ಮರಕ್ಕೆ ಬೊಲೆರೊ ವಾಹನ ಡಿಕ್ಕಿ; ಒಂದೇ ಗ್ರಾಮದ ನಾಲ್ವರು ಕಾರ್ಮಿಕರು ಸಾವು

ಮರಕ್ಕೆ ಬೊಲೆರೊ ವಾಹನ ಡಿಕ್ಕಿ (accident)ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ನಡೆದಿದೆ. ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಮೃತರು. WhatsApp Group Join Now ಇನ್ನುಳಿದ ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಕೆ ಲೋಡ್ ಇಳಿಸಿ ಕಾರ್ಮಿಕರು ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ದುರಂತದಲ್ಲಿ ಇಬ್ಬರು ಕಾರ್ಮಿಕರು … Read more

ಪ್ರಿಯಕರನ ಕರ್ಮಕಾಂಡ ಕಂಡು ಶಾಕ್ : ಪೊಲೀಸ್ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ

ಚಿಕ್ಕಬಳ್ಳಾಪುರ : ಪೊಲೀಸ್ ಠಾಣೆಯಲ್ಲಿ ಪ್ರಿಯಕರನ ಬಂಡವಾಳ ಬಯಲಾಗುತ್ತಿದ್ದಂತೆ ಆತ ಕಟ್ಟಿದ್ದ ತಾಳಿಯನ್ನೇ ಕಿತ್ತೆಸೆದು ಯುವತಿಯೋರ್ವಳು ಪೋಷಕರ ಜೊತೆಗೆ ಮರಳಿ ತೆರಳಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ ಪ್ರೇಮಿಯ ನವರಂಗಿ ಆಟಗಳೆಲ್ಲ ಆರಕ್ಷಕರ ಮುಂದೆಯೇ ಬಯಲಾಗಿದ್ದು, ಪ್ರಿಯಕರನ ನಡೆ ಕಂಡು ಯುವತಿ ಬೆಚ್ಚಿಬಿದ್ದಿದ್ದಾಳೆ. ಇವನ ಸಹವಾಸವೇ ಸಾಕು ಎಂದು ಕೈಮುಗಿದಿದ್ದಾಳೆ. WhatsApp Group Join Now ಘಟನೆ ಏನು.? ಚಿಕ್ಕಬಳ್ಳಾಪುರ ನಗರದ … Read more

ಇನ್‌ಸ್ಟಾಗ್ರಾಮ್ ಪ್ರೀತಿ, ಮದ್ವೆಯಾಗು ಎಂದಿದ್ದಕ್ಕೆ ಫಜೀತಿ.! ಪ್ರಿಯಕರನ ಮನೆಯಲ್ಲಿಯೇ ನೇಣಿಗೆ ಶರಣಾದ ಯುವತಿ

ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿ 6 ವರ್ಷಗಳ ಕಾಲ ಪ್ರೀತಿಸಿದರೂ, ಇಬ್ಬರೂ ಒಟ್ಟಾಗಿ 6 ದಿನವೂ ಇರಲು ಸಾಧ್ಯವಾಗಲಿಲ್ಲ. ಬೆಂಗಳೂರಿನಲ್ಲಿದ್ದ ಪ್ರೇಮಿ ರಾಘವೇಂದ್ರನ ಮನೆಗೆ ಹಾಸನದಿಂದ ಬಂದಿದ್ದ ಯುವತಿ ನಿಖಿತಾ, ಪ್ರೇಮಿಯ ಮನೆಯಲ್ಲಿಯೇ ಉಸಿರು ಚೆಲ್ಲಿದ್ದಾಳೆ. WhatsApp Group Join Now ಇನ್‌ಸ್ಟಾಗ್ರಾಮ್ ಮೂಲಕ ಪರಸ್ಪರ ಮೆಸೇಜ್ ಮಾಡಿಕೊಂಡು ಐದಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದ ಯುವಕ-ಯುವತಿ ನಾವಿಬ್ಬರೂ ಇದೀಗ ಮೇಜರ್ ಎಂದು ತೀರ್ಮಾನಿಸಿ ಮದುವೆ ಮಾಡಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಹೊಸ ವರ್ಷಕ್ಕೆ ನಮ್ಮನೆಗೆ ಬಾ ಎಂದು ಕರೆಸಿಕೊಂಡಿದ್ದ ಯುವಕನ ಮನೆಯಲ್ಲಿಯೇ … Read more

