ಹಿಂದೂ ಮಹಿಳೆಯ ಸೆರಗು ಎಳೆಯುವ ಧೈರ್ಯ ನಿಮಗಿದೆಯೇ? : ನಿತೀಶ್ ಕುಮಾರ್‌ಗೆ ಜಾವೇದ್ ಅಖ್ತರ್ ಪ್ರಶ್ನೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ಅನ್ನು ಎಳೆದ ಘಟನೆಯನ್ನು ಹಿರಿಯ ಸಾಹಿತಿ ಹಾಗೂ ಚಿತ್ರಕಥೆಗಾರ ಜಾವೇದ್ ಅಖ್ತರ್ ತೀವ್ರವಾಗಿ ಖಂಡಿಸಿದ್ದಾರೆ. “ಒಬ್ಬ ಹಿಂದೂ ಮಹಿಳೆಯ ತಲೆ ಮೇಲಿನ ಸೆರಗನ್ನು (ಘೂಂಘಟ್) ಎಳೆಯುವ ಧೈರ್ಯ ನಿಮಗಿದೆಯೇ?” ಎಂದು ಅವರು ನಿತೀಶ್ ಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ. WhatsApp Group Join Now ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಜಾವೇದ್ ಅಖ್ತರ್, ನಿತೀಶ್ ಕುಮಾರ್ ಅವರ ವರ್ತನೆ ಅತ್ಯಂತ ಅಸಭ್ಯವಾದುದು ಎಂದಿದ್ದಾರೆ. … Read more

Arecanut Price : ಇಂದಿನ ಅಡಿಕೆ ಧಾರಣೆ : ಚೇತರಿಕೆ ಕಂಡಿತಾ ಅಡಿಕೆ ದರ : ಇಲ್ಲಿದೆ ಡಿಸೆಂಬರ್ 23ರ ದರಪಟ್ಟಿ

ಕಳೆದ ಕೆಲವು ವಾರಗಳಿಂದ ಇಳಿಕೆಯತ್ತ ಸಾಗಿದ್ದ ಅಡಿಕೆ ಧಾರಣೆ ಇದೀಗ ಸುಧಾರಣೆಯಾಗಿದೆ. ಇದರಿಂದ ಬೆಳೆಗಾರರ ಮುಖದಲ್ಲಿ ಮಂದಹಾಸ ಚಿಗುರೊಡೆದಿದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿ ಜಿಲ್ಲೆಯ ಹಲವೆಡೆ ಅಡಿಕೆನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಹಾಗಾದ್ರೆ, ಇಂದು (ಡಿಸೆಂಬರ್ 23) ದರ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. WhatsApp Group Join Now ಅಡಿಕೆ ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾಗಿದೆ. ಇಂದು (ಡಿಸೆಂಬರ್ 23) ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ … Read more

ರಕ್ತನಾಳಗಳಲ್ಲಿ ಬ್ಲಾಕೇಜ್ ಇಲ್ಲದಿದ್ದರೂ ಕಾಡಬಹುದು ಹೃದಯಾಘಾತ! ಏನಿದು MINOCA? 2025ರಲ್ಲಿ ಈ ಪ್ರಕರಣಗಳು ಹೆಚ್ಚುತ್ತಿರುವುದು ಏಕೆ?

ಸಾಮಾನ್ಯವಾಗಿ ಹೃದಯದ ರಕ್ತನಾಳಗಳಲ್ಲಿ ಬ್ಲಾಕೇಜ್ (ಅಡೆತಡೆ) ಉಂಟಾದಾಗ ಮಾತ್ರ ಹೃದಯಾಘಾತ ಸಂಭವಿಸುತ್ತದೆ ಎಂಬುದು ಎಲ್ಲರ ನಂಬಿಕೆ. ಆದರೆ, ಇತ್ತೀಚಿನ ದಿನಗಳಲ್ಲಿ ಸ್ಕ್ಯಾನಿಂಗ್ ವರದಿಯಲ್ಲಿ ರಕ್ತನಾಳಗಳು ಶುದ್ಧವಾಗಿದ್ದರೂ ಸಹ ಅನೇಕರಲ್ಲಿ ತೀವ್ರ ಹೃದಯಾಘಾತದ ಲಕ್ಷಣಗಳು ಕಂಡುಬರುತ್ತಿವೆ. WhatsApp Group Join Now ವೈದ್ಯಕೀಯ ಜಗತ್ತಿನಲ್ಲಿ ಇದನ್ನು ‘ಮಿನೋಕಾ’ (MINOCA – Myocardial Infarction with Non-Obstructive Coronary Arteries) ಎಂದು ಕರೆಯಲಾಗುತ್ತಿದ್ದು, 2025ರಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಏನಿದು MINOCA? ಹೃದಯದ ಸ್ನಾಯುಗಳಿಗೆ ಹಾನಿಯಾಗಿರುತ್ತದೆ ಮತ್ತು … Read more

