ಪೋಷಕರೇ ಎಚ್ಚರ : ತಾಯಿಯ ಕಂಕುಳಲ್ಲಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ತೆಂಗಿನಕಾಯಿ ಬಿದ್ದು ಸಾವು.!

ಬ್ರಹ್ಮಾವರ : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ನೇರವಾಗಿ ತೆಂಗಿನಕಾಯಿ ಬಿದ್ದ ಪರಿಣಾಮ, ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಅತ್ಯಂತ ದುರದೃಷ್ಟಕರ ಘಟನೆ ಹೆರಂಜೆಯಲ್ಲಿ ಮಂಗಳವಾರ ನಡೆದಿದೆ. WhatsApp Group Join Now ಬ್ರಹ್ಮಾವರದಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿರುವ ಪ್ರಶಾಂತ್ ಹಾಗೂ ಗೃಹಿಣಿ ಸುಚಿತ್ರಾ ದಂಪತಿಯ ಪುಟ್ಟ ಕಂದಮ್ಮನೇ ವಿಧಿಯಾಟಕ್ಕೆ ಬಲಿಯಾದ ದುರ್ದೈವಿ. ಘಟನೆಯ ಹಿನ್ನೆಲೆ: ಮಂಗಳವಾರ ತಾಯಿ ಸುಚಿತ್ರಾ ಅವರು ತಮ್ಮ 6 ವರ್ಷದ ಹಿರಿಯ ಮಗಳನ್ನು … Read more

ಚಲಿಸುವ ರೈಲಿನಲ್ಲಿ ಕಿಟಕಿಯ ಮೂಲಕ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಆ ಮೂತ್ರವನ್ನು ಪಕ್ಕದಲ್ಲೇ ಮಲಗಿದ್ದ ಮಹಿಳೆಯ ಮೇಲೆ ಸಿಡಿಸಿದ

ಸಾರ್ವಜನಿಕ ಸ್ಥಳಗಳಲ್ಲಿ, ಅದರಲ್ಲೂ ರೈಲು ಪ್ರಯಾಣದ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆ ಎಂಬುದು ಸದಾ ಆತಂಕದ ವಿಷಯವಾಗಿರುತ್ತೆ. ಆದರೆ, ಈಗ ವೈರಲ್ ಆಗಿರುವ ವಿಡಿಯೋವೊಂದು ಮನುಷ್ಯನ ವಿಕೃತಿ ಯಾವ ಹಂತಕ್ಕೆ ತಲುಪಿದೆ ಎಂಬುದನ್ನು ತೋರಿಸುತ್ತಿದೆ. ಚಲಿಸುವ ರೈಲಿನಲ್ಲಿ ಕಿಟಕಿಯ ಮೂಲಕ ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಆ ಮೂತ್ರವನ್ನು ಪಕ್ಕದಲ್ಲೇ ಮಲಗಿದ್ದ ಮಹಿಳೆಯ ಮೇಲೆ ಸಿಡಿಸಿದ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. WhatsApp Group Join Now ನಡೆದಿದ್ದೇನು? ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಘಟನೆ ನಡೆದಿದ್ದು ಮಧ್ಯರಾತ್ರಿಯ … Read more

ಕಸ ನಿರ್ವಹಣೆ ಟೆಂಡರ್‌ನಲ್ಲಿ ಹಿಂದೆಂದೂ ಕಾಣದ ಬಹುಕೋಟಿ ಬೃಹತ್‌ ಹಗರಣ : ಬಿಜೆಪಿ ಸ್ಫೋಟಕ ಆರೋಪ

ರಾಜಧಾನಿ ಬೆಂಗಳೂರಿನ ಕಸ ನಿರ್ವಹಣೆ ಮಾಡುವ ಟೆಂಡರ್‌ನಲ್ಲಿ ಹಿಂದೆಂದೂ ಕಾಣದ ಸುಮಾರು 36 ಸಾವಿರ ಕೋಟಿ ಬೃಹತ್‌ ಹಗರಣ ನಡೆದಿದೆ ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಸ್ಫೋಟಕ ಆರೋಪ ಮಾಡಿದೆ. WhatsApp Group Join Now ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಪ್ರತಿಪಕ್ಷದ ನಾಯಕರಾದ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ರವಿಸುಬ್ರಹಣ್ಯ, ಸಿ.ಕೆ.ರಾಮಮೂರ್ತಿ, ಮಾಜಿ ಸಂಸದ ಮುನಿಸ್ವಾಮಿ ಅವರುಗಳು, ಕಸದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಬಿಡುಗಡೆ ಮಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ … Read more

‘ನವ ಮಧ್ಯಮ ವರ್ಗದ ಕೈಬಿಡುವುದಿಲ್ಲ’: ದೇಶದ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹೆಮ್ಮೆಯಲ್ಲಿ ಪಿಎಂ ಮೋದಿ ಭರವಸೆ!

