ನಮ್ಮದು ಜನಪರ ಸರಕಾರ ಎನ್ನುವುದಕ್ಕೆ ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಸಾಕ್ಷಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕರ್ನಾಟಕದಲ್ಲಿ ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಕೇವಲ ಘೋಷಣೆಗಳಲ್ಲ, ಜನರ ದಿನನಿತ್ಯದ ಬದುಕಿಗೆ ನಿಜವಾದ ಬೆಂಬಲವಾಗಿ ಪರಿಣಮಿಸಿವೆ. ಜನರ ಕಷ್ಟ, ನೋವು, ಅಗತ್ಯಗಳಿಗೆ ಸ್ಪಂದಿಸಿದ ನಮ್ಮ ಸರ್ಕಾರಕ್ಕೆ ಜನರು ಇದೀಗ ಉಪಚುನಾವಣೆ ಫಲಿತಾಂಶಗಳ ಮೂಲಕ ಸ್ಪಷ್ಟವಾದ ಮನ್ನಣೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. WhatsApp Group Join Now ಕರ್ನಾಟಕದ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ … Read more

ಎರಡೂ ಕಡೆ ‘ಕೈ’ ಹಿಡಿದ ಗ್ಯಾರಂಟಿ : ಪಂಚರಾಜ್ಯ ಚುನಾವಣೆ ಫಲಿತಾಂಶದಿಂದ ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ : ಡಿ.ಕೆ. ಶಿವಕುಮಾರ್

‘ಗ್ಯಾರಂಟಿ ಯೋಜನೆಗಳು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಿವೆ. ತಮಿಳುನಾಡಿನದ್ದು ಅಚ್ಚರಿಯ ಫಲಿತಾಂಶವಾಗಿದ್ದು, ಅಲ್ಲಿನ ಜನರ ನಾಡಿಮಿಡಿತ ಗ್ರಹಿಸಲು ಆಗಲಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಚುನಾವಣಾ ಫಲಿತಾಂಶದ ಕುರಿತು ವಿಶ್ಲೇಷಿಸಿದರು. WhatsApp Group Join Now ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೇರಳದ ಫಲಿತಾಂಶ ನಿರೀಕ್ಷಿತ. ಅಸ್ಸಾಂನಲ್ಲಿ ಕ್ಷೇತ್ರ ಮರುವಿಂಗಡಣೆ ವೇಳೆಯಲ್ಲಿ ಅಲ್ಪಸಂಖ್ಯಾತರು ಒಂದೇ ಕಡೆ ಬರುವಂತೆ ಉಪಾಯವಾಗಿ ಮಾಡಿದ್ದರಿಂದ ನಿರೀಕ್ಷೆಯ ಫಲಿತಾಂಶ ಬಂದಿಲ್ಲ’ ಎಂದು ದೂರಿದರು. ‌’ಚುನಾವಣೆ … Read more

ಕೇರಳ, ತಮಿಳುನಾಡಿನಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ನಿರಾಕರಣೆ : ಸಿಎಂ ಸಿದ್ಧರಾಮಯ್ಯ

ದಕ್ಷಿಣದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣ ರಾಜ್ಯಗಳಂತೆ ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿಯೂ ಬಿಜೆಪಿಯ ಕೋಮುವಾದಿ ರಾಜಕಾರಣಕ್ಕೆ ಪ್ರವೇಶ ಇಲ್ಲ ಎನ್ನುವ ಸ್ಪಷ್ಟ ಸಂದೇಶವನ್ನು ನೀಡಿರುವ ಎರಡು ರಾಜ್ಯಗಳ ಮತದಾರರನ್ನು ದೇಶದ ಎಲ್ಲ ಜಾತ್ಯತೀತ ಮತ್ತು ಪ್ರಜಾಪ್ರಭುತ್ವವಾದಿ ಜನರ ಪರವಾಗಿ ಅಭಿನಂದಿಸುತ್ತೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. WhatsApp Group Join Now ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿರೀಕ್ಷಿತವಾಗಿತ್ತು. ಅಭ್ಯರ್ಥಿಗಳ ಆಯ್ಕೆಯಿಂದ ಹಿಡಿದು ಪ್ರಚಾರದ ಕಾರ್ಯತಂತ್ರದ ವರೆಗೆ ಎಲ್ಲವನ್ನೂ ಆ ರಾಜ್ಯದ ಕಾಂಗ್ರೆಸ್ … Read more

ಮುಸ್ಲಿಂ ಪ್ರದೇಶದಲ್ಲಿ ಟಿಎಂಸಿ ಹಿನ್ನಡೆ ಅಸಾಧ್ಯ; ಇವಿಎಂ ಹ್ಯಾಕ್ ಆರೋಪ ಮಾಡಿದ ಟಿಎಂಸಿ ಅಭ್ಯರ್ಥಿ

ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ಮುಂದುವರೆದಿದ್ದು, ವಿಪಕ್ಷ ಬಿಜೆಪಿ ಭಾರಿ ಮುನ್ನಡೆ ಸಾಧಿಸಿದ್ದು, ಆಡಳಿತರೂಢ ಟಿಎಂಸಿ ಹಿನ್ನಡೆ ಅನುಭವಿಸಿದೆ. ಆದರೆ ಮುಸ್ಲಿಂ ಬಾಹುಳ್ಯ ಪ್ರದೇಶದಲ್ಲಿ ಟಿಎಂಸಿ ಹಿನ್ನಡೆಯಾಗಿದ್ದನ್ನು ಪ್ರಶ್ನಿಸಿರುವ ಟಿಎಂಸಿ ಅಭ್ಯರ್ಥಿಯೊಬ್ಬರು, ಇವಿಎಂ ಹ್ಯಾಕ್ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. WhatsApp Group Join Now ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವಿನತ್ತ ದಾಪುಗಾಲಿಡುತ್ತಿದ್ದು, 198 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಆಡಳಿತರೂಢ ಟಿಎಂಸಿ 89 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 4 ಸ್ಥಾನಗಲ್ಲಿ ಮುನ್ನಡೆಯಲ್ಲಿದೆ. ಬಾಗ್ಡಾದ ಟಿಎಂಸಿ … Read more

ಸಾವರ್ಕರ್ ಮುಖವಾಡದ ಜೊತೆಯಲ್ಲೇ ಸಂಘಪರಿವಾರ, ಬಿಜೆಪಿಯ ಮುಖವಾಡವೂ ಕಳಚುತ್ತದೆ: ಬಿ.ಕೆ.ಹರಿಪ್ರಸಾದ್

‘ಸಾವರ್ಕರ್ ಮುಖವಾಡದ ಜೊತೆಯಲ್ಲೇ ಸಂಘಪರಿವಾರ ಹಾಗೂ ಬಿಜೆಪಿಯ ಮುಖವಾಡವೂ ಕಳಚುತ್ತದೆ. ‘ಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ’. ಇತಿಹಾಸ ತಿರುಚುವ ಕೈಗಳು ಯಾವಾಗಲೂ ನಡುಗುತ್ತವೆ. ಆದರೆ ಸತ್ಯವನ್ನು ಹಿಡಿದ ಕೈಗಳು ಎಂದಿಗೂ ತಲೆಬಾಗುವುದಿಲ್ಲ ಎಂಬುದನ್ನು ಬಿಜೆಪಿ ನಾಯಕರುಗಳು, ವಾಟ್ಸ್‌ಅಪ್ ಯೂನಿವರ್ಸಿಟಿಯ ಮಬ್ಭಕ್ತರು ಅರ್ಥಮಾಡಿಕೊಳ್ಳಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ತಿಳಿಸಿದ್ದಾರೆ. WhatsApp Group Join Now ರವಿವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಸಾವರ್ಕರ್ ವೀರನೂ ಅಲ್ಲ, ಶೂರನೂ ಅಲ್ಲ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ … Read more

ಜನನಾಯಗನ್ ‘ಸೇಡು’? ಬಿಜೆಪಿ ಕಾರಣಕ್ಕೆ ಎಐಎಡಿಎಂಕೆ ಬೇಡ ಅಂತಾರಾ ವಿಜಯ್.? ದಳಪತಿ ಮುಂದಿರುವ ಆಯ್ಕೆಗಳೇನು.?

ವಿಜಯ್ ಅವರ ಟಿವಿಕೆ ಪಕ್ಷ ತನ್ನ ಚೊಚ್ಚಲ ಸ್ಪರ್ಧೆಯಲ್ಲಿ ಬಹುಮತದ ಸಮೀಪಕ್ಕೆ ಹೋಗಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ತಮಿಳಗ ವೆಟ್ರಿ ಕಳಗಂ (TVK) 107-108 ಸ್ಥಾನಗಳಲ್ಲಿ ಗೆಲುವು ಮತ್ತು ಮುನ್ನಡೆ ಹೊಂದಿದೆ. WhatsApp Group Join Now ಬಹುಮತಕ್ಕೆ ಅಗತ್ಯ ಇರುವುದು 118 ಸ್ಥಾನಗಳಿಗೆ ಸುಮಾರು 10-11 ಸ್ಥಾನಗಳ ಕೊರತೆ ಎದುರಾಗಬಹುದು. ವಿಜಯ್ ಅವರು ಈ ಕೊರತೆ ತುಂಬಿಕೊಂಡರೆ ಕಿಂಗ್ ಮೇಕರ್ ಬದಲು ಕಿಂಗ್ ಆಗುವ ಅವಕಾಶ … Read more

ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೊಳ್ಳಲು ಸಿದ್ಧ : ‘TVK’ ಪಕ್ಷದ ನಾಯಕ ವಿಜಯ್ ತಂದೆ ಎಸ್.ಎ ಚಂದ್ರಶೇಖರ್ ಹೇಳಿಕೆ!

ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ದಿನ. ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಚುನಾವಣಾ ಅಖಾಡದಲ್ಲಿ ಅಭೂತಪೂರ್ವ ಮುನ್ನಡೆ ಸಾಧಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. WhatsApp Group Join Now ಸದ್ಯದ ಟ್ರೆಂಡ್ ಪ್ರಕಾರ, ಟಿವಿ ಕೆ ಪಕ್ಷವು 112ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಸರಳ ಬಹುಮತದ ಹೊಸ್ತಿಲಲ್ಲಿ ಟಿವಿ ಕೆ: ತಮಿಳುನಾಡಿನಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿ … Read more

ತನ್ನದೇ ಭದ್ರ ಕೋಟೆಯಲ್ಲಿ ಹೀನಾಯವಾಗಿ ಸೋತಿದ್ದೇಕೆ ಮಮತಾ ಪಡೆ.? ಇಲ್ಲಿದೆ 5 ಕಾರಣ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ನಂತರ ಮತ ಎಣಿಕೆ ನಡೆಯುತ್ತಿದೆ. ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಮತ ಎಣಿಕೆಯ ಟ್ರೆಂಡ್‌ಗಳ ನಂತರ ಚಿತ್ರಣವು ಹೆಚ್ಚು ಸ್ಪಷ್ಟವಾಗುತ್ತಿದೆ. ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಅನ್ನು ಬಿಜೆಪಿ ವೇಗವಾಗಿ ಹಿಂದಿಕ್ಕುತ್ತಿದೆ ಎಂಬುದು ಸ್ಪಷ್ಟವಾಗಿದೆ. WhatsApp Group Join Now ಈ ಟ್ರೆಂಡ್ ಮುಂದುವರಿದರೆ, ಮಮತಾ ಅವರ ಭದ್ರಕೋಟೆ ಕುಸಿಯುತ್ತಿದೆ ಮತ್ತು ಬಿಜೆಪಿ ಚುನಾವಣೆಯಲ್ಲಿ ಗೆದ್ದು ಸರ್ಕಾರ ರಚಿಸಲು ಸಜ್ಜಾಗಿದೆ ಎಂಬುವುದು ಸ್ಪಷ್ಟವಾಗಿದೆ. ಮಮತಾ ಮತ್ತು ಅವರ ಈ ಕಳಪೆ … Read more

‘TVK’ ಪಕ್ಷದ ಅಭ್ಯರ್ಥಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಗೆ ಹೀನಾಯ ಸೋಲು!

ತಮಿಳುನಾಡಲ್ಲಿ TVK ಪಕ್ಷದ ನಾಯಕ ಹಾಗು ನಟ ವಿಜಯ್ ಭರ್ಜರಿ ಜಯ ಸಾಧಿಸಿದ್ದು, ಡಿಎಂಕೆ, ಹಾಗು ಎಐಡಿಎಂಕೆಗೆ ಶಾಕ್ ನೀಡಿದ್ದಾರೆ. ಇದೀಗ ತಮಿಳುನಾಡಲ್ಲಿ ಮುಖ್ಯಮಂತ್ರಿ ಎ..ಕೆ ಸ್ಟಾಲಿನ್ ಗೆ ಸೋಲಾಗಿದೆ.ಕೊಳತ್ತೂರು ಕ್ಷೇತ್ರದಲ್ಲಿ TVK ಅಭ್ಯರ್ಥಿ ವಿ.ಎಸ್ ಬಾಬು ವಿರುದ್ಧ ಸ್ಟಾಲಿನ್ ಗೆ ಸೋಲಾಗಿದೆ. WhatsApp Group Join Now ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಶಾಕ್: ಕೊಳತ್ತೂರಿನಲ್ಲಿ ಸೋಲು ಈ ಚುನಾವಣೆಯ ಅತಿ ದೊಡ್ಡ ಆಘಾತಕಾರಿ ಫಲಿತಾಂಶವೆಂದರೆ ಅದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸೋಲು. ಕಳೆದ ಹಲವು … Read more

ರೇಣುಕಾಸ್ವಾಮಿ ಕೊಲೆ ಕೇಸ್ : ಸುಪ್ರೀಂಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್ ; ರಾಜ್ಯ ಸರ್ಕಾರಕ್ಕೆ ನೋಟಿಸ್.!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಅವರು ಸಲ್ಲಿಸಿರುವ ಹೊಸ ಜಾಮೀನು ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. WhatsApp Group Join Now ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ತೂಗುದೀಪ ಅವರಿಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್, ಪ್ರಕರಣದ ತನಿಖಾ ಪ್ರಗತಿ ಹಾಗೂ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಸಂಪೂರ್ಣ … Read more