‘ಲವರ್’ ಜೊತೆ ಸೇರಿ ಪತಿಗೆ ನೇಣು ಬಿಗಿದು ಕೊಂದು ‘ಹೃದಯಾಘಾತ’ ಎಂದು ಬಿಂಬಿಸಿದ ಪಾಪಿ ಪತ್ನಿ.!

ಯುವಕನನ್ನು ಪ್ರೀತಿಸಿದ ಮಹಿಳೆಯೊಬ್ಬಳು ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ನಂಬಿ ತನ್ನ ಪತಿಯನ್ನು ಕ್ರೂರವಾಗಿ ಕೊಂದಳು. ನಂತರ, ಅದನ್ನು ಸಹಜ ಸಾವು ಅಥವಾ ಹೃದಯಾಘಾತ ಎಂದು ಬಿಂಬಿಸಿ ಪೊಲೀಸರು ಮತ್ತು ಸಂಬಂಧಿಕರ ಮನವೊಲಿಸಲು ಪ್ರಯತ್ನಿಸಿದಳು. WhatsApp Group Join Now ಆದರೆ, ಪೊಲೀಸರು ನಡೆಸಿದ ಸಂಪೂರ್ಣ ತನಿಖೆಯಲ್ಲಿ ನಿಜವಾದ ಸತ್ಯ ಹೊರಬಂದಿತು. ಹೈದರಾಬಾದ್ ಹೊರವಲಯದಲ್ಲಿರುವ ಮೆಡಿಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯಲ್ಲಿ, ಪೊಲೀಸರು ಆರೋಪಿ, ಆಕೆಯ ಗೆಳೆಯ ಮತ್ತು ಇನ್ನೊಬ್ಬ ಯುವಕನನ್ನು ಬಂಧಿಸಿದರು. ಪೊಲೀಸ್ … Read more

ಮುಸ್ಲಿಂ ವೈದ್ಯೆಯ ನಕಾಬ್ ಎಳೆದ ಪ್ರಕರಣ : ಸಿಎಂ ನಿತೀಶ್ ಭಾವಚಿತ್ರಕ್ಕೆ ಚಪ್ಪಲಿ ಏಟು

ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಮುಸ್ಲಿಂ ವೈದ್ಯೆಯ ನಕಾಬ್ ಎಳೆದಿರುವುದನ್ನು ವಿರೋಧಿಸಿ ವಕ್ಫ್‌ ಸಂರಕ್ಷಣಾ ಸಂಘದ ನೇತೃತ್ವದಲ್ಲಿ ಮುಸ್ಲಿಂ ಮಹಿಳೆಯರು ಇಲ್ಲಿಯ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು. ಮುಸ್ಲಿಂ ಸಂಪ್ರದಾಯವನ್ನು ಅವಮಾನಿಸಿರುವ ನಿತೀಶ್‌ ಕುಮಾರ್‌, ತಕ್ಷಣವೇ ಕ್ಷಮೆ ಯಾಚಿಸಬೇಕು. WhatsApp Group Join Now ದೇಶದಲ್ಲಿ ಎಲ್ಲ ಜನ ಸಮುದಾಯವರಿಗೂ ಅವರು ಇಷ್ಟಪಡುವ ಸಾಂಪ್ರದಾಯಿಕ ಬಟ್ಟೆಗಳನ್ನು ತೊಡುವ ಅಧಿಕಾರ ಇದೆ. ಆದರೆ, ನಿತೀಶ್‌ ಕುಮಾರ್‌ ನಡೆ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಂತರ ಮಹಿಳೆಯರು … Read more

