ಸಿದ್ದರಾಮಯ್ಯ ನೆಗೆದುಬಿದ್ದಿದ್ದಾರೆ – ಸಿಎಂ ವಿರುದ್ಧ ನಾಲಿಗೆ ಹರಿಬಿಟ್ಟ ಮಾಜಿ ಸಚಿವ ಈಶ್ವರಪ್ಪ..!

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ (KS Eshwarappa) ನಾಲಿಗೆ ಹರಿಬಿಟ್ಟಿದ್ದಾರೆ. WhatsApp Group Join Now ಕೊಪ್ಪಳದಲ್ಲಿ ಇಂದು ಮಾಧ್ಯಮಗಳು, ಸಿದ್ದರಾಮಯ್ಯ ಸ್ಥಾನ ಭದ್ರ ಇದೆಯಾ..? ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ನೆಗೆದುಬಿದ್ದು ಹೋಗುತ್ತಿದ್ದಾರೆ. ಇನ್ನು ಬೇರೆ ಪದ ಹೇಳಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿನ್ನೆ ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ್ದ ಈಶ್ವರಪ್ಪ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ … Read more

ಆಯತಪ್ಪಿ ಬಿದ್ದ ಕಾರ್ಮಿಕ ಸಾ*ವು: ಸಿಮೆಂಟ್‌ ಕಾರ್ಖಾನೆ ಮೇಲೆ ಕಲ್ಲು ತೂರಾಟ

ಬೆಳಗಾವಿ : ಸಿಮೆಂಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರು ಆಯತಪ್ಪಿ ಬಿದ್ದ ಪರಿಣಾಮ ಓರ್ವ ಕಾರ್ಮಿಕ (Labor) ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ. WhatsApp Group Join Now ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದಲ್ಲಿ‌ ಈ ದುರ್ಘಟನೆ ನಡೆದಿದೆ. ರಮೇಶ್‌ ಮೃತ ದುರ್ದೈವಿಯಾಗಿದ್ದು, ನಂದಕುಮಾರ್‌ ಹಾಗೂ ಮಹೇಂದ್ರ ಗಂಭೀರ ಗಾಯಗೊಂಡವರಾಗಿದ್ದಾರೆ. ಈ ಮೂವರು ಕಾರ್ಮಿಕರು ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ಕೆಲಸ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕೂಡಲೇ … Read more

ಬಟ್ಟೆ ಒಣ ಹಾಕುವ ಹಗ್ಗದಿಂದ ಕುತ್ತಿಗೆ ಬಿಗಿದು ಪತ್ನಿಯ ಹತ್ಯೆ ಮಾಡಿದ ವೃದ್ಧ.!

ಬೆಂಗಳೂರಿನಲ್ಲಿ ವೃದ್ಧ ದಂಪತಿಗಳ ನಡುವಿನ ಜಗಳ ವಿಕೋಪಕ್ಕೆ ತಿರುಗಿ ದುರಂತ ಸಾವಿನಲ್ಲಿ ಅಂತ್ಯವಾಗಿರುವ ಆಘಾತಕಾರಿ ಘಟನೆಯೊಂದು ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ವೆಂಕಟೇಶನ್ (65) ಎಂಬ ನಿವೃತ್ತ ಚಾಲಕ ತನ್ನ ಪತ್ನಿ ಬೇಬಿ(60) ಕೊಲೆ ಮಾಡಿ, ತಾನೂ ನೇಣಿಗೆ ಶರಣಾಗಿದ್ದಾನೆ. ವೆಂಕಟೇಶನ್ BMTC ಡ್ರೈವರ್ ಆಗಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಘಟನೆಗೆ ಕಾರಣವೇನು? ಹತ್ಯೆಗೀಡಾದ ವೃದ್ಧೆ ಬೇಬಿಗೆ ಸ್ಟ್ರೋಕ್ ಹೊಡೆದಿದ್ದ ಕಾರಣ ಹಾಸಿಗೆ ಹಿಡಿದು (ಬೆಡ್ ರಿಡನ್) ಮಲಗಿದ್ದರು ಎನ್ನಲಾಗಿದೆ. … Read more

ಮುಸ್ಲಿಮರು ಜಿಹಾದ್ ಶುರು ಮಾಡಬೇಕಾಗುತ್ತೆ – ಅಧಿವೇಶನದಲ್ಲಿ ಸಮಾಜವಾದಿ ಪಕ್ಷದ ಸಂಸದ ವಾರ್ನಿಂಗ್‌!

