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ : ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ
- ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್
- ನನ್ನ ಜೊತೆಗೂ ಬಾ : ಗೆಳೆಯನ ಗರ್ಲ್ಫ್ರೆಂಡ್ಗೆ ಸಂದೇಶ : ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
- ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು ; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
- ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
- ರಾಜಧಾನಿಯಲ್ಲಿ ಹೆಚ್ಚಾಯ್ತು ರೋಡ್ ರೇಜ್ – ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕ್ಯಾಬ್ ಡ್ರೈವರ್!
- ದಿನಭವಿಷ್ಯ : ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಸುದ್ದಿಯಿಂದ ಮನಸ್ಸಿಗೆ ನೋವುಂಟಾಗಲಿದೆ.
- ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್ಗೆ ಚಪ್ಪಲಿ ಏಟು!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ : ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
- ‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ
- ಕುಡಿದ ಮತ್ತಿನಲ್ಲಿ ‘ಬೈಕ್ ಟ್ಯಾಕ್ಸಿ’ ಹತ್ತಿದ ಯುವತಿ ರಂಪಾಟ : ವಿಡಿಯೋ ವೈರಲ್
- ಕೆಕೆಆರ್ಟಿಸಿ ಬಸ್ ಪಲ್ಟಿ : ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ : ಕಂಡಕ್ಟರ್ ಸ್ಥಿತಿ ಗಂಭೀರ.!
- ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್
- ಮೋದಿ ಪ್ರಧಾನಿಯಾಗಿದ್ದಷ್ಟು ಅವಧಿ ನೆಹರು ಸ್ವಾತಂತ್ರ್ಯಕ್ಕಾಗಿ ಜೈಲಿನಲ್ಲಿದ್ದರು ಎಂದು ಕಿಡಿ ಕಾರಿದ ಪ್ರಿಯಾಂಕಾ ಗಾಂಧಿ
- ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್ : ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ
- ಅಮ್ಮ ನನ್ನನ್ನು ಕ್ಷಮಿಸು : ಇಷ್ಟವಿಲ್ಲದಿದ್ದರೂ ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ : ಯುವತಿ ಆತ್ಮಹತ್ಯೆ!
- ಗಂಡ ವಿದೇಶದಲ್ಲಿ, ಪತ್ನಿ ಪ್ರಿಯಕರನ ತೋಳಿನಲ್ಲಿ, ಇಬ್ಬರಿಗೂ ಮದುವೆ ಮಾಡಿಸಿದ ಅತ್ತೆ-ಮಾವ






