Horoscope Today : ಡಿಸೆಂಬರ್‌ 23 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ

ಮೇಷ :- WhatsApp Group Join Now ಈ ದಿನ ಶುಭದಾಯಕವಾಗಿದೆ ಎಂದು ಗಣೇಶ ಹೇಳುತ್ತಾರೆ. ಮನೆಗೆ ಸಂಬಂಧಿಸಿದ ವಿಚಾರಗಳಲ್ಲಿ ಶಾಂತಿ ಇರುತ್ತದೆ. ನಿಮ್ಮ ಅಭಿರುಚಿಗೆ ತಕ್ಕ ಹಾಗೆ ಮನೆಯ ಒಳ ಸೌಂದರ್ಯದ ಬಗ್ಗೆ ಮಾತುಕತೆ ನಡೆಸುವಿರಿ. ತಾಯಿಯ ಕಡೆಯಿಂದಲೂ ಒಳ್ಳೆಯ ಸುದ್ದಿ ಬರಲಿದೆ. ಅದು ನೀವು ಕೆಲಸದಲ್ಲಿರುವಾಗ ನೆಮ್ಮದಿಯನ್ನು ಕೊಡಬಹುದು. ಕೆಲಸ ಹೆಚ್ಚಾದರೂ ನಿಮ್ಮ ಮೇಲಾಧಿಕಾರಿಗ ಮತ್ತು ವರಿಷ್ಠರ ಪ್ರಶಂಸೆಗಳಿಂದ ಉತ್ತೇಜನಗೊಳ್ಳುವಿರಿ. ಸರಕಾರಿ ಕೆಲಸದ ನಿಮಿತ್ತ ಪ್ರಯಾಣ ತೆರಳುವಿರಿ. ಅದು ಶುಭದಾಯಕವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿ … Read more

ಫೆಬ್ರವರಿ-ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಫೆಬ್ರವರಿ ಮತ್ತು ಮಾರ್ಚ್‌ ತಿಂಗಳ ಗೃಹಲಕ್ಷ್ಮಿ ಹಣವನ್ನು ಮಹಿಳೆಯರಿಗೆ ಕೊಟ್ಟಿಲ್ಲ ಅನ್ನೋದು ಸಾಬೀತಾಗಿದೆ. ಸದನಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅಪೂರ್ಣ ಮಾಹಿತಿ ನೀಡಿದ್ದಾರೆ, ಸದನವನ್ನ ದಾರಿ ತಪ್ಪಿಸಿದ್ದಾರೆ ಎಂದು ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ವಿಪಕ್ಷಗಳ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. WhatsApp Group Join Now ಈ ಕುರಿತು ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಫೆಬ್ರವರಿ ಮಾರ್ಚ್ ತಿಂಗಳ ಗೃಹ … Read more

ಡಿ ಕೆ ಶಿವಕುಮಾರ್ ಎಷ್ಟೇ ಯತ್ನಿಸಿದರೂ ನಾನು ಸಿದ್ದರಾಮಯ್ಯ ಪರ : ಮಾಜಿ ಸಚಿವ ಕೆ.ಎನ್ ರಾಜಣ್ಣ

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಎಷ್ಟೇ ಯತ್ನಿಸಿದರೂ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಭಾನುವಾರ ಹೇಳಿದ್ದಾರೆ. WhatsApp Group Join Now ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಅವರು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಏನೇ ಪ್ರಯತ್ನ ಮಾಡಿದರೂ ನನ್ನ ನಿಲುವು ಬದಲಾಗಲ್ಲ. ನಾನು ಎಂದಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಪರವೇ. ಈ ಹಿಂದೆ ನಾನು ನೀಡಿದ್ದ ಹೇಳಿಕೆಗಳಿಗೆ ಈಗಲೂ ಬದ್ಧ ಎಂದು ಪುನರುಚ್ಚರಿಸಿದರು. ಡಿಕೆ ಶಿವಕುಮಾರ್ … Read more

ಗಂಡ ಇಷ್ಟ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; ‘ಯಾರಿಗೆ ಬೇಕು ಈ ಲೋಕ’ವೆಂದು ಲೈವ್‌ನಲ್ಲಿ ನೇಣಿಗೆ ಶರಣಾದ ಗೃಹಿಣಿ!

