ಮಹಿಳೆ ನಿಗೂಢ ಸಾವು; ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ

ಗೃಹಿಣಿಯೊಬ್ಬರು ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಿಲ್ಲಾ ಕೇಂದ್ರದ ಹಾಲೇನಹಳ್ಳಿಯಲ್ಲಿ ಬುಧವಾರ (ಜೂ.10) ನಡೆದಿದೆ. WhatsApp Group Join Now ಸ್ಥಳೀಯ ಉದ್ಯಮಿ ರಾಜೇಶ್ ಎಂಬುವವರ ಪತ್ನಿ ಸುಮ (55) ಮೃತಪಟ್ಟ ದುರ್ದೈವಿ. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಘಟನಾ ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ … Read more

ಮತ್ತದೇ ಖಾತೆಗಾಗಿ ಪಟ್ಟು ಹಿಡಿದ ಮುನಿಯಪ್ಪ! ದೆಹಲಿಯಲ್ಲೇ ಠಿಕಾಣಿ ಹೂಡಿದ ಕೃಷ್ಣ ಭೈರೇಗೌಡ!

ನೂತನ ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಸಂಪುಟದಲ್ಲಿ ಖಾತೆ ಕ್ಯಾತೆಗೆ ಅಂತ್ಯವೇ ಇಲ್ಲದಂತಾಗಿದೆ. ಖಾತೆ ಹಂಚಿಕೆಯಾದ ದಿನದಿಂದಲೇ ಕ್ಯಾತೆ ಶುರುವಾಗಿದೆ. ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ ಮುಗೀತು ಅನ್ನೋ ಅಷ್ಟರಲ್ಲಿ ಕಾಂಗ್ರೆಸ್ ಹೈಕಮಾಂಡ್ಗೆ ಮತ್ತೊಂದು ಟೆನ್ಶನ್ ಶುರುವಾಗಿದೆ. WhatsApp Group Join Now ಸಮಾಜ ಕಲ್ಯಾಣ ಇಲಾಖೆಗೆ ಬೇಡಿಕೆ ಇಟ್ಟ ಕೆ.ಹೆಚ್. ಮುನಿಯಪ್ಪ ಕಾಂಗ್ರೆಸ್ನ ಹಿರಿಯ ಸಚಿವ ಕೆ.ಹೆಚ್. ಮುನಿಯಪ್ಪ ಸಮಾಜ ಕಲ್ಯಾಣ ಇಲಾಖೆಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಇಂದು ಬೆಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ … Read more

ಮಧ್ಯರಾತ್ರಿ ಪ್ರಿಯಕರನೊಂದಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿಯ ಮೂಗು ಕತ್ತರಿಸಿದ ಪತಿ!

ಉತ್ತರ ಪ್ರದೇಶದಿಂದ ಸಮಾಜವೇ ತಲೆತಗ್ಗಿಸುವಂತಹ, ಅತ್ಯಂತ ಬೆಚ್ಚಿಬೀಳಿಸುವ ಘಟನೆಯೊಂದು ವರದಿಯಾಗಿದೆ. ಮದುವೆಯಾಗಿ ಕೇವಲ ಆರೇ ತಿಂಗಳಿಗೆ ಪ್ರಿಯಕರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪತ್ನಿಯನ್ನು ಮಧ್ಯರಾತ್ರಿ ಪತಿ ರಹಸ್ಯವಾಗಿ ಹಿಡಿದಿದ್ದು, ಆಕ್ರೋಶದ ಭರದಲ್ಲಿ ಆಕೆಯ ಮೂಗನ್ನೇ ಕತ್ತರಿಸಿರುವ ಭೀಕರ ಘಟನೆ ಸ್ಥಳೀಯವಾಗಿ ಭಾರೀ ಸಂಚಲನ ಸೃಷ್ಟಿಸಿದೆ. WhatsApp Group Join Now ಆರೇ ತಿಂಗಳ ಮದುವೆ ಜೀವನ, ಪಕ್ಕದ ಮನೆಯವನೊಂದಿಗೆ ಲವ್! ವರದಿಗಳ ಪ್ರಕಾರ, ರೀನಾ ಎಂಬ ಯುವತಿಗೆ ಕೇವಲ ಆರು ತಿಂಗಳ ಹಿಂದಷ್ಟೇ ರಾಹುಲ್ ಎಂಬಾತನೊಂದಿಗೆ ವಿವಾಹವಾಗಿತ್ತು. … Read more

‘ಪ್ರಜಾಪ್ರಭುತ್ವಕ್ಕೆ ಮಾಡಿದ ಅತಿ ದೊಡ್ಡ ಅಣಕ’ : ಪ್ರಧಾನಿ ಮೋದಿ ಸಾಧನೆಯ ಸಂಭ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ

“ಭಾರತದ ಪ್ರಜಾಪ್ರಭುತ್ವವನ್ನು ಹಾಳುಗೆಡವುವ ಮೂಲಕ ದೀರ್ಘಾವಧಿ ಪ್ರಧಾನಿಯಾಗಿ ಮುಂದುವರಿದಿರುವ ನರೇಂದ್ರ ಮೋದಿ ಅವರ ಸಾಧನೆಯ ಬಗ್ಗೆ ಬಿಜೆಪಿ ಸಂಭ್ರಮಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅತಿ ದೊಡ್ಡ ಅಣಕ” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸದಸ್ಯ ಸಿದ್ದರಾಮಯ್ಯ (Siddaramaiah) ಆಕ್ರೋಶ ಹೊರಹಾಕಿದ್ದಾರೆ. WhatsApp Group Join Now ಮಧ್ಯಪ್ರದೇಶದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್‌ ಅವರ ನಾಮಪತ್ರ ತಿರಸ್ಕೃತಗೊಂಡಿರುವ ಹಿನ್ನೆಲೆಯಲ್ಲಿ ಅವರು ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗದ ವಿರುದ್ಧ ತೀವ್ರ ವಾಗ್ದಾಳಿ … Read more

ರಾಜ್ಯಸಭಾ ಸ್ಥಾನ‌ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ : ಎಚ್.ಡಿ.ದೇವೇಗೌಡ ಸ್ಪಷ್ಟನೆ

ರಾಜ್ಯಸಭಾ ಸ್ಥಾನಕ್ಕೆ ಬೇಡಿಕೆ ಇಟ್ಟಿರಲಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ದೆಹಲಿ ಬಿಜೆಪಿ ನಾಯಕರ ಜತೆ‌ ಮಾತುಕತೆಯನ್ನೂ ನಡೆಸಿರಲಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. WhatsApp Group Join Now ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ದೇವೆಗೌಡರಿಗೆ ರಾಜ್ಯಸಭೆಗೆ ಆಯ್ಕೆ ಮಾಡದೆ ಬಿಜೆಪಿ ಮೋಸ ಮಾಡಿದೆ ಎಂಬ ಕಾಂಗ್ರೆಸ್ ಹೇಳಿಕೆ ಹಾಗೂ ಮಾಧ್ಯಮಗಳ ವರದಿ ಕಪೋಕಲ್ಪಿತವಾಗಿವೆ. ಅದಕ್ಕಾಗಿ ಎರಡು ದಿನ ಟಿ.ವಿಯನ್ನೇ ಬಂದ್ ಮಾಡಿದ್ದೆ. 18 ಶಾಸಕರನ್ನು ಹೊಂದಿರುವ ಜೆಡಿಎಸ್ ರಾಜ್ಯಸಭೆಗೆ ಹೇಗೆ ಆಯ್ಕೆ ಮಾಡುತ್ತದೆ. … Read more

ಪ್ರಧಾನಿ ಮೋದಿಗೆ 12 ವರ್ಷ : ‘ಮೆಲೋನಿಗೆ ಮೆಲೋಡಿ ಚಾಕೊಲೇಟ್ ಕೊಟ್ಟಿದ್ದೇ ಸಾಧನೆ’ ಎಂದು ಶಾಸಕ ಪ್ರದೀಪ್ ಈಶ್ವರ್ ಲೇವಡಿ!

ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇಂದಿಗೆ 12 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಜಿಲ್ಲೆಯ ಮುದ್ದೇನಹಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿಯವರ 12 ವರ್ಷಗಳ ಆಡಳಿತವನ್ನು ಕಟುವಾದ ಶಬ್ದಗಳಲ್ಲಿ ವ್ಯಂಗ್ಯವಾಡಿದ್ದಾರೆ. ಕಳೆದ 12 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರ ಸಾಧನೆಗಳು ನಿಜಕ್ಕೂ ಜಾಸ್ತಿ ಇವೆ. ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ … Read more

ಪುನೀತ್ ಕೆರೆಹಳ್ಳಿಗೆ ಮಂತ್ರಾಲಯಕ್ಕೆ ಪ್ರವೇಶ ನಿರ್ಬಂಧ – ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶಗೊಂಡ ಪುನೀತ್