ಸಮಾಜವಾದಿ ಪಕ್ಷದ ಸಂಸದ ಮೊಹಿಬ್ಬುಲ್ಲಾ ನದ್ವಿ ಸಂಸತ್ತಿನಲ್ಲಿ “ಮುಸ್ಲಿಮರು ಜಿಹಾದ್(jihad) ಮಾಡಬೇಕಾಗಬಹುದು. ಎಷ್ಟು ಸಮಯದವರೆಗೆ ಮುಸ್ಲಿಮರನ್ನು ದಮನಿಸಲಾಗುತ್ತದೆ?” ಎಂದು ಹೇಳುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದರು. WhatsApp Group Join Now ಲೋಕಸಭೆಯಲ್ಲಿ ಮಾತನಾಡಿದ ನದ್ವಿ, ಭಾರತದಲ್ಲಿ ಮುಸ್ಲಿಮರು ಹೆಚ್ಚುತ್ತಿರುವ ಅಂಚಿನಲ್ಲಿರುವಿಕೆಯನ್ನು ಎದುರಿಸುತ್ತಿದ್ದಾರೆ ಮತ್ತು ಅವರ ಸಾಂವಿಧಾನಿಕ ಸ್ವಾತಂತ್ರ್ಯಗಳನ್ನು ಮೊಟಕುಗೊಳಿಸಲಾಗುತ್ತಿದೆ ಎಂದು ವಾದಿಸಿದರು. ಇವರ ಮಾತು ಸಂವಿಧಾನದ ಮೇಲಿನ ನೇರ ದಾಳಿ ಎಂದು ಬಿಜೆಪಿಯ(BJP) ಶೆಹಜಾದ್ ಪೂನವಾಲ್ಲಾ ಹೇಳಿದ್ದಾರೆ. ಭಾರತೀಯ ಸಂವಿಧಾನದ 25 ಮತ್ತು 26 ನೇ … Read more

ಬೆಳಗ್ಗೆ ಇಡ್ಲಿ ಮಧ್ಯಾಹ್ನ ನಾಟಿ ಕೋಳಿ ರಾತ್ರಿ ಬೆಳ್ಳುಳ್ಳಿ ಕಬಾಬ್ : ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕೆಂಡಾಮಂಡಲ

ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಕೇವಲ ಉಪಹಾರ ಇಲಾಖೆ ಮಾತ್ರ ಸಕ್ರಿಯವಾಗಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಬ್ರೇಕ್‌ಫಾಸ್ಟ್ ಮತ್ತು ಡಿನ್ನರ್ ಮೀಟಿಂಗ್‌ಗಳನ್ನು ವ್ಯಂಗ್ಯಭರಿತವಾಗಿ ಟೀಕಿಸಿದರು. WhatsApp Group Join Now ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಆಂತರಿಕ ರಾಜಕೀಯ ಮತ್ತು … Read more

ಇಷ್ಟವಾದ ವಾಚ್‌ ಧರಿಸುವ ಹಕ್ಕು ನಮಗಿದೆ : ನನ್ನ Watch ಬೆಲೆ 24 ಲಕ್ಷ, ಆಸ್ಟ್ರೇಲಿಯಾದಲ್ಲಿ ಖರೀದಿಸಿದ್ದೆ – ಡಿಕೆಶಿ