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ – ಕುಮಾರಸ್ವಾಮಿ ಜೇಬಲ್ಲೇ ಐಟಿ ಇಲಾಖೆ ಇದೆ ಅಲ್ವಾ, ತನಿಖೆ ಮಾಡಿಸಲಿ’ ಎಂದ ಡಿಸಿಎಂ ಡಿಕೆಶಿ

ಸಿದ್ದರಾಮಯ್ಯ ಅವರಿಗೆ ಒಳ್ಳೆಯದಾಗಲಿ, ಐ ವಿಶ್ ಹಿಮ್ ಆಲ್ ದ ಬೆಸ್ಟ್. ಗುಡ್ ಲಕ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. WhatsApp Group Join Now ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪೂರ್ಣಾವಧಿಗೆ ನಾನೇ ಸಿಎಂ ಆಗಿ ಮುಂದುವರಿಯುವ ವಿಶ್ವಾಸವಿದೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, “ಒಳ್ಳೆಯದು ಆಗಲಿ, ನಾನು ಅವರಿಗೆ ಶುಭ ಹಾರೈಸುತ್ತೇನೆ. ಶುಭವಾಗಲಿ” ಎಂದು ವರದಿಗಾರರಿಗೆ ತಿಳಿಸಿದರು. ಮುಖ್ಯಮಂತ್ರಿಗಳ ಹೇಳಿಕೆ ಗೊಂದಲಕ್ಕೆ ಕಾರಣವಾಗಬಹುದೇ ಎಂದು ಕೇಳಿದಾಗ, ಶಿವಕುಮಾರ್, “ನೀವು … Read more

ಕಿಡ್ನಿ ಫೇಲ್ಯೂರ್ ಭಯವೇ? ಈ ನೈಸರ್ಗಿಕ ಆಹಾರಗಳು ನಿಮ್ಮ ಮೂತ್ರಪಿಂಡಗಳಿಗೆ ನೀಡಲಿವೆ ಕಬ್ಬಿಣದಂತಹ ಶಕ್ತಿ!

ಮೂತ್ರಪಿಂಡಗಳು ನಮ್ಮ ದೇಹದಲ್ಲಿನ ಒಂದು ಪ್ರಮುಖ ಅಂಗವಾಗಿದ್ದು, ಅವು ದೇಹದಲ್ಲಿ ರಕ್ತ ಶುದ್ಧೀಕರಣವನ್ನು ಮಾಡುತ್ತವೆ ಹಾಗೆಯೇ ವಿಷವನ್ನು ತೆಗೆದುಹಾಕುತ್ತವೆ. ಅಂದಹಾಗೇ, ನಿಮ್ಮ ಮೂತ್ರಪಿಂಡಗಳು ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ, ದೇಹವು ಸಮಸ್ಯೆಯನ್ನು ಅನುಭವಿಸಬೇಕಾಗುತ್ತದೆ. ಇದರಿಂದ ನಿಮ್ಮ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ. WhatsApp Group Join Now ಮೂತ್ರಪಿಂಡದ ಸಮಸ್ಯೆಗೆ ಒಳಗಾಗುತ್ತೇವೆ ಎಂದು ಚಿಂತಿಸಬೇಡಿ, ಈ ಸರಳ ಆಹಾರವನ್ನು ಸೇವಿಸುವ ಮೂಲಕ ನಿಮ್ಮ ಮೂತ್ರಪಿಂಡಗಳನ್ನು ಆರೋಗ್ಯವಾಗಿ ಇಟ್ಟುಕೊಳ್ಳಬಹುದು. ಆದಾಗ್ಯೂ, ಈ ಆಹಾರಗಳು ರಾತ್ರೋ ರಾತ್ರಿ ನಿರ್ವಿಷಗೊಳಿಸುವುದಿಲ್ಲ ಎಂಬುದನ್ನು … Read more