ಸತತ 12 ವರ್ಷಗಳ ಕಾಲ ಅಧಿಕಾರಾವಧಿ ಪೂರೈಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಂದು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮೀರಿ, ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಸರ್ಕಾರದ ಮುಖ್ಯಸ್ಥರಾಗಿ ಇತಿಹಾಸವನ್ನು ಪುನಃ ಬರೆದಿದ್ದಾರೆ. WhatsApp Group Join Now ಈ ಐತಿಹಾಸಿಕ ಮೈಲಿಗಲ್ಲನ್ನು ಆಚರಿಸಲು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪ್ರಜಾಪ್ರಭುತ್ವ ಒಕ್ಕೂಟದ (NDA) ನಾಯಕರ ಪ್ರಮುಖ ಸಭೆಯಲ್ಲಿ ಬುಧವಾರ ಸಂಜೆ ಪ್ರಧಾನಿಯವರು ಭಾಗವಹಿಸಿದ್ದರು. ಸಭೆಯ ಬೆನ್ನಲ್ಲೇ … Read more

ಕಸದ ವಿಚಾರದಲ್ಲಿ ದೊಡ್ಡ ಲಾಬಿಯೇ ನಡೀತಿದೆ, ವಿಪಕ್ಷಗಳ ಆರೋಪಕ್ಕೆ ಸಿಎಂ ತಿರುಗೇಟು

ಕಸದ ವಿಚಾರದಲ್ಲಿ ಲಾಬಿ ನಡೆಯುತ್ತಿದೆ. ಬಿಜೆಪಿಯವರಿಗೆ ನಮ್ಮ ಪಾರದರ್ಶಕ ಆಡಳಿತ ತಡೆಯೋಕೆ ಆಗ್ತಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ವಿರೋಧ ಪಕ್ಷಗಳ ಕಸದ ಟೆಂಡರ್‌ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. WhatsApp Group Join Now ಅವರ ಕಾಲದಲ್ಲಿ ಈ ಕೆಲಸ ಯಾಕೆ ಆಗಿಲ್ಲ. ನೀತಿ ಆಯೋಗದ ಸಭೆ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್‌ ಅವರು ನವದೆಹಲಿಗೆ ತೆರಳಿದ್ದಾರೆ. ಈ ಸಮಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಕಸ ವಿಲೇವಾರಿ ವಿಚಾರವಾಗಿ 6 … Read more

ಕಾಂಟ್ರಾಕ್ಟರ್ ಮನೆಯಲ್ಲಿ ಕೆಲಸಕ್ಕೆ ಸೇರಿ 25 ಲಕ್ಷ ರೂ. ಕಳ್ಳತನ ; ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್..!

ಅಮೃತಹಳ್ಳಿಯಲ್ಲಿರುವ ಕಾಂಟ್ರಾಕ್ಟರ್ ಒಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನೇಪಾಳ ಮೂಲದ ದಂಪತಿ 25 ಲಕ್ಷ ರೂಪಾಯಿ ನಗದು ಕಳ್ಳತನ ಮಾಡಿ ಪರಾರಿಯಾಗಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಅಮೃತಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕದ್ದಿದ್ದ ಸಂಪೂರ್ಣ ಹಣವನ್ನು ವಶಪಡಿಸಿಕೊಂಡಿದ್ದಾರೆ. WhatsApp Group Join Now ಬಂಧಿತ ಆರೋಪಿಗಳನ್ನು ಪವನ್ ಬಿಸ್ತಾ ಮತ್ತು ಸೀತಾ ಬಿಸ್ತಾ ಎಂದು ಗುರುತಿಸಲಾಗಿದೆ. ಇವರು ಮೂಲತಃ ನೇಪಾಳದವರಾಗಿದ್ದು, ಸುಮಾರು ಒಂದು ತಿಂಗಳ ಹಿಂದೆಯಷ್ಟೇ ಮನೆಯ ಕೆಲಸಕ್ಕಾಗಿ ಕಾಂಟ್ರಾಕ್ಟರ್ ಅವರ ಮನೆಯಲ್ಲಿ … Read more

ಚುಡಾಯಿಸಲು ಬಂದವನ ಕಣ್ಣಿಗೆ ಖಾರದ ಪುಡಿ ಎರಚಿ, ಸಾರ್ವಜನಿಕವಾಗಿ ‘ಧರ್ಮದೇಟು’ ಕೊಟ್ಟ ಗಟ್ಟಿಗಿತ್ತಿ!

