ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ

ಭಾರತದಲ್ಲಿ ಹಿಂದೂಗಳು ಒಂದಾಗದಿದ್ದರೆ ದೇಶವೂ ಉಳಿಯುವದಿಲ್ಲ, ಸಂವಿಧಾನವೂ ಉಳಿಯುವದಿಲ್ಲ. ಈ ಬಗ್ಗೆ ದೇಶದ ಹಿಂದೂಗಳು ಎಚ್ಚರಿಕೆ ವಹಿಸಬೇಕೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ ಶಿರಶ್ಯಾಡ ಶಾಖಾ ಮಠದಲ್ಲಿ ನಿರ್ಮಾಣಗೊಳ್ಳುತ್ತಿರುವ ಬಡ ಮಕ್ಕಳ ಶಿಕ್ಷಣ ಉಚಿತ ಪ್ರಸಾದ ನಿಲಯದ ಹೊಸ್ತಿಲ ಪೂಜಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. WhatsApp Group Join Now ದೇಶದಲ್ಲಿರುವ ಹಿಂದೂ ಮಠ ಮಾನ್ಯಗಳು ಕೇವಲ ವೀರಶೈವ- ಲಿಂಗಾಯತ ಮಕ್ಕಳಿಗಷ್ಟೇ ಶಿಕ್ಷಣ ನೀಡಿಲ್ಲ. ಅಲ್ಲಿ ಮುಸ್ಲಿಂ, ಕಾಡು ಕುರುಬರು ಸೇರಿದಂತೆ ಎಲ್ಲಾ … Read more

ರಾಜಧಾನಿಯಲ್ಲಿ ಹೆಚ್ಚಾಯ್ತು ರೋಡ್‌ ರೇಜ್‌ – ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕ್ಯಾಬ್‌ ಡ್ರೈವರ್‌!

ರಾಜಧಾನಿಯಲ್ಲಿ ರೋಡ್‌ ರೇಜ್‌ (Road rage) ಘಟನೆಗಳು ದಿನೇ ದಿನೇ ಹೆಚುತ್ತಿದ್ದು, ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ಕ್ಯಾಬ್‌ ಗೆ ಬಸ್‌ ತಗುಲಿತೆಂಬ ಕಾರಣಕ್ಕೆ ಡ್ರೈವರ್‌ ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಪ್ರಕರಣ ನಡೆದಿದೆ. WhatsApp Group Join Now ಶಿವಾಜಿನಗರದಿಂದ ಯಲಹಂಕ ಕಡೆಗೆ ತೆರಳುತ್ತಿದ್ದ ಬಸ್ ಗೆ ಕ್ಯಾಬ್‌ ಟಚ್‌ ಆಗಿದೆ ಎನ್ನಲಾಗಿದೆ. ಇದೇ ಕಾರಣಕ್ಕೆ ಹಿಂಬಾಲಿಸಿಕೊಂಡು ಹೋಗಿ ಗಲಾಟೆ ನಡೆಸಿದ ಕ್ಯಾಬ್‌ ಚಾಲಕ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ. ಹೆಗಡೆ ನಗರದ ಮುಖ್ಯ ರಸ್ತೆಯಲ್ಲಿ ಈ … Read more

ದಿನಭವಿಷ್ಯ : ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಸುದ್ದಿಯಿಂದ ಮನಸ್ಸಿಗೆ ನೋವುಂಟಾಗಲಿದೆ.

ಮೇಷ ರಾಶಿ : WhatsApp Group Join Now ದಾಂಪತ್ಯದಲ್ಲಿ ಆತ್ಮೀಯತೆ ಉಂಟಾಗಲು ಅವಕಾಶವಾಗಲಿದೆ. ವ್ಯವಹಾರದಲ್ಲಿ ಲಾಭ. ಸಂಬಂಧಗಳಲ್ಲಿ ಚೈತನ್ಯ. ಆಧ್ಯಾತ್ಮದ ಆಸಕ್ತಿ. ಅತಿವಿಶ್ವಾಸ ಅತಿಯಾಗುವುದು ಬೇಡ. ಸ್ಥಾನದ ಮಹತ್ತ್ವವನ್ನು ಅರಿತು ಮಾತನಾಡಬೇಕು. ಅವಸರವಸರದಿಂದ ಇಂದಿನ ಕಾರ್ಯಗಳನ್ನು ಮಾಡಬೇಕಾಗಬಹುದು. ಬೆಲೆಬಾಳುವ ವಸ್ತುಗಳು ಕಣ್ಮರೆಯಾಗಬಹುದು. ಮಂಗಲ ಕಾರ್ಯವನ್ನು ಮಾಡಲು ನಿಮಗೆ ಮನಸ್ಸು ಇರುವುದು. ದೈಹಿಕವಾಗಿ ದುರ್ಬಲರಾದಂತೆ ನಿಮಗೆ ಅನ್ನಿಸೀತು. ವ್ಯಾಯಾಮ‌ ಮುಂತಾದ ದೈಹಿಕ ಕಸರತ್ತನ್ನು ಮಾಡಲು ಯೋಚಿಸುವಿರಿ. ಯಾವುದೇ ಆತುರದ ತೀರ್ಮಾನವನ್ನು ತೆಗೆದುಕೊಳ್ಳುವುದು ಬೇಡ. ಆರ್ಥಿಕ ವ್ಯವಹಾರದಲ್ಲಿ ಇಂದು … Read more

ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್‌ಗೆ ಚಪ್ಪಲಿ ಏಟು!

ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಅವರಿಗೆ ಇಂದು ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯದ ಆವರಣದಲ್ಲಿ ಚಪ್ಪಲಿಯಿಂದ ಥಳಿಸಲಾಯಿತು. WhatsApp Group Join Now ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಅವರಿಗೆ ಇಂದು ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯದ ಆವರಣದಲ್ಲಿ ಚಪ್ಪಲಿಯಿಂದ ಥಳಿಸಲಾಯಿತು. ಆದಾಗ್ಯೂ, ದಾಳಿಕೋರನ ಗುರುತು ಮತ್ತು ದಾಳಿಯ ಹಿಂದಿನ … Read more

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ  : ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು

ತನ್ನ ಮಗಳನ್ನು ಅಸಭ್ಯವಾಗಿ ಸ್ಪರ್ಶಿಸಿದ ಎಂಬ ಕಾರಣಕ್ಕೆ ಮಹಿಳೆಯೊಬ್ಬಳು ತನ್ನ ಲೀವ್ ಇನ್ ಪಾರ್ಟನರ್‌ನ್ನು ಕೊಲೆ ಮಾಡಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಆದರೆ ಕೊಲೆಯಾದ ಲೀವಿಂಗ್ ಪಾರ್ಟನರ್‌ನ ತಂದೆ ಬೇರೆಯದೇ ಆರೋಪ ಮಾಡಿದ್ದು, ಆತನ ಹೆಸರಿನಲ್ಲಿದ್ದ ಮನೆಯನ್ನು ವಶಕ್ಕೆ ಪಡೆದುಕೊಳ್ಳುವುದಕ್ಕಾಗಿ ಆಕೆ ಹಾಗೂ ಮಕ್ಕಳು ಸೇರಿ ನನ್ನ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. WhatsApp Group Join Now 46 ವರ್ಷದ ರತ್ನ ಕೊಲೆ ಮಾಡಿದ ಮಹಿಳೆ 33 ವರ್ಷದ ಇಂಜಿನಿಯರ್ ಸೂರ್ಯ … Read more

‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ

ಕಾಂತಾರ ನಟ ರಿಷಬ್ ಶೆಟ್ಟಿ ಇತ್ತೀಚೆಗೆ ನಡೆಸಿದ ಹರಕೆಯ ನೇಮೋತ್ಸವ ಇದೀಗ ವಿವಾದಕ್ಕೆ ಕಾರಣವಾಗಿದ್ದು, ನೇಮೋತ್ಸಲದ ಸಂದರ್ಭ ದೈವ ನರ್ತಕರು ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿದ್ದಕ್ಕೆ ಅಪಸ್ವರ ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. WhatsApp Group Join Now ಕಾಂತಾರ ಚಾಪ್ಟರ್ 1 ಚಿತ್ರದ ಯಶಸ್ವಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ತಂಡ ಮಂಗಳೂರಿನ ಬಾರೆಬೈಲು ಜಾರಂದಾಯ ಬಂಟ ಹಾಗೂ ವಾರಾಹಿ ಪಂಜುರ್ಲಿ ದೈವಸ್ಥಾನದಲ್ಲಿ ನಡೆದ ಹರಕೆ ನೇಮೋತ್ಸವ ನಡೆಸಿದೆ. ನೇಮೋತ್ಸವ … Read more