ಸಿನೆಮಾ ಟಾಕೀಸ್‌ ವಾಶ್‌ರೂಂನಲ್ಲಿ ಕ್ಯಾಮಾರಾ ಪತ್ತೆ, ಅಪ್ರಾಪ್ತನ ಬಳಕೆ ಆರೋಪ, ದೂರು ಕೊಟ್ಟ ಮಹಿಳಾ ಟೆಕ್ಕಿ

ಬೆಂಗಳೂರು : ನಗರದ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಕ್ಯಾಮಾರ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಟೆಕ್ಕಿ ದೂರು ದಾಖಲಿಸಿದ್ದಾರೆ. ಲೇಡಿಸ್ ವಾಶ್ ರೂಮ್‌ನಲ್ಲಿ ಗುಪ್ತವಾಗಿ ಕ್ಯಾಮೆರಾ ಇಟ್ಟು ಮಹಿಳೆಯರ ಖಾಸಗಿ ದೃಶ್ಯಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. WhatsApp Group Join Now ಈ ಸಂಬಂಧ ಮಹಿಳಾ ಟೆಕ್ಕಿಯೊಬ್ಬರು ನೀಡಿದ ದೂರಿನ ಮೇರೆಗೆ ಸಂಧ್ಯಾ ಥಿಯೇಟರ್ ಹಾಗೂ ಅದರ ಸಿಬ್ಬಂದಿ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿನಿಮಾಗೆ ಹೋಗಿದ್ದ ವೇಳೆ … Read more

25 ಲಕ್ಷ ಪರಿಹಾರ ಹಣ ಎಲ್ಲಿಂದ ಬಂತು – ಬಳ್ಳಾರಿ ಶೂಟೌಟ್ ಬಗ್ಗೆ ಸ್ಪೋಟಕ ಅಂಶ ಹೊರಹಾಕಿದ ಎಚ್. ಡಿ ಕುಮಾರಸ್ವಾಮಿ

ಬಳ್ಳಾರಿಯಲ್ಲಿ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಸ್ಪೋಟಕ ವಿಚಾರಗಳನ್ನು ಹೊರಹಾಕಿದ್ದಾರೆ. ಬಳ್ಳಾರಿಯಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಬೆಂಬಲಿಗರ ನಡುವೆ ಗಲಾಟೆಯಾಗಿತ್ತು. WhatsApp Group Join Now ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳು ಈ ವೇಳೆ ಗುಂಡು ಹಾರಿಸಿದ್ದರಿಂದ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಇದೀಗ ಪೊಲೀಸ್ ತನಿಖೆಯಲ್ಲೂ ಸತೀಶ್ ರೆಡ್ಡಿ … Read more

ಸರ್ಕಾರಿ ಉದ್ಯೋಗಗಳಲ್ಲಿ ‘ಸಾಮಾನ್ಯ’ ವರ್ಗದ ಸ್ಥಾನಗಳಿಗೆ ‘SC/ST/OBC’ ಗಳಿಗೂ ಹಕ್ಕಿದೆ : ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು.!