ಬಳ್ಳಾರಿ ಜಿಲ್ಲೆಯ ಹುಸೇನ್ ನಗರದಲ್ಲಿ ಅತ್ಯಂತ ಮನಕಲಕುವ ಘಟನೆಯೊಂದು ನಡೆದಿದ್ದು, ಯುವ ಗೃಹಿಣಿಯೊಬ್ಬರು ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಜೀವನದ ನೋವುಗಳನ್ನು ವಿಡಿಯೋದಲ್ಲಿ ಹೇಳಿಕೊಳ್ಳುತ್ತಲೇ ಪ್ರಾಣ ಕಳೆದುಕೊಂಡ ಈ ಲೈವ್ ಆತ್ಮ*ಹತ್ಯೆ ಪ್ರಕರಣ ಇಡೀ ನಗರವನ್ನು ಬೆಚ್ಚಿಬೀಳಿಸಿದೆ. WhatsApp Group Join Now ಘಟನೆಯ ವಿವರ ಬಳ್ಳಾರಿಯ ಹುಸೇನ್ ನಗರ ನಿವಾಸಿ ಮುನ್ನಿ (23) ಆತ್ಮ*ಹತ್ಯೆ ಮಾಡಿಕೊಂಡ ದುರ್ದೈವಿ. ಮೃತ ಮುನ್ನಿ ಅವರಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಆದರೆ, ಕೌಟುಂಬಿಕ ಕಾರಣಗಳಿಂದಾಗಿ … Read more

ನಾರ್ಮಲ್ ಕೊಲೆಸ್ಟ್ರಾಲ್ ಇದ್ದರೂ ಭಾರತೀಯರಲ್ಲಿ ಹೃದಯಾಘಾತ ಸಂಭವಿಸುವುದೇಕೆ.? ಇಲ್ಲಿದೆ ವೈದ್ಯರು ನೀಡುವ 5 ಆಘಾತಕಾರಿ ಕಾರಣಗಳು

ಸಾಮಾನ್ಯವಾಗಿ ರಕ್ತದ ವರದಿಯಲ್ಲಿ ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿ (Normal) ಇದ್ದರೆ ನಮಗೆ ಹೃದಯದ ಕಾಯಿಲೆ ಬರುವುದಿಲ್ಲ ಎಂಬ ನಂಬಿಕೆ ಇದೆ. ಆದರೆ, ಇತ್ತೀಚಿನ ದಿನಗಳಲ್ಲಿ ಯುವಕರು ಸೇರಿದಂತೆ ಅನೇಕ ಭಾರತೀಯರಲ್ಲಿ ಕೊಲೆಸ್ಟ್ರಾಲ್ ವರದಿ ಸರಿಯಾಗಿದ್ದರೂ ಹೃದಯಾಘಾತ ಸಂಭವಿಸುತ್ತಿರುವುದು ಆತಂಕ ಮೂಡಿಸಿದೆ. WhatsApp Group Join Now ಭಾರತದಲ್ಲಿ ಸಂಭವಿಸುವ ಒಟ್ಟು ಸಾವುಗಳಲ್ಲಿ ಕಾಲು ಭಾಗದಷ್ಟು ಸಾವುಗಳಿಗೆ ಹೃದಯ ಸಂಬಂಧಿ ಕಾಯಿಲೆಗಳೇ ಕಾರಣವಾಗಿವೆ. ಇದರ ಹಿಂದಿರುವ ಅಸಲಿ ಕಾರಣಗಳನ್ನು ತಜ್ಞ ವೈದ್ಯರು ವಿವರಿಸಿದ್ದಾರೆ. 1. ಭಾರತೀಯರ ವಿಭಿನ್ನ ಲಿಪಿಡ್ … Read more