ರಾಯಚೂರು: ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿ, ಚುಡಾಯಿಸಲು ಯತ್ನಿಸಿದ ರೋಮಿಯೋಗೆ ಮಹಿಳೆಯೇ ಸಾರ್ವಜನಿಕವಾಗಿ ಹಿಗ್ಗಾಮುಗ್ಗಾ ಥಳಿಸಿ ತಕ್ಕ ಪಾಠ ಕಲಿಸಿರುವ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಕಿರುಕುಳ ನೀಡಿದ ವ್ಯಕ್ತಿಯ ಕಣ್ಣಿಗೆ ನೇರವಾಗಿ ಖಾರದ ಪುಡಿ ಎರಚಿ, ಬಳಿಕ ಕಟ್ಟಿಗೆಯಿಂದ ಧರ್ಮದೇಟು ನೀಡಿದ ಗಟ್ಟಿಗಿತ್ತಿಯ ಧೈರ್ಯದ ದೃಶ್ಯಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. WhatsApp Group Join Now ಸಿನಿಮೀಯ ಶೈಲಿಯಲ್ಲಿ ಪಾಠ ಕಲಿಸಿದ ಮಹಿಳೆ! ರಾಯಚೂರು ಬಸ್ ನಿಲ್ದಾಣದ ಆವರಣದಲ್ಲಿ … Read more

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಬಿರುಕು ಮೂಡಿಸಲು ಕಾಂಗ್ರೆಸ್ ಯತ್ನ : ಎಚ್‌ಡಿಕೆ ಆರೋಪ

ಜೆಡಿಎಸ್-ಬಿಜೆಪಿ ಮೈತ್ರಿ ಪಕ್ಷದಲ್ಲಿ ಬಿರುಕು ಮೂಡಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ರಾಜ್ಯಸಭೆ ಟಿಕೆಟ್‌ಗೆ ದೇವೇಗೌಡರು ಅರ್ಜಿಯನ್ನೇ ಹಾಕಿರಲಿಲ್ಲ. ಇದುವರೆಗೆ ದೇವೇಗೌಡರ ಬಗ್ಗೆ ಇಲ್ಲದ ಅನುಕಂಪ ಕಾಂಗ್ರೆಸ್‌ಗೆ ಈಗ ಬಂದಿದೆಯೇ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು. WhatsApp Group Join Now ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ತಾಲೂಕಿನ ತಗ್ಗಹಳ್ಳಿಯಲ್ಲಿ ರಾಜ್ಯಸಭೆ ಪ್ರವೇಶಕ್ಕೆ ದೇವೇಗೌಡರಿಗೆ ಬಿಜೆಪಿ ಟಿಕೆಟ್ ಸಿಗದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಟಿಕೆಟ್ ಕೊಡುವಂತೆ ದೇವೇಗೌಡರು ಯಾರ ಬಳಿಯೂ … Read more

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ‘ಜಲಗಾರ ಯೂನಿವರ್ಸಿಟಿ’ ಕಾಟ; ಪೊಲೀಸ್ ಠಾಣೆಗೆ ದೂರು!

ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi darshan) ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ (Social media) ಕಿಡಿಗೇಡಿಗಳು ನಕಲಿ ಖಾತೆಗಳ ಮೂಲಕ ಮತ್ತೆ ಮತ್ತೆ ಕಿರುಕುಳ ನೀಡುತ್ತಿದ್ದಾರೆ. ಇನ್‌ಸ್ಟಾಗ್ರಾಮ್ ಸೇರಿದಂತೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸುತ್ತಿರುವ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ವಿಜಯಲಕ್ಷ್ಮಿ ಅವರು ಸೈಬರ್ ಪೊಲೀಸರಿಗೆ (Cyber police) ದೂರು ನೀಡಿದ್ದು, ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. WhatsApp Group Join Now ಜಲಗಾರ ಯೂನಿವರ್ಸಿಟಿ ಅಕೌಂಟ್ ತೆರೆದು … Read more

ಮಹಿಳೆ ನಿಗೂಢ ಸಾವು; ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ

ಗೃಹಿಣಿಯೊಬ್ಬರು ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲಾ ಕೇಂದ್ರದ ಹಾಲೇನಹಳ್ಳಿಯಲ್ಲಿ ಬುಧವಾರ (ಜೂ.10) ನಡೆದಿದೆ. WhatsApp Group Join Now ಸ್ಥಳೀಯ ಉದ್ಯಮಿ ರಾಜೇಶ್ ಎಂಬುವವರ ಪತ್ನಿ ಸುಮ (55) ಮೃತಪಟ್ಟ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ … Read more