ಕುಡಿದ ಮತ್ತಿನಲ್ಲಿ ‘ಬೈಕ್ ಟ್ಯಾಕ್ಸಿ’ ಹತ್ತಿದ ಯುವತಿ ರಂಪಾಟ : ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ಪುರುಷರು ಮತ್ತು ಮಹಿಳೆಯರು ಇಬ್ಬರೂ ಮದ್ಯದ ವ್ಯಸನಿಗಳಾಗುತ್ತಿದ್ದಾರೆ. ಕೆಲವು ಮಹಿಳೆಯರು ಕುಡಿದು ರಸ್ತೆಯಲ್ಲಿ ಜಗಳವಾಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. WhatsApp Group Join Now ಇತ್ತೀಚೆಗೆ, ಯುವತಿಯೊಬ್ಬಳು ಕುಡಿದು ಬೈಕ್ ಟ್ಯಾಕ್ಸಿ ಹತ್ತಿದಳು. ರಾಪಿಡೋ ಬೈಕ್ ಸವಾರನಿಗೆ ದೌರ್ಜನ್ಯದ ಲಕ್ಷಣಗಳು ಕಂಡುಬಂದವು. ಇದನ್ನು ಗಮನಿಸಿದ ಜನರು ಯುವತಿಯ ಮೇಲೆ ಕೋಪ ವ್ಯಕ್ತಪಡಿಸಿದರು. ಯುವತಿಯೊಬ್ಬಳು ಕ್ಲಬ್ ನಿಂದ ಕುಡಿದು ಹೊರಬಂದಳು. ತನ್ನ ಸ್ಥಳಕ್ಕೆ ಹೋಗಲು ಬೈಕ್ ಟ್ಯಾಕ್ಸಿ ಬುಕ್ ಮಾಡಿದಳು. ಸ್ವಲ್ಪ ಸಮಯದ ನಂತರ ಬೈಕ್ ಟ್ಯಾಕ್ಸಿ … Read more

ಕೆಕೆಆರ್‌ಟಿಸಿ ಬಸ್ ಪಲ್ಟಿ : ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ : ಕಂಡಕ್ಟರ್ ಸ್ಥಿತಿ ಗಂಭೀರ.!

ರಾಯಚೂರು ಜಿಲ್ಲೆಯ ದೇವದುರ್ಗ ಬಳಿ ಕೆಕೆಆರ್‌ಟಿಸಿ ಬಸ್ ಅತಿವೇಗದಿಂದಾಗಿ ಪಲ್ಟಿಯಾಗಿದ್ದು, 15 ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಸ್ ನಿರ್ವಾಹಕನ ಸ್ಥಿತಿ ಚಿಂತಾಜನಕವಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. WhatsApp Group Join Now ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಅಂಚೆಸುಗೂರು ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೆಕೆಆರ್‌ಟಿಸಿ (ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಬಸ್ಸೊಂದು ಪಲ್ಟಿಯಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 15 ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಬಸ್‌ನ … Read more

ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಹುದ್ದೆಗೇರಬೇಕಾದರೆ ಕಾಂಗ್ರೆಸ್ ಹೈಕಮಾಂಡ್‌ಗೆ 500 ಕೋಟಿ ರೂಪಾಯಿಗಳ ಸೂಟ್‌ಕೇಸ್ ನೀಡಬೇಕು ಎಂಬ ಪಂಜಾಬ್ ಕಾಂಗ್ರೆಸ್ ನಾಯಕಿಯ ಸ್ಫೋಟಕ ಹೇಳಿಕೆ ಇದೀಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಗಂಭೀರ ಆರೋಪಕ್ಕೆ ಕರ್ನಾಟಕದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಇಂತಹ ಹೇಳಿಕೆ ನೀಡುವವರು ಮೊದಲು ಮಾನಸಿಕ ಚಿಕಿತ್ಸೆ ಪಡೆಯಬೇಕು ಎಂದು ಕಿಡಿಕಾರಿದ್ದಾರೆ. WhatsApp Group Join Now ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರ ಪತ್ನಿ … Read more

ಮೋದಿ ಪ್ರಧಾನಿಯಾಗಿದ್ದಷ್ಟು ಅವಧಿ ನೆಹರು ಸ್ವಾತಂತ್ರ್ಯಕ್ಕಾಗಿ ಜೈಲಿನಲ್ಲಿದ್ದರು ಎಂದು ಕಿಡಿ ಕಾರಿದ ಪ್ರಿಯಾಂಕಾ ಗಾಂಧಿ

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಜೈಲಿನಲ್ಲಿ ಕಳೆದ ಸಮಯವು ಪ್ರಧಾನಿ ನರೇಂದ್ರ ಮೋದಿ ದೇಶದ ಉನ್ನತ ಹುದ್ದೆಯಲ್ಲಿರುವ ಅವಧಿಗೆ ಹತ್ತಿರದಲ್ಲಿದೆ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸಂಸತ್ತಿನಲ್ಲಿ ಕಿಡಿ ಕಾರಿದ್ದಾರೆ. WhatsApp Group Join Now ‘ವಂದೇ ಮಾತರಂ’ನ 150 ವರ್ಷಗಳನ್ನು ಆಚರಿಸುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ಸೋಮವಾರ ನಡೆದ ಚರ್ಚೆಯ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಸಂಸದೆ ಪ್ರಿಯಾಂಕಾ ವಾದ್ರಾ , ನೆಹರು ಅವರನ್ನು ಪದೇ ಪದೇ ಟೀಕಿಸಿದ … Read more