ನನಗೆ ಮತ್ತು ಮುಖ್ಯಮಂತ್ರಿಗಳಿಗಿಬ್ಬರಿಗೂ ನಮಗಿಷ್ಟವಾದ ವಾಚ್‌ ಧರಿಸುವ ಹಕ್ಕು ಇದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. WhatsApp Group Join Now ಒಂದು ದಿನದ ಹಿಂದಷ್ಟೇ ಸಿಎಂ ಮತ್ತು ತಾವು ದುಬಾರಿ ವಾಚ್‌ ಧರಿಸಿರುವ ಬಗ್ಗೆ ಬಿಜೆಪಿ ಜೆಡಿಎಸ್‌ ಟೀಕೆ ಮಾಡುತ್ತಿದೆ ಎಂದಾಗ, ನಾನು ಈ ನನ್ನ ವಾಚ್‌ನ್ನು 7 ವರ್ಷಗಳ ಹಿಂದೆ ಆಸ್ಟ್ರೇಲಿಯಾದಲ್ಲಿ ಖರೀದಿಸಿದ್ದೆ. ನಾನು ಇದನ್ನು ನನ್ನ ಕ್ರೆಡಿಟ್‌ ಕಾರ್ಡ್ ಮೂಲಕ 24 ಲಕ್ಷ ರೂ. ಕೊಟ್ಟು ಖರೀದಿಸಿದ್ದೇನೆ. ಬೇಕಿದ್ದರೆ ನನ್ನ … Read more

ಸಿಎಂ ಕುರ್ಚಿ ಖಾಲಿ ಇಲ್ಲ : ಸತೀಶ್‌ ಜಾರಕಿಹೊಳಿ ಹೇಳಿಕೆಗೆ ಎಂ.ಬಿ.ಪಾಟೀಲ್‌ ಕಿಡಿ ತಿರುಗೇಟು

ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವುದು ಪಕ್ಕಾ ಎಂದು ಆಪ್ತ ಬಣದಲ್ಲಿರುವ ಸತೀಶ್‌ ಜಾರಕಿಹೊಳಿ ಅವರೇ ಹೇಳಿದ ಹೊರತಾಗಿಯೂ, ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಅಪ್ಪಸ್ವರ ತೆಗೆದಿದ್ದಾರೆ. WhatsApp Group Join Now ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸತೀಶ್‌ ಜಾರಕಿಹೊಳಿ ಹೇಳಿರಬಹುದು. ಆದರೆ ಯಾವಾಗ ಎಂಬ ಪ್ರಶ್ನೆ ಉದ್ಭವಿಸಿದೆ ಎಂದು ವ್ಯತಿರಿಕ್ತವಾಗಿ ಮಾತನಾಡಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರು ಎರಡು ಬಾರಿ ಉಪಾಹಾರಕೂಟ ನಡೆಸಿದ್ದಾರೆ. ಅಲ್ಲಿಗೆ … Read more

ಲಾರೆನ್ಸ್ ಬಿಷ್ಣೋಯ್ ಪೋಟೋ ಹಿಡಿದು ಅಂಜನಾದ್ರಿಗೆ ಬಂದ ಬೆಳಗಾವಿ ಮೂಲದ ಹನುಮ ಭಕ್ತ

ವಿಶ್ವ ಪ್ರಸಿದ್ದ ಕೊಪ್ಪಳ (Koppala) ಜಿಲ್ಲೆಯ ಹನುಮ ‌ಜನ್ಮಸ್ಥಳ ಅಂಜನಾದ್ರಿಯಲ್ಲಿ ( Anjanadri Hill) ಹನುಮ ಮಾಲೆ ವಿಸರ್ಜನೆ ಪ್ರಯುಕ್ತ ಭಕ್ತಸ್ತೋಮವೇ ಹರಿದು ಬಂದಿದೆ.‌ ಸಹಸ್ರಾರು ಹನುಮ ಮಾಲಾಧಾರಿಗಳು ಸರತಿ ರಾಮ ಹನುನ ನಾಮ ಸ್ಮರಣೆ ಮಾಡುತ್ತಲೇ ಮಾಲೆ ವಿಸರ್ಜನೆ ಮಾಡಿದರು. ಇದರ ಮಧ್ಯೆ ಭಕ್ತನೋರ್ವ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯಿ (Lawrence Bishnoi) ಫೋಟೋ ಹಿಡಿದು ಬಂದು ಗಮನ ಸೆಳೆದಿದ್ದಾನೆ. WhatsApp Group Join Now ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕೋಳಿವಾಡ ನಿವಾಸಿಯಾಗಿರುವ ರಾಜು ಎಂಬ … Read more