ಸರ್ಕಾರಿ ಉದ್ಯೋಗಗಳಲ್ಲಿ ‘ಸಾಮಾನ್ಯ’ ವರ್ಗದ ಸ್ಥಾನಗಳಿಗೆ ಎಸ್ಸಿ/ಎಸ್ಟಿ/ಒಬಿಸಿಗಳಿಗೂ ಹಕ್ಕಿದೆ ಎಂದು ‘ಡಬಲ್ ಬೆನಿಫಿಟ್’ ವಾದವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. WhatsApp Group Join Now ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಮತ್ತು ಅರ್ಹತೆಯ ಕುರಿತು ದೀರ್ಘಕಾಲದ ಚರ್ಚೆಯನ್ನು ಸುಪ್ರೀಂ ಕೋರ್ಟ್ ಕೊನೆಗೊಳಿಸಿದೆ. ಐತಿಹಾಸಿಕ ಮತ್ತು ದೂರಗಾಮಿ ತೀರ್ಪಿನಲ್ಲಿ, ಮೀಸಲು ವರ್ಗಗಳ (ಎಸ್ಸಿ, ಎಸ್ಟಿ, ಒಬಿಸಿ ಮತ್ತು ಇಡಬ್ಲ್ಯೂಎಸ್) ಅಭ್ಯರ್ಥಿಗಳು ಸಾಮಾನ್ಯ ವರ್ಗದ ಸ್ಥಾನಗಳಲ್ಲಿ ಉದ್ಯೋಗಗಳಿಗೆ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ, ಅವರು ಸಾಮಾನ್ಯ ವರ್ಗದ ಕಟ್‌ಆಫ್ ಅಂಕಗಳನ್ನು … Read more

Arecanut Price : ಕ್ವಿಂಟಾಲ್‌ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಜನವರಿ 6ರ ದರಪಟ್ಟಿ

ಕಳೆದ ಕೆಲ ದಿನಗಳಿಂದ ಅಡಿಕೆ ಧಾರಣೇ ಏರಿಕೆಯಾಗುತ್ತಲಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಹೆಚ್ಚಾಗಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಜನವರಿ 6) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. WhatsApp Group Join Now ಇದೀಗ ದಾವಣಗೆರೆ ಜಿಲ್ಲೆಯಲ್ಲಿ ಕೊಯ್ಲು ಸಂಪೂರ್ಣವಾಗು ಮುಕ್ತಾಯ ಆಗಿದೆ. ಇದೇ ವೇಳೆ ಅಡಿಕೆ ದರ ಏರಿಕೆಯಾಗಿರುವುದು ಬೆಳೆಗಾರರ ಬಾಯಿಗೆ ಸಕ್ಕರೆ ಹಾಕಿದಂತಾಗಿದೆ. ಈ ವರ್ಷ … Read more

ಇನ್ಫೋಸಿಸ್ ನಿಂದ ಪುರವಂಕರಕ್ಕೆ ಭೂಮಿ ಮಾರಾಟ : ಬೆಂಗಳೂರು ಡಿಸಿಯಿಂದ ತನಿಖೆ, ಐವರು ಸಬ್-ರಿಜಿಸ್ಟ್ರಾರ್ ಗಳ ಅಮಾನತು

ಆನೇಕಲ್ ತಾಲ್ಲೂಕಿನಲ್ಲಿ ಇನ್ಫೋಸಿಸ್ ನಿಂದ ರಿಯಲ್ ಎಸ್ಟೇಟ್ ಡೆವಲಪರ್ ಪುರವಂಕರ ಅವರಿಗೆ ಸುಮಾರು 250 ಕೋಟಿ ರೂಪಾಯಿ ಮೌಲ್ಯದ ವಹಿವಾಟಿನಲ್ಲಿ 53.5 ಎಕರೆ ಭೂಮಿಯನ್ನು ಮಾರಾಟ ಮಾಡಿರುವ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಜಿಲ್ಲಾಧಿಕಾರಿ (DC) ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. WhatsApp Group Join Now ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇನ್ಫೋಸಿಸ್ ಗೆ ಸೇರಿದ ಭೂಮಿಯನ್ನು ಮಾರಾಟ ಮಾಡಿರುವ ಬಗ್ಗೆ ದೂರಿನ ಬಗ್ಗೆ ತನಿಖೆ ನಡೆಸಲು ಬೆಂಗಳೂರು ಜಿಲ್ಲಾಧಿಕಾರಿಗೆ … Read more