ರಾಯಚೂರು : ಮಂತ್ರಾಲಯಕ್ಕೆ ಭೇಟಿ ನೀಡಲು ಮುಂದಾದ ಹಿಂದುತ್ವ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth kerehalli )ಅವರನ್ನು ಪೊಲೀಸರು ತಡೆದಿದ್ದಾರೆ. WhatsApp Group Join Now ಇದೇ ವಿಚಾರಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪುನೀತ್ ಕೆರೆಹಳ್ಳಿ ತೀವ್ರವಾಗಿ ಆಕ್ರೋಶ ಹೊರಹಾಕಿದ್ದಾರೆ. “ನಾನು ಮಂತ್ರಾಲಯಕ್ಕೆ ಬಂದಿರುವುದು ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು, ಇಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ. ಅಂತಹದರಲ್ಲಿ ನನ್ನನ್ನು ಏಕೆ ತಡೆಯುತ್ತಿದ್ದೀರಿ?” ಎಂದು ಅವರು ಪೊಲೀಸರನ್ನು ನೇರವಾಗಿ ಪ್ರಶ್ನಿಸಿದ್ದಾರೆ. ಈ … Read more

ರಾಜ್ಯಾದ್ಯಂತ ಮುಂದಿನ 3 ದಿನ ‘ನೈಋತ್ಯ ಮುಂಗಾರು’ ಆರ್ಭಟ : ಈ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳ ಆರ್ಭಟ ಜೋರಾಗಿದ್ದು, ನಿರಂತರವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಹಲವು ಜಿಲ್ಲೆಗಳಲ್ಲಿ ಜೂನ್ 13ರವರೆಗೆ ‘ರೆಡ್ ಅಲರ್ಟ್’ ಘೋಷಿಸಿದೆ. WhatsApp Group Join Now ಮುಂಗಾರು ಮಾರುತಗಳ ಉತ್ತರ ರೇಖೆಯು ಈಗಾಗಲೇ ರಾಜ್ಯದ ಅರ್ಧಕ್ಕಿಂತ ಹೆಚ್ಚು ಭಾಗವನ್ನು ಆವರಿಸಿದ್ದು, ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲೂ ಮುಂಗಾರು ಆರಂಭಗೊಂಡಿದೆ.ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಚಿತವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ … Read more

ಕಚ್ಚಿದ ಸೇಬನ್ನು ಬೆಂಬಲಿಗರತ್ತ ಎಸೆದ ಸಿಎಂ ಡಿ.ಕೆ ಶಿವಕುಮಾರ್ : ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಭಾನುವಾರ (ಜೂನ್.7) ತವರು ಕ್ಷೇತ್ರಕ್ಕೆ ಹೋಗಿದ್ದರು. ಅಂದು ಕನಕಪುರದಲ್ಲಿ ನಡೆದ ಘಟನೆಯೊಂದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಕಚ್ಚಿ ಎಸೆದ ಸೇಬು ಹಣ್ಣುಗಳನ್ನು ಪಡೆಯಲು ಬೆಂಬಲಿಗರು ಮುಗಿಬಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. WhatsApp Group Join Now ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಕನಕಪುರ ಕ್ಷೇತ್ರಕ್ಕೆ ಡಿ.ಕೆ. ಶಿವಕುಮಾರ್ ಅವರು ಕೃತಜ್ಞತಾ ಪ್ರವಾಸ ಹಮ್ಮಿಕೊಂಡಿದ್ದರು. ಈ ವೇಳೆ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು … Read more

‘RSS ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ..’ ಪ್ರಿಯಾಂಕ್ ಖರ್ಗೆ ಟೀಕೆಗೆ ಪೂಜಾರಿ ತಿರುಗೇಟು!

ಗೃಹ ಸಚಿವ ಪ್ರಿಯಾಂಕ ಖರ್ಗೆ ಯವರು ತಮ್ಮ ಇತಿಮಿತಿಗಳಲ್ಲಿ ಕೆಲಸ ಮಾಡಬೇಕು. ಆರ್‌ಎಸ್‌ಎಸ್‌(RSS)ಅನ್ನು ಟೀಕಿಸುವ ಬದಲು ಡ್ರಗ್ಸ್, ಭಯೋತ್ಪಾದನೆ ನಿರ್ಮೂಲನೆ, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಗಮನ ಹರಿಸಲಿ ಎಂದು ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. WhatsApp Group Join Now RSS ಪಾಕಿಸ್ತಾನಕ್ಕೆ ಜೈ ಅನ್ನುವ ಸಂಸ್ಥೆಯಲ್ಲ: ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಆರ್‌ಎಸ್‌ಎಸ್‌, ಪಾಕಿಸ್ತಾನಕ್ಕೆ ಜೈ ಎನ್ನುವ ಸಂಸ್ಥೆಯಲ್ಲ. ಇದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ ಎನ್ನುವುದು ನನ್ನ ಭಾವನೆ. ಆರ್‌ಎಸ್‌ಎಸ್ … Read more