3 ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ : ಇದು ಕೊಲೆ ಎಂದ ಮೃತಳ ಕುಟುಂಬಸ್ಥರು!

ಸರಿಯಾಗಿ ಬುಧವಾರ ಆಕೆ ಮದುವೆಯಾಗಿ ಮೂರು ತಿಂಗಳಾಗಿತ್ತು. ಇಬ್ಬರೂ ಅಕ್ಕಪಕ್ಕದ ಏರಿಯಾದವರು. ತುಂಬಾ ವರ್ಷಗಳಿಂದ ಪ್ರೀತಿ ಮಾಡಿದ್ದರು. ಆದರೆ, ಮದುವೆಯಾಗಿ ಮೂರು ತಿಂಗಳಿಗೆ ಸಂಸಾರ ಸರಿ ಬರದ ಕಾರಣಕ್ಕೆ ನವವಿವಾಹಿತೆ ಆ*ತ್ಮಹತ್ಯೆ ಮಾಡಿಕೊಂಡಿದ್ದಾಳೆ. WhatsApp Group Join Now ಮಹಿಳೆಯ ಕುಟುಂಬಸ್ಥರು, ಹುಡುಗನ ಕುಟುಂಬದವರ ಕಿರುಕುಳದಿಂದಾಗಿಯೇ ಆಕೆ ಸಾವು ಕಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ತುಂಬಾ ವರ್ಷಗಳ ಕಾಲ ಪ್ರೀತಿ ಮಾಡಿ ಮೂರು ತಿಂಗಳ ಹಿಂದೆ 23 ವರ್ಷದ ಅಮೂಲ್ಯ 30 ವರ್ಷದ ಅಭಿಷೇಕ್‌ ಎನ್ನುವವರನ್ನು ಮದುವೆ ಆಗಿದ್ದರು. … Read more

ಕಟ್ಟಡ ನಿರ್ಮಾಣ ಮಾಡಲು ಬಿಡದ ಪಕ್ಕದ ಮನೆಯವರು : ಕನಸಿನ ಮನೆಯಲ್ಲೇ ಟೆಕ್ಕಿ ಆತ್ಮಹತ್ಯೆ

ವೈಟ್‌ಫೀಲ್ಡ್‌ನಲ್ಲಿ ತಾನೇ ಕಟ್ಟಿಸುತ್ತಿದ್ದ ಮನೆಯಲ್ಲಿ ಟೆಕ್ಕಿ ಮುರಳಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. WhatsApp Group Join Now ಮುರಳಿ ಅವರು ಉಷಾ ನಂಬಿಯಾರ್ ಎಂಬುವರ ಜಾಗವನ್ನು ಖರೀದಿ ಮಾಡಿಕೊಂಡು ಮನೆ ನಿರ್ಮಿಸುತ್ತಿದ್ದರು. ಆದರೆ, ಕಟ್ಟಡದಲ್ಲಿ ನಿಯಮ ಮೀರಿ ಕೆಲಸ ನಡೆಸಲಾಗಿದೆ ಎಂಬ ಆರೋಪದ ಮೇಲೆ ಉಷಾ ನಂಬಿಯಾರ್ ಅವರು ಜಿಬಿಎಗೆ ದೂರು ನೀಡಿದ್ದು, ಇದರಿಂದ ಜಿಬಿಎ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದೇ ವೇಳೆ, ಜಿಬಿಎ ಅಧಿಕಾರಿಗಳೊಂದಿಗೆ ಸೇರಿ 20 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದಾರೆಂದು … Read more